ಹದಗೆಟ್ಟ ಬರಬೈಲ್‌ ನಿಟ್ಟೆ ಕೆಮ್ಮಣ್ಣು ರಸ್ತೆ: ಗ್ರಾಮಸ್ಥರ ಆಕ್ರೋಶ


Team Udayavani, Aug 3, 2018, 6:00 AM IST

2907belmne2b.jpg

ಬೆಳ್ಮಣ್‌:  ಬೋಳ ಬರಬೈಲ್‌ ನಿಂದ ಮಿತ್ತಬೈಲ್‌ ಮಾರ್ಗವಾಗಿ ನಿಟ್ಟೆ ಕೆಮ್ಮಣ್ಣನ್ನು ಸಂಪರ್ಕಿಸುವ ಮಣ್ಣಿನ ರಸ್ತೆ ತೀರ ಹದಗೆಟ್ಟಿದ್ದು ನಡೆದಾಡಲೂ ಕಷ್ಟ ಸಾಧ್ಯವಾಗಿದೆ. ಈ ರಸ್ತೆಯ ಬಗ್ಗೆ   ಸ್ಥಳೀಯಾಡಳಿತ, ಜನಪ್ರತಿನಿಧಿಗಳು ನಿರ್ಲಕ್ಷ್ಯ ತೋರುತ್ತಿರುವ ಹಿನ್ನೆಲೆ ಗ್ರಾಮಸ್ಥರು ಆಕ್ರೋಶಗೊಂಡಿದ್ದಾರೆ.

ಬೋಳ ಗ್ರಾ.ಪಂ. ವ್ಯಾಪ್ತಿಯ ಬರಬೈಲ್‌ ಮಾರ್ಗದಿಂದ ಸಂಪರ್ಕ ಪಡೆದು ನಿಟ್ಟೆ ಕೆಮ್ಮಣ್ಣು ಪರಿಸರ ಸೇರುವ ಈ ಕೂಡು ರಸ್ತೆ ಸಂಪೂರ್ಣ ಕೆಸರುಮಯವಾಗಿದ್ದು, ಬರಬೈಲ್‌ನಿಂದ ಸುಮಾರು 5ರಿಂದ 6 ಕಿ.ಮೀ ಉದ್ದದ ರಸ್ತೆ ಹೊಂಡಗುಂಡಿಗಳಿಂದ ತುಂಬಿದೆ. 

ಗ್ರಾಮಸ್ಥರಿಂದಲೇ ನಿರ್ಮಾಣಗೊಂಡ‌ ರಸ್ತೆ!
ಬರಬೈಲ್‌ ನಿಂದ ಮಿತ್ತಬೈಲ್‌ ಮಾರ್ಗವಾಗಿ ನಿಟ್ಟೆ  ಕೆಮ್ಮಣ್ಣು ಪರಿಸರ ತಲುಪಲು ಇದೇ ಹತ್ತಿರದ ಮಾರ್ಗ. 20 ವರ್ಷಗಳ ಹಿಂದೆ ಇಲ್ಲಿನ ಗ್ರಾಮಸ್ಥರು ರಸ್ತೆಯಾಗಬೇಕೆಂದು ತಮ್ಮ ಜಮೀನನ್ನು ಬಿಟ್ಟು ಕೊಟ್ಟು ಸ್ವತಃ ತಾವೇ ಕೆಲಸವನ್ನು ಮಾಡಿ ಮಣ್ಣಿನ ರಸ್ತೆಯನ್ನು ನಿರ್ಮಿಸಿದ್ದರು. ಆದರೆ  ಅಲ್ಲಿಂದ ಇಲ್ಲಿಯವರೆಗೂ ರಸ್ತೆ ಡಾಮರು ಮಾತ್ರ ಕಂಡಿಲ್ಲ. ಚುನಾವಣೆ ಸಂದರ್ಭದಲ್ಲಿ ಮಾತ್ರ ಜನಪ್ರತಿನಿ ಧಿಗಳು ಡಾಮರು ರಸ್ತೆ ನಿರ್ಮಿಸಿಕೊಡುವ ಭರವಸೆ ನೀಡುತ್ತಾರೆಯೇ ವಿನಾ ಇಲ್ಲಿಯವರೆಗೆ   ಜಲ್ಲಿ  ಕೂಡ ರಸ್ತೆಗೆ ಹಾಕಿಲ್ಲ  ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಾಹನ ಚಾಲಕರ ಹಿಂದೇಟು
ಈ ಭಾಗದಲ್ಲಿ ಸುಮಾರು 40ಕ್ಕೂ ಹೆಚ್ಚಿನ ಮನೆಗಳಿವೆ. ರಸ್ತೆಯ ದುಃಸ್ಥಿತಿಯ ಕಾರಣ ತುರ್ತು ಸಂದರ್ಭಗಳಲ್ಲಿಯೂ ವಾಹನಗಳ ಚಾಲಕರುಬಾಡಿಗೆಗೆ ಬರಲು ಹಿಂದೇಟು ಹಾಕುತ್ತಾರೆ ಎಂಬುದು ಗ್ರಾಮಸ್ಥರ ಆರೋಪ.

ಮೋರಿಯೂ ಕುಸಿದಿದೆ
ರಸ್ತೆಯ ತಗ್ಗು ಪ್ರದೇಶದಲ್ಲಿ  ಮಳೆ ನೀರು ಹರಿದು ಹೋಗಲು ಮೋರಿಯೊಂದನ್ನು ನಿರ್ಮಿಸಲಾಗಿತ್ತು. ಆದರೆ ಆ ಮೋರಿಯೂ ಈಗ ಶಿಥಿಲಾವಸ್ಥೆ ತಲುಪಿದ್ದು, ಯಾವುದೇ ಸಂದರ್ಭ ಕುಸಿಯಬಹುದಾದ ಭೀತಿಯಿದೆ. ಮೋರಿ ಕುಸಿದದ್ದೇ ಆದಲ್ಲಿ  ರಸ್ತೆ ಸಂಪರ್ಕವೂ ಕಡಿತಗೊಳ್ಳಲಿದೆ. 

ಪ್ರಯೋಜನ ಆಗಿಲ್ಲ
ನಾವೇ ನಮ್ಮ ಸ್ವಂತ ಜಮೀನನ್ನು ಬಿಟ್ಟು ಕೊಟ್ಟು ರಸ್ತೆಯನ್ನು ನಿರ್ಮಿಸಿಕೊಟ್ಟರೂ ಅದಕ್ಕೊಂದು ಡಾಮರೂ ಹಾಕಿಲ್ಲ. ಕಳೆದ 20 ವರ್ಷದಿಂದಲೂ ನಾವು ಈ ಬಗ್ಗೆ ಬೇಡಿಕೆ ಇಡುತ್ತಿದ್ದರೂ ಯಾವುದೇ ಪ್ರಯೋಜನವಾಗಿಲ್ಲ.
– ವಾಸುದೇವ, ಸ್ಥಳೀಯರು

ಮನವಿ ಮಾಡಲಾಗಿದೆ
ಈ ರಸ್ತೆಯನ್ನು ಸಿ.ಆರ್‌.ಎಫ್‌. ಯೋಜನೆಯಡಿಯಲ್ಲಿ  ಸೇರಿಸಿಕೊಳ್ಳುವಂತೆ ಜಿ.ಪಂ. ಸದಸ್ಯರು ಹಾಗೂ ಶಾಸಕರಿಗೆ ಮನವಿ ಮಾಡಲಾಗಿದೆ. ಮುಂದಿನ ದಿನದಲ್ಲಿ ಅನುದಾನದ ಲಭ್ಯತೆಯಲ್ಲಿ  ರಸ್ತೆ ದುರಸ್ತಿ ಕಾರ್ಯ ಕೈಗೊಳ್ಳುವಂತೆ ನೋಡಿಕೊಳ್ಳುತ್ತೇವೆ.
– ಪುಷ್ಪಾ ಸತೀಶ್‌ ಪೂಜಾರಿ
ತಾ.ಪಂ. ಸದಸ್ಯೆ

ಟಾಪ್ ನ್ಯೂಸ್

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

ಉಡುಪಿಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.