ಶಿರ್ವ ಪಾಂಬೂರು: ಮತ್ತೂಂದು ಚಿರತೆ ಬೋನಿಗೆ
Team Udayavani, Sep 21, 2018, 1:35 AM IST
ಶಿರ್ವ: ಪಡುಬೆಳ್ಳೆ, ಸಡಂಬೈಲು, ಪಾಂಬೂರು,ಬಂಟಕಲ್ಲು ಪರಿಸರದಲ್ಲಿ ಆಗಾಗ ಪ್ರತ್ಯಕ್ಷಗೊಂಡು ನಾಗರಿಕರಲ್ಲಿ ಭೀತಿ ಹುಟ್ಟಿಸಿದ್ದ ಮತ್ತೂಂದು ಚಿರತೆ ಪಾಂಬೂರಿನಲ್ಲಿ ಅರಣ್ಯ ಇಲಾಖೆಯವರು ಇರಿಸಿದ್ದ ಬೋನಿಗೆ ಗುರುವಾರ ನಸುಕಿನ ವೇಳೆ ಬಿದ್ದಿದೆ. ಕಳೆದ ತಿಂಗಳು ಇದೇ ಪರಿಸರದಲ್ಲಿ ಸುಮಾರು 8 ವರ್ಷದ ಗಂಡು ಚಿರತೆಯನ್ನು ಸೆರೆಹಿಡಿಯಲಾಗಿತ್ತು.
ಪಾಂಬೂರು ಪರಿಸರದಲ್ಲಿ ಚಿರತೆ ಅಡ್ಡಾಡುವ ದೂರು ಬಂದ ಹಿನ್ನೆಲೆಯಲ್ಲಿ ಪಡುಬೆಳ್ಳೆ ಪಾಂಬೂರು ಹಿ.ಪ್ರಾ. ಶಾಲೆಯ ಬಳಿಯ ಮೊನಿಕಾ ಮತಾಯಸ್ ಅವರ ಮನೆಯ ಸಮೀಪ ಅರಣ್ಯ ಇಲಾಖೆ ಸಿಬಂದಿ ಬುಧವಾರ ರಾತ್ರಿ ಬೋನು ಇರಿಸಿದ್ದರು. ಗುರುವಾರ ಮಧ್ಯರಾತ್ರಿ 2 ಗಂಟೆಯ ವೇಳೆಗೆ ಸುಮಾರು 4 ವರ್ಷದ ಹೆಣ್ಣು ಚಿರತೆ ಬೋನಿಗೆ ಬಿದ್ದಿದೆ.
ಕಳೆದ ಕೆಲವು ಸಮಯದಿಂದ ಪಾಂಬೂರು ಪರಿಸರದಲ್ಲಿ ನಾಟಿಕೋಳಿ, ಸಾಕು ನಾಯಿಗಳು ಕೊಂದು ತಿನ್ನುತ್ತಿರುವ ಚಿರತೆ ಕಾಟದಿಂದ ಜನತೆ ಭಯಭೀತರಾಗಿದ್ದರು.ಒಂದು ಚಿರತೆ ಸೆರೆ ಹಿಡಿದರೂ ಮತ್ತೂಂದು ಚಿರತೆ ಕಾಣಿಸಿಕೊಂಡಿತ್ತು. ಅರಣ್ಯ ಇಲಾಖೆಯ ಕಾರ್ಯಾಚರಣೆ ಯಶಸ್ವಿಯಾಗಿ ತಿಂಗಳ ಅಂತರದಲ್ಲಿ 2 ಚಿರತೆಗಳು ಬೋನಿಗೆ ಬಿದ್ದರೂ ಇನ್ನು ಕೂಡಾ ಚಿರತೆ ಮರಿಗಳು ಪರಿಸರದಲ್ಲೇ ಓಡಾಡಿಕೊಂಡಿವೆ ಎಂದು ಸ್ಥಳೀಯ ನಾಗರಿಕರು ಆತಂಕ ವ್ಯಕ್ತಪಡಿಸುತ್ತಿದ್ದಾರೆ.
ಆ. 9 ರ ಉದಯವಾಣಿ ವರದಿ
ಪಾಂಬೂರು ಪರಿಸರದಲ್ಲಿ ಆ. 7 ರಂದು ದೊಡ್ಡ ಗಾತ್ರದ ಚಿರತೆ ಅರಣ್ಯ ಇಲಾಖೆಯವರು ಇರಿಸಿದ್ದ ಬೋನಿಗೆ ಬಿದ್ದಿದ್ದರೂ ಮರುದಿನ ಆದೇ ಪರಿಸರದಲ್ಲಿ ಇನ್ನೊಂದು ಚಿರತೆ ಸಂಚರಿಸಿರುವುದು ಕಂಡು ಬಂದಿತ್ತು. ಗಂಡು ಚಿರತೆ ಬಿದ್ದರೂ ಹೆಣ್ಣು ಚಿರತೆ ಮತ್ತು ಮರಿಗಳು ಇಲ್ಲೇ ಇವೆ ಎಂದು ಬೆಳ್ಳೆ ಗ್ರಾ.ಪಂ. ಉಪಾಧ್ಯಕ್ಷ ಹರೀಶ್ ಶೆಟ್ಟಿ ಪತ್ರಿಕೆಗೆ ಮಾಹಿತಿ ನೀಡಿದ್ದರು. ಚಿರತೆ ಹಾವಳಿಯಿಂದ ಸ್ಥಳೀಯ ಜನರು ಭಯಭೀತರಾಗಿರುವ ಬಗ್ಗೆ ಆ.9 ರಂದು ಉದಯವಾಣಿ ವರದಿ ಪ್ರಕಟಿಸಿತ್ತು.
ವಲಯ ಅರಣ್ಯಾಧಿಕಾರಿ ಕ್ಲಿಫರ್ಡ್ ಲೋಬೋ, ಉಪ ವಲಯ ಅರಣ್ಯಾಧಿಕಾರಿ ದಯಾನಂದ ಕೆ. ಅವರ ಮಾರ್ಗದರ್ಶನದಂತೆ ಬೆಳ್ಳೆ ಗಸ್ತಿನ ಅರಣ್ಯ ರಕ್ಷಕ ಗಣಪತಿ ನಾಯಕ್ಮತ್ತು ಶಿರ್ವ ಗಸ್ತಿನ ಅರಣ್ಯ ರಕ್ಷಕ ಜಯರಾಮ ಶೆಟ್ಟಿ, ಅರಣ್ಯ ವೀಕ್ಷಕ ಅಶ್ವಿನ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.ಬೋನಿಗೆ ಬಿದ್ದ ಚಿರತೆಯನ್ನು ಅರಣ್ಯಾಧಿಕಾರಿಗಳು ಎಸ್ಕೆ ಬೋರ್ಡರ್ನ ವನ್ಯಜೀವಿ ವಿಭಾಗದ ಅಭಯಾರಣ್ಯಕ್ಕೆ ಬಿಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು
Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ
Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ
Veerappa Moily; ದೇಶಕ್ಕೆ ಕ್ರಿಕೆಟ್ ಕಾಮೆಂಟ್ರಿಯನ್ ಬೇಕಿಲ್ಲ
Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ
MUST WATCH
ಹೊಸ ಸೇರ್ಪಡೆ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ