ಟೇಬಲ್‌ ಮೇಲೆ ರಾಜೀನಾಮೆ ಪತ್ರ ಇಟ್ಟು  ಎಸ್‌ಐ ಮನೆಗೆ!


Team Udayavani, Jul 7, 2018, 1:37 PM IST

mahabala-shetty.png

ಹೆಬ್ರಿ: ಟೇಬಲ್‌ ಮೇಲೆ ರಾಜೀನಾಮೆ ಪತ್ರ, ಅದರೊಂದಿಗೆ ಪೊಲೀಸ್‌ ಇಲಾಖೆ ನೀಡಿದ್ದ ಮೊಬೈಲ್‌ಅನ್ನು ಇಟ್ಟು ಪೊಲೀಸ್‌ ಸಬ್‌ಇನ್ಸ್‌ಪೆಕ್ಟರ್‌ ಒಬ್ಬರು ಕರ್ತವ್ಯ ತ್ಯಜಿಸಿದ ವಿಲಕ್ಷಣ ಘಟನೆ ಹೆಬ್ರಿ ಠಾಣೆಯಲ್ಲಿ ನಡೆದಿದೆ. ಇಲ್ಲಿನ ಠಾಣಾಧಿಕಾರಿ ಮಹಾಬಲ ಶೆಟ್ಟಿ ಅವರೇ ಶುಕ್ರವಾರ ಮಧ್ಯಾಹ್ನ ರಾಜೀನಾಮೆ ಪತ್ರ ಇಟ್ಟು ತಮ್ಮ ಊರು ಕುಂದಾಪುರದ ಸಿದ್ದಾಪುರಕ್ಕೆ ತೆರಳಿದವರು. ಘಟನೆ ಬೆಳಕಿಗೆ ಬರುತ್ತಿದ್ದಂತೆ ಹಿರಿಯ ಪೊಲೀಸ್‌ ಅಧಿಕಾರಿಗಳು ಎಚ್ಚೆತ್ತಿದ್ದು, ಮಹಾಬಲ ಶೆಟ್ಟಿ ಅವರ ಮನೆಗೆ ತೆರಳಿ ಮನವೊಲಿಸಲು ಯತ್ನಿಸಿದ್ದಾರೆ. ಎಎಸ್‌ಪಿ ಕುಮಾರಸ್ವಾಮಿ ಅವರು ಈ ಸಂಬಂಧ ಮನೆಗೆ ತೆರಳಿ ಮಾತುಕತೆ ನಡೆಸಿದ್ದಾರೆ.  ಆದರೆ ಮಹಾಬಲ ಶೆಟ್ಟಿ ಅವರ ಮುಂದಿನ ನಿರ್ಧಾರದ ಬಗ್ಗೆ ತಿಳಿದು ಬಂದಿಲ್ಲ .

ಪ್ರತಿಭಟನೆ 

ಜನ ಮೆಚ್ಚುಗೆಗೆ ಪಾತ್ರರಾದ ಶೆಟ್ಟಿ ಅವರನ್ನು ಕರ್ತವ್ಯದಲ್ಲಿ ಮುಂದುವರಿಸಬೇಕು. ಇದಕ್ಕಾಗಿ ಎಸ್‌ಪಿ ಅವರು ಮನವೊಲಿಸಬೇಕು. ಎಂದು ಶನಿವಾರ ಭಾರೀ ಮಳೆಯನ್ನೂ ಲೆಕ್ಕಿಸದೆ  ಠಾಣೆ ಎದುರು ಕರ್ನಾಟಕ ರಕ್ಷಣಾ ವೇದಿಕೆಯ ಸ್ಥಳೀಯ ಘಟಕ ಪ್ರತಿಭಟನೆ ನಡೆಸಿದೆ. 

ಪ್ರತಿಭಟನಾ ಸ್ಥಳಕ್ಕೆ ಕಾರ್ಕಳದ ಹಿರಿಯ ಪೊಲೀಸ್‌ ಅಧಿಕಾರಿಗಳು ಆಗಮಿಸಿ ಪ್ರತಿಭಟನಾ ನಿರತರೊಂದಿಗೆ ಮಾತುಕತೆ ನಡೆಸಿದ್ದಾರೆ. 

ರಾಜೀನಾಮೆಗೆ ಕಾರಣ ಏನು? 
ಇಲ್ಲಿನ ಕಳೂರು ಸಂತೆಕಟ್ಟೆಯ ಜಾಗವೊಂದರ ತಕರಾರಿನ ವಿಚಾರದಲ್ಲಿ ಮೇಲಧಿಕಾರಿಗಳು ಶೆಟ್ಟಿಯವರ ಮೇಲೆ ಗರಂ ಆಗಿದ್ದಾರೆ. ಇದರಿಂದ ಬೇಸತ್ತ ಅವರು ಏಕಾಏಕಿ ರಾಜೀನಾಮೆ ಪತ್ರ ಬರೆದಿದ್ದಾರೆ ಎನ್ನಲಾಗಿದೆ. ಶೆಟ್ಟಿಯವರ ನಿವೃತ್ತಿಗೆ ಇನ್ನು ಎರಡೇ ವರ್ಷವಿದ್ದು ಶಂಕರನಾರಾಯಣದಿಂದ ಇತ್ತೀಚೆಗಷ್ಟೇ ಹೆಬ್ರಿಗೆ ವರ್ಗಾವಣೆಗೊಂಡಿದ್ದರು. 

ಎರಡನೇ ಪ್ರಕರಣ
ಮೇಲಧಿಕಾರಿಗಳ ವರ್ತನೆಯಿಂದ ಬೇಸತ್ತು ಅಧಿಕಾರಿಯೊಬ್ಬರು ಜಿಲ್ಲೆಯಲ್ಲಿ ಏಕಾಏಕಿ ರಾಜೀನಾಮೆ ನೀಡುತ್ತಿರುವ ಎರಡನೇ ಪ್ರಕರಣ ಇದಾಗಿದೆ. ಹಿಂದೆ ಕೋಟ ಠಾಣೆಯ ಅಧಿಕಾರಿ ಕಬ್ಬಲ್‌ರಾಜ್‌ ಅವರೂ ಇದೇ ರೀತಿ ರಾಜೀನಾಮೆ ನೀಡಿದ್ದರು.   

ಕಳೆದ 3 ತಿಂಗಳಿನಿಂದ ಜಾಗದ ಸಮಸ್ಯೆ ಬಗ್ಗೆ ಗೊಂದಲ ನಿವಾರಿಸಲು ಸರ್ವೆ ನಡೆಸುವಂತೆ ಹೆಬ್ರಿ ಠಾಣಾಧಿಕಾರಿಗೆ ತಿಳಿಸಿದ್ದೆ. ಆದರೆ ಇದರ ಬಗ್ಗೆ ಅವರು ನಿರಾಕರಿಸಿದ್ದರು. ಈ ಸಮಸ್ಯೆ ಮುಂದುವರಿದರೆ ಹೊಣೆಗಾರರಾಗುವ ಬಗ್ಗೆ ಎಚ್ಚರಿಸಿದ್ದೆ. ಜತೆಗೆ ರಿಪೋರ್ಟ್‌ ಮಾಡಲು ಹೇಳಿದ್ದೆ. ಈಗವರು ವಿಆರ್‌ಎಸ್‌ ನೀಡಿದ್ದಾರೆ. ಅವರೊಂದಿಗೆ ಮಾತುಕತೆಗೆ ಅಧಿಕಾರಿಯೊಬ್ಬರನ್ನು ಕಳಿಸಿದ್ದು, ಮುಂದಿನ ತೀರ್ಮಾನ ನೋಡಬೇಕಿದೆ. 
-ಲಕ್ಷ್ಮಣ ಬ. ನಿಂಬರಗಿ, ಎಸ್‌.ಪಿ. ಉಡುಪಿ

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.