ಮರಳಿಗಾಗಿ ಹೋರಾಟ: ಶಾಸಕ ರಘುಪತಿ ಭಟ್
Team Udayavani, Sep 16, 2018, 10:37 AM IST
ಉಡುಪಿ: ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಮರಳು ಸಮಸ್ಯೆ ಮುಂದುವರಿದಿದೆ. ಮುಖ್ಯಮಂತ್ರಿಗಳ ಆದೇಶವೂ ಪಾಲನೆಯಾಗುತ್ತಿಲ್ಲ. ಹಾಗಾಗಿ ಮುಂದಿನ ವಾರದಿಂದ ಜಿಲ್ಲಾಧಿಕಾರಿ ಸಹಿತ ಅಧಿಕಾರಿಗಳ ವಿರುದ್ಧ ಹೋರಾಟ ನಡೆಸಲು ನಿರ್ಧರಿಸಲಾಗಿದೆ ಎಂದು ಶಾಸಕ ಕೆ. ರಘುಪತಿ ಭಟ್ ತಿಳಿಸಿದರು.
ಶನಿವಾರ ಕಿದಿಯೂರು ಹೊಟೇಲ್ ಸಭಾಂಗಣದಲ್ಲಿ ಅಸೋಸಿಯೇಶನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಎಂಜಿನಿಯರ್ ಆ್ಯಂಡ್ ಆರ್ಕಿಟೆಕ್ಟ್Õ ವತಿಯಿಂದ ಜರಗಿದ ಎಂಜಿನಿಯರ್ ಡೇ ಉದ್ಘಾಟಿಸಿ ಅವರು ಮಾತನಾಡಿದರು.
ಮರಳು ಸಮಸ್ಯೆಯಿಂದಾಗಿ ನಿರ್ಮಾಣ ಕ್ಷೇತ್ರದ ಮೇಲೆ ಭಾರೀ ಹೊಡೆತ ಬಿದ್ದಿದೆ. ಕಾರ್ಮಿಕರಿಗೆ ಕೆಲಸ ಇಲ್ಲದಂತಾಗಿದೆ. ಈ ಭಾಗದ ಶಾಸಕರ ನಿರಂತರ ಶ್ರಮದ ಫಲವಾಗಿ ಉಡುಪಿಗೆ ಆಗಮಿಸಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು 2 ತಾಸು ಕಾಲ ಮರಳು ಸಮಸ್ಯೆ ಬಗ್ಗೆ ಚರ್ಚಿಸಿ ಅಂತಿಮವಾಗಿ ಮರಳು ದಿಬ್ಬಗಳನ್ನು ಗುರುತಿಸಲು ಎನ್ಐಟಿಕೆಗೆ ಪತ್ರಬರೆಯುವಂತೆ ಜಿಲ್ಲಾಧಿಕಾರಿಗಳಿಗೆ ಆದೇಶಿಸಿದ್ದರು. ಆದರೆ ಜಿಲ್ಲಾಧಿಕಾರಿ ಅದನ್ನು ಪಾಲಿಸುತ್ತಿಲ್ಲ. ಅಂತಿಮವಾಗಿ ಮತ್ತೂಮ್ಮೆ ಉಡುಪಿ ಜಿಲ್ಲೆಯ ಎಲ್ಲ ಶಾಸಕರು ಜಿಲ್ಲಾಧಿಕಾರಿಯವರನ್ನು ಭೇಟಿ ಮಾಡಿ ಅನಂತರ ಪ್ರತಿಭಟನೆಯ ಕುರಿತು ತೀರ್ಮಾನ ತೆಗೆದುಕೊಳ್ಳಲಿದ್ದೇವೆ ಎಂದರು.
ರಾಜಕೀಯ ಭ್ರಷ್ಟಾಚಾರ ಕೊನೆ
ಉಡುಪಿ ನಗರಸಭೆಯಲ್ಲಿ ನಿರ್ಮಾಣ ಸಂಬಂಧ ಯಾವುದೇ ಕಡತಗಳನ್ನು ಉದ್ದೇಶಪೂರ್ವಕ ತೆಗೆದಿರಿಸಿ ವಿಳಂಬಿಸಲು ಅವಕಾಶ ನೀಡುವುದಿಲ್ಲ. ಕಂಪ್ಲೀಷನ್ ಸರ್ಟಿಫಿಕೇಟ್ನ್ನು ಆಯುಕ್ತರ ಮಟ್ಟದಲ್ಲಿಯೇ ನೀಡಲು ಕ್ರಮ ಕೈಗೊಂಡು ರಾಜಕೀಯ ಭ್ರಷ್ಟಾಚಾರ ನಿಲ್ಲಿಸಲಾಗುವುದು ಎಂದು ರಘುಪತಿ ಭಟ್ ತಿಳಿಸಿದರು.
ತೂಗು ಸೇತುವೆಗಳ ನಿರ್ಮಾತೃ
ಗಿರೀಶ್ ಭಾರದ್ವಾಜ್, ಅಸೋಸಿ ಯೇಶನ್ ಗೌರವಾಧ್ಯಕ್ಷ ನಾಗೇಶ್ ಹೆಗ್ಡೆ, ಉಪಾಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಅಮಿತ್ ಅರವಿಂದ್ ಉಪಸ್ಥಿತರಿದ್ದರು.
ಸಮ್ಮಾನ
ಅವಿಭಜಿತ ದ.ಕ. ಜಿಲ್ಲೆಯ ಮೊದಲ ಮಹಿಳಾ ಎಂಜಿನಿಯರ್, ಕರಾವಳಿಯ ಪ್ರಮುಖ ಸೇತುವೆಗಳ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ನಿವೃತ್ತ ಮಹಿಳಾ ಎಂಜಿನಿಯರ್ ಜಯಂತಿ ಪ್ರಭು, ಜಿ.ಪಂ. ನಿವೃತ್ತ ಸಹಾಯಕ ಕಾರ್ಯ
ನಿವಾರ್ಹಕ ಎಂಜಿನಿಯರ್ ಎಂ. ಪಾಲಚಂದ್ರ ರಾವ್ ಹಾಗೂ ಸಿದ್ದರಾಜು ಅವರನ್ನು ಸಮ್ಮಾನಿಸಲಾಯಿತು.
ಅಧ್ಯಕ್ಷ ಎಂ. ಗೋಪಾಲ್ ಭಟ್ ಸ್ವಾಗತಿಸಿದರು. ಯೋಗೀಶ್ ಚಂದ್ರ ಕಾರ್ಯಕ್ರಮ ನಿರ್ವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ