ಜನರ ನೆಮ್ಮದಿ ಕೆಡಿಸುವ ಅಟಲ್‌ಜಿ ಜನಸ್ನೇಹಿ ಕೇಂದ್ರ 


Team Udayavani, Jul 24, 2018, 6:00 AM IST

atalji-janasnehi-kendra.jpg

ಉಡುಪಿ: ಇಲ್ಲಿಗೆ ಬೆಳಗ್ಗೆ ಬಂದರೆ ಸಂಜೆವರೆಗೂ ಸರತಿ ನಿಲ್ಲಬೇಕು. ರಜೆ ಹಾಕಿ ಬಂದರೆ ಮಾತ್ರ ಕೆಲಸ ಸಾಧ್ಯ ಇಲ್ಲವಾದಲ್ಲಿ ಜನರ ಪರಿಸ್ಥಿತಿ ಅಧೋಗತಿ ಇದು ಜಿಲ್ಲೆಯ ಅಟಲ್‌ ಜನಸ್ನೇಹಿ ಕೇಂದ್ರಗಳ ಪರಿಸ್ಥಿತಿ. 

ಕೇವಲ 5-6 ಅರ್ಜಿಗಳು ವಿಲೇವಾರಿ
ಜನಸ್ನೇಹಿ ಕೇಂದ್ರಗಳಲ್ಲಿ ಕೇವಲ ಒಂದು ಕೌಂಟರ್‌ನಿಂದ ಸೇವೆ ಒದಗಿಸಲಾಗುತ್ತಿರುವುದು ಸಮಸ್ಯೆಗೆ ಕಾರಣ. ಕಳೆದ ಕೆಲವು ದಿನಗಳಿಂದ ಸರ್ವರ್‌ ಸಮಸ್ಯೆಯಿಂದ ಕೆಲಸಗಳು ಇನ್ನಷ್ಟು ವಿಳಂಬಗೊಳ್ಳುತ್ತಿದ್ದು. 10- 15 ಅರ್ಜಿಗಳನ್ನು ವಿಲೇವಾರಿ ಮಾಡುವಲ್ಲಿ ಕೇವಲ 5-6 ಅರ್ಜಿಗಳು ವಿಲೇವಾರಿಯಾಗುತ್ತಿದೆ. 

ಆಧಾರ್‌ ನೋಂದಣಿ: ಹೆಚ್ಚುವರಿ ಒತ್ತಡ 
ಜಿಲ್ಲೆಯಲ್ಲಿ ಒಟ್ಟು 9ಜನ ಸ್ನೇಹಿ ಕೇಂದ್ರಗಳಿವೆ. ಈ ಎಲ್ಲ ಕೇಂದ್ರಗಳಲ್ಲೂ ಇರುವುದು ಒಂದೇ ಕೌಂಟರ್‌. ಅದರೊಂದಿಗೆ ಹೆಚ್ಚುವರಿಯಾಗಿ ಆಧಾರ್‌ ನೋಂದಣಿ ಸೇವೆ ಕೂಡ ನೀಡಲಾಗಿದೆ. ಬೇರೆ ಕೇಂದ್ರಗಳಲ್ಲಿ ಆಧಾರ್‌ ನೋಂದಣಿಗೆ ಬೇರೆ ಸಿಬಂದಿ ನೇಮಿಸಲಾಗಿದೆ. ಆದರೆ ಕೋಟ ಜನಸ್ನೇಹಿ ಕೇಂದ್ರದಲ್ಲಿ ಮಾತ್ರ ಇರುವ ಸಿಬಂದಿ ಬೆಳಗ್ಗೆ ಕಂದಾಯ ಇಲಾಖೆಯ ಕೆಲಸವನ್ನು ಮಾಡಿದರೆ, ಮಧ್ಯಾಹ್ನದ ಬಳಿಕ ಆಧಾರ್‌ ನೋಂದಣಿಯ ಕೆಲಸವನ್ನು ಮಾಡುತ್ತಿದ್ದಾರೆ. ಮುಂದಿನ ತಿಂಗಳಲ್ಲಿ ಗ್ರಾ.ಪಂ.ಗಳಲ್ಲಿ ಆಧಾರ್‌ ನೋಂದಣಿ ನಡೆಯುವುದರಿಂದ ಹೆಚ್ಚುವರಿ ಕೆಲಸದ ಒತ್ತಡ ಕಡಿಮೆಯಾಗಬಹುದು.

ಹೊಸ ತಂತ್ರಾಂಶ: ಕೆಲಸ ವಿಳಂಬ
ಅಟಲ್‌ ಜನಸ್ನೇಹಿ ಕೇಂದ್ರದ ಸಿಬಂದಿಯನ್ನು ಉದಯವಾಣಿ ಮಾತನಾಡಿಸಿದಾಗ,  ಈಗ ಶಾಲಾ ಕಾಲೇಜುಗಳು ಆರಂಭಗೊಂಡಿರುವ ಹಿನ್ನೆಲೆ ಈಗ ಒತ್ತಡ ಇದೆ. ಕೆಲವೊಂದು ಸೇವೆಗಳಲ್ಲಿ ಹೊಸ ತಂತ್ರಾಂಶ ಅಳವಡಿಸಿದ ಹಿನ್ನೆಲೆ ಅವುಗಳ ಕೆಲಸ ವಿಳಂಬವಾಗುತ್ತಿದೆ. ಇಲ್ಲವಾದಲ್ಲಿ ಸಮಸ್ಯೆ ಇಲ್ಲ ಎನ್ನುತಾರೆ. 

ಮೂರ್‍ನಾಲು ದಿನಗಳಿಂದ ಕ್ಯೂ
ಜನಸ್ನೇಹಿ ಕೇಂದ್ರದಲ್ಲಿ ದಾಖಲೆ ಪಡೆಯಲು ಬಂದಿದ್ದ ಶಶಿಧರ್‌ ಮಾತನಾಡಿ “ಕಳೆದ ಮೂರ್‍ನಾಲು ದಿನಗಳಿಂದ ಬಂದಿದ್ದೇನೆ. ಇದೇ ರೀತಿ ಕ್ಯೂ ನಿಂತಿದೆ. ನಾವು ಕೆಲಸಕ್ಕೆ ಹೋಗುವವರು ಕೆಲಸ ಬಿಟ್ಟು ಬಂದು ನಿಲ್ಲಬೇಕು. ಪಿಂಚಣಿ ಸೇವೆ ಸೇರಿದಂತೆ ಕೆಲವು ಸೇವೆಗಳಲ್ಲಿ ಒಬ್ಬೊಬ್ಬರ ಕೆಲಸಕ್ಕೆ 10ರಿಂದ 15 ನಿಮಿಷ ಬೇಕು. ಹೀಗೆ ಒಬ್ಬೊರದ್ದು ಇಷ್ಟೊಂದು ಕಾಲ ತೆಗೆದುಕೊಳ್ಳುವುದಾದರೆ ಎರಡು ಕೌಂಟರ್‌ ತೆರೆಯಬಹುದಲ್ಲ’ ಎಂದರು. 

– 30ಸೇವೆಗಳಿಗೆ ಒಂದೇ ಕೌಂಟರ್‌
– ಬೆಳಗ್ಗಿನಿಂದ ಸಂಜೆವರೆಗೂ ದಾಖಲೆಗಾಗಿ ಕಾಯಬೇಕು.
– ಕೆಲವೊಂದು ಸೇವೆಗಳಿಗೆ 10 ನಿಮಿಷದವರೆಗೆ ಸಮಯ ಬೇಕು.
– ಜಿಲ್ಲೆಯಲ್ಲಿ 9 ಅಟಲ್‌ಜೀ ಜನಸ್ನೇಹಿ ಕೇಂದ್ರ ಇದೆ. 
– ಡಿಸಿ ಕಚೇರಿಯಲ್ಲಿರುವ ಸ್ಪಂದನ ಕೇಂದ್ರದಲ್ಲೂ ಸೇವೆ ಲಭ್ಯ 

ಸರ್ವರ್‌ ಸಮಸ್ಯೆ
ಅಟಲ್‌ ಜನಸ್ನೇಹಿ ಕೇಂದ್ರದಲ್ಲಿ ಸರ್ವರ್‌ ಸಮಸ್ಯೆಯಿಂದ ತೊಂದರೆಯಾಗಿದೆ. ಇಲ್ಲವಾದಲ್ಲಿ ಒಂದು ಕೌಂಟರ್‌ ಸಾಲುತ್ತದೆ. ಇನ್ನೊಂದೆರಡು ದಿನಗಳಲ್ಲಿ ಸರ್ವರ್‌ ಸಮಸ್ಯೆ ಸರಿಯಾಗುತ್ತದೆ. 
– ಪ್ರದೀಪ್‌ ಕುರುಡೇಕರ್‌ ತಹಶೀಲ್ದಾರ್‌, ಉಡುಪಿ

– ಹರೀಶ್‌ ಕಿರಣ್‌ ತುಂಗ
 

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.