ಕಾಪು: ಕಿರುಚಿತ್ರದ ಮೂಲಕ ರಕ್ತದಾನ ಜಾಗೃತಿ


Team Udayavani, Jun 27, 2018, 2:20 AM IST

short-film-blood-donation-26-6.jpg

ಕಾಪು: ಕಾಪು ತಾಲೂಕಿನ ಸುಭಾಸ್‌ ನಗರದ ಸಮಾನ ಮನಸ್ಕ ಯುವ ಹುಡುಗರು ನಟಿಸಿ, ನಿರ್ದೇಶಿಸಿ, ನಿರ್ಮಿಸಿದ ಕಿರುಚಿತ್ರವೊಂದು ಸದ್ದಿಲ್ಲದೆ ಸುದ್ಧಿ ಮಾಡುತ್ತಿದೆ. ರಕ್ತದಾನದ ಕುರಿತಾಗಿ ಜನರಲ್ಲಿ ಜಾಗೃತಿ ಮೂಡಿಸುವುದಕ್ಕಾಗಿ ನಿರ್ಮಿಸಿದ ‘ರಕ್ತದ ಅನಿರೀಕ್ಷಿತ ತಿರುವು’ ಎಂಬ ಕಿರುಚಿತ್ರ ಸಾಮಾಜಿಕ ಜಾಲತಾಣದಲ್ಲಿಯೂ ಪ್ರಸಿದ್ಧಿ ಪಡೆದಿದ್ದು, ಜನಮೆಚ್ಚುಗೆಗೆ ಪಾತ್ರವಾಗಿದೆ. ಕುರ್ಕಾಲಿನ ಮೂವರು ಯುವಕರು ನಿರ್ಮಿಸಿದ ಕಿರುಚಿತ್ರ ವಿಶ್ವ ರಕ್ತದಾನ ದಿನಾಚರಣೆಯ ನಿಮಿತ್ತ ಮಣಿಪಾಲದ ಕೆ.ಎಂ.ಸಿ. ಆಸ್ಪತ್ರೆ ಆಯೋಜಿಸಿದ್ದ ಸ್ಪರ್ಧೆಯಲ್ಲಿ ಮೊದಲ ಬಹುಮಾನವನ್ನು ಪಡೆದುಕೊಂಡಿದೆ. ಮಾತ್ರವಲ್ಲದೇ ಉಡುಪಿಯ ಖಾಸಗಿ ವಾಹಿನಿಯಲ್ಲಿ ಬಿಡುಗಡೆಗೊಂಡಿದ್ದು, ಯೂಟ್ಯೂಬ್‌ ನಲ್ಲಿಯೂ ಸದ್ದು ಮಾಡುತ್ತಿದೆ.

ಈ ಹಿಂದೆ ಉಡುಪಿ ಜಿಲ್ಲೆಯಲ್ಲಿ ಫ್ರಾಗ್ರೆನ್ಸ್‌ ಆಫ್‌ ಹ್ಯುಮಾನಿಟಿ ತಂಡ ಕಟ್ಟಿ ಮೆಹೆಕ್‌ ಎನ್ನುವ ಮಗುವಿಗೆ ಸಾಮಾಜಿಕ ಜಾಲತಾಣದ ಮೂಲಕವೇ ಸಹಾಯ ಮಾಡಿ ಜನಮನ ಗೆದ್ದ ತಂಡದ ಸದಸ್ಯರಾದ ರಾಯನ್‌ ಫೆರ್ನಾಂಡಿಸ್‌, ಸುಚಿತ್‌ ಕೋಟ್ಯಾನ್‌ ಮತ್ತು ರಾಯನ್‌ ಮಥಾಯಸ್‌ ಅವರು ಅದೇ ಹೆಸರನ್ನು ಉಳಿಸಿಕೊಂಡು ಈ ಕಿರುಚಿತ್ರವನ್ನು ನಿರ್ಮಿಸಿದ್ದಾರೆ. ರಕ್ತದಾನದ ಕುರಿತಾಗಿ ಜಾಗೃತಿ ಮೂಡಿಸಲು ನಿರ್ಮಿಸಿರುವ ಈ ಕಿರುಚಿತ್ರ ವೀಕ್ಷಿಸಿ ಹಲವರು ಸಾಮಾಜಿಕ ಜಾಲತಾಣದಲ್ಲಿ ಮೊದಲ ಬಾರಿ ರಕ್ತದಾನ ಮಾಡಿರುವ ಕುರಿತಾಗಿ ಬರೆದುಕೊಂಡಿರುವುದು ಇದರ ಯಶಸ್ಸಿಗೆ ಸಾಕ್ಷಿಯಾಗಿದೆ. ಈ ಮೂಲಕ ರಕ್ತದಾನ ಕುರಿತಾಗಿ ಸಾವಿರಾರು ಮಂದಿಯಲ್ಲಿದ್ದ ಅಸಮಾಧಾನ, ಅಪನಂಬಿಕೆ ಮತ್ತು ಅನಗತ್ಯ ಭಯವನ್ನು ದೂರ ಮಾಡಿದಂತಾಗಿದೆ.

ರಕ್ತದಾನ ಮಾಡಲು ಪ್ರೇರಣೆ: ಸುಚಿತ್‌ ಕೋಟ್ಯಾನ್‌
ಸಮಾಜದ ಒಳಿತಿಗಾಗಿ ದುಡಿಯಬೇಕು, ಕಿರುಚಿತ್ರಗಳ ಮೂಲಕ ಜನರೆಲ್ಲಾ ಒಂದಾಗಿ ಬಾಳುವ ಸಂದೇಶ ಸಾರಬೇಕು ಎಂಬ ಕನಸು ನಮ್ಮದಾಗಿತ್ತು. ಯುವ ಮನಸ್ಸುಗಳೆಲ್ಲಾ ಈ ರೀತಿ ಸ್ವಸ್ಥ ಸಮಾಜ ಕಟ್ಟುವ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಲ್ಲಿ ನಾವು ನೆಮ್ಮದಿಯ ಭವಿಷ್ಯ ಕಾಣಲು ಸಾಧ್ಯವಿದೆ. ಇಂತಹುದೇ ಮಾದರಿಯ ಸೇವೆಯನ್ನು ಹಿಂದೆಯೂ ನಡೆಸಿದ್ದು, ಇದನ್ನು ಮುಂದುವರಿಸಿಕೊಂಡು ಹೋಗುವ ಆಲೋಚನೆಯೂ ಇದೆ ಎಂದು ತಂಡದ ಸದಸ್ಯ ಸುಚಿತ್‌ ಕೋಟ್ಯಾನ್‌ ಅವರು ತಿಳಿಸಿದ್ದಾರೆ.

ಮೂವರದ್ದೇ ನಟನೆ 
ವಿದ್ಯಾರ್ಥಿ, ಉಪನ್ಯಾಸಕ‌, ವಿಭಾಗ ಮುಖ್ಯಸ್ಥ : ಸದಾ ಸಮಾಜಮುಖಿ ಕೆಲಸಗಳತ್ತ ಆಲೋಚಿಸುವ ಪೂರ್ಣಪ್ರಜ್ಞ ಕಾಲೇಜಿನ ಬಿ.ಕಾಂ. ವಿದ್ಯಾರ್ಥಿ ರಾಯನ್‌ ಫೆರ್ನಾಂಡಿಸ್‌ ಕಿರುಚಿತ್ರಕ್ಕೆ ಕತೆ ಬರೆದು ನಿರ್ದೇಶಿಸಿದ್ದರೆ, ಎಂ.ಜಿ.ಎಂ. ಕಾಲೇಜಿನ ಪತ್ರಿಕೋದ್ಯಮ ಉಪನ್ಯಾಸಕ ಸುಚಿತ್‌ ಕೋಟ್ಯಾನ್‌ ಚಿತ್ರದ ನಿರ್ಮಾಣದ ಜವಾಬ್ದಾರಿ ಹೊತ್ತಿದ್ದರು. ಮಿಲಾಗ್ರಿಸ್‌ ಕಾಲೇಜಿನ ಸಮಾಜ ಕಾರ್ಯ ವಿಭಾಗದ ಮುಖ್ಯಸ್ಥ ರಾಯನ್‌ ಮಥಾಯಸ್‌ ಚಿತ್ರಕತೆ ಬರೆದಿದ್ದು, ಕಿರುಚಿತ್ರದಲ್ಲಿ ಈ ಮೂವರದ್ದೇ ನಟನೆಯೂ ಇದೆ.

ಟಾಪ್ ನ್ಯೂಸ್

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-

Gangolli: ರಿಕ್ಷಾ-ಕಾರು ಢಿಕ್ಕಿ

8-shirva

Shirva: ವಾಕಿಂಗ್‌ ವೇಳೆ ಕುಸಿದು ಬಿದ್ದು ಸಾವು

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

3-

ಕಾರ್ಯಕರ್ತರ ಸಭೆ; ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗೆ ಬೆಂಬಲ ನೀಡಿ ಗೆಲ್ಲಿಸುವಂತೆ ಮನವಿ

2-

ಸಂಸದರ ವಿರುದ್ಧ ಸುದ್ದಿ ಹರಿಬಿಟ್ಟು,ಪೊಲೀಸ್ ಪ್ರಕರಣ ಎದುರಿಸಿದ್ದವರಿಂದ ಪಾಠ ಕಲಿಯಬೇಕಾಗಿಲ್ಲ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.