ಎನ್‌ಸಿಇಆರ್‌ಟಿ ಪಠ್ಯ: ಸಾಧನೆಗೆ ಸವಾಲು


Team Udayavani, Sep 23, 2018, 10:53 AM IST

ncert.jpg

ಉಡುಪಿ: ಈ ಬಾರಿ ಎಸ್‌ಎಸ್‌ಎಲ್‌ಸಿಗೆ ಎನ್‌ಸಿಇಆರ್‌ಟಿ ಪಠ್ಯ ಕ್ರಮ (ಕೇಂದ್ರೀಯ ಪಠ್ಯಕ್ರಮ) ಅಳವಡಿಸಿ ಕೊಂಡಿರುವುದು ವಿದ್ಯಾರ್ಥಿಗಳಿಗೆ ಮಾತ್ರವಲ್ಲ, ಅಧ್ಯಾಪಕರಿಗೂ ಹೊರೆಯಾಗಿದೆ. ಕಾರಣ ಸಿಲೆಬಸ್‌ (ಪಠ್ಯ) ಹೆಚ್ಚಾಗಿದ್ದು, ನಿಗದಿತ ಅವಧಿಯಲ್ಲಿ ಬೋಧನೆ ಪೂರ್ಣಗೊಳಿಸುವ ಸವಾಲಿದೆ.  ಸದ್ಯ ಅರ್ಧವಾರ್ಷಿಕ ಪರೀಕ್ಷೆಗೆ ಎಸ್‌ಎಸ್‌ಎಲ್‌ಸಿ ಮಕ್ಕಳನ್ನು ಸಿದ್ಧಗೊಳಿಸಲು ಶಿಕ್ಷಕರು ಸಾಹಸವನ್ನೇ ಮಾಡುವಂತಾಗಿದೆ.  

ಬೆಳಗ್ಗೆ, ಸಂಜೆ “ಸ್ಪೆಷಲ್‌ ಕ್ಲಾಸ್‌’
ಹೆಚ್ಚಿನ ಶಾಲೆಗಳಲ್ಲಿ ಬೆಳಗ್ಗೆ ಅರ್ಧ ಅಥವಾ ಒಂದು ತಾಸು ಮೊದಲೇ ಎಸ್‌ಎಸ್‌ಎಲ್‌ಸಿ ತರಗತಿಗಳನ್ನು ಆರಂಭಿಸಲಾಗುತ್ತಿದೆ. ಸಂಜೆ ವೇಳೆಯೂ ಅರ್ಧ ಅಥವಾ ಒಂದು ತಾಸು ಹೆಚ್ಚುವರಿಯಾಗಿ ಪಾಠ ಮಾಡಲಾಗುತ್ತಿದೆ. ಶನಿವಾರವೂ ಮಧ್ಯಾಹ್ನ ಮೇಲೆ ಬಿಡುವು ನೀಡದೆ ಸಂಜೆವರೆಗೂ ಪಾಠ ಮುಂದುವರಿಸಲಾಗುತ್ತಿದೆ.  

ಇಲಾಖೆ ಆದೇಶ 
“ಈ ಹಿಂದೆ ಕೂಡ ಕೆಲವು ಶಾಲೆಗಳು ಸ್ವಯಂಪ್ರೇರಿತವಾಗಿ ಹೆಚ್ಚುವರಿ ತರಗತಿ ನಡೆಸಿ ಉತ್ತಮ ಫ‌ಲಿತಾಂಶಕ್ಕೆ ಯತ್ನಿಸಿ ಸಫ‌ಲವಾಗಿವೆ. ಈ ಬಾರಿ ಇಲಾಖೆಯಿಂದಲೂ ಆದೇಶ ನೀಡಿದ್ದೇವೆ. ಮಳೆ ಕಾರಣ ನೀಡಿದ ರಜೆ
ಯನ್ನು ಸರಿದೂಗಿಸುವುದಕ್ಕೂ ಹೆಚ್ಚುವರಿ ತರಗತಿಗಳು ಅವಶ್ಯವಾಗಿದೆ. ಎಸೆಸೆಲ್ಸಿ ಗೆ ಎಸ್‌ಸಿಇಆರ್‌ಟಿ ಪಠ್ಯ ಅಳವಡಿಸಿಕೊಂಡಿರುವುದರಿಂದ ಶಿಕ್ಷಕರಿಗೂ ಹೆಚ್ಚಿನ ಅವಧಿ ಅಗತ್ಯವಿರುವುದು ಗಮನಕ್ಕೆ ಬಂದಿದೆ’ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.  

ಅಕ್ಟೋಬರ್‌ನಲ್ಲಿ “ವಿಶ್ವಾಸಕಿರಣ’ 
ಕಲಿಕೆಯಲ್ಲಿ ಹಿಂದುಳಿದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗಾಗಿ ಇಲಾಖಾ ವತಿಯಿಂದ ಪ್ರತಿ ವರ್ಷದಂತೆ ಈ ಬಾರಿಯೂ ಅಕ್ಟೋಬರ್‌ ರಜೆಯಲ್ಲಿ “ವಿಶ್ವಾಸ ಕಿರಣ’ ವಿಶೇಷ ತರಗತಿಗಳು ನಡೆಯಲಿವೆ. ಒಟ್ಟು 25 ವಿಶೇಷ ತರಗತಿಗಳು ನಡೆಯಬೇಕಿದ್ದು ಸಾಧ್ಯವಾದಷ್ಟು ವಿಶೇಷ ತರಗತಿಗಳನ್ನು ನಡೆಸಿ ಅನಂತರ ಪ್ರತಿ ರವಿವಾರ ಕೂಡ ತರಗತಿ ನಡೆಸಲು ನಿರ್ಧರಿಸಲಾಗಿದೆ. ಆದರೆ ಇದಕ್ಕೆ  ಶಿಕ್ಷಕರು ಮತ್ತು ಕೆಲವು ಮಂದಿ ಮಕ್ಕಳ ಹೆತ್ತವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಬೇರೆ ದಿನಗಳಾದರೆ ಎಲ್ಲ ಮಕ್ಕಳೂ ಒಟ್ಟಿಗೆ ಬರುತ್ತಾರೆ. ರವಿವಾರ ಕಲಿಕೆಯಲ್ಲಿ ಹಿಂದುಳಿದವರು ಮಾತ್ರ ಬರುತ್ತಾರೆ. ದೂರದ ಊರುಗಳಿಂದ ಒಬ್ಬೊಬ್ಬರಾಗಿ ಬರಲು ವಿದ್ಯಾರ್ಥಿಗಳು ಇಷ್ಟಪಡುವುದಿಲ್ಲ. ಶಿಕ್ಷಕರಿಗೂ ವಾರಕ್ಕೊಂದು ರಜೆ ಬೇಕು ಎನ್ನುತ್ತಾರೆ ಕೆಲವು ಮಂದಿ ಶಿಕ್ಷಕರು.

ಸವಾಲೇನು? 
ಎನ್‌ಸಿಇಆರ್‌ಟಿ ಅಳವಡಿಕೆಯಿಂದಾಗಿ ಪಠ್ಯ ಮುಗಿಸಲು ಹೆಚ್ಚಿನ ಅವಧಿಯೊಂದಿಗೆ ಅದನ್ನು ಅರ್ಥಮಾಡಿ ಕೊಳ್ಳಲು ವಿದ್ಯಾರ್ಥಿಗಳಿಗೂ ಹೆಚ್ಚಿನ ಕಾಲಾವಕಾಶ ಬೇಕು. ಇದರಲ್ಲಿ ಅಪ್ಲಿಕೇಶನ್‌ ಮಾದರಿಯ ಪ್ರಶ್ನೆಗಳನ್ನು ಹೆಚ್ಚು ಕೇಳಲಾಗುತ್ತದೆ. ವಿಜ್ಞಾನ ವಿಷಯದಲ್ಲಿ ಇದಕ್ಕೆ ಹೆಚ್ಚಿನ ಅವಕಾಶವಿದೆ. ಆದ್ದರಿಂದ ಕಂಠಪಾಠ ಮಾತ್ರ ಪ್ರಯೋಜನವಾಗದು. ಸ್ವಂತ ಬುದ್ಧಿಯೂ ಉಪಯೋಗಿಸಿ ಉತ್ತರಿಸಬೇಕಾಗುತ್ತದೆ. ಆದರೂ ಉತ್ತಮ ಫ‌ಲಿತಾಂಶಕ್ಕೆ ಪ್ರಯತ್ನ ನಡೆಸುತ್ತಿದ್ದೇವೆ ಎಂದು ಉಡುಪಿಯ ಪ್ರೌಢಶಾಲೆಯೊಂದರ ಹಿರಿಯ ಶಿಕ್ಷಕರು ಅಭಿಪ್ರಾಯಪಡುತ್ತಾರೆ. 

ಗುಂಪು ಅಧ್ಯಯನಕ್ಕೂ ಅವಕಾಶ
ಎಸೆಸೆಲ್ಸಿಯವರಿಗೆ ಜುಲೈನಿಂದ ಬೆಳಗ್ಗೆ ಒಂದು ಹೆಚ್ಚುವರಿ ತರಗತಿಗೆ ಆದೇಶಿಸಿದ್ದೇವೆ. ಕಳೆದ ವರ್ಷ ಕೆಲವೆಡೆ ಕಲಿಕೆಯಲ್ಲಿ ಹಿಂದುಳಿದ ಗಂಡು ಮಕ್ಕಳಿಗಾಗಿ ರಾತ್ರಿವರೆಗೂ ತರಗತಿ ನಡೆಸಿದ ಒಂದೆರಡು ಶಾಲೆಗಳಿವೆ. ಈ ಬಾರಿ ಅರ್ಧವಾರ್ಷಿಕ ಪರೀಕ್ಷೆ ಬಳಿಕ ಸಂಜೆ ವೇಳೆ  ಗುಂಪು ಅಧ್ಯಯನಕ್ಕೂ ಆದೇಶ ನೀಡಲಾಗುವುದು.
ಡಿಡಿಪಿಐ, ಉಡುಪಿ

ಪರಿಹಾರ ಬೋಧನೆ
ಜು.1ರಿಂದ ಶನಿವಾರ ಊಟದ ಬಳಿಕ ಮಕ್ಕಳಿಗೆ ತರಗತಿ ಮಾಡುತ್ತೇವೆ. ರವಿವಾರ ತರಗತಿ ಆರಂಭಿಸಿಲ್ಲ. ಕಲಿಕೆಯಲ್ಲಿ ಹಿಂದುಳಿದ ಆಯ್ದ ಕೆಲವರಿಗೆ ಪರಿಹಾರ ಬೋಧನೆ ಮಾಡಲಾಗುತ್ತದೆ. ತೀರಾ ಹಿಂದುಳಿದ ವಿದ್ಯಾರ್ಥಿಗಳಿಗಾಗಿ ಡಿಸೆಂಬರ್‌ ಬಳಿಕ ವಿಶೇಷ ತರಗತಿ ನಡೆಸಿ ತೇರ್ಗಡೆಯಾಗಲು ಪ್ರಯತ್ನಿಸುತ್ತೇವೆ.
ಮುಖ್ಯೋಪಾಧ್ಯಾಯರು, ಸರಕಾರಿ ಪ್ರೌಢಶಾಲೆ, ಉಡುಪಿ

* ಸಂತೋಷ್‌ ಬೊಳ್ಳೆಟ್ಟು 

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.