ಉಡುಪಿಯಲ್ಲಿ ಕೊಂಬು, ಕಹಳೆ ವಾದ್ಯ, ಭತ್ತದ ತಿರಿ ಜನಾಕರ್ಷಣೆ


Team Udayavani, Sep 10, 2018, 1:25 AM IST

bunts-9-9.jpg

ಉಡುಪಿ: ಜಾಗತಿಕ ಬಂಟರ ಸಂಘಗಳ ಒಕ್ಕೂಟ ಉಡುಪಿ ಜಿಲ್ಲಾ ಬಂಟರ ಸಂಘದ ಸಹಯೋಗದಲ್ಲಿ ಅಮ್ಮಣಿ ರಾಮಣ್ಣ ಶೆಟ್ಟಿ ಸಭಾಂಗಣದ ಆವರಣದಲ್ಲಿ ರವಿವಾರ ಏರ್ಪಡಿಸಿದ ವಿಶ್ವ ಬಂಟರ ಸಮ್ಮಿಲನಕ್ಕೆ ದೇಶ ವಿದೇಶಗಳಿಂದ ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿ ಸಮ್ಮೇಳನವನ್ನು ಯಶಸ್ವಿಗೊಳಿಸಿದರು. ಸಮ್ಮೇಳನಾಂಗಣದ ಸುಮಾರು ಒಂದೆರಡು ಕಿ.ಮೀ. ರಸ್ತೆ ಬದಿ, ಖಾಲಿ ಜಾಗಗಳಲ್ಲಿ ವಾಹನಗಳು ಸಾಲು ಸಾಲಾಗಿ ನಿಂತಿದ್ದವು. ಕೊಂಬು, ಕಹಳೆ, ವಾದ್ಯಗಳು ಸಂಭ್ರಮದ ವಾತಾವರಣ ಸೃಷ್ಟಿಸಿದವು.

ಆಕರ್ಷಕ ವೇದಿಕೆ
ಸಮ್ಮೇಳನಕ್ಕಾಗಿಯೇ ನಿರ್ಮಿಸಿದ ತೋನ್ಸೆ ಶಶಿರೇಖಾ ಆನಂದ ಶೆಟ್ಟಿ ವೇದಿಕೆಯನ್ನು ಬೃಹತ್‌ ಗುತ್ತು ಮನೆಯಂತೆ ನಿರ್ಮಿಸಿದ್ದು ವಿಶೇಷ ಆಕರ್ಷಣೆಯಾಗಿತ್ತು. ಈ ವೇದಿಕೆಯನ್ನು ಶಶಿರೇಖಾ ಮತ್ತು ಆನಂದ ಶೆಟ್ಟಿಯವರು ಉದ್ಘಾಟಿಸಿದರು. ಕೊಳ್ಕೆಬೈಲು, ಶಾನಾಡಿ, ಕಟಿನಮಕ್ಕಿ, ಅಲ್ತಡು ಮೊದಲಾದೆಡೆಗಳಿಂದ ತರಿಸಿದ ಬೃಹತ್ತಾದ ಬಾಗಿಲು, ಕಂಬ, ಮುಚ್ಚಿಗೆ, ಬೋದಿಗೆಗಳನ್ನು ಆರ್ಕಿಟೆಕ್ಟ್ ಸಿದ್ಧಾರ್ಥ ಶೆಟ್ಟಿಯವರ ನಿರ್ದೇಶನದಂತೆ ಬಳ್ಕೂರು ಗೋಪಾಲ ಆಚಾರ್ಯರ ತಂಡದವರು ನಿರ್ಮಿಸಿದ್ದರು. ‘ನಾವು 15 ವರ್ಷಗಳಿಂದ ಇಂತಹ ಪರಂಪರೆಯ ಕೊಂಡಿ ಇರುವ ಪರಿಕರಗಳನ್ನು ಸಂಗ್ರಹಿಸುತ್ತಿದ್ದೇವೆ. ಈಗಿನ ಯುವಜನರಿಗೆ ಇಂತಹ ಸಾಂಸ್ಕೃತಿಕ ಹಿರಿಮೆಗಳಿರುವ ಪರಿಕರಗಳು ಕಾಣಸಿಗುವುದಿಲ್ಲ. ಇದನ್ನು ಯುವ ಪೀಳಿಗೆ ನೋಡಬೇಕೆಂದು ಇದನ್ನು ನಿರ್ಮಿಸಿದೆವು’ ಎಂದು ಆರ್ಕಿಟೆಕ್ಟ್ ಸಿದ್ಧಾರ್ಥ ಶೆಟ್ಟಿಯವರು ‘ಉದಯವಾಣಿ’ಗೆ ತಿಳಿಸಿದರು. 

ಹಳೆ ಕಾರು, ಕಂಬಳದ ಕೋಣ

ಉದ್ಯಮಿ ಮನೋಹರ ಶೆಟ್ಟಿಯವರ ಸಂಗ್ರಹದಲ್ಲಿರುವ ಹಳೆಯ ಎರಡು ಕಾರುಗಳನ್ನು ಸಮ್ಮೇಳನದ ಆವರಣದಲ್ಲಿ ಇರಿಸಲಾಗಿತ್ತು. ಪ್ರಾಯಃ ಇಂತಹ ಕಾರುಗಳು ಬಂದ ಸಂದರ್ಭ ಬಂಟ ಸಮುದಾಯದ ನಾಯಕರಲ್ಲಿ ಇದ್ದಿರಬಹುದು ಎಂದು ಸ್ಮರಣೆಗೆ ಬರುತ್ತದೆ. ಮೂಡಬಿದಿರೆಯ ವಿನು ವಿಶ್ವನಾಥ ಶೆಟ್ಟಿಯವರು ಸಾಕಿರುವ ಎರಡು ಕಂಬಳದ ಕೋಣಗಳು ಬಂಟ ಸಮುದಾಯ ಇಂದಿಗೂ ಕಾಪಿಟ್ಟುಕೊಂಡು ಬಂದ ಕಂಬಳದ ಸಂಸ್ಕೃತಿಯನ್ನು ಪ್ರತಿಬಂಬಿಸುತ್ತಿದ್ದವು. ಮನೋಹರ ಶೆಟ್ಟಿಯವರು ಸಾಕುತ್ತಿರುವ ಕಪಿಲೆ (ಕಬೆತಿ) ದನಗಳೂ ದನಗಳ ತಳಿಗಳಲ್ಲಿ ಶ್ರೇಷ್ಠವಾದವು ಎಂಬುದು ಸಮ್ಮೇಳನಕ್ಕೆ ಆಗಮಿಸಿದ ಪ್ರತಿನಿಧಿಗಳಿಗೆ ನೆನಪಿಗೆ ಬಂದಂತಾದವು.

ವಿಶಿಷ್ಟ ವೇಷಭೂಷಣ
ಪುರುಷರೆಲ್ಲ ಧೋತಿ, ಬಿಳಿ ಅಂಗಿ, ಶಾಲುಗಳನ್ನು ಧರಿಸಿದ್ದರೆ, ಬೇರೆ ಬೇರೆ ಸಂಘಟನೆಗಳ ಮಹಿಳೆಯರು ಒಂದೇ ರೀತಿಯ ಬಣ್ಣದ ಸೀರೆಗಳನ್ನು ಧರಿಸಿದ್ದರು. 

ದೈವಗಳ ಮುಖವಾಡ
ಬಂಟ ಸಮುದಾಯ ದೈವಗಳ ಆರಾಧನೆಗೆ ಆದ್ಯತೆ ಕೊಟ್ಟುಕೊಂಡು ಬಂದ ಹಿನ್ನೆಲೆಯಲ್ಲಿ ವಿವಿಧ ದೈವಗಳ ಮುಖವಾಡವನ್ನು ಶಿಲ್ಪಿ ರಾಜೇಶ ಆಚಾರ್ಯರ ಸಂಗ್ರಹದಿಂದ ತರಿಸಿ ಪ್ರದರ್ಶಿಸಲಾಯಿತು. ಬಂಟರ ಸಾಂಸ್ಕೃತಿಕ ಮೇಲ್ಮೆ ಎನಿಸಿದ ಭತ್ತದ ತಿರಿ, ಅಕ್ಕಿಮುಡಿ, ಊರಿನ ಕೋಳಿ, ತೆರೆದ ಬಾವಿ, ದೈವದ ಮನೆಗಳು ಜನಾಕರ್ಷಣೆಯಾಗಿದ್ದವು.

ಸಾಧಕರಿಗೆ ಸಮ್ಮಾನ

ಬೈಂದೂರು ಬಂಟರ ಸಂಘದ ಅಧ್ಯಕ್ಷ ಬಿ.ಜಗನ್ನಾಥ ಶೆಟ್ಟಿ, ಬೆಳಗಾವಿ ಉದ್ಯಮಿ ಬಾರಕೂರು ವಿಠ್ಠಲ ಹೆಗ್ಡೆ, ಮಾಜಿ ಶಾಸಕ ಅಪ್ಪಣ್ಣ ಹೆಗ್ಡೆ, ಮಂಗಳೂರಿನ ದೇವಿ ಎಜುಕೇಶನ್‌ ಸೊಸೈಟಿ ಅಧ್ಯಕ್ಷ ಸದಾನಂದ ಶೆಟ್ಟಿ, ಹಿರಿಯ ಸಂಸ್ಕೃತಿತಜ್ಞ, ಸಾಹಿತಿ ಡಾ|ಏರ್ಯ ಲಕ್ಷ್ಮೀನಾರಾಯಣ ಆಳ್ವ, ಯಕ್ಷಗಾನ ವಿದ್ವಾಂಸ ಡಾ| ಶಿಮಂತೂರು ನಾರಾಯಣ ಶೆಟ್ಟಿ, ಕಾಸರಗೋಡಿನ ಸಂಘಟಕ ದಾಸಣ್ಣ ಆಳ್ವ, ಗ್ರಾಮೀಣ ಭಾಗದಲ್ಲಿ ವೈದ್ಯಕೀಯ ಸೇವೆ ಸಲ್ಲಿಸುತ್ತಿರುವ ಕಾಪುವಿನ ಡಾ|ಪ್ರಭಾಕರ ಶೆಟ್ಟಿ, ಮುಂಬೈ ಉದ್ಯಮಿ ಮೈನಾ ಸುಬ್ಬಣ್ಣ ಶೆಟ್ಟಿ, ಯುಎಇ ಉದ್ಯಮಿ ಸರ್ವೋತ್ತಮ ಶೆಟ್ಟಿ, ಸಮಾಜ ಸೇವಕ ಕಾಪು ವಿಶ್ವನಾಥ ಶೆಟ್ಟಿ ಅವರನ್ನು ಸಮ್ಮಾನಿಸಲಾಯಿತು. ಸದಾನಂದ ಶೆಟ್ಟಿ ಮತ್ತು ಸರ್ವೋತ್ತಮ ಶೆಟ್ಟಿಯವರು ಸಮ್ಮಾನಿತರ ಪರವಾಗಿ ಮಾತನಾಡಿ ಸಮ್ಮೇಳನದ ಸಂಘಟಕರಿಗೆ ಅಭಿನಂದನೆ ಸಲ್ಲಿಸಿದರು.

ಡೋಲು ವಾದನ
ಕೊರಗ ಸಮುದಾಯದವರು ನುಡಿಸುವ ಡೋಲಿನ ವಾದನ ನಿರಂತರವಾಗಿ ಕೇಳಿಬರುತ್ತಿತ್ತು.

ಗಡಿಪ್ರಧಾನ ಗಡಿಕಾರರಿಗೆ ಸಮ್ಮಾನ
ಗಡಿ ಪ್ರಧಾನ ಸಮ್ಮಿಲನದಲ್ಲಿ ಒಟ್ಟು 67 ಮಂದಿ ಗಡಿಪ್ರಧಾನ ಹೊಂದಿದ ಗಡಿಕಾರರನ್ನು ಗೌರವಿಸಲಾಯಿತು.

ಅಗೋಳಿ ಮಂಜಣ್ಣ
ಅಗೋಳಿ ಮಂಜಣ್ಣ ಹಿಂದಿನ ತಲೆಮಾರಿನಲ್ಲಿ ಮನೆಮಾತಾಗಿದ್ದ. ಅಗೋಳಿ ಮಂಜಣ್ಣ ಕಟ್ಟುಮಸ್ತಾದ ಶರೀರವನ್ನು ಹೊಂದಿರುವುದಕ್ಕೆ ಉದಾಹರಣೆಯಾಗಿ ಸಮ್ಮೇಳನದಲ್ಲಿ ಮೂಡಿಬಂದ. ‘ಬಂಟ ಸೌರಭ’ ಸಮುದಾಯದ ಮಾಹಿತಿ ಕೈಪಿಡಿ ಪುಸ್ತಕದ ಬಿಡುಗಡೆಗೆ ಮುನ್ನ ಈತನನ್ನು ಆಕರ್ಷಕವಾಗಿ ಚಂಡೆ, ವಾದ್ಯ ಘೋಷಗಳೊಂದಿಗೆ ಮೆರವಣಿಗೆಯಲ್ಲಿ ಕರೆತರಲಾಯಿತು.

ಆಹಾರದಲ್ಲಿ ಅಚ್ಚುಕಟ್ಟುತನ
ಬೆಳಗ್ಗೆ ಉಪಾಹಾರ, ಮಧ್ಯಾಹ್ನ ಮತ್ತು ರಾತ್ರಿ ಊಟವನ್ನು ಅಚ್ಚುಕಟ್ಟಾಗಿ ವ್ಯವಸ್ಥೆಗೊಳಿಸಲಾಗಿತ್ತು. ಮಾಂಸಾಹಾರ, ಸಸ್ಯಾಹಾರದ ಪ್ರತ್ಯೇಕ ಊಟದ ವ್ಯವಸ್ಥೆ ಕಲ್ಪಿಸಲಾಗಿತ್ತು.

ಮಳೆ ಸಂತ್ರಸ್ತರಿಗೆ ನೆರವು
ಕೊಡಗಿನ ಪ್ರಾಕೃತಿಕ ವಿಕೋಪದಲ್ಲಿ ಸಂತ್ರಸ್ತರಾದ ಪ್ರಕಾಶ್‌ ರೈಯವರಿಗೆ ತತ್‌ಕ್ಷಣ 25,000 ರೂ. ನೀಡಿ ಉಳಿದ ಸಹಾಯವನ್ನು ಮಾಡುವುದಾಗಿ ಭರವಸೆ ನೀಡಲಾಯಿತು.

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.