27 ತಿಂಗಳಲ್ಲಿ  265 ಅಪಘಾತ; 76 ಸಾವು !


Team Udayavani, Jun 26, 2018, 2:21 PM IST

padubidri-highway.png

ಕಾಪು: ರಾಷ್ಟ್ರೀಯ ಹೆದ್ದಾರಿ 66ರ ಚತುಷ್ಪಥ ಕಾಮಗಾರಿ ಪೂರ್ಣಗೊಳ್ಳುತ್ತಿದೆ; ಆದರೆ ಅಪಘಾತಗಳ ಸಂಖ್ಯೆ ಇಳಿಮುಖವಾಗಿಲ್ಲ. ಹೆಜಮಾಡಿ ಯಿದ ಉದ್ಯಾವರ ವರೆಗಿನ 25 ಕಿ.ಮೀ. ದೂರದಲ್ಲಿ 27 ತಿಂಗಳ ಅವಧಿಯಲ್ಲಿ ಸಂಭವಿಸಿದ ಅಪಘಾತಗಳು, ಮೃತಪಟ್ಟವರು ಮತ್ತು ಗಾಯಾಳುಗಳ ಅಂಕಿ-ಸಂಖ್ಯೆ ಗಮನಿಸಿದರೆ ಹೌಹಾರಬೇಕಾದೀತು.

2016ರ ಜನವರಿಯಿಂದ 2018ರ ಮಾರ್ಚ್‌ 30ರ ವರೆಗಿನ ದಾಖಲೆ ಪ್ರಕಾರ ಕಾಪು, ಪಡುಬಿದ್ರಿ ಪೊಲೀಸ್‌ ಠಾಣೆಗಳ ವ್ಯಾಪ್ತಿಯಲ್ಲಿ 265 ಅಪಘಾತ ಸಂಭವಿಸಿವೆ. 76 ಮಂದಿ ಸಾವಿಗೀಡಾಗಿ, 297 ಮಂದಿ ಗಾಯಗೊಂಡಿದ್ದಾರೆ.

ಅಪಘಾತ ವಲಯಗಳು
ಉದ್ಯಾವರ – ಕೊರಂಗ್ರಪಾಡಿ ಜಂಕ್ಷನ್‌, ಹಲೀಮಾ ಸಾಬ್ಜು  ಸಭಾಭವನದ ಮುಂಭಾಗ, ಉದ್ಯಾವರ ಜಂಕ್ಷನ್‌, ಉದ್ಯಾವರ ಸೇತುವೆ, ಕಟಪಾಡಿ ಫಾರೆಸ್ಟ್‌ ಗೇಟ್‌, ತೇಕಲತೋಟ, ಕಟಪಾಡಿ ಜಂಕ್ಷನ್‌, ಕಲ್ಲಾಪು ಸೇತುವೆ, ಕಂಬಳಗದ್ದೆ, ಪಾಂಗಾಳ ಕಟ್ಟಿ ಕೆರೆ, ವಿದ್ಯಾವರ್ಧಕ ಶಾಲೆ, ಪಾಂಗಾಳ ದೇವಸ್ಥಾನ, ಪಾಂಗಾಳ ಸೇತುವೆ, ಉಳಿಯಾರಗೋಳಿ,  ಪೊಲಿಪು ಜಂಕ್ಷನ್‌, ಕಾಪು ವಿದ್ಯಾನಿಕೇತನ ಜಂಕ್ಷನ್‌, ಕೊಪ್ಪಲಂಗಡಿ ಕಮ್ಯುನಿಟಿ ಹಾಲ್‌ ಬಳಿ, ಮೂಳೂರು ಬಿಲ್ಲವ ಸಂಘ, ಅಲ್‌ ಇಹ್ಸಾನ್‌ ಶಾಲೆ ಬಳಿ, ಉಚ್ಚಿಲ-ಮೂಳೂರು ಜಂಕ್ಷನ್‌, ಉಚ್ಚಿಲ ಪೇಟೆ, ಉಚ್ಚಿಲ -ಪಣಿಯೂರು ಜಂಕ್ಷನ್‌, ಉಚ್ಚಿಲ-ಎರ್ಮಾಳು ಜಂಕ್ಷನ್‌, ಎರ್ಮಾಳು ಮಸೀದಿ, ನಾರಳ್ತಾಯ ಗುಡಿ ಬಳಿ, ಪಡುಬಿದ್ರಿ ಪೇಟೆ, ಪಡುಬಿದ್ರಿ ಬೀಡುಬದಿ, ಹೆಜಮಾಡಿ ಜಂಕ್ಷನ್‌.

ಸರ್ವೀಸ್‌ ರಸ್ತೆಗಳ ಕೊರತೆ
ಗ್ರಾಮೀಣ ಒಳ ರಸ್ತೆಗಳಿಂದ ಬರುವ ವಾಹನಗಳು ಹೆದ್ದಾರಿ ಪ್ರದೇಶಿಸುವಲ್ಲಿ ಸಮರ್ಪಕ ಸರ್ವಿಸ್‌ ರಸ್ತೆ ಇಲ್ಲದೆ ಅಲ್ಲಿ ವಾಹನಗಳು ವಿರುದ್ಧ ದಿಕ್ಕಿನಲ್ಲೇ ಸಂಚರಿಸುವುದು ಅಪಘಾತಕ್ಕೆ ಮುಖ್ಯ ಕಾರಣ. ಕೆಲವು ಕಡೆ ಡಿವೈಡರ್‌ಗಳಲ್ಲೇ  ದ್ವಿಚಕ್ರ ವಾಹನಗಳು ಇನ್ನೊಂದು ರಸ್ತೆಗೆ ತೂರಿ ಬರುತ್ತಿವೆ.

ಹೆದ್ದಾರಿ ಇಲಾಖೆಯ ನಿರ್ಲಕ್ಷ್ಯ 
ಅಪಘಾತಗಳು ಮತ್ತು ಸಾವು – ನೋವಿನಿಂದಾಗಿ ಹೆದ್ದಾರಿಗೆ ಕೆಟ್ಟ ಹೆಸರು ಬರುತ್ತಿದೆ. ಅಪಾಯಕಾರಿ ಜಂಕ್ಷನ್‌ಗಳ ಕುರಿತು ವರದಿ ಸಿದ್ಧಪಡಿಸಿ ರಾಷ್ಟ್ರೀಯ ಹೆದ್ದಾರಿ ಇಲಾಖೆಗೆ ಒಪ್ಪಿಸಲಾಗಿದ್ದರೂ ಹೆದ್ದಾರಿ ಇಲಾಖೆ ಇನ್ನೂ ಯಾವುದೇ ರೀತಿಯ ಪ್ರಸ್ತಾವಿತ ಸುಧಾರಣೆಗಳನ್ನು ಕೈಗೊಳ್ಳುತ್ತಿಲ್ಲ. ಇಲಾಖೆ ವತಿಯಿಂದ ಮುಂಜಾಗ್ರತಾ ಕ್ರಮ ಕೈಗೊಳ್ಳುತ್ತಿದ್ದು, ಈ ಬಗ್ಗೆ ಜಿಲ್ಲಾಧಿಕಾರಿಗೂ ಮಾಹಿತಿ ನೀಡಿದ್ದೇವೆ ಎನ್ನುತ್ತಾರೆ ಪೊಲೀಸರು.
ಹೆದ್ದಾರಿ ಇಲಾಖೆ ಎಚ್ಚೆತ್ತುಕೊಳ್ಳಲಿ

ರಾಷ್ಟ್ರೀಯ ಹೆದ್ದಾರಿ 66ರ ಕೆಲವು ಕಡೆಗಳಲ್ಲಿ ಸರ್ವಿಸ್‌ ರಸ್ತೆ ನಿರ್ಮಾಣವಾಗದೇ ಇರುವುದು ಅಪಘಾತಕ್ಕೆ ಮುಖ್ಯ ಕಾರಣ. ಅಸಮರ್ಪಕ ಡಿವೈಡರ್‌ಗಳು, ಅಸಮರ್ಪಕ ಕೂಡುರಸ್ತೆಗಳಿದ್ದು, ಅವುಗಳನ್ನು ಸ್ಥಳಾಂತರಿಸಲು ಹೆದ್ದಾರಿ ಇಲಾಖೆ ಕ್ರಮ ತೆಗೆದು ಕೈಗೊಳ್ಳಬೇಕು. ಜಂಕ್ಷನ್‌ಗಳಲ್ಲಿ ಪೊಲೀಸ್‌ ಪಹರೆ ಹಾಕುವುದು, ಸಿಸಿ ಕೆಮರಾ ಅಳವಡಿಸುವ ಕಾರ್ಯವಾಗಬೇಕು.
– ಅನಿಲ್‌ ಶೆಟ್ಟಿ, ರಿಕ್ಷಾ ಚಾಲಕ 

ವಿಶೇಷ ಕ್ರಮ
ಡಿವೈಡರ್‌ ಮತ್ತು ಜಂಕ್ಷನ್‌ಗಳು ಇರುವಲ್ಲಿ ಬ್ಯಾರಿಕೇಡ್‌ ಅಳವಡಿಕೆ, ಸರ್ವೀಸ್‌ ರಸ್ತೆ ಇಲ್ಲದಲ್ಲಿ ವಿರುದ್ಧ ದಿಕ್ಕಿನಲ್ಲಿ ಸಂಚರಿಸುವ ವಾಹನಗಳಿಗೆ ದಂಡ ವಿಧಿಸುವುದು, ಎಚ್ಚರಿಕೆ ಫಲಕ ಅಳವಡಿಕೆ, ಜನರಲ್ಲಿ ಜಾಗೃತಿ ಮೂಡಿಸುವ ಪ್ರಯತ್ನ ಮಾಡುವ ಮೂಲಕ ಅಪಘಾತ ತಡೆಯಲು ಪೊಲೀಸ್‌ ಇಲಾಖೆ ಮುಂದಾಗಿದೆ. ಮುಖ್ಯವಾಗಿ ವಾಹನ ಚಾಲಕರು ತಮ್ಮ ಜೀವದ ಬಗ್ಗೆ ಎಚ್ಚರ ವಹಿಸಿದಲ್ಲಿ ಅಪಘಾತ ತಡೆಗಟ್ಟಲು ಸಾಧ್ಯವಿದೆ.
– ಹಾಲಮೂರ್ತಿ ರಾವ್‌, 
ವೃತ್ತನಿರೀಕ್ಷಕರು, ಕಾಪು

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.