ಮರಳು ಸುಲಭವಾಗಿ ಸಿಗಲಿ : ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚನೆ


Team Udayavani, Sep 8, 2018, 3:30 AM IST

maralu-cm-8-9.jpg

ಉಡುಪಿ: ಜನಸಾಮಾನ್ಯರಿಗೆ ಅಡಚಣೆ ಇಲ್ಲದ ತ್ವರಿತವಾಗಿ ಮರಳು ಸಿಗುವಂತೆ ಕ್ರಮ ಕೈಗೊಳ್ಳಿ – ಇದು ಶುಕ್ರವಾರ ಜಿ.ಪಂ. ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರಗತಿ ಪರಿಶೀಲನ ಸಭೆಯಲ್ಲಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅಧಿಕಾರಿಗಳಿಗೆ ನೀಡಿರುವ ಸೂಚನೆ. ಸಾಂಪ್ರದಾಯಿಕ ಮರಳುಗಾರಿಕೆಗೆ ಮಾತ್ರ ಅವಕಾಶ ನೀಡಬೇಕು. ಜಿಲ್ಲೆಯಲ್ಲಿ ಮರಳು ದಿಣ್ಣೆಗಳನ್ನು ಗುರುತಿಸುವ ಸಂಬಂಧ ಸುರತ್ಕಲ್‌ ಎನ್‌ಐಟಿಕೆ ತಜ್ಞರ ವರದಿ ಅನುಸರಿಸಿ ಕ್ರಮ ಕೈಗೊಳ್ಳಲಾಗುವುದು. ಮರಳು ಸಮಸ್ಯೆ ಪರಿಹಾರಕ್ಕೆ ಶೀಘ್ರದಲ್ಲೇ ಕರಾವಳಿ ಭಾಗದ ಶಾಸಕರೊಂದಿಗೆ ಬೆಂಗಳೂರಿನಲ್ಲಿ ಉನ್ನತ ಮಟ್ಟದ ಸಭೆ ನಡೆಸಲಾಗುವುದು ಎಂದರು.

ಪಡಿತರ ಚೀಟಿ ಸಮಸ್ಯೆ
ಪಡಿತರ ಚೀಟಿಗೆ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಹೊರಗುತ್ತಿಗೆ ಸಿಬಂದಿ ಮೂಲಕ ತಿಂಗಳೊಳಗೆ ವಿಲೇವಾರಿಗೊಳಿಸಿ ಕಾರ್ಡ್‌ಗಳನ್ನು ತ್ವರಿತವಾಗಿ ಕಳುಹಿಸಬೇಕು ಎಂದು ಜಿಲ್ಲಾಧಿಕಾರಿಗೆ ಸೂಚಿಸಿದರು.

ಕುಡಿಯುವ ನೀರು: ಸಭೆ
ಕುಡಿಯುವ ನೀರು ಯೋಜನೆಯ ಹೊಸ ಕಾಮಗಾರಿಗಳಿಗೆ ಸರಕಾರಕ್ಕೆ ಪ್ರಸ್ತಾವನೆ ಕಳುಹಿಸಬೇಕು. ಪರಿಶೀಲಿಸಿ ಸರಕಾರ ಅನುಮೋದನೆ ನೀಡಲಿದೆ. ವಾರಾಹಿ ನೀರನ್ನು ಉಡುಪಿ ನಗರಕ್ಕೆ ಸರಬರಾಜು ಮಾಡುವ ಸಂಬಂಧ ನಗರಸಭೆ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂ. ರಾಜ್‌ ಇಲಾಖೆ ಜಂಟಿಯಾಗಿ ಪರಿಶೀಲಿಸಬೇಕು. ಈ ಬಗ್ಗೆ ಬೆಂಗಳೂರಿನಲ್ಲಿ ಸಭೆ ನಡೆಸಲಾಗುವುದು ಎಂದರು.

ಮಹಿಳಾ ಹಾಸ್ಟೆಲ್‌
ಉಡುಪಿ ನಗರದಲ್ಲಿ ಮಹಿಳಾ ಹಾಸ್ಟೆಲ್‌ಗ‌ಳಿಗೆ ಹೆಚ್ಚು ಬೇಡಿಕೆ ಇರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಸೂಕ್ತ ಜಾಗ ಗುರುತಿಸಬೇಕು. ಅನುದಾನ ಬಿಡುಗಡೆ ಮಾಡಲಾಗುವುದು. ಈಗಿರುವ ಹಾಸ್ಟೆಲ್‌ಗ‌ಳಲ್ಲಿ ಅರ್ಜಿ ಸಲ್ಲಿಸಿದವರಿಗೆ ಸೀಟು ಲಭ್ಯವಿಲ್ಲದಿದ್ದಲ್ಲಿ ಬಾಡಿಗೆ ಕಟ್ಟಡದಲ್ಲಿ ತಾತ್ಕಾಲಿಕ ಹಾಸ್ಟೆಲ್‌ ಸ್ಥಾಪಿಸಿ ಎಂದು ಕುಮಾರಸ್ವಾಮಿ ಸೂಚಿಸಿದರು.

ಕೊರಗರಿಗೆ ಮನೆ 
ಕೊರಗ ಸಮುದಾಯದವರಿಗೆ ಸರಕಾರ ನೆರವು ನೀಡುತ್ತಿದ್ದರೂ ಅವರು ಮನೆ ನಿರ್ಮಾಣಕ್ಕೆ ಕಷ್ಟ ಪಡುತ್ತಿರುವುದು ಗಮನಕ್ಕೆ ಬಂದಿದೆ. ರಾಜ್ಯ ಸರಕಾರದ ಏಜನ್ಸಿಗಳಿಂದಲೇ ಅವರಿಗೆ ಮನೆ ನಿರ್ಮಿಸಿಕೊಡಲಾಗುವುದು ಎಂದರು.

ಬಿಪಿಎಲ್‌ ಕಾರ್ಡ್‌ಗೂ ವಿಮೆ
ಎಲ್ಲ ಆರೋಗ್ಯ ವಿಮಾ ಯೋಜನೆಗಳನ್ನು ವಿಲೀನಗೊಳಿಸಿ ಆರೋಗ್ಯ ಕಾರ್ಡ್‌ ಯೋಜನೆ ಜಾರಿಗೆ ತರಲಾಗಿದೆ. ಆದರೂ ಈ ಕಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುವಲ್ಲಿ ಗೊಂದಲಗಳಾಗಿರುವುದು ಸರಕಾರದ ಗಮನಕ್ಕೆ ಬಂದಿರುವುದರಿಂದ ಬಿಪಿಎಲ್‌ ಕಾರ್ಡ್‌ ತೋರಿಸಿದರೂ ಚಿಕಿತ್ಸೆ ಒದಗಿಸುವಂತೆ ಸೂಚಿಸಿದ್ದೇವೆ. ಇದಕ್ಕೆ ಸೂಕ್ತ ಪ್ರಚಾರ ನೀಡಬೇಕು ಎಂದು ಮುಖ್ಯಮಂತ್ರಿಗಳು ಹೇಳಿದರು.

ಶಾಸಕ ರಘುಪತಿ ಭಟ್‌ ಮರಳು ಸಮಸ್ಯೆಯ ಬಗ್ಗೆ ಗಮನ ಸೆಳೆದು ಪರಿಹಾರಕ್ಕೆ ಆಗ್ರಹಿಸಿದರು. ಕಾರ್ಕಳ ಶಾಸಕ ಸುನಿಲ್‌ ಕುಮಾರ್‌ ಉದ್ಯೋಗ ಖಾತ್ರಿ ಯೋಜನೆಗಳ ನಿಯಮಗಳನ್ನು ಸರಳಗೊಳಿಸಬೇಕು ಎಂದರು. ಅನಿಲ ಭಾಗ್ಯ ಯೋಜನೆಯಡಿ ಸೇರ್ಪಡೆಗೊಂಡ ಕೆಲವರಿಗೆ ಸಿಲಿಂಡರ್‌ – ಸೀಮೆಎಣ್ಣೆ ಎರಡೂ ಸಿಗದೆ ಸಮಸ್ಯೆಯಾಗಿದೆ ಎಂದು ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಗಮನ ಸೆಳೆದರು.

ಸಚಿವೆ ಡಾ| ಜಯಮಾಲಾ, ವಿಧಾನಪರಿಷತ್‌ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಜಿ.ಪಂ. ಅಧ್ಯಕ್ಷ ದಿನಕರ ಬಾಬು, ಶಾಸಕರಾದ ಲಾಲಾಜಿ ಮೆಂಡನ್‌, ಸುಕುಮಾರ ಶೆಟ್ಟಿ, ಎಸ್‌.ಎಲ್‌. ಭೋಜೇಗೌಡ, ಬಿ.ಎಂ. ಫಾರೂಕ್‌, ಪ್ರತಾಪ್‌ಚಂದ್ರ ಶೆಟ್ಟಿ, ಜಿ.ಪಂ. ಉಪಾಧ್ಯಕ್ಷೆ ಶೀಲಾ ಶೆಟ್ಟಿ, ಅರಣ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಸಂದೀಪ್‌ ದವೆ, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ರಮಣ ರೆಡ್ಡಿ, ಸಿಎಂ ಕಾರ್ಯದರ್ಶಿ ಸೆಲ್ವಕುಮಾರ್‌, ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌, ಎಸ್‌ಪಿ ಲಕ್ಷ್ಮಣ ಬ. ನಿಂಬರಗಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Udyavara: ತಪಾಸಣೆ ನಿರತ ಕಾರಿಗೆ ಕಾರು ಢಿಕ್ಕಿ; ಮಹಿಳೆಗೆ ಗಾಯ

Udyavara: ತಪಾಸಣೆ ನಿರತ ಕಾರಿಗೆ ಕಾರು ಢಿಕ್ಕಿ; ಮಹಿಳೆಗೆ ಗಾಯ

Udupi; ಕಾರು ಢಿಕ್ಕಿ: ಸ್ಕೂಟರ್‌ ಸವಾರ ಆಸ್ಪತ್ರೆಗೆ

Udupi; ಕಾರು ಢಿಕ್ಕಿ: ಸ್ಕೂಟರ್‌ ಸವಾರ ಆಸ್ಪತ್ರೆಗೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.