ರಾಷ್ಟ್ರೀಯತೆ ಪ್ರೀತಿಯ ಸೆಲೆಯಾಗಬೇಕು


Team Udayavani, Sep 7, 2018, 10:43 AM IST

milap.jpg

 ಉಡುಪಿ: ಅಹಂ ವಿನಾ ಮಾತೃಭೂಮಿಯ ಮೇಲೆ ಪ್ರೀತಿಯಷ್ಟೇ ಇರುವ ರಾಷ್ಟ್ರೀಯತೆ ಇಂದಿನ ಅಗತ್ಯ ಎಂದು ನಾಟಕಕಾರ, ಸಾಹಿತ್ಯ ಮತ್ತು ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪಂಜಾಬಿನ ರಂಗತಜ್ಞ ಅತಮ್‌ಜಿತ್‌ ಸಿಂಗ್‌ ಅಭಿಪ್ರಾಯಪಟ್ಟಿದ್ದಾರೆ. 

ಗುರುವಾರ ಮಣಿಪಾಲದ ಡಾ| ಟಿಎಂಎ ಪೈ ಸಭಾಂಗಣದಲ್ಲಿ ಮಣಿಪಾಲ್‌ ಇಂಟರ್‌ನ್ಯಾಶನಲ್‌ ಲಿಟರೇಚರ್‌ ಆ್ಯಂಡ್‌ ಆರ್ಟ್ಸ್ ಪ್ಲಾಟ್‌ ಫಾರಂ (ಮಿಲಾಪ್‌) ಆಯೋಜಿಸಿದ “ಎ ಮಿಲಿನಿಯಮ್‌ ರಿವಿಸಿಟೆಡ್‌: ಟ್ರೆಡಿಶನ್‌ ಆ್ಯಂಡ್‌ ಟ್ರಾನ್ಸ್‌ಫಾರ್ಮೇಶನ್‌’ ವಾರ್ಷಿಕ ಉತ್ಸವದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಅವರು, ರಾಷ್ಟ್ರೀಯತೆ ಎನ್ನುವುದು ಪ್ರೀತಿಯ ಸೆಲೆಯಾಗಬೇಕೇ ವಿನಾ ಬೆದರಿಸುವ ಬೆತ್ತದಂತಿರಬಾರದು ಎಂದರು. 

ಹಿಂಸೆಯ ಪ್ರಶ್ನೆಗೆ ಮೌನದ ಉತ್ತರವಿರುತ್ತದೆ. ಖಡ್ಗದಿಂದ ನೆತ್ತರು ಹರಿಸುವ ಬದಲು ಲೇಖನಿಯ ಮೂಲಕ ಉತ್ತರ ಹುಡುಕುವ ಪ್ರಯತ್ನ ಮಾಡಬೇಕು. ಪರಂಪರೆಯ ಭದ್ರ ಪಂಚಾಂಗವಿಲ್ಲದೆ ಕಟ್ಟಡ ಕಟ್ಟಬಾರದು. ಪರಂಪರೆ, ವಸುಧೈವ ಕುಟುಂಬಕಂ, ಸತ್ಯ, ಕಲ್ಯಾಣರಾಜ್ಯ, ಡಿವೈನ್‌ ಪವರ್‌ ಈ ಪಂಚತಣ್ತೀಗಳನ್ನು ಡಾ| ಕರಣ್‌ ಸಿಂಗ್‌ ಪ್ರತಿಪಾದಿಸುತ್ತಾರೆ. ಇದುವೇ ನಮ್ಮ ಭವಿಷ್ಯ ಮತ್ತು ಭಾತೃತ್ವದ ಮೂಲ ಎಂದರು.

ಬೇರೆ ಬೇರೆ ಭಾಷೆಗಳ ನಡುವೆ ಸೇತು ನಿರ್ಮಿಸುವ ಪ್ರಯತ್ನ ನಡೆಯಬೇಕು. ಜ್ಞಾನದಲ್ಲಿ ಹಿರಿಯ, ಕಿರಿಯ ಭೇದ ಸಲ್ಲದು. ವಿವಿಧ ಕ್ಷೇತ್ರಗಳ ವಿಚಾರಗಳ ಮೇಲೆ ಬೆಳಕು ಚೆಲ್ಲುವ ಮಿಲಾಪ್‌ ಸಾಹಿತ್ಯ ಸಮ್ಮೇಳನ ಆದರ್ಶಪ್ರಾಯವಾಗಿದೆ ಎಂದು ಸಾಹಿತಿ ಡಾ| ಎಚ್‌.ಎಸ್‌. ಶಿವಪ್ರಕಾಶ್‌ ತಮ್ಮ ದಿಕ್ಸೂಚಿ ಭಾಷಣದಲ್ಲಿ ಅಭಿಪ್ರಾಯ ಪಟ್ಟರು. 

ಮಣಿಪಾಲ ವಿ.ವಿ. ಕುಲಪತಿ ಡಾ| ಎಚ್‌. ವಿನೋದ ಭಟ್‌ ಅವರು ತಮ್ಮ ವಿ.ವಿ.ಯಲ್ಲಿ ಕಲೆ, ಸಾಹಿತ್ಯ ಚಟುವಟಿಕೆಗಳಿಗೂ ಅವಕಾಶ ನೀಡುತ್ತಿರುವುದಕ್ಕೆ ಈ ಸಮ್ಮೇಳನ ಸಾಕ್ಷಿ ಎಂದರು. ಸಮ್ಮೇಳನದ ಸಂಚಾಲಕಿ ಡಾ| ನೀತಾ ಇನಾಂದಾರ್‌ ಸ್ವಾಗತಿಸಿದರು. ಮಣಿಪಾಲ್‌ ಯುನಿವರ್ಸಲ್‌ ಪ್ರಸ್‌ ಮುದ್ರಿಸಿದ ಡಾ| ಕೆ.ವಿ. ಅಕ್ಷರ ಮತ್ತು ಮೈತ್ರೇಯಿ ಅವರ ಎರಡು ಪುಸ್ತಕಗಳನ್ನು ಬಿಡು ಗಡೆಗೊಳಿಸಲಾಯಿತು. 

ಹುಟ್ಟಿದಲ್ಲಿಗೆ ಬರುವ ಮೀನುಗಳು!
 ಕೆನಡಾದ ಕೆಂಬುಜ್‌ ನದಿಯ ಪ್ರವಾಹದಲ್ಲಿ 1,400 ಕಿ.ಮೀ. ದೂರ ಸಾಗುವ ಮೀನುಗಳು ಕೊನೆಗೆ ಹುಟ್ಟಿದಲ್ಲಿಗೆ ವಾಪಸು ಬರುತ್ತವೆ. ಹಾಗೆ ಬರುವಾಗ ಅವು ಪ್ರವಾಹಕ್ಕೆ ಎದುರಾಗಿ ಈಜಬೇಕಾಗುತ್ತದೆ. ಮಾನವರೂ ತಮ್ಮ ರಾಷ್ಟ್ರೀಯತೆಯ ಬಗ್ಗೆ ಮರು ಚಿಂತನೆ ನಡೆಸಬೇಕು. ವಿದೇಶವಾಸಿಗಳು ಸ್ವದೇಶಕ್ಕೆ ಮರಳಬೇಕು ಎಂದು ಅತಮ್‌ಜಿತ್‌ ಸಿಂಗ್‌ ಕರೆ ನೀಡಿದರು.  

ಟಾಪ್ ನ್ಯೂಸ್

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Udyavara: ತಪಾಸಣೆ ನಿರತ ಕಾರಿಗೆ ಕಾರು ಢಿಕ್ಕಿ; ಮಹಿಳೆಗೆ ಗಾಯ

Udyavara: ತಪಾಸಣೆ ನಿರತ ಕಾರಿಗೆ ಕಾರು ಢಿಕ್ಕಿ; ಮಹಿಳೆಗೆ ಗಾಯ

Udupi; ಕಾರು ಢಿಕ್ಕಿ: ಸ್ಕೂಟರ್‌ ಸವಾರ ಆಸ್ಪತ್ರೆಗೆ

Udupi; ಕಾರು ಢಿಕ್ಕಿ: ಸ್ಕೂಟರ್‌ ಸವಾರ ಆಸ್ಪತ್ರೆಗೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.