ಮಲ್ಪೆ- ತೀರ್ಥಹಳ್ಳಿ ರಸ್ತೆ ಕಾಮಗಾರಿಗೆ ಶೀಘ್ರ ಚಾಲನೆ: ಸಂಸದೆ ಶೋಭಾ


Team Udayavani, Jul 4, 2018, 3:50 AM IST

shobha-karandlaje-8-600.jpg

ಕಾರ್ಕಳ: ಮಲ್ಪೆ- ತೀರ್ಥಹಳ್ಳಿ ರಸ್ತೆ ಚತುಷ್ಪಥ ಅಭಿವೃದ್ಧಿಗೆ ಸಂಬಂಧಿಸಿ ಉಡುಪಿಯ ಕರಾವಳಿ ಜಂಕ್ಷನ್‌ ನಿಂದ ಪರ್ಕಳದವರೆಗಿನ ರಸ್ತೆಗೆ 93 ಕೋ. ರೂ. ಬಿಡುಗಡೆಗೊಂಡಿದ್ದು, ಟೆಂಡರ್‌ ಆಗಿದೆ. ಶೀಘ್ರವೇ ಕೆಲಸ ಪ್ರಾರಂಭವಾಗಲಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ. ಕಾರ್ಕಳದಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿದ ಅವರು, ಈಗಾಗಲೇ ಗುರುತಿಸಿದ ಎಲ್ಲ ಹೈವೇಗಳನ್ನು ಮೇಲ್ದರ್ಜೆಗೇರಿಸುವ ಕಾರ್ಯ ನಡೆದಿದೆ. ಹಿಂದಿನ ರಾಜ್ಯ ಸರಕಾರ ಭೂಸ್ವಾಧೀನ ಪ್ರಕ್ರಿಯೆಗೆ ಮೀನಮೇಷ ಎಣಿಸಿದ್ದರಿಂದ ವಿಳಂಬವಾಗಿದೆ. ಭೂಸ್ವಾಧೀನ ಪ್ರಕ್ರಿಯೆ ಜಿಲ್ಲಾಧಿಕಾರಿ ಮೂಲಕವೇ ನಡೆಯಬೇಕಾಗಿದೆ. ಕರಾವಳಿ ಜಂಕ್ಷನ್‌ -ಪರ್ಕಳ, ಪರ್ಕಳ- ಹಿರಿಯಡ್ಕ, ಹಿರಿಯಡ್ಕ-ಸೀತಾನದಿ, ಸೀತಾನದಿ – ಆಗುಂಬೆ ಹೀಗೆ ನಾಲ್ಕು ಹಂತಗಳಲ್ಲಿ ಈ ರಸ್ತೆಯ ಕಾಮಗಾರಿ ನಡೆಯಲಿದೆ ಎಂದರು.

ಕೇಂದ್ರ ಸರಕಾರದಿಂದ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳಿಗಾಗಿ ದೊಡ್ಡ ಪ್ರಮಾಣದ ಅನುದಾನ ತರಲಾಗಿದೆ. ಸದ್ಯ CRFನಲ್ಲಿ 93 ಕೋ.ರೂ. ಮೊತ್ತದ ಕೆಲಸ ನಡೆಯುತ್ತಿದೆ. 46 ಕೋ.ರೂ. ಟೆಂಡರ್‌ ಆಗಬೇಕಿದೆ. ಜಿಲ್ಲೆಯಲ್ಲಿ 1,95,355 ಜನಧನ ಖಾತೆ ತೆರೆಯಲಾಗಿದ್ದು, ಸಕ್ರಿಯವಾಗಿವೆ. ಖಾತೆದಾರರಿಗೆ ಇನ್ಶೂರೆನ್ಸ್‌ ಕೂಡ ದೊರೆಯುತ್ತಿದೆ ಎಂದರು.

ಹನಿನೀರಾವರಿಗೆ ಆದ್ಯತೆ
ಕೃಷಿ ಸಿಂಚನ ಯೋಜನೆ ಜಾರಿ ತರಲಾಗಿದ್ದು, ಹನಿ ನೀರಾವರಿಗೆ ಶೇ.90 ಸಹಾಯಧನ ನೀಡಲಾಗುತ್ತಿದೆ. ಉಜ್ವಲ ಯೋಜನೆಯಡಿ ಅರ್ಹ ಕುಟುಂಬಗಳಿಗೆ ಉಚಿತವಾಗಿ ಸಂಪರ್ಕ ಕಲ್ಪಿಸುವ ಕಾರ್ಯ ನಡೆದಿದೆ. ಜಿಲ್ಲೆಯಲ್ಲಿ ಶೇ.90 ಸಂಪರ್ಕ ಕಲ್ಪಿಸಲಾಗಿದ್ದು, ಬಾಕಿ ಇರುವವ‌ರಿಗೆ ಪರಿಶೀಲಿಸಿ ನೀಡುವಂತೆ ಜಿಲ್ಲಾಧಿಕಾರಿ ಅವರಿಗೆ ಸೂಚಿಸಲಾಗಿದೆ ಎಂದರು.

ಜಿಲ್ಲೆಯಲ್ಲಿ 28,500 ಶೌಚಾಲಯ ನಿರ್ಮಾಣ
ಸ್ವಚ್ಛ ಭಾರತ ಅಭಿಯಾನದಡಿ ಶೌಚಾಲಯ ನಿರ್ಮಾಣಕ್ಕೆ ಪ. ಜಾತಿ ಮತ್ತು ಪ. ಪಂಗಡದ ಕುಟುಂಬಗಳಿಗೆ 15 ಸಾವಿರ ರೂ. ಹಾಗೂ ಬಿಪಿಎಲ್‌ ಕಾರ್ಡ್‌ದಾರರಿಗೆ 12 ಸಾವಿರ ರೂ. ನೀಡಲಾಗಿದೆ. ಜಿಲ್ಲೆಯಲ್ಲಿ 28,500 ಶೌಚಾಲಯಗಳು ನಿರ್ಮಾಣವಾಗಿವೆ. ಮುದ್ರ ಲೋನ್‌ ನಲ್ಲಿ ಜಿಲ್ಲೆಯಲ್ಲಿ 286 ಕೋ.ರೂ. ವಿತರಣೆ ಮಾಡಲಾಗಿದೆ ಎಂದರು.

ಕೇಂದ್ರೀಯ ವಿದ್ಯಾಲಯವನ್ನು ಉಡುಪಿಗೆ ತರಲಾಗಿದೆ. ಸದ್ಯ ಇದು ತಾತ್ಕಾಲಿಕವಾಗಿ ಮಲ್ಪೆಯಲ್ಲಿ ನಡೆಯುತ್ತಿದ್ದು, ಅಲೆವೂರಿನಲ್ಲಿ ಶಾಶ್ವತ ಕಟ್ಟಡ ನಿರ್ಮಾಣ ಆಗುತ್ತದೆ. ಮೊದಲಬಾರಿಗೆ ಉಡುಪಿಯಲ್ಲಿ ಜೆಮ್ಸ್‌ ಆ್ಯಂಡ್‌ ಜುವೆಲ್ಸ್‌ ಸರ್ಟಿಫಿಕೇಶನ್‌ ಶಾಲೆ ತೆರೆಯಲಾಗಿದೆ. ಬ್ರಹ್ಮಾವರದಲ್ಲಿ ಪಾಸ್‌ ಪೋರ್ಟ್‌ ಕಚೇರಿ, ಜನೌಷಧ ಕೇಂದ್ರಗಳು, ಸಖೀ ಒನ್‌ ಸ್ಟಾಪ್‌ ಸೆಂಟರ್‌ ತರಲಾಗಿದೆ. 6,000 ಸಾವಿರ ಮನೆಗಳಿಗೆ ಪಂ| ದೀನ್‌ ದಯಾಳ್‌ ಉಪಾಧ್ಯಾಯ ವಿದ್ಯುದೀಕರಣ ಯೋಜನೆಯಲ್ಲಿ ವಿದ್ಯುತ್‌ ಕಲ್ಪಿಸಲಾಗಿದೆ ಎಂದರು. ಯೋಜನೆಗಳಲ್ಲಿ ಕಾರ್ಕಳದ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. CRFನಲ್ಲಿ ಅತೀ ಹೆಚ್ಚು 87 ಕೋ.ರೂ. ಕಾರ್ಕಳಕ್ಕೆ ನೀಡಲಾಗಿದೆ ಎಂದರು.

ಸುರಂಗ ಮಾರ್ಗ ಸೂಕ್ತವಲ್ಲ
ಆಗುಂಬೆಯಲ್ಲಿ ಸುರಂಗ ಮಾರ್ಗ ನಿರ್ಮಾಣ ಸೂಕ್ತವಲ್ಲ ಎಂದು ಕೇಂದ್ರದ ತಜ್ಞರ ತಂಡ ತಿಳಿಸಿದೆ. ಸುರಂಗ ಮಾರ್ಗಕ್ಕೆ ನನ್ನ ಒತ್ತಾಯ ಇದೆ. ಆದರೆ ಅದರಿಂದ ಅಲ್ಲಿರುವ ಜೀವವೈವಿಧ್ಯಕ್ಕೆ ಸಮಸ್ಯೆಯಾಗುತ್ತದೆ. ಹೀಗಾಗಿ ಘಾಟಿ ರಸ್ತೆಯನ್ನು ಸ್ವಲ್ಪ ಅಗಲ ಮಾಡಲು ಮಾತ್ರ ಸಾಧ್ಯವಿದೆ ಎಂದು ಶೋಭಾ ಕರಂದ್ಲಾಜೆ ತಿಳಿಸಿದರು. ಗೋಷ್ಠಿಯಲ್ಲಿ ಬಿಜೆಪಿ ರಾಜ್ಯ ಕಾರ್ಯದರ್ಶಿ ತಿಂಗಳೆ ವಿಕ್ರಮಾರ್ಜುನ ಹೆಗ್ಗಡೆ, ಜಿಲ್ಲಾ ಪ್ರಭಾರಿ ಕೆ. ಉದಯ ಕುಮಾರ್‌ ಶೆಟ್ಟಿ, ಕ್ಷೇತ್ರ ಅಧ್ಯಕ್ಷ ಮಣಿರಾಜ್‌ ಶೆಟ್ಟಿ, ಎಂ.ಕೆ. ಸುವೃತ್‌ ಕುಮಾರ್‌ ಉಪಸ್ಥಿತರಿದ್ದರು.

ಕ್ಷೇತ್ರ ಮರೆತಿದ್ದರೆ ಇಷ್ಟು ಕೆಲಸ ಹೇಗೆ ಸಾಧ್ಯ: ಶೋಭಾ ಪ್ರಶ್ನೆ
ಕಾರ್ಕಳ:
ತನ್ನ ಕ್ಷೇತ್ರವನ್ನು ಮರೆತಿದ್ದರೆ ಇಷ್ಟು ಅಭಿವೃದ್ಧಿ ಕಾರ್ಯಗಳನ್ನು ನಿಭಾಯಿಸಲು ಕೆಲಸ ಹೇಗೆ ಸಾಧ್ಯವಾಯಿತು? 28 ಸಂಸದರ ಪೈಕಿ ಬೇರೆ ಯಾವ ಸಂಸದರ ಕ್ಷೇತ್ರದಲ್ಲಿ ಇಷ್ಟು CRF ನಿಧಿ ಬಂದಿದೆ, ಯಾವ ಸಂಸದರು ದಿಲ್ಲಿಯಲ್ಲಿ ಸಚಿವರ ಜತೆಗೆ ಮಾತನಾಡುತ್ತಾರೆ ಎಂದು ಸರ್ವೆ ಮಾಡಲಿ ಎಂದು ಸಂಸದೆ ಶೋಭಾ ಕರಂದ್ಲಾಜೆ ಸವಾಲೆಸೆದರು.

ಮಾಧ್ಯಮದ ಪ್ರಶ್ನೆಗೆ ಪ್ರಕ್ರಿಯಿಸಿದ ಅವರು, ಬಿಜೆಪಿ ಹೇಳಿದಂತೆ ನಾನು ನಡೆದುಕೊಳ್ಳುತ್ತಿದ್ದೇನೆ ಎಂದರು. ಲೋಕಸಭಾ ಚುನಾವಣೆಯ ಅಭ್ಯರ್ಥಿ ವಿಷಯಕ್ಕೆ ಸಂಬಂಧಿಸಿದಂತೆ ಮಾತನಾಡಿ, ಪಕ್ಷ ಯಾರನ್ನು ಘೋಷಿಸುತ್ತದೆಯೋ ಅವರೇ ಅಭ್ಯರ್ಥಿಯಾಗಲಿದ್ದಾರೆ. ಪಕ್ಷ ಬೇಕು ಎಂದರೆ ಸ್ಪರ್ಧಿಸುತ್ತೇನೆ, ಬೇಡ ಅಂದರೆ ಸ್ಪರ್ಧಿಸುವುದಿಲ್ಲ. ನಾನು ಪಕ್ಷದ ರಾಜ್ಯ ಕಾರ್ಯದರ್ಶಿಯಾಗಿಯೂ ಕೆಲಸ ಮಾಡುತ್ತಿದ್ದೇನೆ. ಕಾರ್ಯಕರ್ತರಿಗೆ ತಮ್ಮ ಅಭಿಪ್ರಾಯ ಹೇಳುವ ಅವಕಾಶವಿದೆ ಎಂದರು.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.