ಮಳೆ ಬಿರುಸು: ನೆರೆ ಭೀತಿ…ಮತ್ತಷ್ಟು ಹದಗೆಟ್ಟ ರಸ್ತೆಗಳು
Team Udayavani, Aug 14, 2018, 6:00 AM IST
ಉಡುಪಿ: ಉಡುಪಿ ನಗರ ಮತ್ತು ಸುತ್ತಲಿನ ಪ್ರದೇಶಗಳಲ್ಲಿ ರವಿವಾರ ಸಂಜೆಯಿಂದ ಉತ್ತಮ ಮಳೆಯಾಗಿದ್ದು ಸೋಮವಾರವೂ ಮಧ್ಯಾಹ್ನದವರೆಗೆ ಆಗಾಗ್ಗೆ ಉತ್ತಮ ಮಳೆಯಾಯಿತು. ಮಧ್ಯಾಹ್ನದ ಅನಂತರ ನಿರಂತರ ಮಳೆ ಸುರಿಯಿತು. ಪರಿಣಾಮವಾಗಿ ಮೂಡನಿಡಂಬೂರು, ನಿಟ್ಟೂರು, ಮಠದಬೆಟ್ಟು, ಬೈಲಕೆರೆ ಮೊದಲಾದೆಡೆ ಮಳೆನೀರು ಹರಿಯುವ ತೋಡುಗಳು ಭರ್ತಿಯಾಗಿ ಹರಿಯುತ್ತಿದ್ದು ನೀರು ತೋಡಿನಿಂದ ವಸತಿ ಪ್ರದೇಶಗಳಿಗೆ ನುಗ್ಗುವ ಆತಂಕ ಉಂಟಾಗಿದೆ.
ಮೂಡನಿಡಂಬೂರು ಗರೋಡಿ ಆವರಣಕ್ಕೆ ನೀರು ನುಗ್ಗಿದೆ. ಮೂಡನಿಡಂಬೂರು-ನಿಟ್ಟೂರು ರಸ್ತೆಯಲ್ಲಿಯೂ ನೀರು ಆವರಿಸಿತ್ತು. ವಾಹನ ಸಂಚಾರಕ್ಕೆ ಅಡ್ಡಿಯಾಯಿತು. ಕಲ್ಸಂಕ ತೋಡು ತುಂಬಿ ಹರಿಯುತ್ತಿದ್ದು ಮತ್ತಷ್ಟು ಮಳೆಯಾದರೆ ಉಕ್ಕಿ ಹರಿಯುವ ಭೀತಿ ಇದೆ.
ಸಂಚಾರ ಸಂಚಕಾರ
ಉಡುಪಿ ನಗರದ ಹಳೆ ಡಯಾನ ಸರ್ಕಲ್, ಬನ್ನಂಜೆ-ಬ್ರಹ್ಮಗಿರಿ ರಸ್ತೆಗಳು, ಮಣಿಪಾಲದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಂಡಿಗಳು ಮತ್ತಷ್ಟು ಹೆಚ್ಚಾಗಿ ವಾಹನ ಸಂಚಾರಕ್ಕೆ ತೊಂದರೆಯಾಗಿದೆ.
ವಿದ್ಯುತ್ ವ್ಯತ್ಯಯ
ರವಿವಾರ ರಾತ್ರಿ ಬಲವಾದ ಗಾಳಿ ಬೀಸಿದ ಪರಿಣಾಮ ಉಡುಪಿ ಪರಿಸರದಲ್ಲಿ 4 ವಿದ್ಯುತ್ ಕಂಬಗಳಿಗೆ ಹಾನಿಯಾಗಿ ವಿದ್ಯುತ್ ಸಂಪರ್ಕದಲ್ಲಿ ವ್ಯತ್ಯಯವಾಗಿತ್ತು. ಉಡುಪಿ ಅಬಕಾರಿ ಭವನ ಮತ್ತು ಮಲ್ಪೆಯಲ್ಲಿ ಮರ ಬಿದ್ದು ವಿದ್ಯುತ್ ವ್ಯತ್ಯಯವಾಗಿತ್ತು. ಸೋಮವಾರ ಬಹುತೇಕ ವಿದ್ಯುತ್ ಸಂಪರ್ಕವನ್ನು ಸರಿಪಡಿಸಲಾಗಿದೆ.
ಕಾಲೇಜುಗಳಿಗೂ ರಜೆ
ಶಾಲೆ, ಪ.ಪೂ.ಕಾಲೇಜುಗಳಿಗೆ ಸೋಮವಾರ ರಜೆ ಎಂಬುದಾಗಿ ರವಿವಾರದಂದೆ ಜಿಲ್ಲಾಧಿಕಾರಿಯವರು ಘೋಷಿಸಿದ್ದರು. ಸೋಮವಾರ ನಗರದ ಹಲವು ಪದವಿ ಕಾಲೇಜುಗಳು ಕೂಡ ರಜೆ ಸಾರಿದವು. ಸೋಮವಾರದ ಮಳೆ ಜನಜೀವನದ ಮೇಲೆ ವ್ಯತಿರಿಕ್ತ ಪರಿಣಾಮವನ್ನುಂಟು ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
MUST WATCH
ಹೊಸ ಸೇರ್ಪಡೆ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು