ಹೆಚ್ಚುವರಿ ದೈಹಿಕ ಶಿಕ್ಷಣ ಶಿಕ್ಷಕರ ವರ್ಗಾವಣೆ?


Team Udayavani, Aug 31, 2018, 9:57 AM IST

pt.jpg

ಬೆಳ್ಮಣ್‌: ಇನ್ನೂರಕ್ಕಿಂತ ಕಡಿಮೆ ವಿದ್ಯಾರ್ಥಿಗಳು ಇರುವ ಸರಕಾರಿ ಶಾಲೆಗಳ ದೈಹಿಕ ಶಿಕ್ಷಣ ಶಿಕ್ಷಕರನ್ನು ಹೆಚ್ಚುವರಿ ಎಂದು ಪರಿಗಣಿಸಿ ಬೇರೆಡೆ ನಿಯೋಜಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಈ ಹಿಂದೆ ವಿದ್ಯಾರ್ಥಿ-ಶಿಕ್ಷಕರ ಅನುಪಾತದಡಿ ಇತರ ಶಿಕ್ಷಕರನ್ನು ಹೆಚ್ಚುವರಿ ಎಂದು ಇಲಾಖೆ ಗುರುತಿಸಿತ್ತು. ಈಗ ದೈಹಿಕ ಶಿಕ್ಷಣ ಶಿಕ್ಷಕರನ್ನೂ ಅದೇ ಮಾನದಂಡದಡಿ ಹೆಚ್ಚುವರಿ ಎಂದು ಗುರುತಿಸಿ ಆದೇಶ ಹೊರಡಿಸಿದೆ. ಜತೆಗೆ ನಿಯೋಜನೆಗೆ ದಿನ ನಿಗದಿ ಪಡಿಸುತ್ತಿದೆ. ಎಳವೆಯಿಂದಲೇ ಕ್ರೀಡೆ ಬಗ್ಗೆ ಪ್ರೀತಿ ಬೆಳೆಸಿ ಕ್ರೀಡಾಪಟುಗಳನ್ನು ರೂಪಿಸಲು ಎಲ್ಲ ಶಾಲೆಗಳಲ್ಲಿ ದೈ. ಶಿಕ್ಷಣ ಶಿಕ್ಷಕರನ್ನು ಕಡ್ಡಾಯವಾಗಿ ನೇಮಿಸುವುದಾಗಿ ಸರಕಾರ ಹೇಳಿತ್ತು.

ಜಿಲ್ಲೆಯಲ್ಲಿ  ಹೆಚ್ಚುವರಿ ಸಂಖ್ಯೆ
ಕಾರ್ಕಳ ತಾಲೂಕಿನ‌ 33 ಶಾಲೆಗಳ ಪೈಕಿ 28, ಕುಂದಾಪುರದ 29ರಲ್ಲಿ 25, ಉಡುಪಿಯ 13ರ ಪೈಕಿ 9, ಬ್ರಹ್ಮಾವರದ 31ರ ಪೈಕಿ 26, ಬೈಂದೂರಿನ 38ರ ಪೈಕಿ 31 ಮಂದಿ ದೈಹಿಕ ಶಿಕ್ಷಣ ಶಿಕ್ಷಕರನ್ನು ಹೆಚ್ಚುವರಿ ಎಂದು ಗುರುತಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಯಲ್ಲಿ ಒಟ್ಟು 168 ಮಂದಿ ದೈಹಿಕ ಶಿಕ್ಷಣ ಶಿಕ್ಷಕರು ವರ್ಗಾವಣೆಯ ಗೊಂದಲ ಎದುರಿಸುತ್ತಿದ್ದಾರೆ. ಇವರನ್ನು ಇಳಿಕೆ ಕ್ರಮದ ಆಧಾರದಲ್ಲಿ ಕೌನ್ಸಿಲಿಂಗ್‌ ನಡೆಸಿ ಇತರ ಶಾಲೆಗಳಿಗೆ ನಿಯೋಜಿಸುವ ಇರಾದೆ ಇದೆ. ಜತೆಗೆ ಕಡಿಮೆ ವಿದ್ಯಾರ್ಥಿಗಳಿರುವಲ್ಲಿನ ಶಿಕ್ಷಕರನ್ನು ದೈಹಿಕ ಶಿಕ್ಷಕರಿಲ್ಲದ ಹೆಚ್ಚು ವಿದ್ಯಾರ್ಥಿಗಳಿರುವ ಶಾಲೆಗಳಿಗೆ ಕಳುಹಿಸಲೂ ಸಾಮೂಹಿಕವಾಗಿ ಕೌನ್ಸೆಲಿಂಗ್‌ ನಡೆಸುವ ಆಲೋಚನೆಯೂ ಇದೆ.

ಈ ವರ್ಷದ ಮೊದಲಿಗೆ 60 ವಿದ್ಯಾರ್ಥಿಗಳಿರುವ ಶಾಲೆಗಳ ಅಗತ್ಯ ಅನುಸರಿಸಿ ಮುಖ್ಯ ಶಿಕ್ಷಕರನ್ನು ನೇಮಿಸಿದ್ದ ಮಾದರಿಯಲ್ಲೇ 60 ವಿದ್ಯಾರ್ಥಿ ಗಳಿರುವ ಶಾಲೆಗಳಿಗೆ ಕಡ್ಡಾಯವಾಗಿ ದೈಹಿಕ ಶಿಕ್ಷಣ ಶಿಕ್ಷಕರನ್ನು ನೇಮಿಸಬೇಕು. ಇಲ್ಲವಾದರೆ, ಇನ್ನೊಂದು ಶಾಲೆಗೆ ಹೋಗಿ ಅಲ್ಲಿಯೂ ಮುಂದೆ ಹೆಚ್ಚುವರಿ ಎಂದಾದರೆ ಎಂಬುದು ಜಿಲ್ಲಾ ಶಿಕ್ಷಕರ ಸಂಘದ ಆತಂಕ.

ಹೋದಲ್ಲಿ  ಇನ್ನೂರು ಇದೆಯೇ?
ಆದೇಶದ ಪ್ರಕಾರ ಇನ್ನೊಂದು ಶಾಲೆಗೆ ಹೋಗಬೇಕು. ಆದರೆ ಜಿಲ್ಲೆಯ 144 ಶಾಲೆಗಳಲ್ಲಿ ದೈಹಿಕ ಶಿಕ್ಷಕರಿದ್ದು, ಕೇವಲ 26 ಶಾಲೆಗಳಲ್ಲಿ ಮಾತ್ರ 200ಕ್ಕಿಂತ ಹೆಚ್ಚು ವಿದ್ಯಾರ್ಥಿಗಳಿದ್ದಾರೆ. ಆದ ಕಾರಣ 118 ಮಂದಿ ಗೊಂದಲದಲ್ಲಿದ್ದಾರೆ.

ಇವರೇ ಮುಖ್ಯೋಪಾಧ್ಯಾಯರು 
ಕಾರ್ಕಳ ತಾಲೂಕಿನ ನಾಯರ್‌ಕೋಡು, ಕನ್ಯಾನ ಹಾಗೂ ಇನ್ನಾ ಶಾಲೆಗಳಲ್ಲಿ ದೈಹಿಕ ಶಿಕ್ಷಕರೇ ಮುಖ್ಯ ಶಿಕ್ಷಕರು. ಅದರಲ್ಲೂ ಇನ್ನಾ ಶಾಲೆಯ ರವೀಂದ್ರನ್‌ ಏಕೋಪಾಧ್ಯಾಯರು. ಇಂಥವುಗಳಿಗೆ ಆದೇಶದಲ್ಲಿ 
ಪರಿಹಾರ ಸೂಚಿಸದಿರುವುದು ಗೊಂದಲವನ್ನು ಹೆಚ್ಚಿಸಿದೆ. 

ಹೆಚ್ಚುವರಿ ದೈಹಿಕ ಶಿಕ್ಷಕರ ನಿಯೋಜನೆ ಕುರಿತು ತಂತ್ರಾಂಶದಲ್ಲಿ ಬದಲಾವಣೆಗಳನ್ನು ಕೈಗೊಳ್ಳುವ ಸಲುವಾಗಿ
ಆ. 26 ಹಾಗೂ 27ರಂದು ನಡೆಯಬೇಕಾಗಿದ್ದ ಕೌನ್ಸೆಲಿಂಗನ್ನು  ಮುಂದೂಡಲಾಗಿದೆ ಎಂದು ಇಲಾಖೆ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ.
ಶೇಷಶಯನ ಕಾರಿಂಜ
ಉಡುಪಿ ಜಿಲ್ಲಾ  ವಿದ್ಯಾಂಗ ಉಪನಿರ್ದೇಶಕ

ಶಿಕ್ಷಕರ ಎಲ್ಲ ಸಂಘಟನೆಗಳು 
ಹಾಗೂ ಶಿಕ್ಷಕ ಕ್ಷೇತ್ರದ ಜನಪ್ರತಿನಿಧಿ ಗಳು ಆಕ್ಷೇಪಿಸಿದ್ದರಿಂದ ಕೌನ್ಸೆಲಿಂಗ್‌ ನಿಲ್ಲಿಸಲಾಗಿದೆ. ಕನಿಷ್ಠ 100 ವಿದ್ಯಾರ್ಥಿಗಳಿರುವ ಶಾಲೆಗಳಿಗಾದರೂ ಶಿಕ್ಷಕರ ನೇಮಕವಾಗಬೇಕು ಎಂದು ಇಲಾಖೆಯ ಆಯುಕ್ತರನ್ನು 
ಆಗ್ರಹಿಸುತ್ತೇವೆ. ಈಗಾಗಲೇ ಜನಪ್ರತಿನಿಧಿಗಳ ಮೂಲಕ ಆಯುಕ್ತ ರಿಗೆ ಮನವಿ ಮಾಡಲಾಗಿದೆ, ಭರವಸೆಯೂ ಸಿಕ್ಕಿದೆ.
-ಗುಜ್ಜಾಡಿ ಚಂದ್ರಶೇಖರ ಶೆಟ್ಟಿ
ಉಡುಪಿ ಜಿಲ್ಲೆಯ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ
 

* ಶರತ್‌ ಶೆಟ್ಟಿ  ಬೆಳ್ಮಣ್‌

ಟಾಪ್ ನ್ಯೂಸ್

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.