“ಸಮಾಜಕ್ಕೆ ಶ್ರೇಷ್ಠ ಪ್ರಜೆ ನೀಡುವ ಜವಾಬ್ದಾರಿ ಶಿಕ್ಷಕರದು’
Team Udayavani, Sep 6, 2018, 7:00 AM IST
ಕಾರ್ಕಳ: ಶಿಕ್ಷಕರಿಗೆ ಪಠ್ಯಪುಸ್ತಕದಲ್ಲಿರುವ ಪಾಠಗಳನ್ನು ಹೇಳಿಕೊಡುವ ಜವಾಬ್ದಾರಿ ಮಾತ್ರ ಇರುವುದಲ್ಲ. ಶ್ರೇಷ್ಠ ಪ್ರಜೆಯನ್ನು ಸಮಾಜಕ್ಕೆ ನೀಡುವ ಮಹತ್ತರ ಜವಾಬ್ದಾರಿ ಶಿಕ್ಷಕರಿಗೆ ಇದೆ. ಈ ನಿಟ್ಟಿನಲ್ಲಿ ಸಮಾಜದ ಅನೇಕ ವಿಚಾರಗಳನ್ನು ತಿಳಿದುಕೊಂಡು ಮೌಲ್ಯಯುತ ಶಿಕ್ಷಣವನ್ನು ಮಕ್ಕಳಿಗೆ ನೀಡಬೇಕು ಎಂದು ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಉದಯ ಎಸ್. ಕೋಟ್ಯಾನ್ ಹೇಳಿದರು.
ತಾಲೂಕು ಶಿಕ್ಷಕರ ದಿನಾಚರಣಾ ಸಮಿತಿ ವತಿಯಿಂದ ಸೆ. 5ರಂದು ಎಸ್ವಿಟಿ ಶಿಕ್ಷಣ ಸಂಸ್ಥೆಗಳ ಅಂಡಾರು ವಿಠಲ ರುಕ್ಮಿಣಿ ಕಿಣಿ ಸಾಂಸ್ಕೃತಿಕ ಸಭಾಭವನದಲ್ಲಿ ನಡೆದ ಶಿಕ್ಷಕರ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.
ನಮ್ಮ ದೇಶ ಸರ್ವಶ್ರೇಷ್ಠ ರಾಷ್ಟ್ರವಾಗ ಬೇಕಾದರೆ ಸುಶಿಕ್ಷಿತ ಪ್ರಜೆಗಳು ಸಮಾಜ ದಲ್ಲಿರಬೇಕು. ಅಂತಹ ಪ್ರಜೆಗಳನ್ನು ನಮ್ಮ ಶಿಕ್ಷಕರು ರೂಪಿಸುತ್ತಾರೆ. ತಮ್ಮ ಶಿಷ್ಯಂದಿರು ಯಾವತ್ತು ನಮ್ಮ ಗುರುಗಳೇದಂದು ಪೂಜಿಸುತ್ತಾರೆಯೇ ಆಗ ಆ ಶಿಕ್ಷಕರು ಶ್ರೇಷ್ಠ ಶಿಕ್ಷಕರೆನಿಸಿಕೊಳ್ಳುತ್ತಾರೆ ಎಂದರು.
ಸರ್ವಪಳ್ಳಿ ರಾಏಚಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಲಾ ಯಿತು. ನಿವೃತ್ತ ಶಿಕ್ಷಕರು ಹಾಗೂ ಸಾಧಕ ಶಿಕ್ಷಕರನ್ನು ಸಮ್ಮಾನಿಸಲಾಯಿತು. ತಾ.ಪಂ. ಅಧ್ಯಕ್ಷೆ ಮಾಲಿನಿ ಜೆ. ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಮೇ| ಹರ್ಷ ಕೆ.ಬಿ., ಜಿ.ಪಂ. ಸದಸ್ಯರಾದ ರೇಶ್ಮಾ ಉದಯ ಶೆಟ್ಟಿ ಇನ್ನಾ, ಜ್ಯೋತಿ ಹರೀಶ್ ಹಾಗೂ ಎಸ್ವಿಟಿ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಕೆ.ಪಿ. ಶೆಣೈ, ಸುರೇಂದ್ರ ಹೆಗ್ಡೆ, ಭಾಸ್ಕರ ಟಿ, ಹರೀಶ್ ನಾಯಕ್, ಸಿದ್ದಪ್ಪ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
MUST WATCH
ಹೊಸ ಸೇರ್ಪಡೆ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!