ನಿರುದ್ಯೋಗಿಗಳ ಶೈಕ್ಷಣಿಕ ಸಾಲ ಮನ್ನಾ: ಕೇಂದ್ರಕ್ಕೆ  ಸಚಿವ ಖಾದರ್‌


Team Udayavani, Jul 15, 2018, 1:14 PM IST

ut-khader.gif

ಉಡುಪಿ; ಕೇಂದ್ರ ಸರಕಾರಕ್ಕೆ ಯುವಕರ ಮೇಲೆ ವಿಶ್ವಾಸ ವಿದ್ದದ್ದೇ ಹೌದಾದಲ್ಲಿ ಉದ್ಯೋಗ ಗಳಿಸದೆ ಸಂಕಷ್ಟದಲ್ಲಿರುವವರ ಶೈಕ್ಷಣಿಕ ಸಾಲವನ್ನು ಮನ್ನಾ ಮಾಡಲಿ ಎಂದು ರಾಜ್ಯದ ನಗರಾಭಿವೃದ್ಧಿ ಸಚಿವ ಯು.ಟಿ. ಖಾದರ್‌ ಆಗ್ರಹಿಸಿದರು. ರಾಜ್ಯ ಸರಕಾರ ಕರಾವಳಿಗೆ ಏನೂ ಕೊಟ್ಟಿಲ್ಲ ಎಂಬ ಬಿಜೆಪಿಯವರ ಆರೋಪದ ಕುರಿತು ಉಡುಪಿ ಪ್ರವಾಸಿ
ಬಂಗಲೆಯಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಪತ್ರಕರ್ತರು ಗಮನ ಸೆಳೆದಾಗ ಪ್ರತಿಕ್ರಿಯೆ ವ್ಯಕ್ತಪಡಿಸಿದ ಸಚಿವರು, ಕೇಂದ್ರ ಸರಕಾರ ಅತ್ತ ಉದ್ಯೋಗ ಸೃಷ್ಟಿ ಯನ್ನೂ ಮಾಡಿಲ್ಲ, ಇತ್ತ ಬ್ಯಾಂಕ್‌ನವರು ಮನೆಗೆ ಬರುತ್ತಿದ್ದಾರೆ. ಆದ್ದರಿಂದ ಇಂತಹವರ ಶೈಕ್ಷಣಿಕ ಸಾಲವನ್ನು ಮನ್ನಾ ಮಾಡಲಿ ಎಂದರು. 

ಕೇಂದ್ರ ಸರಕಾರ ಮೀನುಗಾರರಿಗೆ ಸೀಮೆ ಎಣ್ಣೆ ಏಕೆ ಕೊಡುತ್ತಿಲ್ಲ? ಸೀಮೆ ಎಣ್ಣೆ ಕೊಡುತ್ತಿರುವುದು ರಾಜ್ಯ ಸರಕಾರ. ಗುಜರಾತ್‌ನಲ್ಲಿ ಮೀನುಗಾರರಿಗೆ ಕೊಡುವುದಕ್ಕಿಂತ ಹೆಚ್ಚಿನ ಸೌಲಭ್ಯವನ್ನು ಕರ್ನಾಟಕದಲ್ಲಿ ಕೊಡುತ್ತಿದ್ದೇವೆ. ಹಿಂದೆ ಬಿಜೆಪಿ ಅಧಿಕಾರದಲ್ಲಿದ್ದಾಗ ಶೂನ್ಯ ಬಡ್ಡಿದರದಲ್ಲಿ ಸಾಲ ಕೊಟ್ಟರೆ? ಸೀಮೆ ಎಣ್ಣೆ ಕೊಟ್ಟರೆ ಎಂದು ಪ್ರಶ್ನಿಸಿದರು.

ಪೂರಕ ಬಜೆಟ್‌: ಕುಮಾರಸ್ವಾಮಿ ಮಂಡಿಸಿದ್ದು ಪೂರಕ ಬಜೆಟ್‌. ಹಿಂದಿನ ಮುಖ್ಯ ಮಂತ್ರಿ ಸಿದ್ದರಾಮಯ್ಯ ಘೋಷಿಸಿದ ಬಜೆಟ್‌ 
ಮುಂದುವರಿಯಲಿದೆ. ಇನ್ನು 8 ತಿಂಗಳಲ್ಲಿ ಘೋಷಿತ ಕಾರ್ಯಕ್ರಮಗಳನ್ನು ಹೇಗೆ ಜಾರಿಗೊಳಿಸಬೇಕೆಂದು ಶಾಸಕರು ಯೋಚಿಸಬೇಕು ಎಂದರು

ನಗರಗಳಿಗೆ ಒತ್ತು
ಉಡುಪಿ ನಗರಸಭೆಗೆ ಕುಡಿಯುವ ನೀರಿನ ಯೋಜನೆಗೆ 118 ಕೋ.ರೂ. ಬಿಡುಗಡೆಯಾಗಲಿದೆ. ಕೆಲವೆ ದಿನಗಳಲ್ಲಿ ಟೆಂಡರ್‌ ಕರೆಯ ಲಾಗುವುದು. ಕುಂದಾಪುರದಲ್ಲಿ ಒಳಚರಂಡಿ ಕಾಮಗಾರಿ ನಿಂತಿದ್ದು ಸ್ಥಳೀಯರನ್ನು ವಿಶ್ವಾಸ ಗಳಿಸಿ ಕಾಮಗಾರಿ ಮುಂದುವರಿಯುವಂತೆ ನೋಡಲಾಗುವುದು. ಕಾಪು ಕುಡಿ ಯುವ ನೀರಿನ ಯೋಜನೆ ಕಾಮಗಾರಿ ಟೆಂಡರ್‌ ಪ್ರಕ್ರಿಯೆ ನಡೆಯಲಿದೆ ಎಂದರು. ವಸತಿ ಯೋಜನೆ ಇದುವರೆಗೆ ಗ್ರಾಮಾಂತರ ಪ್ರದೇಶಕ್ಕೆ ಒತ್ತು ಕೊಡಲಾಗುತ್ತಿತ್ತು. ರಾಜೀವ್‌ ಗಾಂಧಿ ವಸತಿ ಯೋಜನೆಯಡಿ ಈಗ ನಗರಕ್ಕೂ ಒತ್ತು ಕೊಡಲಾಗುತ್ತಿದೆ. ಹಿಂದೆ ನೆಲಅಂತಸ್ತು ಮತ್ತು 4 ಮಹಡಿಗೆ ಅವಕಾಶ ವಿದ್ದರೆ ಈಗ ಬೆಲೆ ಬಾಳುವ ಸ್ಥಳದಲ್ಲಿ ನೆಲಅಂತಸ್ತು ಮತ್ತು 14 ಮಹಡಿಗೆ ಅವಕಾಶ ಕೊಡುತ್ತೇವೆ ಎಂದರು. 

500 ಮನೆ- 29 ಕೋ.ರೂ.
ಉಡುಪಿ ನಗರಸಭೆಯ ನಿಟ್ಟೂರು, ಕೊಡಂಕೂರು, ವಿಷ್ಣುಮೂರ್ತಿ ನಗರ, ಪಾಲಿಕಟ್ಟೆಯಲ್ಲಿ ಕೊಳಚೆ ನಿರ್ಮೂಲನ ಮಂಡಳಿಯಿಂದ 29 ಕೋ.ರೂ.ನಲ್ಲಿ 500 ಮನೆ ತಲಾ 5.14 ಲ.ರೂ.ನಲ್ಲಿ ನಿರ್ಮಾಣವಾಗಲಿದೆ ಎಂದರು. 

ಪ್ರತ್ಯೇಕ  ಮಾತೃಪೂರ್ಣ ಯೋಜನೆ
ಮಾತೃಪೂರ್ಣ ಯೋಜನೆ ವೈಫ‌ಲ್ಯ ಕುರಿತು ಗಮನ ಸೆಳೆದಾಗ ಕರಾವಳಿ ಯಲ್ಲಿ ಮಾತ್ರ ಹಿನ್ನಡೆ ಕಂಡಿದೆ. ಕರಾವಳಿ
ಯಲ್ಲಿ ಹೇಗೆ ಮಾರ್ಪಡಿಸಬೇಕೆಂದು ಚಿಂತನೆ ನಡೆಸಲಾಗುತ್ತಿದೆ ಎಂದರು. ವಿಧಾನಸಭಾ ಚುನಾವಣೆ ಫ‌ಲಿತಾಂಶ ಲೋಕಸಭಾ ಚುನಾವಣೆ ಮೇಲೆ ಪರಿಣಾಮ ಬೀರಲಿದೆಯೆ ಎಂದು ಪ್ರಶ್ನಿಸಿದಾಗ ಜನರ ಮನೋಭಾವನೆ ಬದಲಾಗುತ್ತ ಇರುತ್ತದೆ. ಒಂದು ಬಾರಿ ಮತ ಕೇಳಿದವರು ಆ ಕ್ಷೇತ್ರಕ್ಕೆ ಮುಖ ಹಾಕದಿದ್ದರೆ ಜನರ ಅಭಿಪ್ರಾಯ ಬದಲಾಗುತ್ತದೆ ಎಂದರು. ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಜನಾರ್ದನ ತೋನ್ಸೆ, ಎಐಸಿಸಿ ಸದಸ್ಯ ಅಮೃತ್‌ ಶೆಣೈ, ಪ್ರಖ್ಯಾತ ಶೆಟ್ಟಿ, ಕೀರ್ತಿ ಶೆಟ್ಟಿ, ಯು.ಬಿ. ಸಲೀಂ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.