ಬಿಸಿಯೂಟ ಸಾಮಗ್ರಿ ಕಳಪೆ: ಸಮಗ್ರ ವರದಿಗೆ ಸಿಇಒ ಆದೇಶ


Team Udayavani, Sep 12, 2018, 11:15 AM IST

udupi.jpg

ಉಡುಪಿ: ಶಾಲೆಗಳ ಬಿಸಿಯೂಟಕ್ಕೆ ಒದಗಿಸುವ ಬೇಳೆಕಾಳು ಹಾಗೂ ಕ್ಷೀರಭಾಗ್ಯಕ್ಕೆ ನೀಡುವ ಹಾಲಿನ ಪುಡಿ ಹಾಳಾಗಿರುವುದು ವ್ಯಾಪಕವಾಗಿ ಕಂಡುಬಂದಿದೆ ಎಂದು ಉಡುಪಿ ಜಿ.ಪಂ. ಅಧ್ಯಕ್ಷರು ಹಾಗೂ ಹಲವು ಮಂದಿ ಸದಸ್ಯರು ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. 

ಮಂಗಳವಾರ ಜರಗಿದ ಜಿ.ಪಂ.ನ ಮುಂದುವರಿದ ಸಾಮಾನ್ಯಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಸದಸ್ಯೆ ಜ್ಯೋತಿ ಎಂ. ಅವರು “ಕೆಲವು ಶಾಲೆಗಳಲ್ಲಿ ಹಳೆಯ ದಾಸ್ತಾನಿನ ಬೇಳೆಗಳನ್ನು ಬಳಸಲಾಗುತ್ತಿದೆ. ಒಡೆದ ಪ್ಯಾಕೆಟ್‌ ಹಾಲುಪುಡಿ ಸರಬರಾಜಾಗುತ್ತಿದೆ. ಅಧಿಕಾರಿಗಳು ಸೂಕ್ಷ್ಮವಾಗಿ ಗಮನಿಸುತ್ತಿಲ್ಲ’ ಎಂದು ದೂರಿದರು. ಇದಕ್ಕೆ ಪೂರಕವಾಗಿ ಮಾತನಾಡಿದ ಜಿ.ಪಂ. ಅಧ್ಯಕ್ಷ ದಿನಕರ ಬಾಬು ಅವರು “ನಾನು ಕೂಡ ಹಲವು ಶಾಲೆಗಳಿಗೆ ತೆರಳಿ ಪರಿಶೀಲಿಸಿದ್ದೇನೆ. ಹೆಚ್ಚಿನ ಕಡೆಗಳಲ್ಲಿ ಬೇಳೆ ಮತ್ತು ಹಾಲಿನ ಪುಡಿ ಹಾಳಾಗಿರುವುದು ಗಮನಕ್ಕೆ
ಬಂದಿದೆ’ ಎಂದರು. ಶಿಕ್ಷಣ ಮತ್ತು ಆರೋಗ್ಯ ಸ್ಥಾಯೀ ಸಮಿತಿ ಅಧ್ಯಕ್ಷ ಕೆ. ಬಾಬು ಶೆಟ್ಟಿ ಹಾಗೂ ಇತರ ಹಲವು ಸದಸ್ಯರು ಇದಕ್ಕೆ ದನಿಗೂಡಿಸಿದರು.

ಡಿಡಿಪಿಐ ಅವರು ಪ್ರತಿಕ್ರಿಯಿಸಿ, “ಅಕ್ಷರ ದಾಸೋಹದ ಸಾಮಗ್ರಿ ಪೂರೈಕೆ ಸಂದರ್ಭ ಪರಿಶೀಲಿಸಿಯೇ ಪಡೆದುಕೊಳ್ಳುವುದು ಶಾಲೆಯವರ ಜವಾಬ್ದಾರಿ. ಪ್ಯಾಕೆಟ್‌ ಒಡೆದಿದ್ದರೆ ಆಗಲೇ ವಾಪಸು ನೀಡಬೇಕು. ಇಲಾಖೆಯ ಅಧಿಕಾರಿಗಳು ಆಗಾಗ್ಗೆ ಶಾಲೆಗೆ ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ. ಶಾಲೆಯ ಖರ್ಚಿಗೆ ಎಷ್ಟು ಬೇಕೋ ಅಷ್ಟನ್ನೇ ಪಡೆದುಕೊಳ್ಳಬೇಕು ಎಂದು ಶಾಲೆಗಳಿಗೆ ಆದೇಶ ನೀಡಲಾಗಿದೆ’ ಎಂದರು. ಇದರಿಂದ ತೃಪ್ತರಾಗದ ಸದಸ್ಯರು “ಅಧಿಕಾರಿಗಳು ಸಮಪರ್ಕವಾಗಿ ಪರಿಶೀಲಿಸುತ್ತಿಲ್ಲ. ಹಾಗಾಗಿ ಸಮಸ್ಯೆ ಹೆಚ್ಚಾಗುತ್ತಿದೆ’ ಎಂದರು. “ಈ ಕುರಿತು ಸಮಗ್ರವಾದ ವರದಿ ನೀಡಬೇಕು’ ಎಂದು ಸಿಇಒ ಶಿವಾನಂದ ಕಾಪಶಿ ಅಧಿಕಾರಿಗಳಿಗೆ ಆದೇಶಿಸಿದರು.

ಮೂಲ್ಕಿಯವರಿಗೂ ಟೋಲ್‌ ವಿನಾಯಿತಿ
“ಹೆಜಮಾಡಿಯಲ್ಲಿ ಟೋಲ್‌ಗೇಟ್‌ ರಾಷ್ಟ್ರೀಯ ಹೆದ್ದಾರಿ ವ್ಯಾಪ್ತಿಯಲ್ಲಿಯೇ ಇರಬಹುದು. ಆದರೆ ಟೋಲ್‌ ವಸೂಲಿ ಮಾಡುತ್ತಿರುವುದು ಗ್ರಾ.ಪಂ. ರಸ್ತೆಯಲ್ಲಿ ಸಂಚರಿಸುವ ವಾಹನಗಳಿಂದ. ಟೋಲ್‌ ಸೋರಿಕೆಯಾಗುತ್ತದೆ ಎಂಬ ಕಾರಣ ನೀಡಿ ಇನ್ನೊಂದು ಟೋಲ್‌ಗೇಟ್‌ ಅಳವಡಿಸಿ ಸ್ಥಳೀಯರಿಂದಲೂ ಹಣ ವಸೂಲಿ ಸರಿಯಲ್ಲ. ಹೆಜಮಾಡಿಗೆ ಹತ್ತಿರದ ಮೂಲ್ಕಿಯವರು ಹೆಜಮಾಡಿ ಭಾಗಕ್ಕೆ ದೇವಸ್ಥಾನ, ಶಾಲೆಗೆಂದು ವಾಹನದಲ್ಲಿ (ಕೆಎ 19) ಬರುತ್ತಾರೆ. ಅವರಿಂದಲೂ ಸುಂಕ ವಸೂಲಿ ಮಾಡಲಾಗುತ್ತಿದೆ. ಸ್ಥಳೀಯ (ಕೆಎ 20) ವಾಹನಕ್ಕೆ ಟೋಲ್‌
ವಿನಾಯಿತಿ ಇರುವಂತೆ ಕೆಎ19 ವಾಹನಗಳಿಗೂ ರಿಯಾಯಿತಿ ನೀಡಬೇಕು. ಅವೈಜ್ಞಾನಿಕವಾಗಿ ಟೋಲ್‌ಗೇಟ್‌ ನಿರ್ಮಿಸಿರುವುದರಿಂದ ಸ್ಥಳೀಯರಿಗೆ ಸಮಸ್ಯೆಯಾಗಿದೆ’ ಎಂದು ರೇಷ್ಮಾ ಉದಯ ಶೆಟ್ಟಿ ಹೇಳಿದರು. ಜಿ.ಪಂ. ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ಸಾಮಾಜಿಕ ನ್ಯಾಯ ಸ್ಥಾಯೀ ಸಮಿತಿ ಅಧ್ಯಕ್ಷ ಶಶಿಕಾಂತ ಪಡುಬಿದ್ರಿ ದನಿಗೂಡಿಸಿದರು. ಕೆಎ 19 ವಾಹನಗಳಿಗೂ ಒಳರಸ್ತೆಯ ಟೋಲ್‌ಗೇಟ್‌ನಲ್ಲಿ ವಿನಾಯಿತಿ ನೀಡಬೇಕೆಂದು ಜಿ.ಪಂ.ನಲ್ಲಿ ನಿರ್ಣಯ ಕೈಗೊಳ್ಳಲಾಯಿತು.

ವಿಧಾನಪರಿಷತ್‌ ಸದಸ್ಯ ಪ್ರತಾಪಚಂದ್ರ ಶೆಟ್ಟಿ, ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷ ಉದಯ ಎಸ್‌. ಕೋಟ್ಯಾನ್‌, ಜಿ.ಪಂ. ಸದಸ್ಯರಾದ ಪ್ರತಾಪ ಹೆಗ್ಡೆ ಮಾರಾಳಿ, ಶಿಲ್ಪಾ ಸುವರ್ಣ, ಜ್ಯೋತಿ ಹರೀಶ್‌, ಬಟವಾಡಿ ಸುರೇಶ್‌, ದಿವ್ಯಶ್ರೀ ಅಮೀನ್‌, ಗೀತಾಂಜಲಿ ಸುವರ್ಣ, ಸುಧಾಕರ ಶೆಟ್ಟಿ ಮೈರ್ಮಾಡಿ ಮೊದಲಾದವರು ವಿವಿಧ ವಿಷಯಗಳ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡರು.

ಜಿಂಕೆಗೆ ಫ್ಲೈ ಓವರ್‌ ನಿರ್ಮಿಸಿ !
ಹಾವಂಜೆ ಗ್ರಾ.ಪಂ. ವ್ಯಾಪ್ತಿಯ ಮುಖ್ಯ ರಸ್ತೆಗೆ ತಾಗಿಕೊಂಡಿರುವ ಮೀಸಲು ಅರಣ್ಯ ಪ್ರದೇಶದಲ್ಲಿ ಜಿಂಕೆಗಳ ಓಡಾಟದಿಂದ ಇಬ್ಬರು ಬೈಕ್‌ ಸವಾರರು ಮೃತಪಟ್ಟಿದ್ದಾರೆ. ಇಲ್ಲಿ ಬೇಲಿ ನಿರ್ಮಿಸಬೇಕೆಂದು ಒತ್ತಾಯಿಸಿದ್ದೇನೆ. ಆದರೆ ಅರಣ್ಯ ಇಲಾಖೆಯವರು ಬೇಲಿ ನಿರ್ಮಿಸಿದರೆ ವನ್ಯಜೀವಿಗಳ  ಓಡಾಟಕ್ಕೆ ತೊಂದರೆಯಾಗುತ್ತದೆ ಎಂದು ಉತ್ತರಿಸಿದ್ದಾರೆ. ಹಾಗಾದರೆ ಜಿಂಕೆಗಳ ಓಡಾಟಕ್ಕೆ ಪ್ರತ್ಯೇಕವಾಗಿ ಫ್ಲೈಓವರ್‌ ನಿರ್ಮಿಸಲಿ ಎಂದು ಜನಾರ್ದನ ತೋನ್ಸೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.