ಸಾಲಿಗ್ರಾಮ ಪ.ಪಂ.: ಶಾಂತಿಯುತ ಮತದಾನ


Team Udayavani, Sep 1, 2018, 2:00 AM IST

saligrama-election-31-8.jpg

ಕೋಟ: ಸಾಲಿಗ್ರಾಮ ಪ.ಪಂ. ವ್ಯಾಪ್ತಿಯ 16 ವಾರ್ಡ್‌ಗಳಲ್ಲಿ ಶುಕ್ರವಾರ ಶಾಂತಿಯುತ ಮತದಾನ ನಡೆಯಿತು. ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗುತ್ತಿದ್ದಂತೆ ಹೆಚ್ಚಿನ ಸಂಖ್ಯೆಯ ಜನರು ಮತಕೇಂದ್ರಕ್ಕೆ ಆಗಮಿಸಿದರು. ಆದರೆ 9ರಿಂದ 1ಗಂಟೆಯ ತನಕ ಅಷ್ಟೇನು ಜನಸಂದಣಿ ಇರಲಿಲ್ಲ ಹಾಗೂ ಹಲವು ಮತಗಟ್ಟೆಗಳು ಬಿಕೋ ಎನ್ನುತ್ತಿದ್ದವು. ಮಧ್ಯಾಹ್ನ 3 ಗಂಟೆವರೆಗೆ 62.53ರಷ್ಟು ಮತಚಲಾವಣೆಯಾಗಿತ್ತು. ಇಲ್ಲಿನ ಖಾಸಗಿ ಹಿ.ಪ್ರಾ. ಶಾಲೆ ಪಾರಂಪಳ್ಳಿ-ಪಡುಕರೆ, ಗ್ರಾಮಕರಣಿಕರ ಕಚೇರಿ ಸಾಲಿಗ್ರಾಮ, ಸ.ಹಿ.ಪ್ರಾ. ಶಾಲೆ ಚಿತ್ರಪಾಡಿ, ಗಜಾನನ ಹಿ.ಪ್ರಾ.ಶಾಲೆ ತೋಡ್ಕಟ್ಟು, ಸ.ಹಿ.ಪ್ರಾ.ಶಾಲೆ ಕೋಟ, ನ್ಯೂ ಕಾರ್ಕಡ ಶಾಲೆ, ಗ್ರಂಥಾಲಯ ಕಟ್ಟಡ ಕಾರ್ಕಡ ಕಡಿದ ಹೆದ್ದಾರಿ, ಜಿ.ಸ.ಹಿ.ಪ್ರಾ.ಶಾಲೆ ಕಾರ್ಕಡ, ಪಿ.ಜಿ.ಹಿ. ಪ್ರಾ. ಶಾಲೆ ಪಾತಳಬೆಟ್ಟು ಗುಂಡ್ಮಿ, ಸ.ಪ್ರೌಢಶಾಲೆ ಗುಂಡ್ಮಿಯ ಮತಕೇಂದ್ರಗಳಲ್ಲಿ 16 ವಾರ್ಡ್‌ಗಳ ಮತದಾನ ನಡೆಯಿತು. ರಿಟರ್ನಿಂಗ್‌ ಆಫೀಸರ್‌ಗಳಾಗಿ ಲಲಿತಾ ಬಾೖ, ಲೋಕೇಶ್‌ ಕಾರ್ಯನಿರ್ವಹಿಸಿದರು.


ಕಾರ್ಕಡ ಶಾಲೆಯ ಮತಗಟ್ಟೆಯಲ್ಲಿ106 ವರ್ಷದ ಲಚ್ಚಿ ದೇವಾಡಿಗ ಮತದಾನ ಮಾಡಿದರು.

ಮತದಾನಕ್ಕೆ ಹಿರಿಯರು-ವೃದ್ಧರಿಗೆ ಆಸಕ್ತಿ
80-90 ವರ್ಷದ ವೃದ್ಧರು, ಅನಾರೋಗ್ಯ ಪೀಡಿತರು ಕೂಡ ಮನೆಯವರ ಸಹಾಯದಿಂದ ಆಸಕ್ತಿಯಿಂದ ಮತಕೇಂದ್ರಕ್ಕೆ ಆಗಮಿಸಿ ಮತದಾನ ಮಾಡಿದ ದೃಶ್ಯ ಎಲ್ಲ ಕಡೆಗಳಲ್ಲಿ ಕಂಡು ಬಂತು. ಕಾರ್ತಟ್ಟು ವಾರ್ಡ್‌ನಲ್ಲಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ 90 ವರ್ಷದ ರುದ್ರಮ್ಮ ಶೆಡ್ತಿ ಆ್ಯಂಬುಲೆನ್ಸ್‌ನಲ್ಲಿ ಬಂದು ಮತಚಲಾಯಿಸಿ ಪುನಃ ಆಸ್ಪತ್ರೆಗೆ ದಾಖಲಾಗಿದ್ದು ವಿಶೇಷವಾಗಿತ್ತು.

ಶಾಂತ ವಾತಾವರಣ
ಹೆಚ್ಚಿನ ಮತಕೇಂದ್ರದಲ್ಲಿ ಎದುರಾಳಿಗಳು ಹಾಗೂ ಕಾರ್ಯಕರ್ತರು ಒಟ್ಟಾಗಿ ನಿಂತು ತಮಾಷೆಯಾಗಿ ಶಾಂತಿಯುತವಾಗಿ ಮಾತುಕತೆಯಲ್ಲಿ ತೊಡಗಿದ್ದ ದೃಶ್ಯ ಕಂಡು ಬಂತು. ಕೆಲವು ಕಡೆ ಮತದಾರರಿಗೆ ವಾಹನ ವ್ಯವಸ್ಥೆ ಮಾಡಲಾಗಿತ್ತು.

ಪೊಲೀಸ್‌ ಬಂದೋಬಸ್ತ್
ಬ್ರಹ್ಮಾವರ ವೃತ್ತ ನಿರೀಕ್ಷಕ ಶ್ರೀಕಾಂತ್‌ ಮತಗಟ್ಟೆಗಳಿಗೆ ತೆರಳಿ ಕಾನೂನು ಸುವ್ಯವಸ್ಥೆಯ ಉಸ್ತುವಾರಿ ನೋಡಿಕೊಂಡರು. ಡಿವೈ.ಎಸ್‌.ಪಿ. ಕುಮಾರಸ್ವಾಮಿ ಮೇಲುಸ್ತುವಾರಿ ಹೊಣೆ ನಿರ್ವಹಿಸಿದರು. 15ಮಂದಿ ಮುಖ್ಯ ಪೇದೆಗಳು, ಒಂದು ಡಿ.ಆರ್‌. ವ್ಯಾನ್‌, 17ಪೇದೆ, ಓರ್ವ ಮುಖ್ಯ ಪೇದೆ ಕೋಟ ಠಾಣಾಧಿಕಾರಿ ನರಸಿಂಹ ಶೆಟ್ಟಿಯವರ ನೇತೃತ್ವದಲ್ಲಿ ಕರ್ತವ್ಯ ನಿರ್ವಹಿಸಿದರು.

ಟಾಪ್ ನ್ಯೂಸ್

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

signature

Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.