ಉಡುಪಿ: ಮಳೆ ಹಾನಿ: ಹೆಚ್ಚು ಪರಿಹಾರಧನ ಬಿಡುಗಡೆಗೆ ಒತ್ತಾಯ


Team Udayavani, Sep 7, 2018, 9:36 AM IST

udupi.jpg

ಉಡುಪಿ: ಜಿಲ್ಲೆಯಲ್ಲಿ ಮಳೆಯಿಂದ ಅಪಾರ ಹಾನಿಯಾಗಿದ್ದು, ಸರಕಾರ ಹೆಚ್ಚಿನ ಮೊತ್ತವನ್ನು ಬಿಡುಗಡೆ ಮಾಡಬೇಕು ಎಂದು ಜಿ.ಪಂ. ಸಭೆಯಲ್ಲಿ ಒತ್ತಾಯಿಸಲಾಗಿದೆ. ಗುರುವಾರ ಜಿ.ಪಂ. ಅಧ್ಯಕ್ಷ ದಿನಕರ ಬಾಬು ಅಧ್ಯಕ್ಷತೆಯಲ್ಲಿ ಜರಗಿದ ಸಭೆಯಲ್ಲಿ ಸದಸ್ಯೆ ರೇಶ್ಮಾ ಉದಯ ಶೆಟ್ಟಿ ಮಾತನಾಡಿ, 139 ಕೋ.ರೂ.ಗಳಷ್ಟು ನಷ್ಟ ಆಗಿರುವ ಬಗ್ಗೆ ಅಧಿಕಾರಿಗಳು ಅಂದಾಜು ಮಾಡಿದ್ದರೂ 14 ಕೋ.ರೂ. ಮಾತ್ರ ಬಿಡುಗಡೆಯಾಗಿದೆ ಎಂದರು. 
ಸದಸ್ಯರಾದ ಗೀತಾಂಜಲಿ ಸುವರ್ಣ, ಉದಯ ಕೋಟ್ಯಾನ್‌, ಜ್ಯೋತಿ ಹರೀಶ್‌ ಕೂಡ ಸಹಮತ ಸೂಚಿಸಿದರು. ತಹಶೀಲ್ದಾರ್‌ ಪ್ರತಿಕ್ರಿಯಿಸಿ ಪ್ರತೀ ತಾಲೂಕಿನ ಹಾನಿ ವಿವರ ಒದಗಿ ಸಿದರು. ಬಿಡುಗಡೆಯಾಗಿರುವ 14 ಕೋ.ರೂ ಮೊತ್ತ ವಿನಿಯೋಗಕ್ಕೆ ಅಂದಾಜು ಪಟ್ಟಿ ಸಿದ್ಧಪಡಿಸಲಾಗುತ್ತಿದೆ ಎಂದು ಸಿಇಒ ಶಿವಾನಂದ ಕಾಪಶಿ ಪ್ರತಿಕ್ರಿಯಿಸಿದರು.

ಬೆಳೆ ನಷ್ಟ 
5,357 ಹೆಕ್ಟೇರ್‌ ಅಡಿಕೆ ಬೆಳೆಗೆ ನಷ್ಟಆಗಿದೆ. ಸಮೀಕ್ಷೆ ನಡೆಯುತ್ತಿದ್ದು, ವರದಿ ಸಲ್ಲಿಸಲಾಗುವುದು ಎಂದು ತೋಟಗಾರಿಕೆ ಅಧಿಕಾರಿ ತಿಳಿಸಿದರು. 354 ರೈತರಿಗೆ ನಷ್ಟವಾಗಿದ್ದು 273 ಮಂದಿಗೆ ಪರಿಹಾರ ನೀಡಲಾಗಿದೆ ಎಂದು ಕೃಷಿ ಅಧಿಕಾರಿಗಳು ಮಾಹಿತಿ ನೀಡಿದರು. ಶುಕ್ರವಾರ ಆಗಮಿಸುವ ಸಿಎಂ ಬಳಿ ಹೆಚ್ಚು ಮೊತ್ತಕ್ಕೆ ಬೇಡಿಕೆ ಸಲ್ಲಿಸ ಬೇಕು ಎಂದು ಸದಸ್ಯರು ಹೇಳಿದರು. 

ಟೋಲ್‌ಗೆ ವಿರೋಧ: ನಿರ್ಣಯ 
ಒಳರಸ್ತೆಗಳಲ್ಲಿ ಟೋಲ್‌ ಸಂಗ್ರಹಿಸಬಾರದು ಹಾಗೂ ಹೆದ್ದಾರಿಯಲ್ಲಿಯೂ ಸ್ಥಳೀಯ ವಾಹನಗಳಿಂದ ಟೋಲ್‌ ಸಂಗ್ರಹಿಸಬಾರದು ಎಂದು ಜಿ.ಪಂ.ನಲ್ಲಿ ನಿರ್ಣಯ ಕೈಗೊಳ್ಳಲಾಯಿತು. 

ಬೆರಳಚ್ಚು ಸಮಸ್ಯೆ ಆಗದು
ಬೆರಳಚ್ಚು ಸರಿಯಾಗದೆ ಆಧಾರ್‌ ದೊರೆಯುತ್ತಿಲ್ಲ ಎಂದು ಸದಸ್ಯರು ದೂರಿದಾಗ ಅಧಿಕಾರಿಗಳು, ಎಷ್ಟು ಪಡೆ ಯಲು ಸಾಧ್ಯವೋ ಅಷ್ಟು ಪಡೆದರೂ ಸಾಕಾಗುತ್ತದೆ. ಅಂಥ ತಂತ್ರಜ್ಞಾನ ಆಧಾರ್‌ ಕೇಂದ್ರದಲ್ಲಿದೆ. ಐರಿಸ್‌ ಸ್ಕ್ಯಾನ್‌ ಕೂಡ ಪಡೆಯುವುದರಿಂದ ಸಮಸ್ಯೆಯಾಗದು. ಹಾಸಿಗೆಯಲ್ಲೇ ಇರುವವರು ಆಧಾರ್‌ ಕೇಂದ್ರಗಳಿಗೆ ಬರಬೇಕಾಗಿಲ್ಲ. ಸಿಬಂದಿ ತೆರಳಿ ಆಧಾರ್‌ ಮಾಡಿಸಿಕೊಡುತ್ತಿದ್ದಾರೆ ಎಂದರು.

ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ವಿಧಾನ ಪರಿಷತ್‌ ಸದಸ್ಯ ಪ್ರತಾಪಚಂದ್ರ ಶೆಟ್ಟಿ, ಜಿ.ಪಂ. ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆ. ಬಾಬು ಶೆಟ್ಟಿ, ಶಶಿಕಾಂತ ಪಡುಬಿದ್ರಿ, ಉದಯ ಎಸ್‌. ಕೋಟ್ಯಾನ್‌, ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ್‌ ರಾವ್‌ ಉಪಸ್ಥಿತರಿದ್ದರು.

ಬಟವಾಡಿ ಸುರೇಶ್‌, ಸುಮಿತ್‌ ಶೆಟ್ಟಿ, ಗೌರಿ ದೇವಾಡಿಗ, ದಿವ್ಯಶ್ರೀ ಅಮೀನ್‌, ಶಿಲ್ಪಾ ಜಿ. ಸುವರ್ಣ, ಚಂದ್ರಿಕಾ ಕೇಳ್ಕರ್‌ ಚರ್ಚೆಗಳಲ್ಲಿ ಪಾಲ್ಗೊಂಡರು. ಸಿಎಂ ಭೇಟಿ ಹಿನ್ನೆಲೆಯಲ್ಲಿ ಜಿ.ಪಂ. ಸಭೆ ಯನ್ನು ಮಧ್ಯಾಹ್ನದವರೆಗೆ ಮಾತ್ರ ನಡೆಸಿ ಸೆ.11ಕ್ಕೆ ಮುಂದೂಡಲಾಯಿತು.

ಹಳೆ ಅರ್ಜಿಗೆ ರೇಷನ್‌ ಕಾರ್ಡ್‌ ಇಲ್ಲ
ಅರ್ಜಿ ಸಲ್ಲಿಸಿದವರಿಗೆ ರೇಷನ್‌ ಕಾರ್ಡ್‌ ಸಿಕ್ಕಿಲ್ಲ ಎಂದು ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದರು. ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಅಧಿಕಾರಿಗಳು ಪ್ರತಿಕ್ರಿಯಿಸಿ, 2018ರ ಜುಲೈಗಿಂತ ಮೊದಲು ಕುಟುಂಬದ ಎಲ್ಲರ ಆದಾಯ ಪ್ರಮಾಣ ಪತ್ರವನ್ನು ನೀಡಬೇಕಿತ್ತು. ನೀಡದವರಿಗೆ ಕಾರ್ಡ್‌ ಸಿಕ್ಕಿಲ್ಲ. ಜುಲೈ ಅನಂತರ ಕುಟುಂಬದ ಒಬ್ಬ ಸದಸ್ಯನ ಆದಾಯ ಪ್ರಮಾಣ ಪತ್ರ ಸಾಕು ಎಂಬ ನಿಯಮ ಜಾರಿಗೆ ಬಂದಿದೆ. ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ ಎಂದರು. 

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.