ಹೆಬ್ರಿ: ಪ್ರಾಕೃತಿಕ ವಿಕೋಪ ನಿಭಾಯಿಸಲು ಮಾಹಿತಿ ಸಭೆ
Team Udayavani, Jul 6, 2018, 7:00 AM IST
ಹೆಬ್ರಿ: ಕಾರ್ಕಳ ತಾಲೂಕಿನಲ್ಲಿ 2018ನೇ ಸಾಲಿನ ಮಳೆಯಿಂದ ಆಗಬಹುದಾದ ಅನಾಹುತಗಳು ಹಾಗೂ ಅದರ ಬಗ್ಗೆ ತೆಗೆದುಕೊಳ್ಳಬೇಕಾದ ಮುಂಜಾಗೃತ ಕ್ರಮದ ಕುರಿತು ಜು. 4ರಂದು ಪಂಚಾಯತ್ ಸಭಾಂಗಣದಲ್ಲಿ ನಡೆದ ಮಾಹಿತಿ ಸಭೆಯಲ್ಲಿ ಮೆಸ್ಕಾಂ ಹಾಗೂ ಅರಣ್ಯ ಇಲಾಖೆ ಸಮಸ್ಯೆಗೆ ಸ್ಪಂದಿಸುತ್ತಿಲ್ಲ ಎಂದು ಜನಪ್ರತಿನಿಧಿಗಳು ಆಕ್ರೋಶ ವ್ಯಕ್ತಪಡಿಸಿದರು.
ಸಭೆಯು ಕಾರ್ಕಳ ತಹಸೀಲ್ದಾರ್ ಮಹಮದ್ ಇಸಾಕ್ ಅವರ ನೇತೃತ್ವದಲ್ಲಿ ನಡೆಯಿತು.ಮಳೆಗಾಲ ಆರಂಭಗೊಂಡು ಒಂದು ತಿಂಗಳು ಕಳೆದರೂ ಚರಂಡಿ ವ್ಯವಸ್ಥೆ ಇಲ್ಲ,ಅಪಾಯಕಾರಿಮರಗಳಳನ್ನು ತೆರವು ಮಾಡಿಲ್ಲ. ವಿದ್ಯುತ್ ಸಮಸ್ಯೆಯ ಬಗ್ಗೆ ಇಲಾಖೆ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಅಧಿಕಾರಿಗಳು ದೂರಿದರು.
ನಮ್ಮನ್ನೇ ಗದರಿಸುತ್ತಾರೆ
ಮನೆಗೆ ಮರ ಬೀಳುವ ಸಂಭವವಿದೆ. ವಿದ್ಯುತ್ ತಂತಿ ಪಕ್ಕದಲ್ಲೆ ಹೋಗಿರುವುದರಿಂದ ಅನಾಹುತ ಸಂಭವಿಸುತ್ತದೆ ಎಂದು ಇಲಾಖೆಯ ಅಧಿಕಾರಿಗಳಲ್ಲಿ ಹೇಳಿದಾಗ ನಿಮಗೆ ಮರದ ಬುಡದಲ್ಲಿ ಮನೆಕಟ್ಟಲು ಯಾರು ಹೇಳಿದರು ಎಂದು ನಮ್ಮನ್ನೇ ಗದರಿಸುವುದಾಗಿ ಹೆಬ್ರಿ ಪಂಚಾಯತ್ ಸದಸ್ಯ ಪುತ್ರನ್ ಆರೋಪಿಸಿದರು.
ಸ್ಪಂದನೆ ಇಲ್ಲ
ಪ್ರಕೃತಿ ವಿಕೋಪದಿಂದ ಹಾನಿಗೀಡಾದವರಿಗೆ ಪರಿಹಾರ ನೀಡುವ ಮೊದಲು ಪ್ರಕೃತಿ ವಿಕೋಪವಾಗದಂತೆ ಮೊದಲೆ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಸಂಬಂಧ ಪಟ್ಟ ಅಧಿಕಾರಿಗಳು ಸ್ಪಂದಿಸುತ್ತಿಲ್ಲ .ಈಗಾಗಲೇ ಸೋಮೇಶ್ವರ ಪ್ರದೇಶದಲ್ಲಿ ವಿದ್ಯುತ್ ತಂತಿ ತಗಲಿ ಮೃತಪಟ್ಟವರ ಕುಟುಂಬಕ್ಕೆ ಯಾವುದೇ ಪರಿಹಾರವನ್ನು ಇಲಾಖೆ ಯಾಕೆ ಕೊಟ್ಟಿಲ್ಲ ಎಂದು ಗುಲ್ಕಾಡು ಭಾಸ್ಕರ್ ಶೆಟ್ಟಿ ಇಲಾಖಾ ಅಧಿಕಾರಿಗಳನ್ನು ಪ್ರಶ್ನಿಸಿದರು.
ಅಸಮರ್ಪಕ ಮೆಸ್ಕಾಂ ಸೇವೆ
ವಿದ್ಯುತ್ ಕಂಬ ಎರಲು ಏಣಿಯನ್ನು ಸ್ಥಳೀಯರೇ ವ್ಯವಸ್ಥೆ ಮಾಡಬೇಕು ಎಂಬ ಅಧಿಕಾರಿಗಳು ಮಾತು ಅವರ ಅಸಮರ್ಪಕ ಸೇವೆ ಸಾಭೀತುಮಾಡುತ್ತದೆ. ಮಳೆಗಾಳಿಯಿಂದ ವಿದ್ಯುತ್ ಕೈಕೊಟ್ಟು ಒಂದು ವಾರವಾದರೂ ಮೆಸ್ಕಾಂನವರು ಶೀಘ್ರವಾಗಿ ಸಮಸ್ಯೆಗೆ ಸ್ಪಂದಿಸುವುದಿಲ್ಲ ಎಂದು ಬೇಳಂಜೆ ಹರೀಶ್ ಪೂಜಾರಿ ಅಧಿಕಾರಿಗಳ ಗಮನ ಸೆಳೆದರು.
ತಾಲೂಕು ಪಂಚಾಯತ್ ಇಒ ಡಾ| ಹರ್ಷ, ನೊಡೆಲ್ ಅಧಿಕಾರಿ ಭುವನೇಶ್ವರಿ, ಹೆಬ್ರಿ ಗ್ರಾ.ಪಂ. ಅಧ್ಯಕ್ಷ ಸುಧಾಕರ ಹೆಗ್ಡೆ, ಜಿ.ಪಂ. ಸದಸ್ಯೆ ಜ್ಯೋತಿ ಹರೀಶ್, ಮಾಲಿನಿ ಜೆ.ಶೆಟ್ಟಿ, ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಸಮಸ್ಯೆಗೆ ಸ್ಪಂದಿಸಿ
ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಹೇಳಿದಾಗ ಕೂಡಲೇ ಇಲಾಖೆ ಅಧಿಕಾರಿಗಳಿಗೆ ಆ ಭಾಗಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಶೀಘ್ರ ಸಮಸ್ಯೆಬಗೆಹರಿಸುವಲ್ಲಿ ಇಲಾಖೆಯ ಅಧಿಕಾರಿಗಳು ಮುತುವರ್ಜಿ ವಹಿಸಬೇಕು. ಒಂದು ವೇಳೆ ಅವರು ಸ್ಪಂದಿಸದಿದ್ದಲ್ಲಿ ಸಾರ್ವಜನಕರು ನೇರವಾಗಿ ತಾಲೂಕು ಹೆಲ್ಪಲೈನ್ಗೆ ಕರೆಮಾಡಿ.
– ಮಹಮ್ಮದ್ ಇಸಾಕ್, ಕಾರ್ಕಳ ತಹಸೀಲ್ದಾರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ