ಶ್ರೀಕೃಷ್ಣ ಜನ್ಮಾಷ್ಟಮಿಯಂದು ರಾತ್ರಿ 11.48ಕ್ಕೆ ಅರ್ಘ್ಯಪ್ರದಾನ
Team Udayavani, Aug 30, 2018, 6:00 AM IST
ಉಡುಪಿ: ಶ್ರೀ ಕೃಷ್ಣಮಠದಲ್ಲಿ ಸೆ.2, 3ರಂದು ಅದ್ದೂರಿಯಾಗಿ ಶ್ರೀಕೃಷ್ಣ ಜನ್ಮಾಷ್ಟಮಿ ಉತ್ಸವ ನಡೆಯಲಿದೆ. ಈ ಎರಡು ದಿನ ಭಜನೆ ಅರ್ಚನೆ ಸಹಿತ ವಿವಿಧ ಧಾರ್ಮಿಕ ಕಾರ್ಯಕ್ರಮ ಉತ್ಸವಗಳು ಜರಗಲಿದೆ.
ಜನ್ಮಾಷ್ಟಮಿಯ ದಿನ ಕೃಷ್ಣಮಠದಲ್ಲಿ ಶ್ರೀಕೃಷ್ಣನಿಗೆ ಮೂರು ಹೊತ್ತು ಲಕ್ಷ ತುಳಸಿ ಅರ್ಚನೆ ನಡೆಯಲಿದೆ. ಸಂಜೆ ಜನ್ಮಾಷ್ಟಮಿಯ ವಿಶೇಷ ಪೂಜೆಗಳು ನಡೆಯಲಿದೆ. ಜನ್ಮಾಷ್ಟಮಿಗೆ ಚಂದ್ರೋದಯದ ಸಂದರ್ಭ ಅರ್ಘ್ಯ ಪ್ರದಾನ ನಡೆಯಲಿದೆ. ಅಂದು ರಾತ್ರಿ 11.48ಕ್ಕೆ ಚಂದ್ರೋದಯವಾಗಲಿದ್ದು. ಚಂದ್ರೋದಯಕ್ಕೆ ಪೂರ್ವದಲ್ಲಿ ದೇವರಿಗೆ ಅರ್ಘ್ಯ ಪ್ರದಾನ ನಡೆಯಲಿದೆ. ಆ ಬಳಿಕ ಚಂದ್ರೋದಯದ ಸಮಯದಲ್ಲಿ ತುಳಸಿ ಗಿಡದ ಬಳಿ ಬಂದು ಚಂದ್ರನ ದರ್ಶನ ಮಾಡಿ ಅರ್ಘ್ಯ ಪ್ರದಾನ ಮಾಡಲಾಗುತ್ತದೆ.
ವಿಟ್ಲಪಿಂಡಿಯಂದು ಇಸ್ಕಾನ್ ಅವರಿಂದ ನಿರಂತರ ಭಜನ ನಡೆಯಲಿದೆ. ದೈನಂದಿನ ಪೂಜೆಗಳು ಲಕ್ಷ ತುಳಸಿ ಅರ್ಚನೆ ನಡೆಯಲಿದ್ದು ಮಧ್ಯಾಹ್ನ 3ಕ್ಕೆ ಉತ್ಸವ ಆರಂಭಗೊಳ್ಳಲಿದೆ. ರಥದಲ್ಲಿ ಶ್ರೀಕೃಷ್ಣನ ಮೂರ್ತಿಯನ್ನು ರಥಬೀದಿಗೆ ಒಂದು ಸುತ್ತು ಪ್ರದಕ್ಷಿಣೆ ತಂದು, ಅನಂತರ ಆ ಮೂರ್ತಿಯನ್ನು ಮಧ್ವಸರೋವರದಲ್ಲಿ ವಿಸರ್ಜನೆ ಮಾಡಲಾಗುತ್ತದೆ. ಈಗ ಚಾತುರ್ಮಾಸ್ಯವ್ರತವಾದ ಕಾರಣ ಉತ್ಸವ ಮೂರ್ತಿಯನ್ನು ಗರ್ಭಗುಡಿಯ ಹೊರಗೆ ತರುವುದಿಲ್ಲ. ಹೀಗಾಗಿ ಮಣ್ಣಿನ ಮೂರ್ತಿಗೆ ಪೂಜೆ ಸಲ್ಲಿಸಿ ಉತ್ಸವದಲ್ಲಿ ತರಲಾಗುವುದು.
20ಸಾವಿರ ಜನರಿಗೆ ಅನ್ನಸಂತರ್ಪಣೆ
ಜನ್ಮಾಷ್ಟಮಿಯಂದು ಸುಮಾರು 20ಸಾವಿರ ಜನರಿಗೆ ಅನ್ನಸಂತರ್ಪಣೆಗೆ ಸಿದ್ದತೆ ನಡೆಸಲಾಗಿದೆ. ಉತ್ಸವ ಸಂದರ್ಭ ಹಂಚಲು 20ಬಗೆಯ ಉಂಡೆ ಚಕ್ಕುಲಿಯನ್ನು ಹಂಚಲಾಗುತ್ತದೆ. ಶ್ರೀಕೃಷ್ಣಮಠದ ಚಿಣ್ಣರ ಸಂತರ್ಪಣೆ ಶಾಲೆಗಳಿಗೂ ಕೂಡ ಇದನ್ನು ಹಂಚಲಾಗುತ್ತಿದೆ. ಸುಮಾರು 120 ಶಾಲೆಗಳಿಗೆ ಇದನ್ನು ಹಂಚಲಾಗುತ್ತದೆ.
ಅಡಕೆ ಕಂಬಕ್ಕೆ ಈ ಬಾರಿ ಅವಕಾಶ
ಮಠದ ಸಂಪ್ರದಾಯದಂತೆ ಕನಕ ಗೋಪುರದೆದುರು ಅಡಕೆ ಮರದ ಕಂಬವನ್ನು ನೆಟ್ಟು ಎಣ್ಣೆ ಹಚ್ಚಿ ಕಂಬವನ್ನೇರುವ ಸ್ಪರ್ಧೆ ನಡೆಯುತ್ತಿತ್ತು. ಈ ಹಿಂದೆ ನಡೆದ ಅಹಿತಕರ ಘಟನೆಯಿಂದ ಅದನ್ನು ನಿಲ್ಲಿಸಲಾಗಿತ್ತು. ಆದರೆ ಈ ಬಾರಿ ಈ ಸಂಪ್ರದಾಯ ನಡೆಯಲಿದೆ ಎಂದು ಪರ್ಯಾಯ ಪಲಿಮಾರು ಶ್ರೀಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
MUST WATCH
ಹೊಸ ಸೇರ್ಪಡೆ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್
Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ
Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ
Department of Health: ಜನರಿಗೆ ಅರಿವಿನ ಟಾನಿಕ್ ನೀಡುತ್ತಿರುವ ಆರೋಗ್ಯ ಇಲಾಖೆ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ