ಆಗುಂಬೆ: ಇಂದಿನಿಂದ ಬಸ್ ಸಂಚಾರ
Team Udayavani, Jun 30, 2018, 9:13 AM IST
ಹೆಬ್ರಿ: ಭೂಕುಸಿತವಾಗಿ ರಸ್ತೆ ಸಂಚಾರ ಸ್ಥಗಿತವಾಗಿದ್ದ ಆಗುಂಬೆ ಘಾಟಿ ರಸ್ತೆಯಲ್ಲಿ ತಾತ್ಕಾಲಿಕ ದುರಸ್ತಿ ನಡೆಸಲಾಗಿದ್ದು, ಶನಿವಾರದಿಂದ ಬಸ್ಗಳ ಸಂಚಾರಕ್ಕೆ ಜಿಲ್ಲಾಧಿಕಾರಿ ಅವಕಾಶ ಕಲ್ಪಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 169ಎ ರಸ್ತೆಯ ಆಗುಂಬೆ ಘಾಟಿಯ 7ನೇ ತಿರುವಿನಲ್ಲಿ ಗುರುವಾರ ಕುಸಿತ ಸಂಭವಿಸಿದ್ದು, ಬಸ್, ಟೆಂಪೋ ಇತ್ಯಾದಿ ಘನ ವಾಹನಗಳ ಸಂಚಾರವನ್ನು ತಡೆಯಲಾಗಿತ್ತು.
ಕುಸಿತ ಸಂಭವಿಸಿದ ಸ್ಥಳದಲ್ಲಿ ಮರಳು ಚೀಲಗಳನ್ನು ಇರಿಸಿ ಇನ್ನಷ್ಟು ಕುಸಿಯದಂತೆ ಕ್ರಮ ಕೈಗೊಳ್ಳಲಾಗುತ್ತಿದೆ. ಹೆಬ್ರಿ ಠಾಣಾಧಿಕಾರಿ ಮಹಾಬಲ ಶೆಟ್ಟಿ ಹಾಗೂ ಆಗುಂಬೆ ಠಾಣಾಧಿಕಾರಿ ಭಾರತಿ ಸಹಿತ ಪೊಲೀಸ್ ತಂಡ ವಿಶೇಷ ಭದ್ರತೆ ಒದಗಿಸಿದೆೆ. ಶಿವಮೊಗ್ಗ ಜಿಲ್ಲಾಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಶನಿವಾರದಿಂದ ಎರಡೂ ಕಡೆಗಳಿಂದ ಬಸ್ ಸಂಚಾರಕ್ಕೆ ಅವಕಾಶ ನೀಡಲಾಗುತ್ತದೆ. ಆದರೆ ಘನವಾಹನಗಳಿಗೆ ಸಂಚಾರ ನಿರ್ಬಂಧವಿರಲಿದೆ ಎಂದು ಉಡುಪಿ ಡಿಸಿ ಹೇಳಿದ್ದಾರೆ.
ಬದಲಿ ಮಾರ್ಗ
ಆಗುಂಬೆ ಘಾಟಿ ಬಸ್ ಸಂಚಾರ ಸ್ಥಗಿತಗೊಂಡ ಕಾರಣ ಉಡುಪಿ ಯಿಂದ ಶಿವಮೊಗ್ಗ, ಚಿಕ್ಕಮಗಳೂರು ಕಡೆಗೆ ಹೋಗುವ ಬಸ್ಗಳು ಬಾಳೆಬರೆ ಘಾಟಿ, ಹಾಗೂ ಬಜ ಗೋಳಿ ಮೂಲಕ ಕೆರೆಕೆಟ್ಟೆ ಘಾಟಿ ಮಾರ್ಗದಲ್ಲಿ ಸಂಚರಿಸಿದವು.
ಸಂಸದೆ ಸೂಚನೆ
ಆಗುಂಬೆ ಘಾಟಿಯ ಭೂಕುಸಿತ ವನ್ನು ಶೀಘ್ರ ತೆರವು ಮಾಡಲು ಶೋಭಾ ಕರಂದ್ಲಾಜೆ ರಾಷ್ಟ್ರೀಯ ಹೆದ್ದಾರಿ ಇಲಾಖೆಗೆ ಸೂಚಿಸಿದ್ದಾರೆ.
ನಿತ್ಯ ಪ್ರಯಾಣಿಕರಿಗೆ ತೊಂದರೆ
ಮಲೆನಾಡು – ಕರಾವಳಿ ಸಂಪರ್ಕ ಕಲ್ಪಿಸುವ ಪ್ರಮುಖ ಕೊಂಡಿಯಾದ ಆಗುಂಬೆ ಘಾಟಿ ರಸ್ತೆ ಕುಸಿದ ಕಾರಣ ಈ ಮಾರ್ಗದಲ್ಲಿ ಬಸ್ಗಳಲ್ಲಿ ನಿತ್ಯ ಸಂಚರಿಸುವ ಉದ್ಯೋಗಿಗಳಿಗೆ ಹಾಗೂ ತುರ್ತು ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ಬರುವ ರೋಗಿಗಳಿಗೆ ತೊಂದರೆಯಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ