ಮಲ್ಪೆ ಬೀಚ್‌: ಕಣ್ಣು ಕಳೆದುಕೊಂಡ ಸಿಸಿ ಕೆಮರಾ


Team Udayavani, Aug 11, 2018, 6:00 AM IST

1008mle1a.jpg

ಮಲ್ಪೆ: ಸಾರ್ವಜನಿಕರ ಸುರಕ್ಷತೆಯ ನಿಟ್ಟಿನಲ್ಲಿ ಮಲ್ಪೆ ಬೀಚ್‌ನ ಪ್ರಮುಖ ಭಾಗಗಳಲ್ಲಿ ಅಳವಡಿಸಿರುವ ಸಿಸಿ ಕೆಮರಾ ಕೆಟ್ಟುಹೋಗಿ 4 ತಿಂಗಳು ಕಳೆದರೂ ಇನ್ನೂ ದುರಸ್ತಿ ಕಾರ್ಯ ನಡೆಯದಿರುವುದು ಕಳ್ಳತನ, ಇನ್ನಿತರ ಕಾನೂನು ಬಾಹಿರ ಚಟುವಟಿಕೆಗಳಿಗೆ ದಾರಿಮಾಡಿಕೊಟ್ಟಂತಾಗಿದೆ.

ಆರಂಭದಲ್ಲಿ ದಿನದ 24 ಗಂಟೆ ಕಾರ್ಯ ನಿರ್ವಹಿಸುತ್ತಿದ್ದು, ಎರಡು ವರ್ಷಗಳ ವರೆಗೆ ಸರಿಯಾಗಿಯೇ ಇತ್ತು. ಕ್ರಮೇಣ ಉಪ್ಪು ನೀರಿನ ಅಂಶ ಕೆಮರಾದ ಲೆನ್ಸ್‌ಗೆ ಸೇರಿದ್ದರಿಂದ ಒಂದು ವರ್ಷದಿಂದ ಒಂದೊಂದೇ ಕೆಮರಾಗಳು ಕಣ್ಣುಮುಚ್ಚಿಕೊಂಡವು. ಇದೀಗ ಒಂದು ತಿಂಗಳ ಹಿಂದೆ ಉಳಿದೆಲ್ಲವೂ ಹಾಳಾಗಿ ಹೋಗಿದ್ದು ದುರಸ್ತಿಗೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎನ್ನಲಾಗಿದೆ.

ಮೂರು ವರ್ಷದ ಹಿಂದೆ ಅಳವಡಿಕೆ
ದೇಶ ವಿದೇಶಗಳ ಪ್ರವಾಸಿಗರ ಆಕರ್ಷಣೀಯ ತಾಣವಾದ ಮಲ್ಪೆ ಬೀಚ್‌ಗೆ ರಾಜ್ಯ ಹಾಗೂ ಹೊರರಾಜ್ಯಗಳಿಂದ ನಿತ್ಯ ಸಾವಿರಾರು ಸಂಖ್ಯೆ ಪ್ರವಾಸಿಗರು ಬರುತ್ತಾರೆ. ಕಳ್ಳತನ, ಕಾನೂನು ಬಾಹಿರ ಚಟುವಟಿಕೆಗಳ ನಿಯಂತ್ರಣ ಹಾಗೂ ಪ್ರವಾಸಿಗರಿಗೆ ಹೆಚ್ಚು ಸುರಕ್ಷತೆಯ ನಿಟ್ಟಿನಲ್ಲಿ ಮಲ್ಪೆ ಅಭಿವೃದ್ಧಿ ಸಮಿತಿಯ ವತಿಯಿಂದ ಮೂರು ವರ್ಷಗಳ ಹಿಂದೆ ಲಕ್ಷಾಂತರ ರೂಪಾಯಿ ವ್ಯಯಿಸಿ ಬೀಚ್‌ನಲ್ಲಿ 8 ಕಡೆಗಳಲ್ಲಿ ಸಿಸಿ ಕೆಮರಾವನ್ನು ಅಳವಡಿಸಲಾಗಿತ್ತು. ಮಲ್ಪೆ ಬೀಚ್‌ ಸಿಸಿ ಕೆಮರಾ ಅಳವಡಿಸಿದ ಕರ್ನಾಟಕದ ಪ್ರಥಮ ಬೀಚ್‌ ಎಂಬ ಹೆಗ್ಗಳಿಕೆಗೂ ಪಾತ್ರವಾಗಿತ್ತು.

ಕೆಮರಾ ಎಲ್ಲೆಲ್ಲಿ ಇದ್ದವು
ಕಡಲತೀರದಲ್ಲಿ 5, ಪಾರ್ಕಿಂಗ್‌ ಪ್ರದೇಶದಲ್ಲಿ 2 ಮತ್ತು ಮುಖ್ಯ ದ್ವಾರದ ಬಳಿ 1 ಕೆಮರಾವನ್ನು ಆಳವಡಿಸಲಾಗಿತ್ತು. ಇದರ ಚಲನ ವಲನವನ್ನು ಮಲ್ಪೆ ಪೊಲೀಸ್‌ ಠಾಣೆ ನಿರ್ವಹಿಸುತ್ತಿತ್ತು.

ಹೆಚ್ಚುತಿದೆ ಕಳ್ಳತನ ಪ್ರಕರಣ
ಈ ಹಿಂದೆ ಮಲ್ಪೆ ಬೀಚ್‌ನಲ್ಲಿ ಕಳ್ಳತನದ ಸಾಕಷ್ಟು ಪ್ರಕರಣಗಳು ವರದಿಯಾಗಿದ್ದವು. ಸಿಸಿ ಕೆಮರಾ ಅಳವಡಿಸಿದ ಬಳಿಕ ಸ್ವಲ್ಪ ನಿಯಂತ್ರಣಕ್ಕೆ ಬಂದಿತ್ತೆನ್ನಲಾಗಿದೆ. ಇದೀಗ ಕೆಲವು ತಿಂಗಳಿಂದ ಕಳ್ಳತನದ ಪ್ರಕರಣಗಳು ಮತ್ತೆ ನಡೆಯುತ್ತಿವೆ ಯಾದರೂ ಕೆಲವೇ ಮಂದಿ ಮಾತ್ರ ದೂರು ದಾಖಲಿಸುತ್ತಾರೆ. ಗುರುವಾರ ಸಂಜೆ ಮಂಗಳೂರು ಫೂಟೋಗ್ರಾಫರ್‌ ಓರ್ವರ ಬೆಲೆಬಾಳುವ ಕೆಮರಾ ಲೆನ್ಸ್‌ ಕಳವು ಮಾಡಲಾಗಿತ್ತು.

ಮಲ್ಪೆ ಬೀಚ್‌ನಲ್ಲಿ ಸಾಕಷ್ಟು ಅಭಿವೃದ್ಧಿ ಕಾಣುತ್ತಿದ್ದು ನಿತ್ಯ ಸಾವಿರಾರು ಪ್ರವಾಸಿಗರು ಇಲ್ಲಿಗೆ ಬರುತ್ತಾರೆ. ಬೀಚ್‌ನಲ್ಲಿ ಕೆಮರಾ ಕೆಟ್ಟು ಹೋದ ಹಿನ್ನೆಲೆಯಲ್ಲಿ ಪೊಲೀಸರಿಗೆ ಆರೋಪಿಗಳನ್ನು ಪತ್ತೆಹಚ್ಚಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಹಾಳಾಗಿ ನಿಂತಿರುವ ಕೆಮರಾಗಳನ್ನು ನಿರ್ವಹಣೆ ಮಾಡಲು ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಕೆಮರಾದ ಲೆನ್ಸ್‌ಗೆ ಸಮುದ್ರದಲ್ಲಿನ ಉಪ್ಪಿನ ಅಂಶ ಸೇರಿಕೊಳ್ಳುವುದರಿಂದ ಲೆನ್ಸ್‌ ಬೇಗನೆ ಹಾಳಾಗುತ್ತದೆ. ಕೇಬಲ್‌ಗ‌ಳು ಕೂಡ ಶಾರ್ಟ್‌ ಆಗುತ್ತಿದೆ. ಈ ಭಾಗದಲ್ಲಿ ಹೆಚ್ಚು ರಕ್ಷಣೆಯನ್ನು ಹೊಂದಿರುವ ಕೆಮರಾಗಳ ಅಗತ್ಯವಿದೆ. ಸ್ವದೇಶ ದರ್ಶನ ಯೋಜನೆಯಡಿ ಹೊಸ ಕೆಮರಾಗಳನ್ನು ಅಳವಡಿಸುವ ಯೋಜನೆಯು ಸಿದ್ಧವಾಗುತ್ತಿದೆ ಎಂದು ಸುದೇಶ್‌ ಶೆಟ್ಟಿ ತಿಳಿಸಿದ್ದಾರೆ.

ಸುರಕ್ಷೆಗಾಗಿ ಅಗತ್ಯ
ಕೆಮರಾ ಕೆಟ್ಟು ಹೋಗಿ 4 ತಿಂಗಳಾಗಿದೆ. ಸುರಕ್ಷತೆಯ ದೃಷ್ಟಿಯಿಂದ ಮತ್ತು ಯಾವುದೇ ಪ್ರಕರಣಗಳನ್ನು ಪತ್ತೆಹಚ್ಚಲು ಹೆಚ್ಚಿನ ನೆರವಾಗುತ್ತಿದ್ದು, ಮಲ್ಪೆ ಬೀಚ್‌ಗೆ ಸಿಸಿ ಕೆಮರಾ ಅತೀ ಅಗತ್ಯವಾಗಿದೆ. ಪೊಲೀಸರಿಗೆ ದಿನದ 24 ಗಂಟೆ ಇಲ್ಲಿದ್ದು ಎಲ್ಲ ಕಡೆ ನಿಗಾವಹಿಸಲು ಕಷ್ಟಸಾಧ್ಯ. ಈ ಬಗ್ಗೆ ಜಿಲ್ಲಾಧಿಕಾರಿ ಮತ್ತು ಮಲ್ಪೆ ಅಭಿವೃದ್ಧಿ ಸಮಿತಿಗೆ ದೂರು ನೀಡಿದ್ದೇವೆ.
– ಮಧು ಬಿ. ಇ.,ಉಪನಿರೀಕ್ಷಕರು,ಮಲ್ಪೆ ಠಾಣೆ

ಅಳವಡಿಕೆ ಚಿಂತನೆ
ರಾಜ್ಯದ ಕರಾವಳಿಯ ಎಲ್ಲ ಬೀಚ್‌ಗಳಲ್ಲೂ ಸಿಸಿಟಿವಿ ಅಳವಡಿಸುವ ಬಗ್ಗೆ ಸಮೀಕ್ಷೆ ನಡೆಸಲಾಗುತ್ತಿದ್ದು, ಕೇಂದ್ರ ಸರಕಾರದ ಸ್ವದೇಶ್‌ ದರ್ಶನ ಯೋಜನೆಯಡಿಯಲ್ಲಿ 62ಲಕ್ಷ ರೂ. ಅನುದಾನ ದೊರೆಯಲಿದೆ. ಎಲ್ಲಿ ಯಾವ ಆಯಾಮದಲ್ಲಿ ಹೇಗೆ ಅಳವಡಿಸುವ ಕುರಿತು ಚಿಂತನೆ ನಡೆಯುತ್ತಿದೆ. ಮಲ್ಪೆ, ಮರವಂತೆ, ಕಾಪು, ಪಡುಬಿದ್ರೆ, ತ್ರಾಸಿ, ಸೋಮೇಶ್ವರ, ಒತ್ತಿನೆಣೆ ಪ್ರಮುಖವಾದ ಕೇಂದ್ರವಾಗಿದೆ.ಸಮೀಕ್ಷೆಯನ್ನು ಆಧರಿಸಿ ಟೆಂಡರ್‌ ಕರೆಯಲಾಗುವುದು. ಈ ಬಗ್ಗೆ ಉಡುಪಿ ಎಸ್ಪಿ ಜತೆ ಸಭೆ ನಡೆಸಿ ಚರ್ಚಿಸಲಾಗಿದೆ. ಎರಡು ತಿಂಗಳೊಳಗೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಟೆಂಡರ್‌ ತೆಗೆದುಕೊಂಡವರಿಗೆ 5 ವರ್ಷದವರೆಗೆ ನಿರ್ವಹಣೆಗೆ ಕೊಡಲಾಗುತ್ತದೆ. ಆ ಬಳಿಕ ಮಲ್ಪೆ ಬೀಚ್‌ನ ಸಮಸ್ಯೆಯೂ ಪರಿಹಾರಗೊಂಡಂತಾಗುತ್ತದೆ
– ಅನಿತಾ, ಸಹಾಯಕ ನಿರ್ದೇಶಕಿ, ಪ್ರವಾಸೋದ್ಯಮ ಇಲಾಖೆ

ಟಾಪ್ ನ್ಯೂಸ್

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.