ಶಂಕರಪುರ ಮಲ್ಲಿಗೆ ಕಟ್ಟೆಯಲ್ಲಿ 820 ರೂ.; ಮಾರುಕಟ್ಟೆಯಲ್ಲಿ 2,000 ರೂ.


Team Udayavani, Sep 13, 2018, 5:30 AM IST

jasmine-600.jpg

ಶಿರ್ವ: ವಿಪರೀತ ಮಳೆ ಕಾರಣ ಗಿಡಗಳು ಹಾಳಾಗಿ ಬೇಡಿಕೆಗೆ ಅನುಗುಣವಾಗಿ ಮಾರುಕಟ್ಟೆಗೆ ಮಲ್ಲಿಗೆ ಬಾರದಿರುವುದನ್ನೇ ಅವಕಾಶವಾಗಿಸಿಕೊಂಡ ಕೆಲವು ವ್ಯಾಪಾರಿಗಳು ಮಲ್ಲಿಗೆ ಪ್ರಿಯರಿಂದ ಮೂರು ಪಟ್ಟು ಹೆಚ್ಚಿಗೆ ದರವನ್ನು ವಸೂಲಿ ಮಾಡುತ್ತಿರುವ ಬಗ್ಗೆ ದೂರುಗಳು ಕೇಳಿಬಂದಿವೆ. ಶ್ರಾವಣ ಮಾಸ ಪ್ರಾರಂಭವಾಗಿದ್ದು ಹಬ್ಬಗಳು ಸಾಲಾಗಿ ಬರುತ್ತಿವೆ. ಮಲ್ಲಿಗೆಗೆ ಬೇಡಿಕೆ ಹೆಚ್ಚು. ಆದರೆ ಮಲ್ಲಿಗೆ ಬೆಳೆ ಹಾಳಾಗಿ ಸಾಕಷ್ಟು ಮಾರುಕಟ್ಟೆಗೆ ಬರುತ್ತಿಲ್ಲ. ಬಂದ ಮಲ್ಲಿಗೆ ಪ್ರಮಾಣದಲ್ಲೂ ಕೆಲವು ವ್ಯಾಪಾರಿಗಳು ಕೃತಕ ಅಭಾವ ಸೃಷ್ಟಿಸಿ ಮಲ್ಲಿಗೆ ಅಟ್ಟೆಗೆ 2ರಿಂದ 2,500 ರೂ. ವಸೂಲು ಮಾಡುತ್ತಿದ್ದಾರೆ. ವಿಪರ್ಯಾಸವೆಂದರೆ, ಬೆಳೆಗಾರರು 820 ರೂ. ಗಳಿಗೆ ಮಾರುತ್ತಿದ್ದಾರೆ. ಆದರೆ ಉಡುಪಿ- ಮಂಗಳೂರು ಹೆದ್ದಾರಿ ಹಾಗೂ ಉಡುಪಿ ಮತ್ತಿತರೆಡೆ 2 ಸಾವಿರ ರೂ. ಕೊಡದಿದ್ದರೆ ಮಲ್ಲಿಗೆ ಸಿಗದು ಎಂಬಂತಾಗಿದೆ.

ನಗರಗಳ ಅಂಗಡಿ, ಹೆದ್ದಾರಿಯಲ್ಲಿ ಕೆಲವು ವ್ಯಾಪಾರಿಗಳು ಗ್ರಾಹಕರಿಗೆ ಕಡಿಮೆ ಮಲ್ಲಿಗೆ ತೋರಿಸಿ, ದುಬಾರಿ ದರ ತೆತ್ತುಕೊಳ್ಳುವುದು ಅನಿವಾರ್ಯ ಎನ್ನುವ ಪರಿಸ್ಥಿತಿ ನಿರ್ಮಿಸುತ್ತಿದ್ದಾರೆ. ನಿಮ್ಮಲ್ಲಿ ಬುಧವಾರ ಪ್ರಕಟವಾದ (ಮಂಗಳವಾರದ ಮಾರುಕಟ್ಟೆ ವಿವರ) ಮಾರುಕಟ್ಟೆ ಮಾಹಿತಿಯಲ್ಲಿ ಅಟ್ಟೆಗೆ 820 ರೂ.ಗಳೆಂದಿತ್ತು. ಆದರೆ, ಹೆದ್ದಾರಿಯ ಪಾಂಗಾಳ ಬಳಿ  2 ಸಾವಿರ ರೂ.ವರೆಗೂ ದರ ವಿಧಿಸಲಾಯಿತು. ಮಾರುಕಟ್ಟೆಯ ಬೆಲೆಗೂ ಹೂವಿನ ಅಂಗಡಿಗಳ ದರಕ್ಕೂ 3 ಪಟ್ಟು ವ್ಯತ್ಯಾಸವೇಕೆ ಎಂದು ‘ಉದಯವಾಣಿ’ ಓದುಗರೊಬ್ಬರು ಪತ್ರಿಕೆಗೆ ದೂರು ನೀಡಿದ್ದರು. ವಾಸ್ತವ ಅರಿಯಲು ಶಂಕರಪುರ, ಕಾಪು, ಪಾಂಗಾಳ ಮತ್ತಿತರೆಡೆ ತೆರಳಿದಾಗ ನಿಜ ಎಂಬುದು ಅರಿವಿಗೆ ಬಂತು.

ಮೂರು ಪಟ್ಟು ಹೆಚ್ಚು ಏಕೆ?
ಸೆಪ್ಟಂಬರ್‌ ಮೊದಲ ವಾರದಿಂದಲೇ ಅಟ್ಟೆಗೆ 820 ರೂ.ಗಳಿತ್ತು.  ಹಬ್ಬ, ಮದುವೆ ಸೀಸನ್‌ನಲ್ಲಿ ಪ್ರತಿ ಬಾರಿಯೂ ಕೆಲ ವ್ಯಾಪಾರಿಗಳು 3 ಪಟ್ಟು ದರ ವಸೂಲಿ ಮಾಡುತ್ತಿದ್ದಾರೆ ಎಂಬ ಆರೋಪವಿದೆ. ಗ್ರಾಹಕರೂ ಹೇಳುವಂತೆ, ಕಟ್ಟೆಗಿಂತ ತುಸು ಹೆಚ್ಚು ಪಡೆದರೆ ಸರಿ. ಆದರೆ 3 ಪಟ್ಟು ಹೆಚ್ಚಳ ಏಕೆ? ಇದು ಜನರನ್ನು ವಂಚಿಸಿದಂತಲ್ಲವೇ?’ ಎಂದು ಪ್ರಶ್ನಿಸುತ್ತಾರೆ ಗ್ರಾಹಕರು.

ಕಾಪು : ಶಂಕರಪುರದ ದರ ನಿಗದಿ ಪಡಿಸುವ ಕಟ್ಟೆಯಲ್ಲಿ ಅಟ್ಟೆಯೊಂದಕ್ಕೆ ಗರಿಷ್ಠ ದರ 820 ರೂ. ನಿಗದಿಯಾಗಿದೆ. ಆದರೆ ಮಾರುಕಟ್ಟೆಯಲ್ಲಿ ಜನಸಾಮಾನ್ಯರು ಕೊಳ್ಳುವ ಸ್ಥಿತಿಯಲ್ಲಿಲ್ಲ. ಕಾಪು ಪೇಟೆಯಲ್ಲಿ ಇರುವ ಹೂವಿನ ಅಂಗಡಿಗಳಲ್ಲಿ ಪ್ರತೀ ಅಟ್ಟೆ ಮಲ್ಲಿಗೆಗೆ 1,200 ರೂ. ನಿಂದ ಹಿಡಿದು 1,400 ರೂ. ವರೆಗೆ ಮಾರಾಟವಾಗುತ್ತಿದ್ದರೆ, ಪಾಂಗಾಳದ ಬಳಿಯ ವ್ಯಾಪಾರಿಗಳಲ್ಲಿ ಚೆಂಡಿಗೆ 500 ರೂ. ಆಗಿದ್ದು, ಅಟ್ಟೆಗೆ 2,000 ರೂ. ಆಗಿದೆ. ಕಾಪುವಿನಿಂದ ಕಟಪಾಡಿ – ಉಡುಪಿಗೆ ಹೋದರೆ ಕೆಲವೆಡೆ 2, 500 ರೂ.ವರೆಗೂ ಬುಧವಾರ ದರ ಚಾಲ್ತಿಯಲ್ಲಿತ್ತು.

ಮಳೆ – ಬಿಸಿಲು, ಮಂಜಿನ ಕಾರಣದಿಂದಾಗಿ ಮಲ್ಲಿಗೆ ಗಿಡಗಳು ಹಾಳಾಗಿದ್ದು, ಇಳುವರಿ ಕಡಿಮೆಯಾಗಿದೆ. ಮಲ್ಲಿಗೆ ಪೂರೈಸುವ ಕಟ್ಟೆಯಿಂದ ನಮ್ಮ ಅಂಗಡಿಗೆ ಹೂವೇ ಬರುತ್ತಿಲ್ಲ. ದಿನಕ್ಕೆ 20 ಅಟ್ಟೆ ಬದಲು ಕೇವಲ 1 ಅಟ್ಟೆ ಬರುತ್ತಿದೆ. ಹಾಗಾಗಿ ಹೂವಿಗೆ ಅಭಾವ ಮತ್ತು ಗ್ರಾಹಕರ ಪೈಪೋಟಿಯ ಕಾರಣದಿಂದ ದರ ಏರಿಸುವಂತಾಗಿದೆ. ಇದು ಒಂದೆರಡು ದಿನಕ್ಕೆ ಸೀಮಿತ ಎನ್ನುತ್ತಾರೆ ವ್ಯಾಪಾರಿ ಉದಯ್‌ ಜಿ. ಕಾಪು.

ಸಿಕ್ಕಾಪಟ್ಟೆ ದರ ಏರಿಕೆಯನ್ನು ಖಂಡಿಸುವ ಗೃಹಿಣಿ ಶಾರದೇಶ್ವರಿ, ‘ಹೆದ್ದಾರಿ ಬದಿಯ ಹೂವಿನ ಅಂಗಡಿಗೆ ತೆರಳಿದರೆ ಅಲ್ಲಿ ಮಲ್ಲಿಗೆ ಹೂವೇ ಇಲ್ಲ ಎನ್ನುತ್ತಾರೆ. ಮತ್ತೆ ಕೇಳಿದರೆ ದರ ಹೆಚ್ಚಿದೆ, ಹಾಗಾಗಿ ಇಲ್ಲ ಎನ್ನುತ್ತಾರೆ. ಮತ್ತೂ ವಿನಂತಿಸಿದರೆ, ಸ್ವಲ್ಪ ಇದೆ. ಆದರೆ ಚೆಂಡಿಗೆ 500 ರೂ. ಎನ್ನುತ್ತಾರೆ. ಕಟ್ಟೆಯಲ್ಲಿ 820 ರೂ. ನಿಗದಿಯಾದ ದರ ಮೂರು ಪಟ್ಟು ಏರಿಸುವುದು ಎಷ್ಟು ಸರಿ? ಇದನ್ನು ಗ್ರಾಹಕರೂ ಪ್ರೋತ್ಸಾಹಿಸಬಾರದು’ ಎನ್ನುತ್ತಾರೆ ಅವರು. 

ಜಾಜಿಗೆ ಬಂಪರ್‌ ಬೆಲೆ 
ಮಳೆಗಾಲ ಪ್ರಾರಂಭವಾದಂದಿನಿಂದಲೂ ನಿರಂತರ ಸುರಿವ ಮಳೆಯಿಂದಾಗಿ ಹೂವಿನ ಮೊಗ್ಗು ಹಾಳಾಗಿದ್ದು ಮಲ್ಲಿಗೆ ಇಳುವರಿ ಕಡಿಮೆಯಾಗಿದೆ. ಬೆಳೆ ಕಡಿಮೆಯಾಗಿ ಕಟ್ಟೆಗೆ ಬರುವ ಮಲ್ಲಿಗೆ ಹೂವಿನ ಪ್ರಮಾಣವೂ ಕಡಿಮೆಯಾಗಿದೆ. ಮಲ್ಲಿಗೆ ಹೂ ಇಲ್ಲದಿರುವುದರಿಂದ ಬೆಳೆಗಾರರಿಗೆ ಯಾವುದೇ ಖರ್ಚಿಲ್ಲದೆ ಬೆಳೆಯುವ ಜಾಜಿಗೆ ಬಂಪರ್‌ ಬೆಲೆ ಬಂದಿದೆ. ಕಳೆದ ವಾರದಿಂದ 300-400 ಆಸುಪಾಸಿನಲ್ಲಿದ್ದ ಜಾಜಿಗೆ ಕಳೆದೆರಡು ದಿನಗಳಿಂದ ಅಟ್ಟೆಗೆ 720 ರೂ.ತಲುಪಿದೆ. 

ಹೂ ಹೇರಳವಾಗಿದ್ದಾಗ ಬೇಡಿಕೆ ಕಡಿಮೆ ಇದ್ದು ನಷ್ಟ ಸಂಭವಿಸುತ್ತದೆ. ಹಬ್ಬಗಳ ಅವಧಿಯಲ್ಲಿ ಒಂದಿಬ್ಬರು ಅಗತ್ಯವಿರುವ ಗ್ರಾಹಕರು ಹೆಚ್ಚು ಹಣ ಕೊಟ್ಟು ಹೂ ಖರೀದಿಸಿದರೂ ನಾವು ಕಟ್ಟೆಯಿಂದ ಪ್ರತಿದಿನ ಕೊಂಡೊಯ್ಯುವ ಮಾರಾಟಗಾರರಿಗೆ ಕೊಡಬೇಕು. ಅಗತ್ಯವಿರುವವರು ಮಾತ್ರ ಹೆಚ್ಚು ಹಣಕೊಟ್ಟು ಹೂ ಕೊಂಡೊಯ್ಯುತ್ತಾರೆ.
– ವಿನ್ಸೆಂಟ್‌ ರೊಡ್ರಿಗಸ್‌, ಶಂಕರಪುರದ ವ್ಯಾಪಾರಿ

ಟಾಪ್ ನ್ಯೂಸ್

Devon Conway ruled out of IPL 2024

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

1-qeqewqe

Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

S. Jaishankar: ಎ.19 ರಂದು ಕೇಂದ್ರ ಸಚಿವ ಜೈಶಂಕರ್ ಉಡುಪಿಗೆ ಭೇಟಿ

S. Jaishankar: ಎ.19 ರಂದು ಕೇಂದ್ರ ಸಚಿವ ಜೈಶಂಕರ್ ಉಡುಪಿಗೆ ಭೇಟಿ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

3-hegde

LS Polls: ಮಾಡಿದ ಕೆಲಸ ನೋಡಿ ಮತ ನೀಡಿ: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Devon Conway ruled out of IPL 2024

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.