ಉಡುಪಿ: ರಸ್ತೆ ಮಧ್ಯೆ ಕೈಕೊಟ್ಟ 108 ಆ್ಯಂಬುಲೆನ್ಸ್ !
Team Udayavani, Sep 5, 2018, 9:28 AM IST
ಉಡುಪಿ: ನಗರದ ಜಂಕ್ಷನ್ನಲ್ಲಿ ಕೆಟ್ಟು ನಿಂತ 108 ಆರೋಗ್ಯ ಕವಚ ಆ್ಯಂಬುಲೆನ್ಸನ್ನು ಟ್ರಾಫಿಕ್ ಪೊಲೀಸರು ಮತ್ತು ಸಾರ್ವಜನಿಕರು ತಳ್ಳಿ ಚಾಲನೆಗೊಳಿಸಿ ರೋಗಿ ಸಕಾಲಕ್ಕೆ ಆಸ್ಪತ್ರೆ ಸೇರಲು ನೆರವಾದ ಘಟನೆ ಮಂಗಳವಾರ ನಡೆದಿದೆ.
ಮಂಗಳವಾರ ಸಂಜೆ 5.15ರ ಸುಮಾರಿಗೆ ಅಜ್ಜರಕಾಡು ಜಿಲ್ಲಾಸ್ಪತ್ರೆಯಿಂದ ಗಂಭೀರ ಸ್ಥಿತಿಯಲ್ಲಿದ್ದ ಹೃದ್ರೋಗಿ ಯೋರ್ವ ರನ್ನು 108 ಆ್ಯಂಬುಲೆನ್ಸ್ ಮೂಲಕ ಮಣಿಪಾಲ ಆಸ್ಪತ್ರೆಗೆ ಸಾಗಿಸಲಾಗುತ್ತಿತ್ತು. ಕಲ್ಸಂಕ ಜಂಕ್ಷನ್ನಲ್ಲಿ ಇದ್ದಕ್ಕಿದ್ದಂತೆ ವಾಹನ ನಿಂತು ಹೋಯಿತು. ಎಷ್ಟೇ ಪ್ರಯತ್ನಿಸಿದರೂ ವಾಹನ ಸ್ಟಾರ್ಟ್ ಆಗದೆ ಚಾಲಕ ಅಸಹಾಯಕನಾದ. ಆತಂಕಗೊಂಡ ರೋಗಿಯ ಮನೆಯವರು ಆ್ಯಂಬುಲೆನ್ಸ್ನೊಳಗೆ ಬೊಬ್ಬೆ ಹಾಕ ತೊಡಗಿದರು. ಕೂಡಲೇ ಸ್ಪಂದಿಸಿದ ಟ್ರಾಫಿಕ್ ಪೊಲೀಸ ರಿಬ್ಬರು ಆ್ಯಂಬುಲೆನ್ಸನ್ನು ತಳ್ಳಲಾರಂಭಿ ಸಿ ದರು. ಸ್ಥಳೀಯರೂ ಸೇರಿ ತಳ್ಳಿದಾಗ ಆ್ಯಂಬುಲೆನ್ಸ್ ಸ್ಟಾರ್ಟ್ ಆಯಿತು. ರೋಗಿಯನ್ನು ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಯಿತು.
ಹಿಂದೆಯೂ ಆಗಿತ್ತು
ಅಜ್ಜರಕಾಡು ಆಸ್ಪತ್ರೆಯಲ್ಲಿ ನಿಲುಗಡೆ ಯಾಗುವ ಈ ಆ್ಯಂಬುಲೆನ್ಸ್ ಇತ್ತೀಚೆಗೆ ಮಂಗಳೂರಿಗೆ ರೋಗಿ ಯೋರ್ವರನ್ನು ಕರೆದೊಯ್ಯುವ ಸಂದರ್ಭದಲ್ಲೂ ಅರ್ಧದಾರಿಯಲ್ಲಿ ಕೈಕೊಟ್ಟಿತ್ತು ಎಂದು ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್- ಬಿಜೆಪಿ ನೇರ ಹಣಾಹಣಿ
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
Pavagada: ಬೈಕ್ ಗೆ ಕಾಡು ಹಂದಿ ಡಿಕ್ಕಿಯಾಗಿ ಸವಾರ ಸಾವು
Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ
T20 World Cup; ರೋಹಿತ್, ವಿರಾಟ್ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?