ನಕಲಿ ಚಿನ್ನ ಅಡವಿಟ್ಟು ವಂಚನೆ: ಮನೆ ಹರಾಜಿಗೆ


Team Udayavani, Jul 13, 2018, 11:28 AM IST

shirva.gif

ಶಿರ್ವ: ಪಡುಬೆಳ್ಳೆ-ಪಾಂಬೂರು ಬಳಿ ಕಳೆದ ವರ್ಷ ಒಂದೇ ಕುಟುಂಬದ ನಾಲ್ವರು ಸೈನೈಡ್‌ ಸೇವಿಸಿ ಸಾಮೂಹಿಕ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಇಂದಿಗೆ ಒಂದು ವರ್ಷ ತುಂಬಿದೆ. ಪಡುಬೆಳ್ಳೆಯ ಶ್ರೀಯಾ ಜುವೆಲರಿಯ ಮಾಲಕ ಶಂಕರ ಆಚಾರ್ಯ (51), ಅವರ ಪತ್ನಿ ನಿರ್ಮಲಾ ಆಚಾರ್ಯ (45) ಪುತ್ರಿಯರಾದ ಶ್ರುತಿ (25) ಮತ್ತು ಶ್ರೀಯಾ (22) ಮೃತಪಟ್ಟಿದ್ದರು.

ಪತ್ನಿ, ಮಕ್ಕಳಿಗೆ ವಿಷವಿಕ್ಕಿ ಆತ್ಮಹತ್ಯೆ
ಸಾಲಬಾಧೆಯಿಂದ ತತ್ತರಿಸಿದ್ದ ಶಂಕರ ಆಚಾರ್ಯ ಆತ್ಮಹತ್ಯೆ ನಿರ್ಧಾರ ಮಾಡಿ ಪತ್ನಿ – ಮಕ್ಕಳ ಊಟಕ್ಕೆ ಸೈನೈಡ್‌ ಬೆರೆಸಿ ಅವರು ಮೃತಪಟ್ಟ ಬಳಿಕ ತಾನೂ ಸೈನೈಡ್‌ ಸೇವಿಸಿ ಆತ್ಮಹತ್ಯೆಗೈದಿರಬೇಕೆಂದು ಶಂಕಿಸಲಾಗಿತ್ತು. ಒಂದು ವಾರದಿಂದ ದಿನಾ ಬೆಳಗ್ಗೆ ಮನೆಯವರಿಗೆ ತೀರ್ಥಪ್ರಸಾದ ನೀಡಿ ಸಾಮೂಹಿಕ ಆತ್ಮಹತ್ಯೆಗೈಯುವ ದಿನ ಸೈನೈಡ್‌ ಬೆರೆಸಿದ ತೀರ್ಥ ನೀಡಿದ್ದರು ಎಂದು ತಿಳಿದು ಬಂದಿದೆ. ಪೊಲೀಸ್‌ ತನಿಖೆ ನಡೆದು ವಿಧಿವಿಜ್ಞಾನ ಪ್ರಯೋಗಾಲಯದ ವರದಿಯಿಂದ ಸೈನೈಡ್‌ ಸೇವಿಸಿ ಆತ್ಮಹತ್ಯೆಗೈದಿರುವುದು ದೃಢಪಟ್ಟಿತ್ತು.

ಬ್ಯಾಂಕಿಗೆ ವಂಚನೆ
ಮೃತ ಶಂಕರ ಆಚಾರ್ಯ ಇನ್ನಂಜೆ ಸಿ.ಎ. ಬ್ಯಾಂಕಿನ ಕುಂಜಾರುಗಿರಿ ಶಾಖೆಯಲ್ಲಿ ನಕಲಿ ಚಿನ್ನ ಅಡವಿಟ್ಟು ಸಾಲ ಪಡೆದು ಸುಮಾರು 65 ಲ.ರೂ. ವಂಚಿಸಿದ್ದರು. ಬ್ಯಾಂಕಿನಲ್ಲಿ 93 ಬೇರೆ ಬೇರೆ ಖಾತೆಗಳಲ್ಲಿ ಸುಮಾರು 3 ಕೆ.ಜಿ.ಯಷ್ಟು ಚಿನ್ನವನ್ನು ಅಡವಿರಿಸಿದ್ದು, ಅದರಲ್ಲಿ ಸುಮಾರು 100 ಗ್ರಾಂ.ನಷ್ಟು ಮಾತ್ರ ಅಸಲಿ ಚಿನ್ನವಾಗಿತ್ತು. ಶಾಖಾ ವ್ಯವಸ್ಥಾಪಕರು ನೀಡಿದ ಮಾಹಿತಿಯ ಮೇರೆಗೆ ಅವರ ಸಾಲ ಖಾತೆಯ ಬಗ್ಗೆ ತನಿಖೆ ನಡೆಸಿ ಬೇರೆ ಸರಾಫರನ್ನು ಕರೆಸಿ ಪರಿಶೀಲಿಸಿದಾಗ ನಕಲಿ ಚಿನ್ನ ಅಡವಿರಿಸಿದ ಪ್ರಕರಣ ಬೆಳಕಿಗೆ ಬಂದಿತ್ತು. ಸುಮಾರು 65 ಲಕ್ಷ ರೂ. ಮೌಲ್ಯದ ಚಿನ್ನದಲ್ಲಿ ಸುಮಾರು 2.5 ಲಕ್ಷ ರೂ. ಮೌಲ್ಯದ ಚಿನ್ನ ಮಾತ್ರ ಅಸಲಿ ಎಂದು ತಿಳಿದು ಬಂದಿತ್ತು. ಪ್ರಕರಣದ ಬಗ್ಗೆ ಬ್ಯಾಂಕಿನ ಕಾರ್ಯನಿರ್ವಹಣಾಧಿಕಾರಿ ಮನೋಹರ ರಾವ್‌ ಅವರು ಮೃತ ಶಂಕರ ಆಚಾರ್ಯ, ಬ್ಯಾಂಕಿನ ಸರಾಫ ಉಮೇಶ್‌ ಆಚಾರ್ಯ ಮತ್ತು ಶಾಖಾ ವ್ಯವಸ್ಥಾಪಕ ಉಮೇಶ್‌ ಅಮೀನ್‌ ಮೇಲೆ ಶಿರ್ವ ಠಾಣೆಯಲ್ಲಿ ದೂರು ಸಲ್ಲಿಸಿದ್ದು, ಆರೋಪಿಗಳು ಜಾಮೀನು ಪಡೆದು ಬಿಡುಗಡೆಗೊಂಡಿದ್ದರು.

ಶಾಖಾ ವ್ಯವಸ್ಥಾಪಕ ಉಮೇಶ್‌ ಅಮೀನ್‌ ಅಮಾನತುಗೊಂಡಿದ್ದಾರೆ. ತನಿಖೆ ನಡೆದು ಅಡವಿರಿಸಿದ್ದ ಚಿನ್ನದ ಪೈಕಿ ಅಸಲಿ ಚಿನ್ನ ಹರಾಜಾಗಿ ಸುಮಾರು 2 ಲಕ್ಷ ರೂ. ಗಳಷ್ಟು ಸಾಲ ವಸೂಲಾಗಿದೆ. ನಕಲಿ ಚಿನ್ನವನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಬ್ಯಾಂಕಿನ ಕಾರ್ಯ ನಿರ್ವಹ ಣಾಧಿಕಾರಿ ತಿಳಿಸಿದ್ದಾರೆ.

ಮನೆ ಹರಾಜಿಗೆ
ಮೃತ ಶಂಕರ ಆಚಾರ್ಯ ಬ್ಯಾಂಕಿಗೆ ವಂಚಿಸಿದ ಪ್ರಕರಣ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಸಹಕಾರಿ ಸಂಘಗಳ ಸಾಲ ವಸೂಲಾತಿ ಕೋರ್ಟಿನಲ್ಲಿ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆದು ಕೋರ್ಟ್‌ ಆದೇಶದ ಮೇರೆಗೆ ಶಂಕರ ಆಚಾರ್ಯ ವಾಸವಿದ್ದ ಮನೆ ಸಾಲ ವಸೂಲಾತಿಗಾಗಿ ಹರಾಜಿಗೆ ಬಂದಿದೆ. ಸಾಲದ ಮೊತ್ತ 68,84,855 ರೂ. ಬಡ್ಡಿ, ಮತ್ತಿತರ ಖರ್ಚುಗಳಿಗಾಗಿ ಜು. 24ರಂದು ಶಂಕರಾಚಾರ್ಯ ಅವರ ಹೆಸರಿನಲ್ಲಿದ್ದ ಮನೆ ಮತ್ತು 17 ಸೆಂಟ್ಸ್‌ ಜಾಗದ ಹರಾಜು ನಡೆಯಲಿದೆ. ಶಂಕರ ಆಚಾರ್ಯರ ತಾಯಿ ಅನಾರೋಗ್ಯದಿಂದಿದ್ದು, ಓರ್ವ ಸಹೋದರ ಕ್ಯಾನ್ಸರ್‌ ಪೀಡಿತರಾಗಿದ್ದಾರೆ, ಸಾಲ ಭರಿಸಿ ಮನೆ ಉಳಿಸಿಕೊಳ್ಳುವ ಪರಿಸ್ಥಿತಿಯಲ್ಲಿ ಇಲ್ಲ.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.