“ಮೂಲ ಕಲೆ ಉಳಿವಿಗೆ ಚಿತ್ರಕಲಾ ಶಾಲೆಗಳ ಪ್ರಯತ್ನ ಅಗತ್ಯ’
Team Udayavani, Sep 29, 2018, 6:50 AM IST
ಉಡುಪಿ: ಮನಸ್ಸಿನ ಭಾವನೆಗಳನ್ನು ರೇಖೆಗಳ ಮೂಲಕ ಬಿಂಬಿಸುವುದೇ ಚಿತ್ರಕಲೆ. ಇಂತಹ ಅದ್ಭುತ ಶಕ್ತಿಯುಳ್ಳ ಭಾರತೀಯ ಮೂಲ ಕಲೆಗಳು ನಾಶವಾಗದಂತೆ ಚಿತ್ರಕಲಾ ಶಾಲೆಗಳು ಪ್ರಯತ್ನಿಸ ಬೇಕು. ಇದರಿಂದ ಭಾರತೀಯ ಕಲೆ ಯನ್ನು ಉಳಿಸಿ ಬೆಳಸಿದಂತಾಗುತ್ತದೆ ಎಂದು ಹಿರಿಯ ಸರಕಾರಿ ಚಿತ್ರಕಲಾ ಶಿಕ್ಷಕ ದಿನಮಣಿ ಶಾಸ್ತ್ರೀ ಹೇಳಿದರು.
ಚಿತ್ರಕಲಾ ಮಂದಿರ ಕಲಾ ವಿದ್ಯಾಲಯ ಜಂಗಮ ಮಠದ ವಿಭೂತಿ ಆರ್ಟ್ಸ್ ಗ್ಯಾಲರಿಯಲ್ಲಿ ಶುಕ್ರವಾರ ನಡೆದ ಚಿತ್ರಕಲಾ ಶಾಲೆಯ ವಿದ್ಯಾರ್ಥಿಗಳ ಕಲಾ ಪ್ರದರ್ಶನ “ಎಕ್ಸ್ಪ್ರೆಶನ್ 2018’ವನ್ನು ಅವರು ಉದ್ಘಾಟಿಸಿ ಮಾತನಾಡಿ, ಭಾರತೀಯ ಚಿತ್ರ ಕಲೆಯು ಸಿಂಧೂ ಕಣಿವೆಯಿಂದ ಆರಂಭಗೊಂಡಿದ್ದು, ಇದು ವಿಶ್ವಕ್ಕೆ ಮಾದರಿಯಾಗಿದೆ. ಭಾರತೀಯರು ತಮ್ಮ ಕಲೆಯಲ್ಲಿ ಸಹಜತೆ, ಭಾವನಾತ್ಮಕತೆಗೆ ಹೆಚ್ಚಿನ ಆದ್ಯತೆ ನೀಡುವುದರಿಂದ ಭಾರತೀಯ ಕಲೆ ಇಂದಿಗೂ ಉತ್ತಮ ಸ್ಥಿತಿಯಲ್ಲಿದೆ.ಭಾರತೀಯ ಕಲೆ ವಿದೇಶಗರಿಗೂ ಅಪ್ಯಾಯಮಾನವಾಗಿದೆ ಎಂದರು.
ನಿವೃತ್ತ ಹಿರಿಯ ಕಲಾ ಶಿಕ್ಷಕ ಡಿ.ಎಲ್. ಆಚಾರ್ಯ ಮಾತನಾಡಿ, ಚಿತ್ರಕಲೆಯಲ್ಲಿ ಸಂಶೋಧನೆ ನಡೆಸುವ ಮೂಲಕ ಹೊಸತನ್ನು ರೂಪಿಸಬಹುದು. ಚಿತ್ರಕಲಾ ವಿದ್ಯಾರ್ಥಿಗಳು ಹೆಚ್ಚು ಚಿತ್ರಗಳನ್ನು ವೀಕ್ಷಿಸುವುದು, ಪ್ರದರ್ಶನಗಳಲ್ಲಿ ಭಾಗ ವಹಿಸುವುದರಿಂದ ಸಾಕಷ್ಟು ಮಾಹಿತಿ, ಮಾರ್ಗದರ್ಶನ ದೊರಕಲಿದೆ. ತನ್ಮೂಲಕ ಯಶಸ್ಸು ಸಾಧಿಸಬಹುದೆಂದರು.
ಕಲಾ ವಿದ್ಯಾಲಯದ ನಿರ್ದೇಶಕ ಡಾ| ಯು.ಸಿ. ನಿರಂಜನ್ ಅಧ್ಯಕ್ಷತೆ ವಹಿಸಿದ್ದರು. ಸಮೂಹ ಸಂಸ್ಥೆಗಳ ಸಂದರ್ಶನ ಪ್ರಾಧ್ಯಾಪಕ ಬಿ.ಎ. ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು.
ಕಲಾ ವಿದ್ಯಾಲಯದ ಪ್ರಾಂಶುಪಾಲ ರಾಜೇಂದ್ರ ತ್ರಾಸಿ ಸ್ವಾಗತಿಸಿದರು. ವಿದ್ಯಾರ್ಥಿಗಳಾದ ಮೇಘಾ ಹೆಗ್ಡೆ ಕಾರ್ಯಕ್ರಮ ನಿರೂಪಿಸಿ, ಪ್ರದೀಪ್ ಕುಮಾರ್ ವಂದಿಸಿದರು.11 ಮಂದಿ ವಿದ್ಯಾರ್ಥಿಗಳಿಂದ ಸಮಕಾಲೀನ, ಸಾಂಪ್ರದಾಯಿಕ, ಆಧುನಿಕ ಶೈಲಿಯ ಆಕರ್ಷಕ 40 ಚಿತ್ರಕಲಾ ಪ್ರದರ್ಶನವು ಸೆ. 28 – ಅ. 2ರ ತನಕ ಬೆಳಗ್ಗೆ 10 – ಸಂಜೆ 6ರ ವರೆಗೆ ಸಾರ್ವಜನಿಕರ ವೀಕ್ಷಣೆಗೆ ತೆರೆದಿರುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ