ಹೆಬ್ರಿ: ಸಂಪೂರ್ಣ ಪ್ಲಾಸ್ಟಿಕ್ ನಿಷೇಧ ಜಾಥಾ
Team Udayavani, Sep 8, 2018, 7:00 AM IST
ಹೆಬ್ರಿ: ಹೆಬ್ರಿ ಗ್ರಾ.ಪಂ.ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಬಳಕೆ ಸಂಪೂರ್ಣವಾಗಿ ತ್ಯಜಿಸುವ ಬಗ್ಗೆ ಗುರುವಾರ ಹೆಬ್ರಿ ಸರಕಾರಿ ಪ.ಪೂ.ಕಾಲೇಜು ವಿದ್ಯಾರ್ಥಿಗಳು,ಪಂಚಾಯತ್ ವತಿಯಿಂದ ಪ್ಲಾಸ್ಟಿಕ್ ನಿಷೇಧದ ಘೋಷಣೆ ಮೂಲಕ ಹೆಬ್ರಿ ಪ್ರಮುಖ ಬೀದಿಗಳಲ್ಲಿ ಜಾಥಾ ನಡೆಯಿತು.
ಪ್ಲಾಸ್ಟಿಕ್ ಬಳಕೆ ಮಾಡದೆ ಬಟ್ಟೆ,ಪೇಪರ್ ಬ್ಯಾಗ್ಗಳನ್ನು ಬಳಸಿ ಪರಿಸರ ಮೇಲೆ ಆಗುವ ಹಾನಿ ತಡೆಗಟ್ಟವ ಕುರಿತು ತಾ. ಪಂ.ಸದಸ್ಯರು,ಗ್ರಾ.ಪಂ.ಸದಸ್ಯರು,ಶಾಲಾ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಸೆ.15ರ ತನಕ ಗಡು
ಹೆಬ್ರಿ ಗ್ರಾ.ಪಂ.ವ್ಯಾಪ್ತಿಯಲ್ಲಿ ಯಾವುದೇ ಅಂಗಡಿಯವರು ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್ನ್ನು ಮಾರಾಟ ಮಾಡುವುದು ಸಂಪೂರ್ಣ ನಿಲ್ಲಿಸಬೇಕು. ಈವರೆಗೆ ಇದ್ದ ಕ್ಯಾರಿಬ್ಯಾಗ್ನ್ನು ಹಿಂದಿರುಗಿಸಲು ಸೆ.15ರ ವರೆಗೆ ಕಾಲಾವಕಾಶ ಪಂಚಾಯತ್ನಿಂದ ನೀಡಲಾಗಿದೆ.ಅಂಗಡಿ ಮಾಲಕರು ಗ್ರಾಹಕರಿಗೆ ಬಟ್ಟೆ ಚೀಲ ತರುವಂತೆ ವಿನಂತಿಸಬೇಕು ಎಂದು ಪಂಚಾಯತ್ ಅಂಗಡಿಗಳಿಗೆ ಸೂಚನೆ ನೀಡಿದೆ.
ತಪ್ಪಿದ್ದಲ್ಲಿ ದಂಡ
ಹೆಬ್ರಿ ಗ್ರಾ.ಪಂ.ವ್ಯಾಪ್ತಿಯಲ್ಲಿ ಸಂಪೂರ್ಣ ಪ್ಲಾಸ್ಟಿಕ್ ನಿಷೇಧ ಮಾಡುವ ಗುರಿಯನ್ನು ಹೆಬ್ರಿ ಗ್ರಾ.ಪಂ.ಹೊಂದಿದ್ದು ಇದಕ್ಕೆ ಅಂಗಡಿ ಮಾಲಕರು ,ಗ್ರಾಹಕರು ಸಹಕರಿಸಬೇಕು. ತಪ್ಪಿದಲ್ಲಿ ಅಂಗಡಿ ಮಾಲಕರಿಗೆ ದಂಡ ವಿಧಿಸಲಾಗುವುದು ಎಂದು ಹೆಬ್ರಿ ಪಂಚಾಯತ್ ತಿಳಿಸಿದೆ.
ಪ್ಲಾಸ್ಟಿಕ್ ಮುಕ್ತ ಗ್ರಾಮಕ್ಕೆ ಸಹಕರಿಸಿ
ಪ್ಲಾಸ್ಟಿಕ್ ಬಳಕೆಯಿಂದ ನಮ್ಮ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವುದರ ಜತೆಗೆ ಪರಿಸರ ಹಾಳುಗುತ್ತದೆ.
ಪ್ರತಿಯೊಬ್ಬ ಪ್ರಜೆಯೂ ಸ್ವಯಂ ಪ್ರೇರಿತವಾಗಿ ಪ್ಲಾಸ್ಟಿಕ್ ಬಳಸುವುದಿಲ್ಲ ಎಂಬ ತೀ ರ್ಮಾನಕ್ಕೆ ಬಂದಾಗ ಪ್ಲಾಸ್ಟಿಕ್ ಬಳಕೆ ಸಂಪೂರ್ಣ ನಿಲ್ಲಸಬಹುದಾಗಿದ್ದು ಗ್ರಾಮಸ್ಥರು , ಅಂಗಡಿ ಮಾಲಕರು ಪಂಚಾಯತ್ ಈ ಅಂದೋಲನಕ್ಕೆ ಸಹಕರಿಸಿ ಪ್ಲಾಸ್ಟಿಕ್ ಮುಕ್ತ ಗ್ರಾಮ ಮಾಡಲು ಕೈಜೋಡಿಸಬೇಕು
– ವಿಜಯಾ ಪಂಚಾಯತ್ ಅಭಿವೃದ್ಧಿ ಅಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್