ರಕ್ಷಿಸಲ್ಪಟ್ಟರೂ ಮತ್ತೆ ಬೀದಿಪಾಲಾಗುತ್ತಿದ್ದಾರೆ ಮಹಿಳೆಯರು


Team Udayavani, Oct 2, 2018, 6:20 AM IST

women.jpg

ಉಡುಪಿ ಜಿಲ್ಲೆಯಲ್ಲಿ ಸ್ವಾಧಾರ ಗೃಹವನ್ನು ಆರಂಭಿಸಿ ಮಹಿಳೆ ಯರಿಗೆ, ವಿಶೇಷ ವಾಗಿ ಹಿರಿಯ ಮಹಿಳೆ ಯರಿಗೆ ನೆರ ವಾಗುವುದು ಅಗತ್ಯ.

ಉಡುಪಿ: ನಾನಾ ಕಾರಣಗಳಿಂದ ಮನೆಬಿಟ್ಟು ಬಂದವರು, ಮನೆಯಿಂದ ಹೊರಹಾಕಲ್ಪಟ್ಟವರು, ಮಾನಸಿಕ ಸ್ಥಿಮಿತ ಕಳೆದುಕೊಂಡು ಬೀದಿಪಾಲಾದ ಮಹಿಳೆಯರ ರಕ್ಷಣೆ ವಿವಿಧ ಸಂಘ ಸಂಸ್ಥೆಗಳು, ಮಹಿಳಾ ಮತ್ತು ಹಿರಿಯ ನಾಗರಿಕರ ಸಹಾಯವಾಣಿ ಕಾರ್ಯಕರ್ತರಿಂದ ನಡೆಯುತ್ತಲೇ ಇದೆ. ಆದರೆ ರಕ್ಷಣೆ ಆದ ಅನಂತರ ಅವರಿಗೆ ಸೂಕ್ತ ಆಶ್ರಯದ ವ್ಯವಸ್ಥೆ ಇಲ್ಲದೆ ರಕ್ಷಿಸಲ್ಪಟ್ಟವರು ಮತ್ತೆ ಬೀದಿ ಪಾಲಾಗುವ ಪರಿಸ್ಥಿತಿ ಉದ್ಭವವಾಗಿದೆ. ಇದು ಉಡುಪಿಯ ಸಾಮಾಜಿಕ ಸೇವಾ ಕಾರ್ಯಕರ್ತರಿಗೆ ಎದುರಾಗಿರುವ ಸವಾಲು.

ಉಡುಪಿಯಲ್ಲಿ ಸ್ಟೇಟ್‌ಹೋಮ್‌ (ರಾಜ್ಯ ಮಹಿಳಾ ನಿಲಯ) ಇದೆ. ಮಹಿಳೆಯರ ವಿಶೇಷ ಚಿಕಿತ್ಸಾ ಘಟಕವಿದೆ. ಕೆಲವು ತಿಂಗಳುಗಳ ಹಿಂದೆ ಸಖೀ-ವನ್‌ಸ್ಟಾಪ್‌ ಸೆಂಟರ್‌ ಕೂಡ ಆರಂಭವಾಗಿದೆ. ಆದರೆ ಸ್ಟೇಟ್‌ಹೋಂ ಹೊರತುಪಡಿಸಿದರೆ ಇತರ ಎಲ್ಲವು ಕೂಡ ತಾತ್ಕಾಲಿಕವಾಗಿ ನೆರವು, ಆಶ್ರಯ ಕೊಡುವ ಸಂಸ್ಥೆಗಳು. ಸ್ಟೇಟ್‌ ಹೋಂನಲ್ಲಿ ಅನಾಥ ಹೆಣ್ಮಕ್ಕಳಿಗೆ ಮಾತ್ರ ಅವಕಾಶವಿದೆ. ಅಲ್ಲದೆ 60 ವರ್ಷ ಮೇಲ್ಪಟ್ಟವರನ್ನು ಸೇರಿಸಿಕೊಳ್ಳುವುದಿಲ್ಲ. 

ಸ್ವಾಧಾರ ಗೃಹ ಬೇಡಿಕೆ
ಸ್ವಾಧಾರ ಗೃಹಗಳಲ್ಲಿ ಮಹಿಳೆಯರು ಸುಮಾರು 2 ವರ್ಷಗಳ ಕಾಲ ಉಳಿದುಕೊಳ್ಳಲು ಅವಕಾಶವಿದೆ. ಇಲ್ಲಿ ಸಾಮಾನ್ಯವಾಗಿ ವಯಸ್ಸಿನ ಮಿತಿ ಇರುವುದಿಲ್ಲ. ಇಲ್ಲಿ ಮಹಿಳೆಯರಿಗೆ ಆಶ್ರಯ ಒದಗಿಸುವ ಜತೆಗೆ ಅವರಿಗೆ ಕೌಶಲಾಭಿವೃದ್ಧಿ ಸೇರಿದಂತೆ ವಿವಿಧ ರೀತಿಯ ತರಬೇತಿಗೂ ಅವಕಾಶ ಮಾಡಿಕೊಡಲಾಗುತ್ತದೆ. ಒಂದು ವೇಳೆ ವರ್ಷಾನುಗಟ್ಟಲೆ ಅವರಿಗೆ ಪುನರ್ವಸತಿ ಒದಗಿಸಲು ಅಥವಾ ಅವರ ಸಂಬಂಧಿಕರ ಮನೆಗೆ ಮತ್ತೆ ಕಳುಹಿಸಿಕೊಡಲು ಸಾಧ್ಯವೇ ಆಗದಿದ್ದಲ್ಲಿ ವೃದ್ಧಾಶ್ರಮಗಳಲ್ಲಿ ಆಶ್ರಯ ಕಲ್ಪಿಸಲಾಗುತ್ತದೆ. ಹಾಗಾಗಿ ಉಡುಪಿ ಜಿಲ್ಲೆಯಲ್ಲಿ ಸ್ವಾಧಾರ ಗೃಹವನ್ನು ಆರಂಭಿಸಿ ಮಹಿಳೆಯರಿಗೆ, ವಿಶೇಷವಾಗಿ ಹಿರಿಯ ಮಹಿಳೆಯರಿಗೆ ನೆರವಾಗಬೇಕು ಎಂದು ಮಹಿಳಾ ಮಂಡಳಿಗಳ ಒಕ್ಕೂಟ ಕೂಡ ಒತ್ತಾಯಿಸಿದೆ. ಜಿಲ್ಲೆಯಲ್ಲಿರುವ ವೃದ್ಧಾಶ್ರಮಗಳಲ್ಲಿ ಸ್ಥಳಾವಕಾಶದ ಕೊರತೆಯೂ ಇದೆ. ಜತೆಗೆ ವೃದ್ಧಾಶ್ರಮಕ್ಕೆ ಸೇರುವ ಮನಸ್ಥಿತಿ ಎಲ್ಲ ಮಹಿಳೆಯರಲ್ಲಿಯೂ ಇರುವುದಿಲ್ಲ. ಅಂತಹ ಸಂದರ್ಭದಲ್ಲಿ ಸ್ವಾಧಾರ ಗೃಹಗಳು ನೆರವಿಗೆ ಬರಬಹುದು ಎಂಬ ಅಭಿಪ್ರಾಯ ಸಾಮಾಜಿಕ ಸೇವಾ ಕಾರ್ಯಕರ್ತರದ್ದು.  

ಆಶ್ರಯ ನೀಡುವುದೇ ಬಹುದೊಡ್ಡ ಸಮಸ್ಯೆ
ನಾವು ಉಡುಪಿ ಜಿಲ್ಲಾ ಮಹಿಳಾ ಮಂಡಳಿಗಳ ಒಕ್ಕೂಟದಿಂದ ಸಾಂತ್ವನ ಸಹಾಯವಾಣಿಯನ್ನು 2001ರಿಂದ ನಡೆಸಿಕೊಂಡು ಬರುತ್ತಿದ್ದೇವೆ. ಸರಕಾರದವರು ಎಲ್ಲಿಯಾದರೂ ಜಾಗ ಕೊಟ್ಟರೆ ಅಲ್ಲಿ ಸ್ವಾಧಾರ ಗೃಹ ನಿರ್ಮಿಸಬಹುದಾಗಿದೆ. ಈಗ ಸಾಂತ್ವನ ಸಹಾಯವಾಣಿಯಿಂದ ತಿಂಗಳಿಗೆ 25ರಷ್ಟು ಪ್ರಕರಣಗಳನ್ನು ನಿರ್ವಹಿಸುತ್ತಿದ್ದೇವೆ. ದಿನಕ್ಕೆ ಹತ್ತಾರು ಕರೆಗಳು ಬರುತ್ತವೆ. ಅವುಗಳನ್ನು ಕೂಡ ನಿಭಾಯಿಸಲಾಗುತ್ತಿದೆ. 24 ಗಂಟೆಗಳ ಸೇವೆ ನೀಡಲಾಗುತ್ತಿದೆ. ಆದರೆ ದೌರ್ಜನ್ಯಕ್ಕೊಳಗಾದ ಮಹಿಳೆಯರನ್ನು, ಅಶಕ್ತರಾದವರನ್ನು ರಕ್ಷಿಸಿದ ಅನಂತರ ಅವರಿಗೆ ಆಶ್ರಯ ನೀಡುವುದೇ ಬಹುದೊಡ್ಡ ಸಮಸ್ಯೆಯಾಗಿದೆ.
ವಸಂತಿ ರಾವ್‌ ಕೊರಡ್ಕಲ್‌  
ಕಾರ್ಯದರ್ಶಿ, ಉಡುಪಿ ಜಿಲ್ಲಾ ಮಹಿಳಾ ಮಂಡಳಿಗಳ ಒಕ್ಕೂಟ

ಸರಕಾರದಿಂದ ಅನುದಾನ 
ಎನ್‌ಜಿಒಗಳು ಮುಂದೆ ಬಂದು ಸ್ವಧಾರಾ ಗೃಹಗಳನ್ನು ಮಾಡುವುದಾದರೆ ಅದಕ್ಕೆ ಸರಕಾರದಿಂದ ಅನುದಾನ ದೊರೆಯುತ್ತದೆ. ಈಗ ಇಲಾಖೆ ಸಹಾಯವಾಣಿ ಮತ್ತು ಸಾಮಾಜಿಕ ಕಾರ್ಯಕರ್ತರ ನೆರವಿನಿಂದ ರಕ್ಷಿಸುವ ಹಿರಿಯ ಮಹಿಳೆಯರು ಸೇರಿದಂತೆ ಮಹಿಳೆಯರನ್ನು ರಕ್ಷಿಸುತ್ತಿದೆ. ಅವರಲ್ಲಿ ಕೆಲವರು ವೃದ್ಧಾಶ್ರಮಗಳಿಗೆ ತೆರಳುವುದಕ್ಕೆ ಒಪ್ಪುವುದಿಲ್ಲ. ಅಂತಹ ಸಂದರ್ಭದಲ್ಲಿ ನಮಗೆ ತೊಂದರೆಯಾಗುತ್ತಿದೆ.
– ಉಪನಿರ್ದೇಶಕರು, 
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಡುಪಿ 

–  ಸಂತೋಷ್‌ ಬೊಳ್ಳೆಟ್ಟ

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.