ವೈದ್ಯ ಕ್ಷೇತ್ರಕ್ಕಷ್ಟೇ ಅಲ್ಲ, ಸಮಾಜ ಸೇವೆಗೂ ಹಿರಿಮೆ ತಂದವರು


Team Udayavani, Jul 1, 2018, 6:00 AM IST

27.jpg

ಕಾಪು: ಜಗತ್ತೇ ಅಂಗೈಲಿ ಸಿಗುವಂಥ ಅವಕಾಶವಿದ್ದರೂ ಅದನ್ನು ನಿರಾಕರಿಸಿ ಹುಟ್ಟೂರಿನಲ್ಲೇ ನೆಲೆಗೊಳ್ಳುವ ಪ್ರಸಂಗ ತೀರಾ ಕಡಿಮೆ. ಆದರೆ ಇಲ್ಲಿಯ ಡಾ| ಪ್ರಭಾಕರ ಶೆಟ್ಟಿ ವೈದ್ಯ ಪದವಿ ಪಡೆದ ಮೇಲೆ ಎಲ್ಲೂ ಹೋಗದೇ ಇಲ್ಲೇ ನಿಂತು ಜನರ ಸೇವೆಯಲ್ಲಿ ತೊಡಗಿದವರು. ಗ್ರಾಮೀಣ ಪ್ರದೇಶವಾದ ಕಾಪು ಸುತ್ತಮುತ್ತಲಿನಲ್ಲಿ 51 ವರ್ಷಗಳಿಂದ ವೈದ್ಯರಾಗಿ ದುಡಿಯುತ್ತಿರುವುದಲ್ಲದೆ ಸಮಾಜ ಸೇವೆ, ಧಾರ್ಮಿಕ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲೂ ಸೇವೆ ಸಲ್ಲಿಸುತ್ತಿದ್ದಾರೆ. ಕೃಷಿಕ ಪರಿವಾರದಲ್ಲಿ ಜನಿಸಿದ ಅವರು 1965ರಲ್ಲಿ ಮೈಸೂರು ಮೆಡಿಕಲ್‌ ಕಾಲೇಜ್‌ನಲ್ಲಿ ಎಂ.ಬಿ.ಬಿ.ಎಸ್‌. ಮುಗಿಸಿ ವೈದ್ಯರಾದರು. ಅಂದಿನ ದಿನಗಳಲ್ಲಿ ಹೊರ ರಾಜ್ಯ ಮತ್ತು ವಿದೇಶಗಳಲ್ಲಿ ಅವಕಾಶಗಳಿದ್ದರೂ ತಮ್ಮ ಹೆತ್ತವರ ಮನದಿಚ್ಛೆಯಂತೆ ಹುಟ್ಟೂರಿನಲ್ಲೇ ನೆಲೆಯಾದರು.

ಪ್ರವೃತ್ತಿಯಲ್ಲಿ ಸಮಾಜ ಸೇವೆ
ವೃತ್ತಿಯಲ್ಲಿ ವೈದ್ಯರಾಗಿದ್ದು ಪ್ರವೃತ್ತಿಯಲ್ಲಿ ತೊಡಗಿಸಿಕೊಂಡಿದ್ದು ಸಮಾಜ ಸೇವೆಯಲ್ಲಿ. 1997ರಲ್ಲಿ ಪ್ರಾರಂಭಗೊಂಡ ಸ್ಥಳೀಯ ಲಯನ್ಸ್‌ ಕ್ಲಬ್‌ನ ಸ್ಥಾಪಕ ಸದಸ್ಯರಾಗಿ, ಬಳಿಕ ಅಧ್ಯಕ್ಷರಾಗಿ, 3 ವರ್ಷಗಳ ಕಾಲ ಕ್ಯಾಬಿನೆಟ್‌ ಸದಸ್ಯರಾಗಿ ಸೇವೆ ಸಲ್ಲಿಸಿದವರು ಡಾ| ಪ್ರಭಾಕರ ಶೆಟ್ಟರು. ಎಂಆರ್‌ಪಿಎಲ್‌ ಗದ್ದಲದ ಸಂದರ್ಭ ಕೋಮು ಸಂಘರ್ಷಕ್ಕೆ ತುತ್ತಾಗಿದ್ದ ಕಾಪುವಿನಲ್ಲಿ ಶಾಂತಿ ಪರಿಪಾಲನಾ ಸಮಿತಿಯ ಅಧ್ಯಕ್ಷರಾಗಿ ಅವರು ಕರ್ತವ್ಯ ನಿರ್ವಹಿಸಿದ ರೀತಿ ಇಂದಿಗೂ ಸ್ಮರಣೀಯ. ಯೂತ್‌ ರೆಡ್‌ ಕ್ರಾಸ್‌, ಉಡುಪಿ – ಕರಾವಳಿ ಐ.ಎಂ.ಎ.,  ಉಡುಪಿ ಜಿಲ್ಲಾ ಖಾಸಗಿ ಆಸ್ಪತ್ರೆಗಳ ಸ್ಥಾಪಕ ಅಧ್ಯಕ್ಷರಾಗಿಯೂ ಕೆಲಸ ಮಾಡಿದವರು. ಅದಮಾರು ಪಿಯು ಕಾಲೇಜಿನ ಹಳೇ ವಿದ್ಯಾರ್ಥಿ ಸಂಘದ ಸ್ಥಾಪಕ ಅಧ್ಯಕ್ಷರಾಗಿದ್ದಲ್ಲದೆ ನಿರಂತರ 18 ವರ್ಷ ವಿದ್ಯಾ ಸಂಸ್ಥೆಯ ಏಳಿಗೆಗಾಗಿ ನಿರಂತರ ಶ್ರಮಿಸಿದ್ದಾರೆ.

ಕಾಪು ಶ್ರೀ ಲಕ್ಷ್ಮೀಜನಾರ್ದನ ದೇವಸ್ಥಾನ, ಕೊಪ್ಪಲಂಗಡಿ ಶ್ರೀ ವಾಸುದೇವ ಸ್ವಾಮಿ ದೇವಸ್ಥಾನ ಮತ್ತು ಶ್ರೀ ಮೂರನೇ ಮಾರಿಗುಡಿ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿ ಹೊಣೆ ನಿರ್ವಹಿಸಿದ್ದಾರೆ. ಶತಮಾನೋತ್ಸವವನ್ನು ಆಚರಿಸಿದ ದಂಡ ತೀರ್ಥ ಹಿರಿಯ ಪ್ರಾಥಮಿಕ ಶಾಲೆ, ದಂಡ ತೀರ್ಥ ಆಂಗ್ಲ ಮಾಧ್ಯಮ ಶಾಲೆ, ಪ. ಪೂ. ಕಾಲೇಜಿನ ಸಂಚಾಲಕರಾಗಿ 20 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಶೆಟ್ಟರು, ಸಂಸ್ಥೆಯನ್ನು ರಾಜ್ಯ ಮಟ್ಟದಲ್ಲಿ ಗುರುತಿಸುವಂತೆ ಮಾಡಿ ದ್ದಾರೆ. ಪ್ರತೀ ವರ್ಷ ಬಡ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ದಾನಿಗಳ ಸಹಕಾರದೊಂದಿಗೆ 8 ಲಕ್ಷ ರೂ. ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ. ಪುತ್ರ ಡಾ| ಪ್ರಶಾಂತ್‌ ಶೆಟ್ಟಿಯವರ ಮೂಲಕ ಪ್ರಾರಂಭಗೊಂಡ ಪ್ರಶಾಂತ್‌ ಪ್ಯಾರಾ ಮೆಡಿಕಲ್‌ ಕಾಲೇಜಿನ ಸ್ಥಾಪನೆಗೂ ಕಾರಣರಾದವರು. 

ಮಂಗಳೂರು ಬಂಟರ ಮಾತೃ ಸಂಘದಿಂದ ಚಿನ್ನದ ಪದಕ, ಲಯನ್ಸ್‌ ಸೇವಾ ಪುರಸ್ಕಾರ, ಗ್ರಾಮೀಣ ಸೇವೆಗಾಗಿ ಅಕಾಡೆಮಿ ಆಫ್‌ ಜನರಲ್‌ ಎಜುಕೇಶನ್‌, ಸಿಂಡಿಕೇಟ್‌ ಬ್ಯಾಂಕ್‌, ರೋಟರಿ ಕ್ಲಬ್‌ ಸಹಭಾಗಿತ್ವದ ಹೊಸ ವರ್ಷದ ಸಾಧನಾ ಪ್ರಶಸ್ತಿ, ಕರ್ನಾಟಕ ಸ್ಟೇಟ್‌ ಮೆಡಿಕಲ್‌ ಅಸೋಸಿಯೇಶನ್‌ ಸಮ್ಮಾನ, ಶೀರೂರು ಮಠ ದಿಂದ ಶ್ರೀಕೃಷ್ಣ ವಿಠಲ ಪರಮಾನುಗ್ರಹ ಪ್ರಶಸ್ತಿ, ಉಡುಪಿ ಜಿಲ್ಲಾ ರಾಜ್ಯೋತ್ಸವ ಪುರಸ್ಕಾರ ಮೊದಲಾದ ಗೌರವ ಪ್ರಶಸ್ತಿಗಳಿಗೆ ಭಾಜನರು.

ಯಾವ ಸೌಲಭ್ಯವಿಲ್ಲದ ಹೊತ್ತು
ಹೆರಿಗೆ ನೋವು ಅನುಭವಿಸುತ್ತಿರುವ ಗರ್ಭಿಣಿಯರು ಅಥವಾ ರೋಗಿಗಳಿಗೆ ಚಿಕಿತ್ಸೆ ಕೊಡಲು ವೈದ್ಯರು ಕಾಲ್ನಡಿಗೆಯಲ್ಲೇ ಮನೆಗೆ ತೆರಳ ಬೇಕಿತ್ತು. ರಾತ್ರಿಯಾದರೆ ಒಂದು ಟಾರ್ಚ್‌, ಮಳೆಯಾದರೆ ಒಂದು ಕೊಡೆಯಷ್ಟೇ ಜತೆಗೆ. ಅದರಲ್ಲೂ ಮನೆಗಳಲ್ಲೇ ಹೆರಿಗೆ ಮಾಡಿಸು ವುದೆಂದರೆ ಬಹಳ ಕಷ್ಟ. ಒಳಗೆ ಕತ್ತಲೆ ಕೋಣೆಯಲ್ಲಿ ಗರ್ಭಿಣಿ ಪಕ್ಕದಲ್ಲಿ ಒಂದು ಮಣೆಯ ಮೇಲೆ ಕುಳಿತು ಚಿಮಿಣಿ ದೀಪದ ಬೆಳಕಿನಲ್ಲಿ ಹೆರಿಗೆಯನ್ನು ಮಾಡಿಸಬೇಕಿತ್ತು. ಸಹಾಯಕ್ಕಾಗಿ ಯಾವ ನರ್ಸುಗಳೂ ಇರ ಲಿಲ್ಲ. ಪ್ರಸವಕ್ಕೆ ಸಮಯ ತೆಗೆದುಕೊಂಡರೆ ಕಾಯುತ್ತಾ ಕುಳಿತುಕೊಳ್ಳಬೇಕಿತ್ತು ಎಂದು ನೆನಪಿಸಿಕೊಳ್ಳುತ್ತಾರೆ ಡಾ| ಪ್ರಭಾಕರ ಶೆಟ್ಟಿ. 

ಒಂದು ಘಟನೆ-ಮಹತ್ವದ ನಿರ್ಧಾರ 
1967ರಲ್ಲಿ ಕೆ.ಎಂ.ಸಿ.ಯವರು ಕಾಪುವಿನಲ್ಲಿ ಸ್ಥಾಪಿಸಿದ ಹೆರಿಗೆ ಆಸ್ಪತ್ರೆಯಲ್ಲಿ ಗೌರವ ವೈದ್ಯಾಧಿಕಾರಿಯಾಗಿದ್ದಾಗ ಸಾವು – ಬದುಕಿನ ಮಧ್ಯೆ ಹೋರಾಡುತ್ತಿದ್ದ ತಾಯಿ-ಮಗಳ ಜೀವವನ್ನು ಉಳಿಸಿದ್ದು ತನ್ನ ಸೇವಾ ಜೀವನದ ಅವಿಸ್ಮರಣೀಯ ಘಟನೆ. ಅದೇ ಸಂಗತಿ 1985ರಲ್ಲಿ ಕೊಪ್ಪಲಂಗಡಿಯಲ್ಲಿ ಪ್ರಶಾಂತ್‌ ಆಸ್ಪತ್ರೆಯನ್ನು ಸ್ಥಾಪಿಸಿ ಜನರ ಸೇವೆ ಮಾಡಲು ಪ್ರೇರಣೆ ನೀಡಿತು.                            
ಡಾ| ಪ್ರಭಾಕರ ಶೆಟ್ಟಿ

ಟಾಪ್ ನ್ಯೂಸ್

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.