HIV ಸೋಂಕಿತರು ಸೌಲಭ್ಯಗಳಿಗೆ ART ಸೆಂಟರ್‌ ಮೂಲಕ ಅರ್ಜಿ ಸಲ್ಲಿಸಿ : DC


Team Udayavani, Jul 17, 2018, 6:10 AM IST

hiv-symbolic-16-7.jpg

ಉಡುಪಿ: HIV ಪೀಡಿತರು ಸರಕಾರದ ಸೌಲಭ್ಯಗಳಿಗಾಗಿ ಇಲಾಖೆಗಳಿಗೆ ಅಲೆಯುವ ಬದಲು ತಾವು ಚಿಕಿತ್ಸೆ ಪಡೆಯುವ ART ಸೆಂಟರ್‌ಗಳಲ್ಲಿ ಅರ್ಜಿ ಸಲ್ಲಿಸಿದಲ್ಲಿ ಸಂಬಂಧಪಟ್ಟ ಇಲಾಖೆಗಳಿಗೆ ಕಳುಹಿಸಿ, ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಏಡ್ಸ್‌ ನಿಯಂತ್ರಣ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌ ಸೂಚಿಸಿದರು. ಅವರು ಸೋಮವಾರ ಜಿಲ್ಲೆಯ HIV ಸೋಂಕು ಪೀಡಿತರ ಕುಂದುಕೊರತೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. HIV ಪೀಡಿತರು ಸರಕಾರಿ ಸೌಲಭ್ಯಗಳಿಗೆ ಕಚೇರಿಗಳಿಗೆ ತೆರಳಿದಾಗ ಸೋಂಕು ಬಹಿರಂಗವಾಗುವ ಸಾಧ್ಯತೆ ಇದೆ. ಅವರು ಕಚೇರಿಗೆ ಅಲೆದಾಡುವುದು ತ್ರಾಸದಾಯಕವಾಗಿದ್ದು, ಇದನ್ನು ತಪ್ಪಿಸಲು ART ಸೆಂಟರ್‌ ಗಳಲ್ಲಿ ಹಾಗೂ ಜಿಲ್ಲಾ ಏಡ್ಸ್‌ ನಿಯಂತ್ರಣಾಧಿಕಾರಿಗಳ ಕಚೇರಿಯಲ್ಲಿ ಅಗತ್ಯ ಸೌಲಭ್ಯಗಳ ಮಂಜೂರು ಕೋರಿ ಅರ್ಜಿ ಸಲ್ಲಿಸುವಂತೆ ತಿಳಿಸಿದರು.

ಸಾಲ ಮನ್ನಾ ಕೋರಿಕೆ: ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದದಿಂದ ಧನಶ್ರೀ ಯೋಜನೆಯಡಿ 2016- 17ರಲ್ಲಿ 26 ಮಂದಿಗೆ ಮತ್ತು 2017- 18ರಲ್ಲಿ ಅರ್ಜಿ ಸಲ್ಲಿಸಿರುವ 38 ಮಂದಿಗೆ ಸಾಲ ಮಂಜೂರು ಆಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಗ್ರೇಸಿ ಗೊನ್ಸಾಲ್ವಿಸ್‌ ತಿಳಿಸಿದರು. ಹೆಚ್ಚಿನ ಸೋಂಕು ಪೀಡಿತರು ಅನಾರೋಗ್ಯ ಕಾರಣದಿಂದ ಸಾಲ ಮರುಪಾವತಿ ಮಾಡಲು ಶಕ್ತರಿಲ್ಲ. ಹೀಗಾಗಿ ಕೃಷಿ ಸಾಲ ಮನ್ನಾ ರೀತಿ ತಮ್ಮ ಸಾಲವನ್ನೂ ಮನ್ನಾ ಮಾಡುವಂತೆ ಸೋಂಕು ಪೀಡಿತರು ಜಿಲ್ಲಾಧಿಕಾರಿಗಳನ್ನು ಕೋರಿದರು. ಈ ಕುರಿತಂತೆ ನಿಗಮಕ್ಕೆ ಪತ್ರ ಬರೆಯುವಂತೆ ಡಿಸಿ ಸೂಚಿಸಿದರು.

ವಸತಿ ಸೌಲಭ್ಯ: ವಿಶೇಷ ವರ್ಗ ಯೋಜನೆಯಡಿ HIV ಪೀಡಿತ ಕುಟುಂಬದವರಿಗೆ ಜಿಲ್ಲಾಡಳಿತ ಮತ್ತು ರಾಜೀವ್‌ ಗಾಂಧಿ ಗ್ರಾಮೀಣ ವಸತಿ ನಿಗಮದ ಸಹಯೋಗದಲ್ಲಿ, 2014-15ರಲ್ಲಿ 36 ಮಂದಿಗೆ  2016-17ರಲ್ಲಿ 63 ಮಂದಿಗೆ, 2017-18ರಲ್ಲಿ 33 ಮಂದಿಗೆ ವಸತಿ ಸೌಲಭ್ಯ ನೀಡಲಾಗಿದೆ. ಅರ್ಹರಿಗೆ ನಿವೇಶನ ಗುರುತಿಸುವ ಕುರಿತಂತೆ ಹಾಗೂ RTCಗೆ ಸಂಬಂಧಪಟ್ಟ ಸಮಸ್ಯೆಗಳನ್ನು ಶೀಘ್ರದಲ್ಲಿ ಬಗೆಹರಿಸುವಂತೆ ಎಲ್ಲ ತಹಶೀಲ್ದಾರ್‌ಗಳಿಗೆ ಸೂಚಿಸಿದರು. ಜಿಲ್ಲೆಯಲ್ಲಿ ನಿವೇಶನರಹಿತರು ಮತ್ತು ವಸತಿ ರಹಿತರ ಸಮೀಕ್ಷೆ ನಡೆಯುತ್ತಿದ್ದು, ನಿವೇಶನ ಮತ್ತು ವಸತಿ ರಹಿತ ಎಲ್ಲ HIV ಸೋಂಕಿತರು ಸಂಬಂಧಪಟ್ಟ ಗ್ರಾ.ಪಂ. ವ್ಯಾಪ್ತಿಯಲ್ಲಿ ಹೆಸರು ಸೇರಿಸುವಂತೆ ತಿಳಿಸಿದರು. ಉಡುಪಿ ಹಾಗೂ ಕುಂದಾಪುರದ ART ಸೆಂಟರ್‌ ಗಳಲ್ಲಿ HIV ಸೋಂಕು ಪೀಡಿತರಿಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಮೂಲಕ ಉಚಿತ ಕಾನೂನು ನೆರವು ನೀಡಲಾಗುತ್ತಿದ್ದು, ಇದನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು.

ಜಿಲ್ಲೆಯ ಖಾಸಗಿ ಬಸ್‌ ಗಳಲ್ಲಿ ಸೋಂಕಿತರಿಗೆ ನೀಡುತ್ತಿರುವ ರಿಯಾಯಿತಿ ಬಸ್‌ ಪಾಸ್‌ನಲ್ಲಿ ಸೋಂಕಿನ ಕುರಿತು ಗೌಪ್ಯತೆ ಕಾಪಾಡುವಂತೆ RTA ಅಧಿಕಾರಿಗೆ ಸೂಚಿಸಿದರು. ಜಿಲ್ಲೆಯ ಇಲಾಖೆಗಳಲ್ಲಿ ಗುತ್ತಿಗೆ ಆಧಾರದಲ್ಲಿ ಡಿ ಗ್ರೂಪ್‌ ನೌಕರರ ನೇಮಕ ಸಂದರ್ಭ ಲಿಂಗತ್ವ ಅಲ್ಪಸಂಖ್ಯಾಕರಿಗೆ ಆದ್ಯತೆ ನೀಡುವಂತೆ ಇಲಾಖಾಧಿಕಾರಿಗಳಿಗೆ ಸೂಚಿಸಿದರು. ಅಪರ ಜಿಲ್ಲಾಧಿಕಾರಿ ಅನುರಾಧಾ, ಜಿ.ಪಂ. ಉಪಕಾರ್ಯದರ್ಶಿ ನಾಗೇಶ್‌ ರಾಯ್ಕರ್‌, ಜಿಲ್ಲಾ ಆರೋಗ್ಯ ಅಧಿಕಾರಿ ಡಾ| ರೋಹಿಣಿ, ಜಿಲ್ಲಾ ಏಡ್ಸ್‌ ನಿಯಂತ್ರಣಾಧಿಕಾರಿ ಡಾ| ಚಿದಾನಂದ ಸಂಜು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.