ಅಂಧನಾದರೂ ಸಾಧಿಸುವ ಛಲದ ಶ್ರೀನಿವಾಸ 


Team Udayavani, Jun 30, 2018, 6:00 AM IST

2806kpt6e-srinivas-blind.jpg

ಕಟಪಾಡಿ: ಹುಟ್ಟು ಅಂಧನಾದರೂ ಸಾಧನೆಗೆ ಕಿಂಚಿತ್ತೂ ಕಡಿಮೆ ಇಲ್ಲ. ಸ್ವಂತಕ್ಕೊಂದು ಕ್ಯಾಂಟೀನ್‌ ಇಟ್ಟು, ವಿವಿಧ ಕಾರ್ಯಕ್ರಮಗಳಲ್ಲಿ ಕೀಬೋರ್ಡ್‌ ನುಡಿಸುವ, ಕಾರು, ಸೈಕಲ್‌ ಹೊಡೆಯುವ, ಕಲಿಕೆಯಲ್ಲಿ ಬಿಎಸ್‌ಡಬ್ಲ್ಯೂ ಪದವಿ ಪಡೆದ ಛಲಗಾರ. ಇವರು ಉಡುಪಿ ಜಿಲ್ಲೆಯ ಉದ್ಯಾವರ ಶಂಭುಕಲ್ಲು ಹಳೆ ಗ್ಯಾಸ್‌ ಗೋಡೌನ್‌ ಬಳಿಯ ನಿವಾಸಿ ಗಣೇಶ ಪೂಜಾರಿ ಮತ್ತು ಜ್ಯೋತಿ ಅವರ ಪುತ್ರ ಶ್ರೀನಿವಾಸ ಪೂಜಾರಿ (23).  

ಇವರು ಮಂಗಳೂರು ಉರ್ವ ಸ್ಟೋರ್‌ನ ರೋಮನ್‌, ಕ್ಯಾಥರಿನ್‌ ಲೋಬೋ ಅಂಧ ಮಕ್ಕಳ ಶಾಲೆಯಲ್ಲಿ 10ನೇ ತರಗತಿ ಶಿಕ್ಷಣ ಪೂರೈಸಿದ್ದು, ಮೂಡಬಿದಿರೆ ಆಳ್ವಾಸ್‌ ಕಾಲೇಜಿನಲ್ಲಿ  ಬಿ.ಎಸ್‌.ಡಬ್ಲ್ಯೂ ಪದವಿ ಶಿಕ್ಷಣವನ್ನೂ ಪಡೆದಿದ್ದಾರೆ. 

ಕೀಬೋರ್ಡ್‌ ಕಲಾವಿದ 
ನೆಚ್ಚಿನ ಕೀಬೋರ್ಡ್‌ ನುಡಿಸುವ ಶ್ರೀನಿವಾಸ ಈವರೆಗೆ 70ಕ್ಕೂ ಅಧಿಕ ಆರ್ಕೆಸ್ಟ್ರಾ, ಭಜನ ಕಾರ್ಯಕ್ರಮಲ್ಲಿ ಭಾಗಿ ಯಾಗಿದ್ದಾರೆ. 

ಮಿಮಿಕ್ರಿ ಪಟುವಾಗಿಯೂ
ಗುರುತಿಸಿಕೊಂಡಿದ್ದಾರೆ. ಜತೆಗೆ ಯೋಗ ಪಟುವೂ ಹೌದು. ಗಿಟಾರ್‌ ಕೂಡ ನುಡಿಸುತ್ತಾರೆ. ಇವರಲ್ಲಿದ್ದ ಕಲೆ ಗುರುತಿಸಿದ “ಹರ್ಷ’ ಸಂಸ್ಥೆಯ ಮಾಲಕ ಸೂರ್ಯಪ್ರಕಾಶ್‌ ಅವರು ಕೀಬೋರ್ಡ್‌ ಅನ್ನು ಉಡುಗೊರೆಯಾಗಿ ನೀಡಿದ್ದರು. ತುಳು ಕವನ, ಯಕ್ಷಗಾನ ಭಾಗವತಿಕೆಯ ಆಸಕ್ತಿಯೂ ಇವರದು.
 
ಕಾರು, ಸೈಕಲ್‌ ಸವಾರಿ 
ಯಾರ ನೆರವೂ ಇಲ್ಲದೆ, ಪರಿಸರದ ತನ್ನ ಸ್ನೇಹಿತರ ಮನೆಗೆ ಸೈಕಲ್‌ ಸವಾರಿ ಮಾಡುವ ಶ್ರೀನಿವಾಸ ಕಾರು ಚಾಲನೆ ಕೂಡ ಮಾಡುತ್ತಾರೆ. ಟಚ್‌ಸ್ಕ್ರೀನ್‌ ಮೊಬೈಲ್‌ ಅನ್ನು ಆಪರೇಟ್‌ ಮಾಡುತ್ತಾರೆ.  

ಕ್ಯಾಂಟೀನ್‌ ಮೂಲಕ ಸ್ವಾವಲಂಬಿ 
ಅಂಗವಿಕಲರ ಇಲಾಖೆಯಿಂದ 35 ಸಾವಿರ ರೂ. ಸಾಲ ಪಡೆದು, ಸ್ನೇಹಿತರ ಸರಕಾರದಿಂದ 1 ಲಕ್ಷ ರೂ. ವೆಚ್ಚದಲ್ಲಿ ಕ್ಯಾಂಟೀನ್‌ ಶುರುಮಾಡಿದ್ದು, ತಂದೆಯೊಂದಿಗೆ ಸ್ವಾವಲಂಬಿ ಜೀವನ ಸಾಗಿಸುತ್ತಿದ್ದಾರೆ. ಸದ್ಯ ಇವರಿಗೆ 1,400 ರೂ. ಮಾಸಾಶನ ಬರುತ್ತಿದೆ. ಸರಕಾರಿ ನೌಕರಿ ನಿಮಿತ್ತ  ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖಾ ಪರೀಕ್ಷೆಯನ್ನು ಮೈಸೂರಿನಲ್ಲಿ ಬರೆದಿದ್ದು, 200ರಲ್ಲಿ 187 ಅಂಕ ಗಳಿಸಿದ್ದರೂ ನೌಕರಿಯ ಸೂಚನೆ ಲಭಿಸಿಲ್ಲ.  

ಸ್ವಾವಲಂಬಿಯಾಗಿ ನೆರವಾಗುವ ಆಸೆ
ಸರಕಾರಿ ನೌಕರಿ ಪಡೆದು ಅಥವಾ ಸ್ವಾವಲಂಬಿಯಾಗಿ ಹೆತ್ತವರು ಮತ್ತು ಇಬ್ಬರು ತಂಗಿಯರಿರುವ ಕುಟುಂಬಕ್ಕೆ ನೆರವಾಗಬೇಕೆಂಬ ಮಹದಾಸೆ ಇದೆ. 
–  ಶ್ರೀನಿವಾಸ ಪೂಜಾರಿ 
ಕೀಬೋರ್ಡ್‌ ಕಲಾವಿದ 

– ವಿಜಯ ಆಚಾರ್ಯ ಉಚ್ಚಿಲ 

ಟಾಪ್ ನ್ಯೂಸ್

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.