ರಾ.ಹೆ.ಗೆ ಕೇವಲ ಹೈಮಾಸ್ಟ್‌ ದೀಪವಿದೆ,ಬೀದಿ ದೀಪವಿಲ್ಲ


Team Udayavani, Jul 7, 2018, 6:00 AM IST

0607udht3.jpg

ಉಡುಪಿ: ಉಡುಪಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ರಾತ್ರಿ ವೇಳೆ ಸಂಚಾರವೆನ್ನುವುದು ಬಹಳ ದುಸ್ತರವಾಗಿದೆ. ಪ್ರಮುಖ ಬಸ್‌ ನಿಲ್ದಾಣ ಮತ್ತು ನಗರ ಪ್ರದೇಶಗಳಲ್ಲಿ  ಹೆದ್ದಾರಿ ನಿರ್ಮಾಣ ಸಂಸ್ಥೆ ಅಳವಡಿಸಿದ ಹೈಮಾಸ್ಟ್‌ ದೀಪಗಳನ್ನು ಹೊರತು ಪಡಿಸಿದರೆ ಎಲ್ಲಿಯೂ ಬೀದಿ ದೀಪದ ವ್ಯವಸ್ಥೆ ಇಲ್ಲ.

ಮಹಿಳೆಯರಿಗೆ ಅಪಾಯ
ಬೀದಿ ದೀಪ ಇಲ್ಲದೆ ಇರುವುದು ಮಹಿಳೆಯರ ಸುರಕ್ಷೆಗೆ ತೊಡಕಾಗಿದೆ. ಉಡುಪಿ, ಕುಂದಾಪುರ, ಮೊದಲಾದೆಡೆ ಕೆಲಸಕ್ಕೆ, ವಿದ್ಯಾಭ್ಯಾಸಕ್ಕೆಂದು ತೆರಳುವ ಹೆಣ್ಮಕ್ಕಳು ಕತ್ತಲಾಗುವ ಮುನ್ನ ಮನೆಗೆ ಬಂದು ಸೇರಬೇಕು. ಇಲ್ಲವಾದಲ್ಲಿ ಹೆತ್ತವರು ಸಂಜೆ ಕತ್ತಲಾದ ಮೇಲೆ ತಮ್ಮ ಹೆಣ್ಮಕ್ಕಳನ್ನು ಬಸ್‌ ನಿಲ್ದಾಣದಿಂದ ಮನೆಗೆ ಕರೆದುಕೊಂಡು ಬರಬೇಕಾದ ಪರಿಸ್ಥಿತಿ ಇದೆ. ಸ್ವಂತ ವಾಹನವಿದ್ದವರು ಬಸ್‌ ನಿಲ್ದಾಣದಿಂದ ವಾಹನಗಳ ಮೂಲಕ ಕರೆದುಕೊಂಡು ಬಂದರೆ; ಇನ್ನುಳಿದವರು ಕತ್ತಲಲ್ಲಿ ಬ್ಯಾಟರಿ ಹಿಡಿದುಕೊಂಡು ತೆರಳಬೇಕಾದ ಪರಿಸ್ಥಿತಿ ಇದೆ.

ಮಳೆಗಾಲದಲ್ಲಿ ಅಪಾಯ ಜಾಸ್ತಿ
ಮಳೆಗಾಲದಲ್ಲಿ  ಫ‌ುಟ್‌ಬಾತ್‌ನಲ್ಲಿ ನೀರು ತುಂಬಿಕೊಂಡು ನಡೆದಾಡಲು ಅಸಾಧ್ಯವಾದ ಸ್ಥಿತಿ ಇರುತ್ತದೆ. ಅದಕ್ಕಾಗಿ ಹೆಚ್ಚಿನ ಪಾದಚಾರಿಗಳು ರಸ್ತೆ ಮೇಲೆ ನಡೆದುಕೊಂಡು ಹೋಗುತ್ತಿರುತ್ತಾರೆ. ಬೀದಿ ದೀಪಗಳಿದ್ದಲ್ಲಿ  ವಾಹನ ಸವಾರರಿಗೆ ದೂರದಿಂದಲೇ ವ್ಯಕ್ತಿಯ ಚಲನೆ ತಿಳಿಯುತ್ತದೆ.  ರಾಷ್ಟ್ರೀಯ ಹೆದ್ದಾರಿ ಇಕ್ಕೆಲದಲ್ಲಿ ಎಲ್ಲಿಯೂ ಬೀದಿ ಇಲ್ಲದೆ ಇರುವುದು ಅಪಘಾತಕ್ಕೆ ಕಾರಣವಾಗುತ್ತಿದೆ.

ಎಲ್ಲೆಲ್ಲಿ  ಬೀದಿ ದೀಪ ಇದೆ
ಕುಂದಾಪುರದಿಂದ ಉಡುಪಿಯವರೆಗೆ ಕೋಟೇಶ್ವರ ಅಂಡರ್‌ ಪಾಸ್‌, ಬೀಜಾಡಿ ಕ್ರಾಸ್‌, ಕುಂಭಾಶಿ ಬಸ್‌ ನಿಲ್ದಾಣ, ಕೋಟ ಕ್ಯಾಟಲ್‌ ಪಾಸ್‌ ಮತ್ತು ಬಸ್‌ ನಿಲ್ದಾಣ, ಕೋಟ ಪೆಟ್ರೋಲ್‌ ಬಂಕ್‌, ಕೋಟ ಮೂರ್‌ಕೈ, ಸಾಲಿಗ್ರಾಮ ರಥಬೀದಿ ಮತ್ತು ಬಸ್‌ ನಿಲ್ದಾಣ, ಸಾಸ್ತಾನ ಟೋಲ್‌ ಗೇಟ್‌, ಸಾಸ್ತಾನ ಬಸ್‌ ನಿಲ್ದಾಣ, ಮಾಬುಕಳ ಸೇತುವೆ, ಬ್ರಹ್ಮಾವರ ಆಕಾಶವಾಣಿಯಿಂದ ಎಸ್‌ಎಮ್‌ಎಸ್‌ ಕಾಲೇಜು, ಹೇರೂರು, ಕಲ್ಯಾಣಪುರ ಸೇತುವೆ, ಸಂತೆಕಟ್ಟೆ, ಅಂಬಾಗಿಲು, ನಿಟ್ಟೂರು, ಉಡುಪಿಯ ಪ್ರಮುಖ ಭಾಗಗಳಲ್ಲಿ ಬೀದಿ ದೀಪದ ವ್ಯವಸ್ಥೆ ಇದೆ. 

ಹೊಣೆಗಾರರು ಯಾರು?
ಜಿ.ಪಂ. ಸಿಇಒ ಶಿವಾನಂದ ಕಾಪಶಿಯವರನ್ನು ಉದಯವಾಣಿ ಮಾತನಾಡಿಸಿದಾಗ, “ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಸಂಸ್ಥೆಯಾಗಿರುವ ನವಯುಗ ಮತ್ತು ಐಆರ್‌ಬಿ ಕಂಪೆನಿಗಳು ಬೀದಿ ದೀಪವನ್ನು ಅಳವಡಿಸಬೇಕು. ಈ ಹಿಂದೆ ಹೆದ್ದಾರಿ ನಿರ್ಮಾಣ ಸಂದರ್ಭ ಏನೆಲ್ಲ ವಸ್ತುಗಳನ್ನು ತೆರವುಗೊಳಿಸ ಲಾಗಿದೆಯೋ ಅವುಗಳನ್ನು ಸರಿಪಡಿಸಿಕೊಡ ಬೇಕಾಗಿರುವುದು ಗುತ್ತಿಗೆ ಪಡೆದ ಸಂಸ್ಥೆಯ ಕರ್ತವ್ಯ’ ಎಂದು ಹೇಳುತ್ತಾರೆ. ಗುತ್ತಿಗೆ ಪಡೆದಿರುವ ನವಯುಗ ಸಂಸ್ಥೆಯ ಟೋಲ್‌ ಮ್ಯಾನೇಜರ್‌ ರವಿಬಾಬು ಅವರನ್ನು ಈ ಕುರಿತು ಪ್ರಶ್ನಿಸಿದಾಗ “ನಮಗೆ ಎನ್‌ಎಚ್‌ಎಐ ಎಲ್ಲೆಲ್ಲಿ ಬೀದಿ ದೀಪ ಅಳವಡಿಸಲು ಸೂಚನೆ ನೀಡುತ್ತದೆಯೋ ಅಲ್ಲಿ  ಅಳವಡಿಸಿದ್ದೇವೆ. ಎನ್‌ಎಚ್‌ಎಐ ಆದೇಶವನ್ನು ಕಾರ್ಯರೂಪಕ್ಕೆ ತರುವುದು ಮಾತ್ರ ನಮ್ಮ ಕೆಲಸ’ ಎಂದರು. 

ಇದ್ದರೂ ಉರಿಯುತ್ತಿಲ್ಲ ಬೀದಿ ದೀಪ
ಉಪ್ಪೂರು ಬಸ್‌ ನಿಲ್ದಾಣದ ಬಳಿ ಮತ್ತು ಬ್ರಹ್ಮಾವರ ಆಕಾಶವಾಣಿಯಿಂದ ಧರ್ಮಾವರಂ ಆಡಿಟೋರಿಯಂವರೆಗೆ ಬೀದಿ ದೀಪದ ವ್ಯವಸ್ಥೆ ಮಾಡಲಾಗಿದೆ. ಆದರೆ ಹಲವು ದಿನಗಳಿಂದ ಅದು ಉರಿಯುತ್ತಿಲ್ಲ.ಜಿಲ್ಲಾಡಳಿತ ಎಲ್ಲಿ ಬೀದಿ ದೀಪ ಬೇಕು ಎಂದು ಸೂಚನೆ ನೀಡಿದರೆ ಮಾತ್ರ ಅಲ್ಲಿ ಹಾಕಿಕೊಡುತ್ತೇವೆ.
– ವಿಜಯಕುಮಾರ್‌, 
ರಾ.ಹೆ. ಹಿರಿಯ ಅಧಿಕಾರಿ

ಬೀದಿ ದೀಪಗಳು ಎಲ್ಲೆಲ್ಲಿ ಬೇಕು ಎಂದು ಪಂಚಾಯತ್‌ಗಳು ಹೇಳಬೇಕು. ಬೀದಿ ದೀಪದ ಅವಶ್ಯಕತೆ ಕುರಿತು ಅಧಿಕಾರಿಗಳಿಗೆ ಸೂಚನೆ ನೀಡುತ್ತೇನೆ.
– ಶೋಭಾ ಕರದ್ಲಾಂಜೆ,ಸಂಸದೆ

– ಹರೀಶ್‌ ಕಿರಣ್‌ ತುಂಗ

ಟಾಪ್ ನ್ಯೂಸ್

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.