ರಾಷ್ಟ್ರೀಯತೆ ಪ್ರೀತಿಯ ಸೆಲೆಯಾಗಬೇಕು


Team Udayavani, Sep 7, 2018, 10:43 AM IST

milap.jpg

 ಉಡುಪಿ: ಅಹಂ ವಿನಾ ಮಾತೃಭೂಮಿಯ ಮೇಲೆ ಪ್ರೀತಿಯಷ್ಟೇ ಇರುವ ರಾಷ್ಟ್ರೀಯತೆ ಇಂದಿನ ಅಗತ್ಯ ಎಂದು ನಾಟಕಕಾರ, ಸಾಹಿತ್ಯ ಮತ್ತು ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪಂಜಾಬಿನ ರಂಗತಜ್ಞ ಅತಮ್‌ಜಿತ್‌ ಸಿಂಗ್‌ ಅಭಿಪ್ರಾಯಪಟ್ಟಿದ್ದಾರೆ. 

ಗುರುವಾರ ಮಣಿಪಾಲದ ಡಾ| ಟಿಎಂಎ ಪೈ ಸಭಾಂಗಣದಲ್ಲಿ ಮಣಿಪಾಲ್‌ ಇಂಟರ್‌ನ್ಯಾಶನಲ್‌ ಲಿಟರೇಚರ್‌ ಆ್ಯಂಡ್‌ ಆರ್ಟ್ಸ್ ಪ್ಲಾಟ್‌ ಫಾರಂ (ಮಿಲಾಪ್‌) ಆಯೋಜಿಸಿದ “ಎ ಮಿಲಿನಿಯಮ್‌ ರಿವಿಸಿಟೆಡ್‌: ಟ್ರೆಡಿಶನ್‌ ಆ್ಯಂಡ್‌ ಟ್ರಾನ್ಸ್‌ಫಾರ್ಮೇಶನ್‌’ ವಾರ್ಷಿಕ ಉತ್ಸವದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಅವರು, ರಾಷ್ಟ್ರೀಯತೆ ಎನ್ನುವುದು ಪ್ರೀತಿಯ ಸೆಲೆಯಾಗಬೇಕೇ ವಿನಾ ಬೆದರಿಸುವ ಬೆತ್ತದಂತಿರಬಾರದು ಎಂದರು. 

ಹಿಂಸೆಯ ಪ್ರಶ್ನೆಗೆ ಮೌನದ ಉತ್ತರವಿರುತ್ತದೆ. ಖಡ್ಗದಿಂದ ನೆತ್ತರು ಹರಿಸುವ ಬದಲು ಲೇಖನಿಯ ಮೂಲಕ ಉತ್ತರ ಹುಡುಕುವ ಪ್ರಯತ್ನ ಮಾಡಬೇಕು. ಪರಂಪರೆಯ ಭದ್ರ ಪಂಚಾಂಗವಿಲ್ಲದೆ ಕಟ್ಟಡ ಕಟ್ಟಬಾರದು. ಪರಂಪರೆ, ವಸುಧೈವ ಕುಟುಂಬಕಂ, ಸತ್ಯ, ಕಲ್ಯಾಣರಾಜ್ಯ, ಡಿವೈನ್‌ ಪವರ್‌ ಈ ಪಂಚತಣ್ತೀಗಳನ್ನು ಡಾ| ಕರಣ್‌ ಸಿಂಗ್‌ ಪ್ರತಿಪಾದಿಸುತ್ತಾರೆ. ಇದುವೇ ನಮ್ಮ ಭವಿಷ್ಯ ಮತ್ತು ಭಾತೃತ್ವದ ಮೂಲ ಎಂದರು.

ಬೇರೆ ಬೇರೆ ಭಾಷೆಗಳ ನಡುವೆ ಸೇತು ನಿರ್ಮಿಸುವ ಪ್ರಯತ್ನ ನಡೆಯಬೇಕು. ಜ್ಞಾನದಲ್ಲಿ ಹಿರಿಯ, ಕಿರಿಯ ಭೇದ ಸಲ್ಲದು. ವಿವಿಧ ಕ್ಷೇತ್ರಗಳ ವಿಚಾರಗಳ ಮೇಲೆ ಬೆಳಕು ಚೆಲ್ಲುವ ಮಿಲಾಪ್‌ ಸಾಹಿತ್ಯ ಸಮ್ಮೇಳನ ಆದರ್ಶಪ್ರಾಯವಾಗಿದೆ ಎಂದು ಸಾಹಿತಿ ಡಾ| ಎಚ್‌.ಎಸ್‌. ಶಿವಪ್ರಕಾಶ್‌ ತಮ್ಮ ದಿಕ್ಸೂಚಿ ಭಾಷಣದಲ್ಲಿ ಅಭಿಪ್ರಾಯ ಪಟ್ಟರು. 

ಮಣಿಪಾಲ ವಿ.ವಿ. ಕುಲಪತಿ ಡಾ| ಎಚ್‌. ವಿನೋದ ಭಟ್‌ ಅವರು ತಮ್ಮ ವಿ.ವಿ.ಯಲ್ಲಿ ಕಲೆ, ಸಾಹಿತ್ಯ ಚಟುವಟಿಕೆಗಳಿಗೂ ಅವಕಾಶ ನೀಡುತ್ತಿರುವುದಕ್ಕೆ ಈ ಸಮ್ಮೇಳನ ಸಾಕ್ಷಿ ಎಂದರು. ಸಮ್ಮೇಳನದ ಸಂಚಾಲಕಿ ಡಾ| ನೀತಾ ಇನಾಂದಾರ್‌ ಸ್ವಾಗತಿಸಿದರು. ಮಣಿಪಾಲ್‌ ಯುನಿವರ್ಸಲ್‌ ಪ್ರಸ್‌ ಮುದ್ರಿಸಿದ ಡಾ| ಕೆ.ವಿ. ಅಕ್ಷರ ಮತ್ತು ಮೈತ್ರೇಯಿ ಅವರ ಎರಡು ಪುಸ್ತಕಗಳನ್ನು ಬಿಡು ಗಡೆಗೊಳಿಸಲಾಯಿತು. 

ಹುಟ್ಟಿದಲ್ಲಿಗೆ ಬರುವ ಮೀನುಗಳು!
 ಕೆನಡಾದ ಕೆಂಬುಜ್‌ ನದಿಯ ಪ್ರವಾಹದಲ್ಲಿ 1,400 ಕಿ.ಮೀ. ದೂರ ಸಾಗುವ ಮೀನುಗಳು ಕೊನೆಗೆ ಹುಟ್ಟಿದಲ್ಲಿಗೆ ವಾಪಸು ಬರುತ್ತವೆ. ಹಾಗೆ ಬರುವಾಗ ಅವು ಪ್ರವಾಹಕ್ಕೆ ಎದುರಾಗಿ ಈಜಬೇಕಾಗುತ್ತದೆ. ಮಾನವರೂ ತಮ್ಮ ರಾಷ್ಟ್ರೀಯತೆಯ ಬಗ್ಗೆ ಮರು ಚಿಂತನೆ ನಡೆಸಬೇಕು. ವಿದೇಶವಾಸಿಗಳು ಸ್ವದೇಶಕ್ಕೆ ಮರಳಬೇಕು ಎಂದು ಅತಮ್‌ಜಿತ್‌ ಸಿಂಗ್‌ ಕರೆ ನೀಡಿದರು.  

ಟಾಪ್ ನ್ಯೂಸ್

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.