ಹೆಜಮಾಡಿ: ಕಡಲ್ಕೊರೆತ
Team Udayavani, Aug 10, 2018, 11:02 AM IST
ಪಡುಬಿದ್ರಿ: ಹೆಜಮಾಡಿ ಗ್ರಾಮದ ಅಮಾವಾಸೆಕರಿಯದ ದಕ್ಷಿಣ ಭಾಗದ ಸುಮಾರು 200 ಮೀ. ಪ್ರದೇಶದಲ್ಲಿ ಕಡಲ್ಕೊರೆತ ಸಂಭವಿಸಿದ್ದು, ಐದಾರು ತೆಂಗಿನ ಮರಗಳು ಹಾಗೂ ಗಾಳಿ ಮರಗಳು ಸಮುದ್ರಕ್ಕೆ ಆಹುತಿಯಾಗಿವೆ. ಈ ಹಿಂದೆ ಹಾಕಿದ್ದ ಬಂಡೆಗಲ್ಲಿನ ತಡೆಗೋಡೆಯನ್ನು ಸೀಳಿ ಒಳನುಗ್ಗುತ್ತಿರುವ ಸಮುದ್ರದಲೆಗಳು ತೀರ ಪ್ರದೇಶವನ್ನು ನುಂಗುತ್ತಿದೆ. ಮೀನುಗಾರಿಕಾ ರಸ್ತೆಯೂ ಅಪಾಯದ ಸ್ಥಿತಿಯಲ್ಲಿದೆ.
ಹೆಜಮಾಡಿ ಗ್ರಾ.ಪಂ. ಅಧ್ಯಕ್ಷೆ ವಿಶಾಲಾಕ್ಷಿ ಪುತ್ರನ್ ಸ್ಥಳಕ್ಕೆ ಭೇಟಿ ನೀಡಿದ್ದು, ವಿವಿಧ ಅಧಿಕಾರಿಗಳನ್ನು ಸಂಪರ್ಕಿಸಿದ್ದಾರೆ. ಕಿನಾರೆಯಲ್ಲಿ ಸುಮಾರು ಮೂರು ದಶಕಗಳ ಹಿಂದೆ ಹಾಕಲಾಗಿದ್ದ ಬಂಡೆಗಲ್ಲುಗಳು ಸಮುದ್ರ ಸೇರಿವೆ. ತೀರ ಪ್ರದೇಶದಲ್ಲಿ ಆಳವಾದ ಕಂದಕ ಸೃಷ್ಟಿಯಾಗಿದ್ದು, ಇದರಿಂದಾಗಿ ಮತ್ತಷ್ಟು ಭಾರೀ ಅಲೆಗಳು ದಡವನ್ನು ಅಪ್ಪಳಿಸುವಂತಾಗಿದೆ ಎಂದು ಮೊಗವೀರ ಮುಖಂಡರು ಹೇಳಿದ್ದಾರೆ.
ಕೊಲ್ಲೂರು: ಗಾಳಿ-ಮಳೆ; ಅಂಗಡಿಗಳಿಗೆ ಹಾನಿ
ಕೊಲ್ಲೂರು: ಜಡ್ಕಲ್ ಗ್ರಾ.ಪಂ. ವ್ಯಾಪ್ತಿಯ ಮುದೂರಿನ ಉದಯ ನಗರ ಎಂಬಲ್ಲಿ ಗುರುವಾರ ಬೆಳಗ್ಗೆ ದಿಢೀರ್ ಆಗಿ ಬೀಸಿದ ಭಾರೀ ಗಾಳಿ ಮಳೆಗೆ ಹಲವು ಅಂಗಡಿಗಳು, ವಿದ್ಯುತ್ ಕಂಬಗಳು ಜಖಂಗೊಂಡು ಲಕ್ಷಾಂತರ ರೂ. ನಷ್ಟ ಸಂಭವಿಸಿದೆ. ಅಂಗಡಿಗಳ ಮೇಲ್ಛಾವಣಿ ಸಂಪೂರ್ಣವಾಗಿ ಹಾರಿಹೋಗಿದ್ದು, ಅಂಗಡಿಯ ಒಂದು ಪಾರ್ಶ್ವದ ಗೋಡೆ ಬಿರುಕುಬಿಟ್ಟಿದೆ. ಬೆಲೆ ಬಾಳುವ ಸಾಮಗ್ರಿಗಳು ನಾಶವಾಗಿವೆ. ಹಲವು ಮನೆಗಳ ಮೇಲ್ಛಾವಣಿ ಶೀಟ್ಗಳು ಹಾರಿಹೋಗಿವೆ. ಜಡ್ಕಲ್ ಗ್ರಾ.ಪಂ. ಅಧ್ಯಕ್ಷ ಅನಂತಮೂರ್ತಿ, ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ