ಈಗಲೇ ನದಿಗಳಲ್ಲಿ ನೀರಿಲ್ಲ, ಬೇಸಗೆ ಹೇಗೆ?


Team Udayavani, Sep 18, 2018, 12:36 PM IST

swarna.png

ಪಶ್ಚಿಮ ಘಟ್ಟ  ನಾಶದ ಒಂದೊಂದೇ ಪರಿಣಾಮ ಗೋಚರಕ್ಕೆ ಬರುತ್ತಿದೆ. ಕರಾವಳಿಯಂಥ ಭಾಗದಲ್ಲಿ ಸೆಪ್ಟಂಬರ್‌ನಲ್ಲೇ ಬಿಸಿಲು ಹೆಚ್ಚಾಗಿ, ನವೆಂಬರ್‌ ಸುಮಾರಿನಲ್ಲೇ ಬೇಸಗೆಯ ಬವಣೆ ಆರಂಭವಾಗುವ ಆತಂಕ ಎದುರಾಗಿದೆ. ಇದ್ದ ಮರಗಳನ್ನೆಲ್ಲ ಬೃಹತ್‌ ಯೋಜನೆಗೆ ಕಡಿದುರುಳಿಸಿ ಕುರುಚಲು ಗಿಡಗಳನ್ನೇ ಕಾಡೆಂದು ಬಿಂಬಿಸುವ ಪ್ರಯತ್ನ ನಡೆದಿರುವುದೂ ಇದಕ್ಕೆ ಕಾರಣ ಎನ್ನಲಾಗುತ್ತಿದೆ.

ಉಡುಪಿ: ಆಗಸ್ಟ್‌ನಲ್ಲಿ ಸುರಿದ ಮಳೆಯಿಂದ ಕೇರಳ, ಕೊಡಗು, ದ.ಕ. ಜಿಲ್ಲೆಯ ಆಂಶಿಕ ಭಾಗದಲ್ಲಿ ವಿಪರೀತ ಹಾನಿಯಾಗಿತ್ತು. ದ.ಕ., ಕೊಡಗು ಜಿಲ್ಲೆಗಿಂತ ಹೆಚ್ಚು ಮಳೆ ಉಡುಪಿ ಜಿಲ್ಲೆಯಲ್ಲಿ ಸುರಿಯಿತು. ಕರಾವಳಿ ಭಾಗದಲ್ಲಿ ಈ ಬಾರಿ ಕುಡಿಯುವ ನೀರಿಗೇ ತತ್ವಾರ ಉಂಟಾಗುವ ಸ್ಥಿತಿಯ ಮುನ್ಸೂಚನೆ ಇದೆ.

ಉಡುಪಿ ಜಿಲ್ಲೆಯಲ್ಲಿ ಇದುವರೆಗೆ 3,737 ಮಿ.ಮೀ. ಮಳೆಯಾಗಿದೆ. ಇದು ವಾಡಿಕೆಯ ಮಳೆಗಿಂತ ಕೇವಲ 146 ಮಿ.ಮೀ. ಕಡಿಮೆ. ಜಿಲ್ಲೆಯಲ್ಲಿ ಈ ಬಾರಿ ಒಂದೇ ಸಮನೆ ಮೂರು ಬಾರಿ ದೊಡ್ಡ ಮಟ್ಟದ ಮಳೆ ಸುರಿಯಿತು. ಇದರಿಂದ ಸಾವಿರಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಯಿತು. ಆದರೆ ಈಗ ಕೇರಳದಂತೆಯೇ ಕರಾವಳಿಯಲ್ಲೂ ನದಿಗಳಲ್ಲಿ ನೀರಿನ ಪ್ರಮಾಣ ಗಣನೀಯವಾಗಿ ಇಳಿದಿದೆ. 

ಈಗ ಸೆಪ್ಟಂಬರ್‌ನಲ್ಲೂ ನವೆಂಬರ್‌ನ ಸ್ಥಿತಿ ನದಿಗಳಲ್ಲಿವೆ. ಒಂದು ತಿಂಗಳಿನಿಂದ ಮಳೆ ಬಂದಿಲ್ಲ. ಕಳೆದ ವರ್ಷ ಸ್ವರ್ಣಾನದಿಯ ಹಿರಿಯಡಕ ಭಾಗದಲ್ಲಿ 50 ಅಶ್ವಶಕ್ತಿ ಮೋಟರಿನಷ್ಟು ನೀರು ಹರಿಯುತ್ತಿದ್ದರೆ ಈಗ 5-10 ಅಶ್ವಶಕ್ತಿಯಷ್ಟು ಮಾತ್ರ ಹರಿಯುತ್ತಿದೆ. ಮನೆ ಸಮೀಪದ ಸಣ್ಣ ತೋಡುಗಳೂ ಒಣಗಿವೆ ಎನ್ನುತ್ತಾರೆ ಗ್ರಾಮ ಪಂಚಾಯತ್‌ ಮಾಜಿ ಅಧ್ಯಕ್ಷ ಸುರೇಶ ನಾಯಕ್‌ ಮುಂಡುಜೆ ಅವರು.

ಕಾಂಕ್ರೀಟ್‌ ಕಾಮಗಾರಿಯೂ ಕಾರಣ?
ಒಂದೇ ಸಮನೆ ಮಳೆ ಬಂದ ಕಾರಣ ನೀರು ಇಂಗದೆ ಸಮುದ್ರಕ್ಕೆ ಹೋದದ್ದು, ಅನಂತರ ನಿರಂತರ ಮಳೆ ಬಾರದೆ ಇದ್ದದ್ದು ನದಿಗಳಲ್ಲಿ ನೀರಿನ ಹರಿಯುವಿಕೆ ಕಡಿಮೆಯಾಗಲು ಕಾರಣ. ಬಾವಿಗಳಲ್ಲಿಯೂ ನೀರು ಇಳಿಯುತ್ತಿದೆ. ಎಲ್ಲೆಲ್ಲಿ ಕಾಂಕ್ರೀಟ್‌ ರಚನೆಗಳು ಆಗುತ್ತಿವೆಯೋ ಅಲ್ಲಿ ಎಷ್ಟೇ ಮಳೆ ಬಂದರೂ ನೀರು ಇಂಗದು. ಹಿಂದೆ ಮನೆಯಂಗಳಕ್ಕೆ ಸಿಮೆಂಟ್‌ ಹಾಕುತ್ತಿರಲಿಲ್ಲ. ಇದು ಬಾವಿಯ ಅಂತರ್ಜಲ ಹೆಚ್ಚಿಸಲು ಸಹಕಾರಿಯಾಗುತ್ತಿತ್ತು. ಈಗ ಮನೆ ಅಂಗಳದಿಂದ ಹಿಡಿದು ಪ್ರತಿ ರಸ್ತೆಗೂ ಕಾಂಕ್ರೀಟ್‌ ಹಾಕಲಾಗುತ್ತಿದೆ. ವಿಶೇಷವಾಗಿ ಉಡುಪಿಯಂಥ ನಗರ ಪ್ರದೇಶಗಳಲ್ಲಿ 400 ಮಿ.ಮೀ. ಮಳೆ ಬಂದರೂ ಕಾಂಕ್ರೀಟ್‌ ರಸ್ತೆಯಡಿ ನೀರಿನ ತೇವಾಂಶವಿರದು. ಇದರಿಂದ ನಗರದಲ್ಲಿ ವಿಶೇಷವಾಗಿ ನೀರಿನ ಕೊರತೆ ಹೆಚ್ಚಾಗುತ್ತಿದೆ. ನಗರ ಸಂಸ್ಥೆಗಳು ನೀರು ಕೊಡುತ್ತವೆ ಎಂದು ಕೆಲವರು ಬಾವಿ ಮುಚ್ಚಿದರು. ಇದೇ ಹೊತ್ತಿಗೆ ಒಳಚರಂಡಿ, ತೆರೆದ ಚರಂಡಿಯಂಥ ಸಮಸ್ಯೆಯಿಂದ ಬಾವಿಯ ನೀರೂ ಹಾಳಾಗಿ ಬಾವಿ ಮುಚ್ಚಲು ಕಾರಣ ಒದಗಿಸಿತು. ಈಗ ಸರಕಾರಕ್ಕೂ ನೀರು ಪೂರೈಸುವುದು ಕಷ್ಟವಾಗುತ್ತಿದೆ.

ಬೇಸಗೆಯಂತೆ ಬಿಸಿಲು
ಸ್ವರ್ಣಾ ನದಿಯಲ್ಲಿ ನೀರಿನ ಒಳ ಹರಿವು ಜನವರಿವರೆಗೆ ಇರುತ್ತಿತ್ತು. ಈಗಿನ ಸ್ಥಿತಿ ಮುಂದುವರಿದರೆ ಜನವರಿಯಲ್ಲೇ ಕುಡಿಯುವ ನೀರಿನ ಕೊರತೆ ಆದೀತೆಂಬ ಭಯ ಕಾಡುತ್ತಿದೆ. ಒಂದು ವಾರ ದಿಂದ ಎಪ್ರಿಲ್‌-ಮೇ ತಿಂಗಳಂತೆ ಬಿಸಿಲಿದೆ. ಈ ಕಾರಣದಿಂದಲೂ ನದಿಗಳ ನೀರು ವೇಗವಾಗಿ ಆವಿಯಾಗುತ್ತಿದೆ ಎನ್ನಲಾಗುತ್ತಿದೆ. ಈಗಲೇ ಬಿಸಿಲು ಹೀಗಿದ್ದರೆ ಎಪ್ರಿಲ್‌ ಕಥೆ ಏನು ಎಂಬುದು ಜನರ ಪ್ರಶ್ನೆ. ಸುಮಾರು 30-40 ವರ್ಷಗಳ ಹಿಂದೆ ಇದೇ ಸಮಯ ಬೆಟ್ಟು ಗದ್ದೆಗಳು ಒಣಗಿದ್ದವು. ಈಗ ಅದಕ್ಕಿಂತ ಭೀಕರ ಸ್ಥಿತಿ ಎದುರಾಗಿದ್ದು, ರಸ್ತೆ ಬದಿಯ ಹುಲ್ಲುಗಳೂ ಒಣಗಿವೆ.

ಒಂದೇ ಸಮನೆ ಮಳೆ ಬಂದು ಹೋದುದೇ ಇದಕ್ಕೆ ಕಾರಣ. ಕೆಲವೇ ದಿನಗಳಲ್ಲಿ ಭಾರೀ ಮಳೆ ಬಂದ ಕಾರಣ ನೀರು ಭೂಮಿಯಲ್ಲಿ ಇಂಗಲು ಸಾಧ್ಯವಾಗದೆ ಸಮುದ್ರಕ್ಕೆ ಹರಿದುಹೋಯಿತು. ಈ ಪ್ರಾಕೃತಿಕ ಅಸಮತೋಲನಕ್ಕೆ ಪಶ್ಚಿಮ ಘಟ್ಟದ ಬೃಹತ್ತಾದ ಮರಗಳ ಅವ್ಯಾಹತ ನಾಶವೇ ಕಾರಣ. ನಮಗೆ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಉತ್ತಮ ಮಳೆಯಾದರೆ ಮಾತ್ರ ನೀರು ಸಿಗುತ್ತದೆ ಎನ್ನುತ್ತಾರೆ ಪರಿಸರ ತಜ್ಞ, ಪೂರ್ಣಪ್ರಜ್ಞ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ| ಎನ್‌.ಎ. ಮಧ್ಯಸ್ಥ.

– ಮಟಪಾಡಿ ಕುಮಾರಸ್ವಾಮಿ

ಟಾಪ್ ನ್ಯೂಸ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್‌: ಮತ್ತೆ ನಕ್ಸಲರ ಸದ್ದು?

Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್‌: ಮತ್ತೆ ನಕ್ಸಲರ ಸದ್ದು?

Hebri; ಸ್ಕೂಟಿಗೆ ಕಾರು ಢಿಕ್ಕಿ,ಸವಾರ ಸ್ಥಳದಲ್ಲೇ ಸಾವು

Hebri; ಸ್ಕೂಟಿಗೆ ಕಾರು ಢಿಕ್ಕಿ,ಸವಾರ ಸ್ಥಳದಲ್ಲೇ ಸಾವು

9-temple

Temple History: ಶ್ರೀ ವಡಭಾಂಡೇಶ್ವರ ಬಲರಾಮ ದೇವಸ್ಥಾನ; ಹಿನ್ನೆಲೆ, ಇತಿಹಾಸ,ವಿಶೇಷಗಳು

5-kaup

Kaup: ಅಯೋಧ್ಯೆಯಂತೆ ಮಾರಿಗುಡಿಯ ಜೀರ್ಣೋದ್ಧಾರವೂ ಸಾಂಗವಾಗಲಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.