ಗಾಂಧೀಜಿಯವರದು ಹೆಂಗರುಳು: ವೈದೇಹಿ
Team Udayavani, Sep 5, 2018, 11:20 AM IST
ಉಡುಪಿ: ಗಾಂಧೀಜಿಯಲ್ಲಿದ್ದುದು ಹೆಂಗರುಳು. ಹಾಗಾಗಿಯೇ ಅವರು ಎಲ್ಲರ ಬಗ್ಗೆಯೂ ಚಿಂತಿಸುತ್ತಾ ಒಳಿತನ್ನು ಬಯಸುತ್ತಿದ್ದರು ಎಂದು ಸಾಹಿತಿ ವೈದೇಹಿ ಅಭಿಪ್ರಾಯಪಟ್ಟರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಧಾರವಾಡದ ರಂಗಾಯಣ ಸಹಯೋಗದಲ್ಲಿ ರಥಬೀದಿ ಗೆಳೆಯರು ಹಾಗೂ ಎಂಜಿಎಂ ಗಾಂಧಿ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ಮಂಗಳವಾರ ಉಡುಪಿ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಜರಗಿದ “ಪಾಪು ಗಾಂಧಿ ಗಾಂಧಿ ಬಾಪು ಆದ ಕತೆ’ ಆಧರಿಸಿದ ರಂಗರೂಪಕದ ಪೂರ್ವದಲ್ಲಿ ನಡೆದ “ಗಾಂಧೀಜಿ ಚಿಂತನೆಯ ಪ್ರಸ್ತುತತೆ-ಒಂದು ಸಂವಾದ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಗಾಂಧೀಜಿಯವರ ಮಾತು, ಭಾವನೆಯಲ್ಲಿ ಹೆಣ್ತನವಿತ್ತು. ಹಾಗಾಗಿ ಅವರಿಗೆ ಎಲ್ಲರೂ ಮನುಷ್ಯರಾಗಿ ಕಾಣುತ್ತಿದ್ದರು. ದಲಿತರು, ಮಹಿಳೆಯರ ಬಗ್ಗೆ ಗಾಂಧೀಜಿಯವರಷ್ಟು ಯಾರೂ ಚಿಂತನೆ ಮಾಡಿಲ್ಲ. ವಿರೋಧಿಗಳು ಇರಬಾರದು ಎನ್ನುವ ಯುಗದಲ್ಲಿ ನಾವಿದ್ದೇವೆ. ಇಂತಹ ಸಂದರ್ಭದಲ್ಲಿ ಗಾಂಧಿ ನೆನಪಾಗುತ್ತಾರೆ ಎಂದು ಅಭಿಪ್ರಾಯಪಟ್ಟರು.
ಪ್ರೀತಿಯ ಜಗಳ
ಅಂಬೇಡ್ಕರ್ ಮತ್ತು ಗಾಂಧಿ ಶತ್ರುಗಳಾಗಿಯಲ್ಲ, ಗೆಳೆಯರಾಗಿ ಜಗಳವಾಡುತ್ತಿದ್ದರು. ಅದು ಗೌರವ, ಪ್ರೀತಿಯಿಂದ ಕೊನೆಗೊಳ್ಳುತ್ತಿತ್ತು. ಆದರೆ ನಾವು ಅವರಿಬ್ಬರ ನಡುವೆ ಭಿನ್ನತೆ ಸೃಷ್ಟಿಸಿದ್ದೇವೆ ಎಂದು ವೈದೇಹಿ ಹೇಳಿದರು.
ಗಾಂಧಿ ಅಧ್ಯಯನ ಕೇಂದ್ರದ ಸಂಯೋಜಕ ವಿನೀತ್ ರಾವ್ ಮಾತನಾಡಿ, ವ್ಯವಧಾನ ಮತ್ತು ಮುಕ್ತ ಮನಸ್ಸಿನಿಂದ ಮಾತ್ರ ಗಾಂಧೀಜಿಯನ್ನು ಅರ್ಥ ಮಾಡಿಕೊಳ್ಳಲು ಸಾಧ್ಯ. ಗಾಂಧೀಜಿಯನ್ನು ವೈಭವೀಕರಿಸದೆ ಸ್ವೀಕರಿಸಬೇಕು. ಆಗ ಅವರ ಪ್ರಸ್ತುತತೆ ಅನುಭವಕ್ಕೆ ನಿಲುಕುತ್ತದೆ ಎಂದರು.
ಚಿಂತಕ ಫಣಿರಾಜ್ ಮಾತನಾಡಿ, ಮನಪರಿವರ್ತನೆಯಿಂದ ಜಾತಿ ವೈಷಮ್ಯ ದೂರವಾಗುತ್ತದೆ ಎಂದು ಗಾಂಧಿ ಪ್ರತಿ
ಪಾದಿಸಿದ್ದರು. ಅಂಬೇಡ್ಕರ್ ಕೂಡ ಹಕ್ಕಿನ ಜತೆ ಸಹೋದರತ್ವವೂ ಬೇಕು ಎಂದಿದ್ದರು ಎಂದು ಹೇಳಿದರು.
ರಥಬೀದಿ ಗೆಳೆಯರು ಸಂಘಟನೆಯ ಅಧ್ಯಕ್ಷ ಮುರಲೀಧರ ಉಪಾಧ್ಯ, ಕಾರ್ಯದರ್ಶಿ ಸುಬ್ರಹ್ಮಣ್ಯ ಜೋಷಿ ಉಪಸ್ಥಿತರಿದ್ದರು. ಉಪಾಧ್ಯಕ್ಷ ನಾಗೇಶ್ ಉದ್ಯಾವರ ಸ್ವಾಗತಿಸಿದರು. ಸಂತೋಷ್ ಕುಮಾರ್ ಹಿರಿಯಡಕ ಕಾರ್ಯಕ್ರಮ ನಿರ್ವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ
Udupi; ಮಸ್ಟರಿಂಗ್ ಕೇಂದ್ರದಲ್ಲಿ ಸಕಲ ತಯಾರಿ
ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.
ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ