ಆಹಾರದೊಂದಿಗೆ ಔಷಧೀಯ ಗುಣದ ಹಲಸು


Team Udayavani, Jun 24, 2018, 6:00 AM IST

ss-37.jpg

ಉಡುಪಿ: ಒಂದೊಮ್ಮೆ ನಿರ್ಲಕ್ಷ್ಯಕ್ಕೊಳಗಾಗಿದ್ದ ಹಲಸಿಗೆ ಮತ್ತೆ ಬೇಡಿಕೆ ಬರುತ್ತಿದೆ. ಹಲಸು ಮೇಳ, ಪ್ರದರ್ಶನಗಳ ಪರಿಣಾಮದಿಂದ ಹಲಸಿಗೆ ಮಾರುಕಟ್ಟೆ ದೊರೆಯುತ್ತಿದೆ. ಇತರ ದೇಶಗಳಂತೆ ನಮ್ಮಲ್ಲಿಯೂ ಹಲಸನ್ನು ಪ್ರಮುಖ ಬೆಳೆಯಂತೆ ಬೆಳೆಸಲು ಇದು ಸಕಾಲ ಎಂದು ಶಾಸಕ ಕೆ. ರಘುಪತಿ ಭಟ್‌ ಹೇಳಿದರು.

ದೊಡ್ಡಣಗುಡ್ಡೆ ಪುಷ್ಪ ಹರಾಜು ಕೇಂದ್ರದ (ರೈತ ಸೇವಾ ಕೇಂದ್ರ) ಆವರಣದಲ್ಲಿ ಜಿಲ್ಲಾಡಳಿತ, ಜಿ.ಪಂ., ತೋಟಗಾರಿಕಾ ಇಲಾಖೆ ಹಾಗೂ ಶ್ರೀ ಕ್ಷೇ.ಧ.ಗ್ರಾ.ಯೋ. ಸಹಯೋಗದಲ್ಲಿ ಆಯೋಜಿಸಲಾದ ಎರಡು ದಿನಗಳ ಉಡುಪಿ ಜಿಲ್ಲಾ ಮಟ್ಟದ “ಹಲಸು ಮೇಳ – 2018’ನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು. ಹಲಸು ಆಹಾರ ಮಾತ್ರವಲ್ಲದೆ ಅದರಲ್ಲಿ ಔಷಧೀಯ ಗುಣಗಳೂ ಇವೆ. ಖಾಲಿ ಪ್ರದೇಶಗಳಲ್ಲಿ ಹಲಸನ್ನು ಬೆಳೆಸಬಹುದು. ಹಲಸಿನ ಉತ್ಪನ್ನ ಒದಗಿಸಿ ಮಾಹಿತಿ ನೀಡುವ ಮತ್ತು ರೈತರನ್ನು ಪ್ರೋತ್ಸಾಹಿಸುವ ಹಲಸು ಮೇಳ ಶ್ಲಾಘನೀಯ ಕಾರ್ಯಕ್ರಮ ಎಂದು ರಘುಪತಿ ಭಟ್‌ ಹೇಳಿದರು.

ಜಿ.ಪಂ. ಅಧ್ಯಕ್ಷ ದಿನಕರ ಬಾಬು ದೀಪ ಬೆಳಗಿಸಿ ಮಾತನಾಡಿ, ಮಾಹಿತಿ ಕಾರ್ಯಾಗಾರಗಳನ್ನು ಏರ್ಪಡಿಸಿ ಯುವಜನತೆಗೆ ಹಲಸಿನ ಬಗ್ಗೆ ಮಾಹಿತಿ ನೀಡಬೇಕು ಎಂದರು. ವಿಧಾನಪರಿಷತ್‌ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಹಲಸು ಮೇಳಗಳಿಂದ ಜಾಗೃತಿ ಸಾಧ್ಯ ಎಂದರು.

ತಾ.ಪಂ. ಅಧ್ಯಕ್ಷೆ ನಳಿನಿ ಪ್ರದೀಪ್‌ ರಾವ್‌, ನಗರಸಭಾಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ಜಿ.ಪಂ. ಶಿಕ್ಷಣ ಹಾಗೂ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಬಾಬು ಶೆಟ್ಟಿ, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಅಶೋಕ ಕುಮಾರ್‌ ಕೊಡ್ಗಿ, ಬ್ರಹ್ಮಾವರ ವಲಯ ಕೃಷಿ ಹಾಗೂ ತೋಟಗಾರಿಕೆ ಸಂಶೋಧನಾ ಕೇಂದ್ರದ ಸಹ ಸಂಶೋಧನಾ ನಿರ್ದೇಶಕ ಡಾ| ಎಸ್‌.ಯು. ಪಾಟೀಲ್‌, ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥ ಡಾ| ಬಿ. ಧನಂಜಯ, ಶ್ರೀ ಕ್ಷೇ.ಧ.ಗ್ರಾ. ಯೋಜನೆ ಉಡುಪಿ ಜಿಲ್ಲಾ ನಿರ್ದೇಶಕ ಪುರುಷೋತ್ತಮ ಪಿ.ಕೆ. ಉಪಸ್ಥಿತರಿದ್ದರು. ತೋಟಗಾರಿಕಾ ಇಲಾಖೆಯ ಉಪನಿರ್ದೇಶಕಿ ಭುವನೇಶ್ವರಿ ಸ್ವಾಗತಿಸಿ ಹಿರಿಯ ಸಹಾಯಕ ನಿರ್ದೇಶಕ ಶ್ರೀನಿವಾಸ ಬಿ.ವಿ. ವಂದಿಸಿದರು. ಕುಂದಾಪುರ ತಾಲೂಕು ಹಿರಿಯ ಸಹಾಯಕ ನಿರ್ದೇಶಕ ಸಂಜೀವ ನಾಯ್ಕ ಕಾರ್ಯಕ್ರಮ ನಿರ್ವಹಿಸಿದರು. 

ಭವಿಷ್ಯದ ಅಮರ ಫ‌ಲ ಹಲಸು!
ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌ ಮಾತನಾಡಿ, ಹವಾಮಾನ ಬದಲಾವಣೆಯ ದುಷ್ಪರಿಣಾಮದಿಂದ ಇತರ ಹಣ್ಣುಗಳು ನಾಶವಾದರೂ ಹಲಸು ಮಾತ್ರ ಹಾಗೆಯೇ ಉಳಿಯುತ್ತದೆ ಎಂದು ಅಧ್ಯಯನಗಳು ಹೇಳುತ್ತವೆ. ಹಾಗಾಗಿ ಹಲಸು ಮಾತ್ರ ಭವಿಷ್ಯದ ಹಣ್ಣಾಗಿ (ಫ್ಯೂಚರ್‌ ಫ್ರುಟ್‌) ಉಳಿಯಬಹುದು. ಅದನ್ನು ಬೆಳೆಸಲು ಮುಂದಾಗಬೇಕೆಂದರು. 

ಸುಮಾರು 70 ಕೆ.ಜಿ. ತೂಕದ ಹಲಸು ವೇದಿಕೆಯಲ್ಲಿ ಗಮನ ಸೆಳೆಯಿತು.
ವಿವಿಧ ಜಾತಿಯ  ಹಲಸಿನ ಹಣ್ಣು, ಸಸಿಗಳು ಸಾರ್ವಜನಿಕರಿಗೆ ಲಭ್ಯವಾದವು.
ಸಾಂಪ್ರದಾಯಿಕ ತಿನಿಸುಗಳ ಜತೆಗೆ ಹಲಸಿನ ಹಣ್ಣಿನ ಐಸ್‌ಕ್ರೀಂ ಕೂಡ ಆಕರ್ಷಿಸಿತು.
ಹಲಸನ್ನು ತುಂಡು ಮಾಡುವ ಮೂಲಕ ಹಲಸಿನ ಮೇಳಕ್ಕೆ ಚಾಲನೆ.
ದೊಡ್ಡಬಳ್ಳಾಪುರ ತೂಬೆಗೆರೆ ಹಲಸು ಬೆಳೆಗಾರರು ಕೂಡ ಭಾಗಿ.

ಟಾಪ್ ನ್ಯೂಸ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11-mallige

Bappanadu Durgaparameshwari: ಮಲ್ಲಿಗೆ ಪ್ರಿಯೆ ದೇವಿಗೆ ಲಕ್ಷ ಮಲ್ಲಿಗೆ ಶಯನೋತ್ಸವ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

10-uv-fusion

Theater: ಅಳಿವು ಉಳಿವಿನ ದವಡೆಯಲ್ಲಿ ರಂಗಭೂಮಿ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

9-fusion

Friendship: ಕೈಜಾರದಿರಲಿ ಗೆಳೆತನವೆಂಬ ಆಪ್ತ ನಿಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.