ಶಿರೂರು ಮಠದ ಲಕ್ಷ್ಮೀವರ ತೀರ್ಥ ಶ್ರೀಪಾದರು ವಿಧಿವಶ Watch


Team Udayavani, Jul 19, 2018, 9:03 AM IST

sh.jpg

ಉಡುಪಿಯ ಅಷ್ಠಮಠಗಳಲ್ಲಿ ಒಂದಾಗಿರುವ ಶಿರೂರು ಮಠದ 30ನೇ ಯತಿವರ್ಯರಾದ ಶ್ರೀ ಶ್ರೀ ಲಕ್ಷ್ಮೀವರತೀರ್ಥ ಸ್ವಾಮೀಜಿಯವರು ತೀವ್ರ ಅನಾರೋಗ್ಯದಿಂದ ಇಂದು ಬೆಳಿಗ್ಗೆ ವಿಧಿವಶರಾದರು. ಅನಾರೋಗ್ಯದ ನಿಮಿತ್ತ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದ ಸ್ವಾಮೀಜಿಯವರು ಚಿಕಿತ್ಸೆಗೆ ಸ್ಪಂದಿಸದೆ ವಿಧಿವಶರಾದರು ಎಂದು ಆಸ್ಪತ್ರೆಯ ಮೂಲಗಳಿಂದ ತಿಳಿದುಬಂದಿದೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸ್ವಾಮೀಜಿಯವರು ಮಂಗಳವಾರ ರಾತ್ರಿ ಫ‌ುಡ್‌ ಪಾಯ್ಸನ್‌ ಕಾರಣದಿಂದ ಮಣಿಪಾಲದ ಆಸ್ಪತ್ರೆಗೆ ದಾಖಲಾಗಿದ್ದರು.

ಶ್ರೀಗಳಿಗೆ ವಿಷಪ್ರಾಸನ ಮಾಡಲಾಯ್ತೇ…??
ಶಿರೂರು ಶ್ರೀಗಳ ದಿಢೀರ್ ಅನಾರೋಗ್ಯ ಮತ್ತು ನಿಧನ ಮಠದ ಭಕ್ತರಲ್ಲಿ ಹಾಗೂ ಜನಸಾಮಾನ್ಯರಲ್ಲಿ ಈ ಒಂದು ಶಂಕೆ ಇದೀಗ ವ್ಯಕ್ತವಾಗಿದೆ. ಇದಕ್ಕೆ ಪುಷ್ಠಿ ನೀಡಿದ್ದು ಕೆ.ಎಂ.ಸಿ. ಆಸ್ಪತ್ರೆ, ಮಣಿಪಾಲ ಇಲ್ಲಿನ ಅಧೀಕ್ಷಕ ಡಾ. ಅವಿನಾಶ್ ಶೆಟ್ಟಿ ಅವರ ಹೇಳಿಕೆ. ಮಾಧ್ಯಮದವರ ಜೊತೆಯಲ್ಲಿ ಮಾತನಾಡಿದ ಅವಿನಾಶ್ ಶೆಟ್ಟಿ ಅವರು, ಶಿರೂರು ಸ್ವಾಮೀಜಿಯವರ ಆಹಾರದಲ್ಲಿ ವಿಷಪ್ರಾಸನವಾಗಿರುವ ಸಾದ್ಯತೆಗಳಿವೆ ಎಂಬ ಮಾತನ್ನು ಹೇಳಿದ್ದಾರೆ. ಸ್ವಾಮೀಜಿಯವರ ಪಾರ್ಥೀವ ಶರೀರವನ್ನು ಇದೀಗ ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ, ಇದರ ವರದಿ ಬಂದ ಬಳಿಕವಷ್ಟೇ ಸತ್ಯಾಸತ್ಯತೆ ಹೊರಬರಲಿದೆ.

ಇತ್ತೀಚೆಗೆ ಕರ್ನಾಟಕ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ಶ್ರೀಗಳವರು ಉಡುಪಿ ವಿಧಾನಸಭಾ ಕ್ಷೇತ್ರದಿಂದ ಭಾರತೀಯ ಜನತಾ ಪಕ್ಷದ ಟಿಕೆಟ್ ನಿಂದ ಸ್ಪರ್ಧಿಸಲು ಬಯಸಿದ್ದರು. ಆದರೆ ಆ ಪಕ್ಷದಿಂದ ಟಿಕೆಟ್ ಸಿಗದೇ ಇದ್ದಾಗ ಸ್ವತಂತ್ರ್ಯ ಅಭ್ಯರ್ಥಿಯಾಗಿ ಉಮೇದುವಾರಿಕೆಯನ್ನು ಬಯಸಿ ನಾಮಪತ್ರ ಸಲ್ಲಿಸಿದ್ದರು. ಆದರೆ ಬಳಿಕ ನಾಮಪತ್ರ ವಾಪಾಸು ಪಡೆದುಕೊಂಡು ಸ್ಪರ್ಧೆಯಿಂದ ಹಿಂದೆ ಸರಿದಿದ್ದರು. ಆದರೆ ಶ್ರೀಗಳ ಈ ನಡೆ ರಾಜ್ಯಾದ್ಯಂತ ಸಂಚಲವನ್ನು ಸೃಷ್ಟಿಸಿತ್ತು.

ವೇಷಧಾರಿಗಳ ನೆಚ್ಚನ ಶ್ರೀ ಶೀರೂರು ಸ್ವಾಮಿಗಳು…
ಶ್ರೀ ಕೃಷ್ಣ ಜನ್ಮಾಷ್ಠಮಿ ಮತ್ತು ವಿಟ್ಲಪಿಂಡಿ ಉತ್ಸವಗಳು ಉಡುಪಿಯ ನಾಡಹಬ್ಬವೆಂದೇ ಜನಮನ್ನಣೆ ಗಳಿಸಿವೆ. ಈ ಸಂದರ್ಭದಲ್ಲಿ ಪ್ರತೀವರ್ಷ ಉಡುಪಿ ನಗರದಲ್ಲಿ ಮತ್ತು ರಥಬೀದಿ ಪರಿಸರದಲ್ಲಿ ವಿವಿಧ ವೇಷಗಳು ಮೇಳೈಸುತ್ತಿದ್ದವು. ಈ ಸಂದರ್ಭದಲ್ಲಿ ರಥಬೀದಿಯ ವಿವಿಧ ಕಡೆಗಳಲ್ಲಿ ವೇಷಧಾರಿಗಳ ಪ್ರದರ್ಶನ ಮತ್ತು ಪುರಸ್ಕಾರಗಳು ನಡೆಯುತ್ತಿರುತ್ತದೆ. ಇದರಲ್ಲಿ ಯಾವಾಗಲೂ ಶಿರೂರು ಮಠದ ಕಡೆಯಿಂದ ನಡೆಯುತ್ತಿದ್ದ ವೇಷಗಳ ಪ್ರದರ್ಶನ ಜನಾಕರ್ಷಣೆಯ ಕೇಂದ್ರವಾಗಿರುತ್ತಿತ್ತು. ಈ ಸಂದರ್ಭದಲ್ಲಿ ಹಿರಿ ಕಿರಿಯ ವೇಷಧಾರಿಗಳೆಂಬ ಬೇಧವನ್ನು ತೋರದೆ ಎಲ್ಲರಿಗೂ ತಮ್ಮ ವೇದಿಕೆಯಲ್ಲಿ ವೇಷಗಳ ಪ್ರದರ್ಶನಕ್ಕೆ ಅವಕಾಶ ನೀಡಿ ಸೂಕ್ತ ನಗದು ಪುರಸ್ಕಾರವನ್ನು ತಮ್ಮ ಕೈಯಾರೆ ನೀಡುತ್ತಿದ್ದರು. ಸುಮಾರು 5-6 ಗಂಟೆಗಳ ಕಾಲ ವೇದಿಕೆಯಲ್ಲೇ ಕುಳಿತು ವೇಷಧಾರಿಗಳ ಪ್ರದರ್ಶನವನ್ನು ಕಂಡು ಮಗುವಿನಂತೆ ಸಂತೋಷಪಟ್ಟು ಅವರಿಗೆ ಬಹುಮಾನ ನೀಡಿ ಕಳುಹಿಸುತ್ತಿದ್ದ ವಿಶಿಷ್ಠ ಗುಣ ಶ್ರೀಗಳದ್ದಾಗಿತ್ತು.

ಉಡುಪಿಯ ಅಷ್ಠಮಠಾಧೀಶರಲ್ಲಿಯೇ ವಿಶಿಷ್ಠವಾಗಿದ್ದ ವ್ಯಕ್ತಿತ್ವವನ್ನು ಹೊಂದಿದ್ದ ಶಿರೂರು ಮಠದ ಲಕ್ಷ್ಮೀವರತೀರ್ಥ ಶ್ರೀಪಾದರು ಬಹುಮುಖ ವ್ಯಕ್ತಿತ್ವವನ್ನು ಹೊಂದಿದವರಾಗಿದ್ದರು. ಉತ್ತಮ ಈಜುಪಟುವಾಗಿದ್ದ ಶ್ರೀಗಳವರು ಈ ಹಿಂದೆ ಗೋಪಾಲ ಖಾರ್ವಿ ಅವರು ಮಲ್ಪೆ ಸಮುದ್ರದಲ್ಲಿ ಗಿನ್ನೆಸ್ ರೆಕಾರ್ಡ್ ನಿರ್ಮಿಸುವ ಉದ್ದೇಶದಿಂದ ಮ್ಯಾರಥಾನ್ ಈಜಿನ ಸಂದರ್ಭದಲ್ಲಿ ಶ್ರೀಗಳವರೂ ಸಹ ಕೆಲವು ಕಿಲೋಮೀಟರುಗಳಷ್ಟು ದೂರ ಸಮುದ್ರದಲ್ಲಿ ಈಜಿ ತಾವೊಬ್ಬ ಉತ್ತಮ ಈಜುಪಟು ಎಂಬುದನ್ನು ನಿರೂಪಿಸಿದ್ದರು.

ಟಾಪ್ ನ್ಯೂಸ್

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.