ಗುರು ಕರುಣೆಯಿಂದ ಜೀವನ ಪಾವನ  

ಶೈಕ್ಷಣಿಕ ಕಾರ್ಯಾಗಾರದಲ್ಲಿ ತೋಟಗಾರಿಕೆ-ರೇಷ್ಮೆ ಸಚಿವ ಆರ್‌.ಶಂಕರ ಅಭಿಮತ

Team Udayavani, Feb 14, 2021, 4:09 PM IST

Minister R Shankar

ರಾಣಿಬೆನ್ನೂರ: ಶಿಷ್ಯನ ಮನದ ಮಲಿನವನ್ನು ತೊಳೆಯಲು ಗುರುವಿನ ಸಾನ್ನಿಧ್ಯ ಬೇಕು. ಗುರುವಿಲ್ಲದಿದ್ದರೆ ಏನೂ ಆಗದು. ಗುರು ಸಾಮಾನ್ಯನಲ್ಲ. ಶಿಷ್ಯನನ್ನು ಕತ್ತಲಿನಿಂದ ಬೆಳಕಿನೆಡೆಗೆ ಸಾಗಿಸುವವನೇ ಗುರು. ಅಂತಹ ಗುರುವಿನ ಕರುಣೆಗೆ ಪ್ರತಿಯೊಬ್ಬರೂ ಪಾತ್ರರಾಗಬೇಕು. ಅಂದಾಗ ಮಾತ್ರ ಜೀವನ ಪಾವನವಾಗುವುದು ಎಂದು ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ ಸಚಿವ ಆರ್‌. ಶಂಕರ ಹೇಳಿದರು.

ಶನಿವಾರ ಇಲ್ಲಿನ ಸಿದ್ದೇಶ್ವರ ನಗರದ ಸಿದ್ದೇಶ್ವರ ಸಭಾಭವನದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಿಕ್ಷಕರ ಸಂಘ, ಮಾತೆ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ ತಾಲೂಕು ಘಟಕ ರಾಣಿಬೆನ್ನೂರ, ಜಿಪಂ, ಕ್ಷೇತ್ರ  ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ನಡೆದ ತಾಲೂಕಿನ ಶಿಕ್ಷಕರ ಅಭಿನಂದನಾ ಸಮಾರಂಭ ಮತ್ತು ಕರ್ನಾಟಕ ರಾಜ್ಯ ಪ್ರಾಥಮಿಕ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಮಾತೆ ಸಾವಿತ್ರಿಬಾಯಿ  ಫುಲೆ ದಿನಾಚರಣೆ, ಶೈಕ್ಷಣಿಕ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಶಾಸಕ ಅರುಣಕುಮಾರ ಪೂಜಾರ ಮಾತನಾಡಿ, ದೇಶದ ಅಳಿವು ಉಳಿವು ಶಿಕ್ಷಕರ ಮೇಲಿದೆ. ಯಾವುದೇ ವ್ಯಕ್ತಿ ಉತ್ತಮ ನಾಗರಿಕನಾಗಿ ಬೆಳೆಯಲು ಶಿಕ್ಷಕರ ಪಾತ್ರ ಬಹಳ ಮುಖ್ಯ. ಶಿಷ್ಯನಾದವನಿಗೆ ಗುರುವೇ ಶ್ರೇಷ್ಠ. ಗುರುವಿನ ಸಾಮಿಪ್ಯ ದೊರೆತರೆ ಶಿಷ್ಯನ ಜೀವನ ಪಾವನವಾಗುವುದು. ಅಂತಹ ಪವಿತ್ರ ಸ್ಥಾನ ಪಡೆದ ಶಿಕ್ಷಕರು ತಮ್ಮ ವೃತ್ತಿಗೆ ಚ್ಯುತಿ ಬಾರದಂತೆ ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸುವ ಮೂಲಕ ವೃತ್ತಿ ಪಾವಿತ್ರÂತೆ ಕಾಪಾಡುವುದರ ಜೊತೆಗೆ ಸಮಾಜದ ಸರ್ವಾಂಗೀಣ ಅಭಿವೃದ್ಧಿಗೆ ಸದಾ ಶ್ರಮಿಸಿ ಆದರ್ಶಪ್ರಾಯರಾಗಬೇಕು ಎಂದರು.

ಜಿಪಂ ಅಧ್ಯಕ್ಷ ಏಕನಾಥ ಬಾನುವಳ್ಳಿ ಮಾತನಾಡಿ, ಶಿಷ್ಯರನ್ನು ಸಂರಕ್ಷಿಸುವ, ಮುನ್ನಡೆಸುವ ದಾರಿದೀಪಗೈಯ್ಯುವ ಗುರುಗಳು ಶಿಷ್ಯರಿಗೆ ಅವಶ್ಯವಾಗಿ ಬೇಕಾಗಿದೆ. ಶಿಕ್ಷಕರು ದೇಶದ ಭವಿಷ್ಯ ಬರೆಯುವ ಆಧುನಿಕ ಶಿಲ್ಪಿಗಳು ಹಾಗೂ ಸತøಜೆಗಳನ್ನು ನಿರ್ಮಿಸುವ ಜವಾಬ್ದಾರಿ ಅವರ ಮೇಲಿದೆ. ಆದರ್ಶ ಗುಣಗಳನ್ನು ಶಿಕ್ಷಕರು ವೃತ್ತಿಯುದ್ದಕ್ಕೂ ಮೈಗೂಡಿಸಿಕೊಂಡು, ಮೃಧು ಮನಸ್ಸುಗಳ್ಳ ಮಕ್ಕಳಿಗೆ ಉತ್ತಮ ಬೋಧನೆ ಮಾಡಬೇಕು ಎಂದು ಹೇಳಿದರು.

ಜಿಪಂ ಸದಸ್ಯೆ ಮಂಗಳಗೌರಿ ಪೂಜಾರ ಮಾತನಾಡಿ. ಸ್ತ್ರೀಯರಿಗೆ ಪ್ರಥಮವಾಗಿ ಶಿಕ್ಷಣ ನೀಡಲು ಮುಂದಾಗಿದ್ದು ಸಾವಿತ್ರಿಬಾಯಿ ಫುಲೆ. ಹಾಗಾಗಿ, ಇಂದು ಮಾತೆಯರು ಬಹಳಷ್ಟು ಶಿಕ್ಷಕರಾಗಿ ಸೇವೆ ಸಲ್ಲಿಸಲು ಕಾರಣವಾಗಿದೆ. ಆ ತಾಯಿಯ ಆದರ್ಶ ಗುಣಗಳನ್ನು ಎಲ್ಲ ಮಾತೆಯರು ಅಳವಡಿಸಿಕೊಂಡು ಮುನ್ನಡೆದರೆ ಇಂದು ಆಚರಿಸುವ ಜಯಂತಿಗೆ ಅರ್ಥ ದೊರೆಯಲಿದೆ ಎಂದು ತಿಳಿಸಿದರು.

ಹಾವೇರಿ ಡಯಟ್‌ ಉಪನ್ಯಾಸಕ ಎಂ.ಬಿ. ಅಂಬಿಗೇರ ಅವರು ಹೊಸ ರಾಷ್ಟ್ರೀಯ ಶಿಕ್ಷಣ ನೀತಿ-2020 ಹಾಗೂ ಧನಾತ್ಮಕ ಚಿಂತನೆ ಕುರಿತು ಉಪನ್ಯಾಸ ನೀಡಿದರು. ಬಿಇಒ ಗುರುಪ್ರಸಾದ ಎನ್‌. ಕೆ. ಪ್ರಾಸ್ತಾವಿಕವಾಗಿ ಮಾತನಾಡಿದರು.

ತಾಪಂ ಅಧ್ಯಕ್ಷೆ ಗೀತಾ ಲಮಾಣಿ, ನಗರಯೋಜನ ಪ್ರಾಧಿಕಾರದ ಅಧ್ಯಕ್ಷ ಚೋಳಪ್ಪ ಕಸವಾಳ, ಎಪಿಎಂಸಿ ಅಧ್ಯಕ್ಷ ಬಸವರಜಾಜ ಸವಣೂರ, ಸದಸ್ಯ ಪರಮೇಶಪ್ಪ ಗೂಳಣ್ಣನವರ, ನಗರಸಭಾ ಉಪಾಧ್ಯಕ್ಷೆ ಕಸ್ತೂರಮ್ಮ ಚಿಕ್ಕಬಿದರಿ, ಜಿಪಂ ಸದಸ್ಯೆ ಗದಿಗವ್ವ ದೇಸಾಯಿ, ಪ್ರಾಥಮಿಕ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಎಸ್‌. ಎಚ್‌. ಮೇಟಿ, ಉಪನಿದೇರ್ಶಕ ಅಂದಾನೆಪ್ಪ ವಡಗೇರಿ, ಶಿಕ್ಷಣಾ ಧಿಕಾರಿ ಎನ್‌.ಶ್ರೀಧರ, ಎಂ.ಸಿ. ಬಲ್ಲೂರ, ಬಿ.ಪಿ.ಶಿಡೇನೂರ, ಕ್ಷೇತ್ರ ಸಮನ್ವಯ ಅಧಿ ಕಾರಿ ಎಸ್‌.ವಿ.ಸೀಮಿಕೇರಿ, ಅಕ್ಷರ ದಾಸೋಹ ಸಹಾಯಕ ನಿರ್ದೆಶಕ ಲಿಂಗರಾಜ ಸುತ್ತಕೋಟಿ, ಸಿ.ಎಫ್‌.ಕಡೇಮನಿ, ಬಿ.ಪಿ.ತಳವಾರ, ಎಸ್‌.ಎಫ್‌. ಬೀರಜ್ಜನವರ, ಎಚ್‌. ಎಂ.ಸುತಾರ, ಎನ್‌.ಎಂ. ಚೌಡಣ್ಣವರ ಇತರರಿದ್ದರು.

ಇದೇ ಸಂದರ್ಭದಲ್ಲಿ ಪ್ರಾಥಮಿಕ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣದಲ್ಲಿ  ಅವರನ್ನು ಅಭಿನಂದಿಸಲಾಯಿತು. ಅನುಸೂಯಾ ರಾಠೊಡ ಹಾಗೂ ಸಂಗಡಿಗರು ಪ್ರಾರ್ಥಿಸಿ, ಎಸ್‌.ಎಚ್‌. ಮೇಟಿ ಸ್ವಾಗತಿಸಿ, ಎಂ.ಕೆ.ಸಾಲಿಮಠ ಮತ್ತು ಎಂ.ಸಿ. ಬಲ್ಲೂರ ನಿರೂಪಿಸಿ, ಹೇಮಂತ ಎಸ್‌.ಕೆ. ವಂದಿಸಿದರು.

 

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.