ಗ್ರಾ.ಪಂ. ಹೆಚ್ಚುವರಿ ಕೆಲಸಗಳಿಗೆ ಸಿಬಂದಿ ಕೊರತೆ


Team Udayavani, Sep 13, 2018, 4:20 AM IST

gen-meeting-12-9.jpg

ಉಡುಪಿ: ಗ್ರಾ.ಪಂ.ಗಳಿಗೆ ನೀಡಿದ ಹೆಚ್ಚುವರಿ ಕೆಲಸಗಳಿಗೆ ಸಿಬಂದಿ ಕೊರತೆ ಇದೆ. ಸಿಬಂದಿ ನೇಮಕಕ್ಕೆ ಆದೇಶವಿದ್ದರೂ ನ್ಯಾಯಾಲಯದಲ್ಲಿ ಪ್ರಶ್ನಿಸಿರುವ ಕಾರಣ ತಡೆಯಾಗಿದೆ ಎಂದು ತಾ.ಪಂ. ಸಭೆಯಲ್ಲಿ ಅಧಿಕಾರಿಗಳು ತಿಳಿಸಿದರು. ತಾ.ಪಂ. ಅಧ್ಯಕ್ಷೆ ನಳಿನಿ ಪ್ರದೀಪ್‌ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ತಾ.ಪಂ. ಸಾಮಾನ್ಯ ಸಭೆಯಲ್ಲಿ  ಸದಸ್ಯ ದಿನೇಶ್‌ ಕೋಟ್ಯಾನ್‌ ಅವರು ಪಂ.ಗಳಲ್ಲಿ ಆರ್‌ಟಿಸಿ, ಆಧಾರ್‌ ಕಾರ್ಡ್‌ ಮೊದಲಾದ ಸೇವೆಗಳನ್ನು ನೀಡಿ ಹೆಚ್ಚುವರಿ ಹೊರೆಯನ್ನು ನೀಡಲಾಗಿದೆ. ಆದರೆ ಈ ಸೇವೆಗಳ ಅನುಷ್ಠಾನಕ್ಕೆ ಸರಿಯಾದ ಸಿಬಂದಿಯಿಲ್ಲ. ಇದರಿಂದ ಚಿಕ್ಕ ಕೆಲಸಕ್ಕೂ ಒಂದು ವಾರ ಕಾಯಬೇಕಾಗಿದೆ ಎಂದರು. ಇದಕ್ಕೆ ಉತ್ತರಿಸಿದ ತಾ.ಪಂ. ಇಒ ಮೋಹನ್‌ರಾಜ್‌ ಈಗಾಗಲೇ ಡಾಟಾ ಎಂಟ್ರಿ ಆಪರೇಟರ್‌ಗಳ ನೇಮಕಕ್ಕೆ ಸರಕಾರ ಆದೇಶಿಸಿದೆ. ಆದರೆ ಮೆರಿಟ್‌ ಆಧಾರದಲ್ಲಿ ಭರ್ತಿ ಮಾಡುವುದಿತ್ತು. ಈ ಸಂದರ್ಭ ಈ ಹಿಂದೆ ಸೇವೆ ಸಲ್ಲಿಸುತ್ತಿರುವ ಡಿಇಒಗಳ ಉದ್ಯೋಗಕ್ಕೆ ಕುತ್ತು ಬರುತ್ತಿರುವ ಹಿನ್ನೆಲೆಯಲ್ಲಿ ಅವರು ನ್ಯಾಯಾಲಯದ ಮೊರೆ ಹೋಗಿದ್ದಾರೆ. ಇದರಿಂದ ನೇಮಕಾತಿಗೆ ತೊಡಕಾಗಿದೆ ಎಂದರು. ತಾ.ಪಂ ಸದಸ್ಯೆ ಸಂಧ್ಯಾ ಶೆಟ್ಟಿ, ಸಭೆಯ ಕಾರ್ಯಸೂಚಿ ನಿಗದಿತ ಸಮಯದೊಳಗೆ ತಲುಪಿಸದೆ ಇರುವ ಕುರಿತು ಆಕ್ಷೇಪ ವ್ಯಕ್ತಪಡಿಸಿದರು. ಇನ್ನು ಮುಂದೆ ರಿಜಿಸ್ಟರ್‌ ಪೋಸ್ಟ್‌ ಮಾಡುವುದಾಗಿ  ಅಧ್ಯಕ್ಷೆ  ತಿಳಿಸಿದರು.

ಮನೆ ಹಾನಿಗೆ ದೊರಕದ ಪರಿಹಾರ 
ಪಾದೂರು ತೈಲ ಸಂಸ್ಕರಣ ಘಟಕದ ಬಂಡೆ ಒಡೆಯುವ ಕಾಮಗಾರಿ ವೇಳೆ ಹಾನಿಯಾಗಿರುವ 150 ಮನೆಗಳಿಗೆ ಇನ್ನೂ ಪರಿಹಾರ ನೀಡದೆ ಇರುವ ಕುರಿತು ಮಜೂರು ಗ್ರಾ.ಪಂ ಅಧ್ಯಕ್ಷ  ಸಭೆಯ ಗಮನಕ್ಕೆ ತಂದರು. ಈ ಕುರಿತು ಪ್ರಧಾನಮಂತ್ರಿಗಳಿಗೆ ಮತ್ತು ಮುಖ್ಯಮಂತ್ರಿಗಳಿಗೂ ಪತ್ರ ಬರೆಯಲಾಗಿದೆ. ಅವರು ಉತ್ತರ ಕೇಳಿ ಜಿಲ್ಲಾಡಳಿತಕ್ಕೆ ಪತ್ರ ಬರೆಯು ತ್ತಾರೆ, ಆದರೆ ಇಲ್ಲಿ ಮಾತ್ರ ಅದಕ್ಕೆ ಸರಿಯಾದ ಉತ್ತರ ಸಿಗುತ್ತಿಲ್ಲ ಎಂದರು. ಇದಕ್ಕೆ ಉತ್ತರಿಸಿದ ತಹಶೀಲ್ದಾರ್‌ ಪ್ರದೀಪ್‌ ಕುರುಡೇಕರ್‌ ಈ ಕುರಿತು ಮಂಗಳವಾರ ನಡೆದ ಜಿ.ಪಂ ಸಾಮಾನ್ಯ ಸಭೆಯಲ್ಲಿಯೂ ಚರ್ಚೆ ನಡೆದಿದೆ. ಸಂಬಂಧಪಟ್ಟವರಿಗೆ ಡಿಸಿ ಪುನಃ ಪತ್ರ ಬರೆಯುವಂತೆ ನಿರ್ಧರಿಸಲಾಗಿದೆ ಎಂದರು.

ಪಡಿತರ ಚೀಟಿ ಶುಲ್ಕ ಬಳಸಲು ಸೂಚನೆ
ಪಡಿತರ ಚೀಟಿಗೆ ಫೋಟೊ ತೆಗೆಯುವ ಸಂದರ್ಭ 50 ರೂ.ಗಳನ್ನು ಸಂಗ್ರಹಿಸಲಾಗಿದೆ. ಅದನ್ನು ಪ್ರತ್ಯೇಕವಾಗಿ ಖಾತೆ ತೆರೆದು ಜಮೆ ಮಾಡುವಂತೆ ಸೂಚಿಸಲಾಗಿತ್ತು. ಇತ್ತೀಚಿಗೆ ಒಂದು ಪಂಚಾಯತ್‌ನಲ್ಲಿ ನಾನು ಪರಿಶೀಲಿಸಿದಾಗ 2.5ಲಕ್ಷ ರೂ. ಹಣವಿದೆ. ಅದನ್ನು ಆಹಾರ ಇಲಾಖೆ ತೆಗೆದುಕೊಳ್ಳದೆ ಇರುವುದಾದರೆ ಅದನ್ನು ಗ್ರಾಮದ ಅಭಿವೃದ್ಧಿ ಕಾರ್ಯಗಳಿಗೆ ಬಳಸಿಕೊಳ್ಳಬಹುದಲ್ಲ ಎಂದು ಸದಸ್ಯ ಸುಧೀರ್‌ಕುಮಾರ ಶೆಟ್ಟಿ ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ತಹಶೀಲ್ದಾರ್‌, ಈ ಹಣವನ್ನು ಪಂಚಾಯತ್‌ ಅಭಿವೃದ್ಧಿಗೆ ಬಳಸಿಕೊಳ್ಳಬಹುದೆಂದು ಸರಕಾರ ಈ ಹಿಂದೆಯೇ ಸುತ್ತೋಲೆ ಹೊರಡಿಸಿದೆ. ಇದು ಸರಿಯಾಗಿ ಸಂವಹನವಾಗದೇ ಇರುವುದರಿಂದ ಪುನಃ ಸುತ್ತೋಲೆ ಕಳುಹಿಸಲು ತಿಳಿಸಲಾಗುವುದು ಎಂದು ತಿಳಿಸಿದರು.

ವಿದ್ಯಾಸಿರಿ: ಅವಧಿ ವಿಸ್ತರಣೆ
ವಿದ್ಯಾಸಿರಿ ಯೋಜನೆಯಲ್ಲಿ ತಹಶೀಲ್ದಾರ್‌ ಚುನಾವಣೆ ಕರ್ತವ್ಯದಲ್ಲಿದ್ದುದರಿಂದ ಹಲವು ವಿದ್ಯಾರ್ಥಿಗಳಿಗೆ ತೊಡಕಾಗಿದೆ ಇದರ ದಿನಾಂಕವನ್ನು ವಿಸ್ತರಿಸಬೇಕೆಂದು ಸದಸ್ಯರು ಒತ್ತಾಯಿಸಿದರು. ಈ ಕುರಿತು ಜಿ.ಪಂ ಸಾಮಾನ್ಯ ಸಭೆಯಲ್ಲೂ ಚರ್ಚೆಯಾಗಿದೆ. ಚುನಾವಣೆ ಹಿನ್ನೆಲೆ ಸೆ.11ರ ತನಕ ದಿನಾಂಕ ವಿಸ್ತರಣೆಯಾಗಿತ್ತು. ಈ ಮಾಹಿತಿ ಜನರಿಗೆ ತಲುಪದ ಕಾರಣ ಪುನಃ ದಿನಾಂಕ ವಿಸ್ತರಿಸಲು ಪತ್ರಬರೆಯುವಂತೆ ಸೂಚಿಸಲಾಗಿದೆ ಎಂದು ತಹಶೀಲ್ದಾರ್‌ ತಿಳಿಸಿದರು.

ಬಾರ್ಕೂರು ರಸ್ತೆಯ ಅಪಾಯ
ಬ್ರಹ್ಮಾವರ ಬಾರ್ಕೂರು ರಸ್ತೆಯಲ್ಲಿ ಅಪಾಯಕಾರಿ ತಿರುವುಗಳಿದ್ದು ಈ ರಸ್ತೆಗೆ ತಡೆಗೋಡೆ ನಿರ್ಮಿಸಬೇಕು ಮತ್ತು ಸಾಸ್ತಾನ – ಬಾರ್ಕೂರು ಸಂಪರ್ಕ ರಸ್ತೆಯ ಚರಂಡಿಗಳಲ್ಲಿ ಹೂಳು ತುಂಬಿ ಮಳೆಗಾಲದಲ್ಲಿ ರಸ್ತೆ ಮೇಲೆ ನೀರು ನಿಲ್ಲುತ್ತಿದೆ. ಈ ಕಡೆ ಪಿಡಬ್ಲ್ಯೂಡಿ ಇಲಾಖೆ ಗಮನವನ್ನೇ ಹರಿಸಿಲ್ಲ ಎಂದು ಬಾರ್ಕೂರು ಪಂಚಾಯತ್‌ ಅಧ್ಯಕ್ಷೆ ಸಭೆಗೆ ತಿಳಿಸಿದರು. ಅಧ್ಯಕ್ಷೆ ನಳಿನಿ ಪ್ರದೀಪ್‌ ರಾವ್‌, ಬಾರ್ಕೂರು ಸೇತುವೆ ಬಳಿ ತಡೆಗೋಡೆ ನಿರ್ಮಿಸಲಾಗಿದೆ ಎಂದಾಗ, ಸೇತುವೆ ಬಳಿ ಮಾತ್ರ ಅಳವಡಿಸಲಾಗಿದೆ ಗಣಪತಿ ದೇವಸ್ಥಾನದ ಬಳಿ ಮತ್ತು ಚೌಳಿಕೆರೆ ಬಳಿ ತಡೆಗೋಡೆ ನಿರ್ಮಿಸಬೇಕು ಎಂದರು. ಆಗ ಅಧ್ಯಕ್ಷರು ಪಿಡಬ್ಲ್ಯೂಡಿ ಅಧಿಕಾರಿಗಳಿಗೆ ಸ್ಥಳಕ್ಕೆ  ಹೋಗಿ ಪರಿಶೀಲಿಸಿ ಸಮಸ್ಯೆ ಬಗೆಹರಿಸಲು ಸೂಚಿಸಿದರು.

ಉಪಾಧ್ಯಕ್ಷ ರಾಜೇಂದ್ರ ಪಿ. ಸ್ಥಾಯಿ ಸಮಿತಿಯ ಭುಜಂಗ ಶೆಟ್ಟಿ, ಬ್ರಹ್ಮಾವರ ವಿಶೇಷ ತಹಶೀಲ್ದಾರ್‌ ಅನೀಲ್‌ ಉಪಸ್ಥಿತರಿದ್ದರು. ನೀತಾ ಗುರುರಾಜ್‌, ಮೈಕೆಲ್‌ ಡಿ’ಸೋಜಾ, ಶಶಿಪ್ರಭಾ ಶೆಟ್ಟಿ, ಸಂಧ್ಯಾ ಶೆಟ್ಟಿ, ಡಾ| ಸುನೀತಾ ಶೆಟ್ಟಿ, ಧನಂಜಯ ಚರ್ಚೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.