ಸ್ವಂತ ಖರ್ಚಿನಲ್ಲಿ ಸಾರ್ವಜನಿಕರಿಂದ ರಸ್ತೆ ದುರಸ್ತಿ
Team Udayavani, Jul 26, 2018, 6:05 AM IST
ಕಾರ್ಕಳ: ಪುರಸಭಾ ವ್ಯಾಪ್ತಿಯ ಕುಂಟಲ್ಪಾಡಿ 3ನೇ ಅಡ್ಡ ರಸ್ತೆ ಬಿಂದಾನಗರದ 5ನೇ ಓಣಿರಸ್ತೆ ಹಲವು ದಿನಗಳಿಂದ ಸಂಪೂರ್ಣ ಹದಗೆಟ್ಟಿದ್ದರೂ ಸಂಬಂಧಪಟ್ಟವರು ರಸ್ತೆ ದುರಸ್ತಿಗೆ ಮುಂದಾಗಿಲ್ಲ. ಇದರಿಂದಾಗಿ ಬೇಸತ್ತ ಸಾರ್ವಜನಿಕರು ಸ್ವಂತ ಖರ್ಚಿನಲ್ಲಿ ಇದೀಗ ರಸ್ತೆ ದುರಸ್ತಿಗೆ ಮುಂದಾಗಿದ್ದಾರೆ.
ರಸ್ತೆ ದುರಸ್ತಿಗಾಗಿ ಎರಡು ಲೋಡ್ ಕಲ್ಲುಗಳನ್ನು ತಂದು ಹಾಕಲಾಗಿದ್ದು, ಕೆಲಸ ಪ್ರಾರಂಭವಾಗಿದೆ. ಕೆಸರಿನಲ್ಲಿ ಹೂತು ನಡೆಯಲು ಸಾಧ್ಯವಾಗದ ರಸ್ತೆಯನ್ನು 25 ಸಾವಿರ ರೂ. ವೆಚ್ಚದಲ್ಲಿ ಕಲ್ಲುಗಳನ್ನು ಜೋಡಿಸಿ ಸರಿಪಡಿಸಲಾಗುತ್ತಿದೆ.ಬಿಂದಾನಗರದ 5ನೇ ಓಣಿರಸ್ತೆ ಪ್ರಾರಂಭದಿಂದ ಅಂದಾಜು 150-200 ಮೀ. ರಸ್ತೆ ಸಂಪೂರ್ಣ ಹದೆಗಟ್ಟಿದ್ದು ಸಂಚರಿಸಲು ತೊಂದರೆಯಾಗುತ್ತಿದೆ. 12 ಮನೆಗಳಿರುವ ಈ ರಸ್ತೆಯಲ್ಲಿ ದಿನ ನಿತ್ಯದ ಓಡಾಟ ಬಹಳ ಕಷ್ಟವಾಗಿತ್ತು.
ಸ್ಥಳೀಯರ ಆಕ್ರೋಶ
ಈಗಾಗಲೇ ಪಾದಚಾರಿಗಳು ಈ ರಸ್ತೆಯಲ್ಲಿ ಬಿದ್ದು ಗಾಯಗೊಂಡಿದ್ದಾರೆ. ಇದರ ಬಗ್ಗೆ ಹಲವಾರು ಬಾರಿ ಮನವಿಗಳನ್ನು ನೀಡಿದ್ದರೂ ಏನು ಪ್ರಯೋಜನವಾಗಲಿಲ್ಲ. ಹಿಂದೆ ಆಡಳಿತದಲ್ಲಿ ಇದ್ದ ಅಧಿಕಾರಿಗಳು ಬಂದು ನೋಡಿದ್ದರು. ಇತ್ತೀಚೆಗೆ ಪುರಸಭೆಯ ಮುಖ್ಯಾಧಿಕಾರಿ ಅವರೂ ಸ್ಥಳಕ್ಕೆ ಭೇಟಿ ನೀಡಿ ಸದ್ಯ ನೀವೇ ಏನಾದರೂ ಮಾಡಿ ಎಂದಿದ್ದಾರೆ. ನಾವೇ ಕೆಲಸ ಮಾಡಿಸುವುದಾದರೆ ತೆರಿಗೆ ಏನಕ್ಕೆ ಕಟ್ಟಬೇಕು ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಡೆದಾಡಲೂ ಸಾಧ್ಯವಿಲ್ಲ
ಮಳೆಗಾಲ ಬಂದಾಗ ಪ್ರತೀ ಬಾರಿ ಈ ರಸ್ತೆಯಲ್ಲಿ ನಡೆದಾಡಲೂ ಸಾಧ್ಯವಿಲ್ಲ. ಈ ಬಾರಿಯೂ ಸಮಸ್ಯೆ ಉಂಟಾಗಿದೆ. ಸಂಬಂಧಿಸಿದವರಿಗೆ ಹೇಳಿದರೂ ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ ನಾವೇ ಸ್ಥಳೀಯರು ಸೇರಿ ಸ್ವಂತ ಖರ್ಚಿನಲ್ಲಿ ರಸ್ತೆ ಸರಿಪಡಿಲು ಮುಂದಾಗಿದ್ದೇವೆ.
– ಶರೀಟಾ ನೊರೋನ್ಹಾ, ಸ್ಥಳೀಯರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ
Udupi; ಮಸ್ಟರಿಂಗ್ ಕೇಂದ್ರದಲ್ಲಿ ಸಕಲ ತಯಾರಿ
ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.
ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ