“ಸಿಬಂದಿ ತಮ್ಮ ಮನೆಯಂತೆ ಕರ್ತವ್ಯ ನಿರ್ವಹಿಸಬೇಕು’


Team Udayavani, Sep 9, 2018, 6:05 AM IST

0809gk5.jpg

ಉಡುಪಿ: ಗ್ರಾ.ಪಂ.ಸಿಬಂದಿ  ಪಂಚಾಯತ್‌ ಕೆಲಸವನ್ನು  ತಮ್ಮ ಮನೆಯ ಕೆಲಸದಂತೆ  ನಿರ್ವಹಿಸಬೇಕು ಎಂದು ವಿಧಾನಪರಿಷತ್‌ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. 

ಮಣಿಪಾಲದ ರಜತಾದ್ರಿಯಲ್ಲಿ ರಾಜ್ಯ ಗ್ರಾ. ಪಂ.  ನೌಕರರ ಶ್ರೇಯೋಭಿವೃದ್ಧಿ ಸಂಘದ ಆಶ್ರಯದಲ್ಲಿ ನಡೆದ ನೌಕರರ ಸಮಾವೇಶ , ಅಭಿನಂದನ  ಕಾರ್ಯಕ್ರಮ ಉದ್ಘಾಟಿಸಿ ಅವರು  ಮಾತನಾಡಿದರು.

ಗ್ರಾ.ಪಂ.ಗಳು ಒಂದು ಸರಕಾರ ಎಂಬ ಕಲ್ಪನೆಗೆ ಒತ್ತುಕೊಡಲಾಗಿದೆ. 3ನೇ ಹಣಕಾಸು ಆಯೋಗ ನಡೆಸಿದ ಸರ್ವೆಯಲ್ಲಿ ಕರ್ನಾಟಕದ ಗ್ರಾ.ಪಂ.ಗಳು ಉತ್ತಮ ಸಾಧನೆ ಮಾಡಿವೆ.  ಈ ಹಿಂದೆ ಗ್ರಾ.ಪಂ.  ನೌಕರರ ಸಮಸ್ಯೆಗಳ ಕುರಿತು ಅಷ್ಟೊಂದು ಚರ್ಚೆ ನಡೆಯುತ್ತಿರಲಿಲ್ಲ. ಆದರೆ ಕಳೆದ ಐದು ವರ್ಷಗಳಲ್ಲಿ ವಿಧಾನಮಂಡಲದಲ್ಲಿ ಸಾಕಷ್ಟು  ಬಾರಿ ಚರ್ಚೆ  ಆಗಿದೆ.  30 ಸಾವಿರ ನೌಕರರನ್ನು ಖಾಯಂಗೊಳಿಸಲಾಗಿದೆ ಎಂದರು. 

ಪಂ.ಗಳಲ್ಲಿ ಈಗ ಕೆಲಸ ಮಾಡುತ್ತಿರುವ ಹಲವು ಸಿಬಂದಿಗಳಿಗೆ ಶೈಕ್ಷಣಿಕ ಅರ್ಹತೆ ಕಡಿಮೆ ಇರುವುದರಿಂದ  ಇವರ ಖಾಯಮಾತಿ ಆಗುತ್ತಿಲ್ಲ. ಆದರೆ ಅವರ ಸೇವೆ ಅಗತ್ಯವಿರುವ ಹಿನ್ನೆಲೆಯಲ್ಲಿ ಒನ್‌ಟೈಮ್‌ ಸೆಟ್ಲಮೆಂಟ್‌  ಮಾಡಿ ಈ ಸಮಸ್ಯೆ ಪರಿಹರಿಸಲು ಸಚಿವರಲ್ಲಿ  ತಿಳಿಸಲಾಗಿದೆ. ಮುಂದೆ ನೇಮಕ ಮಾಡಿಕೊಳ್ಳುವವರನ್ನು  ಶೈಕ್ಷಣಿಕ ಅರ್ಹತೆ ಮೇಲೆ ನೇಮಕ ಮಾಡುವಂತೆ ಅವರಲ್ಲಿ  ತಿಳಿಸಲಾಗಿದೆ.  ಮುಖ್ಯಮಂತ್ರಿ ಕುಮಾರಸ್ವಾಮಿ ಜಿಲ್ಲೆಗೆ ಭೇಟಿ ನೀಡಿದ ಸಂದರ್ಭ ಬಾಪೂಜಿ ಕೇಂದ್ರಗಳಲ್ಲಿ 100 ಸೇವೆಗಳಲ್ಲಿ  ಒಂದು ಸೇವೆಯೂ ಲಭ್ಯವಾಗುತ್ತಿಲ್ಲ ಎನ್ನುವುದರ ಕುರಿತು ತಿಳಿಸಿದಾಗ ಇನ್ನೊಂದು ವಾರದಲ್ಲಿ ಸಭೆ ಕರೆಯುತ್ತೇನೆ, ಅದರಲ್ಲಿ ಈ ಸಮಸ್ಯೆ ಕುರಿತು ಚರ್ಚಿಸುವುದಾಗಿ ತಿಳಿಸಿದ್ದಾರೆ ಎಂದರು.  

ನೌಕರರ ಸಮಸ್ಯೆಗಳ ಕುರಿತು ಜನ ಪ್ರತಿನಿಧಿಗಳಿಗೆ ಮನವಿ ಸಲ್ಲಿಸಲಾಯಿತು. ಜನ ಪ್ರತಿನಿಧಿಗಳು, ಅಧಿಕಾರಿಗಳನ್ನು ಅಭಿನಂದಿಸಲಾಯಿತು. 
 
ಜಿಲ್ಲಾ ಸಮಿತಿ ಅಧ್ಯಕ್ಷ ಉದಯ್‌ ಎಸ್‌. ಶೆಟ್ಟಿ  ಅಧ್ಯಕ್ಷತೆ ವಹಿಸಿದ್ದರು. ಶಾಸಕ ಲಾಲಾಜಿ ಆರ್‌. ಮೆಂಡನ್‌, ಜಿ.ಪಂ. ಅಧ್ಯಕ್ಷ ದಿನಕರಬಾಬು, ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ಉಡುಪಿ ತಾ.ಪಂ ಅಧ್ಯಕ್ಷೆ ನಳಿನಿ ಪ್ರದೀಪ್‌ ರಾವ್‌, ಜಿ.ಪಂ ಸದಸ್ಯರಾದ ಗೀತಾಂಜಲಿ ಸುವರ್ಣ, ಶಿಲ್ಪಾ ಸುವರ್ಣ, ಜಿ.ಪಂ ಸಿಇಒ ಶಿವಾನಂದ ಕಾಪಶಿ, ತಾ.ಪಂ ಸಹಾಯಕ ನಿರ್ದೇಶಕ ಹರಿಕೃಷ್ಣ ಶಿವತ್ತಾಯ, ಎಚ್‌.ವಿ.  ಇಬ್ರಾಹಿಂಪುರ, ಉಡುಪಿ ತಾ.ಪಂ ಇ.ಒ. ಮೋಹನ್‌ರಾಜ್‌, ಸಂಘದ ರಾಜ್ಯಾಧ್ಯಕ್ಷ ದೇವಿಪ್ರಸಾದ್‌ ಬೊಳ್ಮ, ತಾ.ಪಂ.  ಸದಸ್ಯರಾದ ಧನಂಜಯ, ವಸಂತಿ, ಸಂಧ್ಯಾಕುಮಾರಿ ಉಪಸ್ಥಿತರಿದ್ದರು.
  
ರಾಜ್ಯ ಪ್ರಧಾನ ಕಾರ್ಯದರ್ಶಿ ಪದ್ಮನಾಭ ಆರ್‌. ಸ್ವಾಗತಿಸಿ, ಪ್ರಶಾಂತ್‌ ಶೆಟ್ಟಿ ಹಾವಂಜೆ ನಿರೂಪಿಸಿ, ಅಭಿಷೇಕ್‌ ಸೇರಿಗಾರ್‌ ವಂದಿಸಿದರು. 

ತೆರಿಗೆ ಪಾವತಿಯಲ್ಲಿ ಕರಾವಳಿಗರೆ ಮುಂದು
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವಾರ್ಷಿಕ  ಶೇ. 70 ದಿಂದ  ಶೇ. 80ರ‌ಷ್ಟು ತೆರಿಗೆ ಸಂಗ್ರಹವಾಗುತ್ತಿದೆ. ಆದರೆ ಉತ್ತರ ಕರ್ನಾಟಕದ ಗುಲ್ಬರ್ಗಾ ಮೊದಲಾದ ಭಾಗಗಳಲ್ಲಿ ಶೇ. 1ರಷ್ಟು ಕೂಡ ತೆರಿಗೆ ಪಾವತಿ ಆಗುತ್ತಿಲ್ಲ.ಗ್ರಾ.ಪಂ.ಸದಸ್ಯರೇ ತೆರಿಗೆ ಪಾವತಿ ಮಾಡಿದ್ದರೂ ಗ್ರಾ.ಪಂ.ಅಭಿವೃದ್ಧಿಗೆ ಸಹಾಯಕವಾಗುತ್ತಿತ್ತು.
– ಕೋಟ ಶ್ರೀನಿವಾಸ ಪೂಜಾರಿ,ವಿಧಾನಪರಿಷತ್‌ ವಿಪಕ್ಷ ನಾಯಕ

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.