ಆಗುಂಬೆ ಬಳಿ ಅಪಘಾತ: ಮುದ್ರಾಡಿ ಯುವಕ ಸಾವು
Team Udayavani, Aug 9, 2018, 6:42 PM IST
ಹೆಬ್ರಿ: ಪಿಕಪ್ ವಾಹನದ ಜಾಯಿಂಟ್ ವೀಲ್ ತುಂಡಾಗಿ ನಡೆದ ಅಪಘಾತದಲ್ಲಿ ಹೆಬ್ರಿ ತಾಲೂಕಿನ ಮುದ್ರಾಡಿಯ ಯುವಕ ಸಾವನ್ನಪ್ಪಿದ ಘಟನೆ ಆಗುಂಬೆ ಸಮೀಪದ ಬಿದಿರುಗೋಡು ಎಂಬಲ್ಲಿ ಗುರುವಾರ ಸಂಜೆ ನಡೆದಿದೆ. ಮೃತರನ್ನು ಮುದ್ರಾಡಿ ನಿವಾಸಿ ಕೃಷ್ಣ ಶೆಟ್ಟಿ ( 36 ) ಎಂದು ಗುರುತಿಸಲಾಗಿದೆ.
ಕೃಷ್ಣ ಶೆಟ್ಟಿ ಅವರು ಮತ್ತಿಬ್ಬರೊಂದಿಗೆ ಪಿಕಪ್ ವಾಹನದಲ್ಲಿ ತೀರ್ಥಹಳ್ಳಿಯಿಂದ ಹೆಬ್ರಿ ಕಡೆಗೆ ಬರುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ವಾಹನ ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ತೀವೃ ಗಾಯಗೊಂಡಿದ್ದ ಕೃಷ್ಣ ಶೆಟ್ಟಿ ಅವರನ್ನು ತೀರ್ಥಹಳ್ಳಿ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅಷ್ಟರಲ್ಲೆ ಅವರು ಮೃತ ಪಟ್ಟಿದ್ದರು. ಆಗುಂಬೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ
ಜಯಪ್ರಕಾಶ್ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ
ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು
ಕಾರ್ಗಿಲ್ ಯೋಧ ಮೆಲ್ವಿನ್ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್