ಉಡುಪಿಯಲ್ಲಿ  ಶ್ರೀಕೃಷ್ಣ ಜನ್ಮಾಷ್ಟಮಿ ಸಡಗರ: ಭಕ್ತ ಜನಸಾಗರ


Team Udayavani, Sep 3, 2018, 6:00 AM IST

x-18.jpg

ಉಡುಪಿ: ಶ್ರೀಕೃಷ್ಣ ಮಠದಲ್ಲಿ ರವಿವಾರ ವಿಶೇಷ ಮಹಾಪೂಜೆ, ಶ್ರೀಕೃಷ್ಣಾಘ ಪ್ರದಾನ ಸಹಿತವಾದ ಶ್ರೀಕಷ್ಣ ಜನ್ಮಾಷ್ಟಮಿ ಸಡಗರದಲ್ಲಿ ಲಕ್ಷಾಂತರ ಭಕ್ತರು ಭಾಗಿಗಳಾದರು. ಪ‌ರ್ಯಾಯ ಶ್ರೀ ಪಲಿಮಾರು ಮಠಾಧೀಶ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಬೆಳಗ್ಗೆ ಲಕ್ಷ ತುಳಸಿ ಅರ್ಚನೆಯೊಂದಿಗೆ ಮಹಾಪೂಜೆ ನೆರವೇರಿಸಿದರು. ಶ್ರೀ ಅದಮಾರು ಮಠಾಧೀಶ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಶ್ರೀಕೃಷ್ಣನಿಗೆ ಸುವರ್ಣ ತೊಟ್ಟಿಲಿನಲ್ಲಿ ಬಾಲಕೃಷ್ಣನ ಅಲಂಕಾರವನ್ನು ಮಾಡಿದರು. ಅನಂತರ ಭೋಜನ ಶಾಲೆಯಲ್ಲಿ ಪರ್ಯಾಯ ಶ್ರೀಗಳು ಹಾಗೂ ಅದಮಾರು ಮಠದ ಕಿರಿಯ ಯತಿ ಶ್ರೀ ಈಶಪ್ರಿಯತೀರ್ಥ ಸ್ವಾಮೀಜಿ ಕೃಷ್ಣನಿಗೆ ರಾತ್ರಿ ಪೂಜೆಯ ಸಂದರ್ಭ ಸಮರ್ಪಿಸುವ ಲಡ್ಡು ತಯಾರಿಗೆ ಚಾಲನೆ ನೀಡಿದರು. ರಾತ್ರಿ ವಿಶೇಷ ಮಹಾಪೂಜೆಯ ಬಳಿಕ 11.48ಕ್ಕೆ ಪರ್ಯಾಯ ಶ್ರೀಗಳು ಶ್ರೀಕೃಷ್ಣಾರ್ಘ್ಯ ಸಮರ್ಪಿಸಿದರು. ಅನಂತರ ಭಕ್ತರಿಂದಲೂ ಶ್ರೀಕೃಷ್ಣಾಘ ಪ್ರದಾನ ನಡೆಯಿತು.

ಭಜನೆ, ಸ್ಪರ್ಧೆ, ವೇಷ ಸಡಗರ
ಬೆಳಗ್ಗೆ ವಿಶೇಷ ಭಜನೆ, ಮುದ್ದು ಕೃಷ್ಣ ವೇಷ, ಮೊಸರು ಕಡೆಯುವುದು ಮೊದ ಲಾದ ಸ್ಪರ್ಧೆಗಳು ನಡೆದವು. ಬೆಳಗ್ಗಿ ನಿಂದಲೇ ಶ್ರೀಕೃಷ್ಣ ದೇವರ ದರ್ಶನಕ್ಕೆ ಸರದಿ ಸಾಲು ಕಂಡು ಬಂತು. ರಥಬೀದಿ ಯಲ್ಲಿಯೂ ಅಪಾರ ಸಂಖ್ಯೆ ಯಲ್ಲಿ ಭಕ್ತರು ಸೇರಿ ದ್ದರು. ರಥಬೀದಿಗೆ ಹಲವು ಹುಲಿವೇಷ ತಂಡಗಳು ಆಗಮಿಸಿ ಪರ್ಯಾಯ ಶ್ರೀಗಳಿಂದ ಆಶೀರ್ವಾದ ಪಡೆದುಕೊಂಡು ಬಳಿಕ ಪ್ರದರ್ಶನ ನೀಡಿದವು. ಸಂಜೆ ಪ್ರವೀಣ್‌ ಗೋಡ್ಕಂಡಿ ಅವರ ಸಂಗೀತ ಕಾರ್ಯಕ್ರಮ ನಡೆಯಿತು.

ಕಂಗೊಳಿಸಿದ ಮಠ
ವಿಶೇಷ ಹೂವಿನ ಅಲಂಕಾರದಿಂದ ಶ್ರೀಕೃಷ್ಣ ಮಠ ಕಂಗೊಳಿಸುತ್ತಿದೆ. ಗರ್ಭ ಗುಡಿ, ಸುತ್ತುಪೌಳಿ, ಚಂದ್ರಶಾಲೆ, ತೀರ್ಥ ಮಂಟಪ, ಮಧ್ವ ಮಂಟಪ, ಸುಬ್ರಹ್ಮಣ್ಯ ಗುಡಿ, ನವಗ್ರಹ ಗುಡಿ ಮೊದಲಾ ದೆಡೆ ವಿಶೇಷ ಅಲಂಕಾರ ಮಾಡಲಾಗಿದೆ. ರಥಬೀದಿಯಲ್ಲಿ ರವಿ   ವಾರವೂ ಹೂ ಮಾರಾಟ ಜೋರಾಗಿತ್ತು.

ಶೀರೂರು ಶ್ರೀಗಳ ನೆನಪಿನಲ್ಲಿ…
ಜುಲೈಯಲ್ಲಿ ಅಸ್ತಂಗತರಾದ ಶೀರೂರು ಮಠಾಧೀಶ ಶ್ರೀ ಲಕ್ಷ್ಮೀವರ ತೀರ್ಥ ಶ್ರೀಪಾದರ ನೆನಪಿನಲ್ಲಿ ಶೀರೂರು ಮಠ, ಸೋದೆ ಮಠ ಮತ್ತು ರಂಜನ್‌ ಕಲ್ಕೂರ ಅವರ ಪ್ರಾಯೋಜ  ಕತ್ವ ದಲ್ಲಿ ವಿಟ್ಲಪಿಂಡಿ ಸಂದರ್ಭ ಶೀರೂರು ಮಠದ ಎದುರು ಹುಲಿ ವೇಷ ಸ್ಪರ್ಧೆ ನಡೆಯಲಿದೆ. ಬೈಲಕೆರೆ ಫ್ರೆಂಡ್ಸ್‌ ತಂಡ ಶೀರೂರು ಶ್ರೀಗಳ ಹೆಸರಿನಲ್ಲಿ ಹುಲಿವೇಷ ಹಾಕಿದೆ. ಶೀರೂರು ಶ್ರೀಗಳು ವಿಟ್ಲ ಪಿಂಡಿ ಯಂದು ಹುಲಿವೇಷ ಸ್ಪರ್ಧೆ ಸೇರಿ ದಂತೆ ವಿವಿಧ ಸಾಂಸ್ಕೃತಿಕ ಚಟುವಟಿಕೆ ಗಳನ್ನು ಆಯೋಜಿಸುತ್ತಿದ್ದ ಹಿನ್ನೆಲೆ ಯಲ್ಲಿ ರಥಬೀದಿಯಲ್ಲಿ ಸ್ಪರ್ಧೆಯನ್ನು ಆಯೋಜಿಸಲಾಗಿದೆ.

ಪೊಲೀಸ್‌ ಕಣ್ಗಾವಲು
ಸೋಮವಾರ ರಥಬೀದಿ ಮತ್ತು ಸುತ್ತಮುತ್ತ ಲಕ್ಷಾಂತರ ಮಂದಿ ಸೇರಲಿರುವ ಹಿನ್ನೆಲೆಯಲ್ಲಿ ಪೊಲೀಸರು ವಿಶೇಷ ನಿಗಾ ಇರಿಸಲಿದ್ದಾರೆ. ಮೆಟಲ್‌ ಡಿಟೆಕ್ಟರ್‌ಗಳನ್ನು ಈಗಾಗಲೇ ಅಳ ವಡಿಸ  ಲಾಗಿದೆ. ಪೊಲೀಸರು ಮಫ್ತಿ ಯಲ್ಲಿಯೂ ಇದ್ದು ಸರಗಳ್ಳರು ಸೇರಿ ದಂತೆ ಸಾರ್ವಜನಿಕರಿಗೆ ಕಿರುಕುಳ ನೀಡು ವವರ ಮೇಲೆ ಕಣ್ಣಿಡಲಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇಂದು ವಿಟ್ಲಪಿಂಡಿ ವೈಭವ
ಸೋಮವಾರ ಶ್ರೀಕೃಷ್ಣ ಮಠದಲ್ಲಿ 3 ಗಂಟೆಯ ವೇಳೆಗೆ ವಿಟ್ಲಪಿಂಡಿ (ಮೊಸರು ಕುಡಿಕೆ) ಉತ್ಸವ ಜರಗಲಿದೆ. ಗೋಪಾಲಕ ರಿಂದ ಮೊಸರು ಕುಡಿಕೆ ಒಡೆ ಯುವ ಕಾರ್ಯಕ್ರಮ, ಅಡಿಕೆ ಮರ ಏರುವ ಸ್ಪರ್ಧೆ, ಹುಲಿವೇಷ ಸ್ಪರ್ಧೆ ಇತ್ಯಾದಿ ಸಂಪನ್ನಗೊಳ್ಳಲಿವೆ. ಶ್ರೀಕೃಷ್ಣನ ಮೃಣ್ಮಯ ಮೂರ್ತಿ ಸಹಿತ ವಾದ ರಥೋತ್ಸವ ನಡೆಯಲಿದೆ. ಉತ್ಸವದಲ್ಲಿ ಶ್ರೀ ಅನಂತೇಶ್ವರ, ಶ್ರೀ ಚಂದ್ರಮೌಳೀಶ್ವರ ದೇವಸ್ಥಾನದ ಉತ್ಸವ ಮೂರ್ತಿಗಳೂ ಇರುತ್ತವೆ. ಬೆಳಗ್ಗೆ 10.30ರಿಂದ ನಗರದ ವಿವಿಧೆಡೆ ಮುಂಬಯಿಯ ಆಲಾರೆ ಗೋವಿಂದ ತಂಡದಿಂದ ದಹೀ ಹಂಡಿ (ಮೊಸರು ಕುಡಿಕೆ) ನಡೆಯಲಿದೆ. 

ಹಾಲುಪಾಯಸ ಸಹಿತ ಅನ್ನಪ್ರಸಾದ
ಸೋಮವಾರ ಬೆಳಗ್ಗೆ ಮಹಾ ಪೂಜೆ ನಡೆಯಲಿದೆ. 11ರಿಂದ ರಾಜಾಂಗಣ ದಲ್ಲಿ  ಹಾಲು ಪಾಯಸ ಮತ್ತು ಗುಂಡಿಟ್ಟು ಲಡ್ಡು ಸಹಿತವಾದ ಅನ್ನಪ್ರಸಾದ ವಿತರಣೆ ನಡೆಯಲಿದೆ. ಸಂಜೆ ಸಾಂಸ್ಕೃತಿಕ ಕಾರ್ಯ ಕ್ರಮ ಗಳು ನಡೆಯಲಿವೆ.

ಟಾಪ್ ನ್ಯೂಸ್

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

14-

Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್‌ ಬಿಜೆಪಿಗೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.