ಕೇಂದ್ರ ಸರಕಾರದ ಬೆಲೆಯೇರಿಕೆ, ರಫೇಲ್‌ ಡೀಲ್‌ ವಿರುದ್ಧ ಪ್ರತಿಭಟನೆ


Team Udayavani, Oct 2, 2018, 6:40 AM IST

0110kpe4.jpg

ಕಾಪು: ಹಗರಣಗಳ ಸರಮಾಲೆ, ಸುಳ್ಳಿನ ಭರವಸೆ, ಬೆಲೆ ಏರಿಕೆ ನೀತಿ, ರಫೇಲ್‌ ಡೀಲ್‌ನಂತಹ ಕೋಟ್ಯಂತರ ರೂ. ಅವ್ಯವಹಾರದ ಕಾರಣದಿಂದಾಗಿ ಮೋದಿ ಸರಕಾರದ ಬಗ್ಗೆ ಜನ ಭ್ರಮ ನಿರಸನ ಹೊಂದಿದ್ದಾರೆ. ಸ್ವತ್ಛ ಆಡಳಿತ ನೀಡುವ ಭರವಸೆ ನೀಡಿ ಅಧಿಕಾರಕ್ಕೆ ಬಂದಿರುವ ಮೋದಿ ಸರಕಾರ ಜನರನ್ನು ವಂಚಿಸುವ ಮೂಲಕ ಜನರಿಂದಲೇ ತಿರಸ್ಕೃತಗೊಳ್ಳುವ ಹಂತದಲ್ಲಿದೆ ಎಂದು ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಜನಾರ್ದನ ತೋನ್ಸೆ ಹೇಳಿದರು.

ಕೇಂದ್ರ ಸರಕಾರದ ಬೆಲೆಯೇರಿಕೆ ನೀತಿ, ರಫೇಲ್‌ ಡೀಲ್‌ ಅವ್ಯವಹಾರ ಸಹಿತ ಹಲವು ಕಾರಣಗಳನ್ನು ಮುಂದಿಟ್ಟುಕೊಂಡು ಸೋಮವಾರ ಕಾಪು ಪೇಟೆಯಲ್ಲಿ ನಡೆದ ಪ್ರತಿಭಟನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಾಜಿ ಸಚಿವ ವಿನಯಕುಮಾರ್‌ ಸೊರಕೆ ಮಾತನಾಡಿ, ಕೇಂದ್ರ ಸರಕಾರದ ವಿರುದ್ಧ ಜನ ತೀವ್ರ ಆಕ್ರೋಶಿತರಾಗಿದ್ದಾರೆ. ಸಣ್ಣ ಪುಟ್ಟ ವಿಚಾರಗಳಿಗೂ ಬೀದಿಗಿಳಿದು ಹೋರಾಟ ಮಾಡುತ್ತಿದ್ದ ಸಂಸದೆ ಶೋಭಾ ಕರಂದ್ಲಾಜೆ ಕೇಂದ್ರ ಸರಕಾರದ ಕುರಿತಾಗಿ ಜನರಲ್ಲಿ ಇರುವ ಗೊಂದಲಗಳಿಗೆ ಉತ್ತರ ನೀಡಬೇಕು. ಆದರೆ ಅವರೇ ಕಾಣೆಯಾಗಿದ್ದು, ಅವರನ್ನು ಹುಡುಕಿ ಕೊಡುವಂತೆ ನಾವು ಮೋದಿಯವರನ್ನೇ ವಿನಂತಿಸಬೇಕಾದ ಅನಿವಾರ್ಯತೆ ಎದುರಾಗಿದೆ. ಆಕಾಶವನ್ನು ಕೈಯ್ಯಲ್ಲಿ ಕೊಡುವುದಾಗಿ ಹೇಳಿದ ಬಿಜೆಪಿ ಜನರ ಬದುಕುವ ಅವಕಾಶಕ್ಕೇ ಕಣ್ಣಿರಿಸಿರುವುದು ಖಂಡನೀಯ ಎಂದರು.

ಮಾಜಿ ಶಾಸಕ ಗೋಪಾಲ ಭಂಡಾರಿ ಮಾತನಾಡಿ, ಮೋದಿ ನೇತೃತ್ವದ ಬಿಜೆಪಿ ಸರಕಾರವು ಸಂಪುರ್ಣವಾಗಿ ಅಧಿಕಾರವನ್ನು ದುರುಪಯೋಗ ಮಾಡುತ್ತಿದೆ. ಸರ್ಜಿಕಲ್‌ ಸ್ಟೆ Åçಕ್‌ ಮೂಲಕವಾಗಿ ಸೈನಿಕರ ಜೀವದೊಂದಿಗೆ ಚೆಲ್ಲಾಟವಾಡುತ್ತಿದೆ. ಸರ್ವಾಧಿಕಾರಿ ಧೋರಣೆಯ ಮೂಲಕ ದೇಶದ ಆರ್ಥಿಕತೆಗೆ ಪೆಟ್ಟು ಕೊಡುವ ಯತ್ನ ಮಾಡುತ್ತಿದೆ. ಧಾರ್ಮಿಕ ಭಾವನೆಗಳನ್ನು ಕೆರಳಿಸಿ, ಜನರನ್ನು ವಂಚಿಸುತ್ತಿದೆ. ಇಂತಹ ಕೆಟ್ಟ ಸರಕಾರದ ವಿರುದ್ಧ ಜನ ಎಚ್ಚೆತ್ತುಕೊಳ್ಳುವುದು ಅತ್ಯಗತ್ಯವಾಗಿದೆ ಎಂದರು.

ಎಐಸಿಸಿ ಸದಸ್ಯ ಅಮೃತ್‌ ಶೆಣೈ ಮಾತನಾಡಿ, ಹಾಲಿ ಕೇಂದ್ರ ಸರಕಾರದ ಕಳೆದ ನಾಲ್ಕೂವರೆ ವರ್ಷಗಳ ಅವಧಿಯಲ್ಲಿ ದೇಶದಲ್ಲಿ 23 ಸಾವಿರ ವಂಚನೆಯ ಪ್ರಕರಣಗಳ ಮೂಲಕ 90 ಸಾವಿರ ಕೋ. ರೂ. ಹಣಕಾಸಿನ ವಂಚನೆಯಾಗಿದೆ. ಕಪ್ಪು ಹಣ ವಾಪಾಸು ತರುವುದಾಗಿ ಹೇಳಿದ ಸರಕಾರ ವಂಚಕರನ್ನು ದೇಶದಿಂದ ಹೊರ ಹೋಗಲು ಬಿಡುವ ಮೂಲಕ ದೇಶದ ಭವಿಷ್ಯಕ್ಕೆ ಅಪಾಯವನ್ನು ತಂದುಕೊಟ್ಟಿದೆ. ಮುಂದಿನ ಚುನಾವಣೆಯಲ್ಲಿ ಮತ್ತೆ ಬಿಜೆಪಿ ಗೆದ್ದರೆ ಇದು ಹೀಗೆಯೇ ಮುಂದುವರಿದು ಮತ್ತೂಂದು ಜಲಿಯನ್‌ ವಾಲಾಭಾಗ್‌ ದುರಂತಕ್ಕೆ ಕಾರಣವಾಗ ಬಹುದು. ಮತದಾರರು ಈ ಬಗ್ಗೆ ಈಗಿನಿಂದಲೇ ಜಾಗೃತರಾಗಬೇಕು ಎಂದರು.

ಮಾಜಿ ಶಾಸಕ ಗೋಪಾಲ ಭಂಡಾರಿ, ಎಐಸಿಸಿ ಸದಸ್ಯ ಅಮೃತ್‌ ಶೆಣೈ, ಕೆಪಿಸಿಸಿ ಕಾರ್ಯದರ್ಶಿಗಳಾದ ವೆರೋನಿಕಾ ಕರ್ನೆಲಿಯೋ, ಮುರಳೀ ಶೆಟ್ಟಿ, ಮಹಿಳಾ ಕಾಂಗ್ರೆಸ್‌ ಜಿಲ್ಲಾಧ್ಯಕ್ಷೆ ಗೀತಾ ವಾಗ್ಲೆ, ಜಿ.ಪಂ. ಸದಸ್ಯ ವಿಲ್ಸನ್‌ ರೋಡ್ರಿಗಸ್‌, ತಾ.ಪಂ. ಸದಸ್ಯ ದಿನೇಶ್‌ ಕೋಟ್ಯಾನ್‌, ಪುರಸಭಾ ಅಧ್ಯಕ್ಷೆ ಮಾಲಿನಿ, ಪಕ್ಷದ ಮುಖಂಡರಾದ ವೈ. ಸುಕುಮಾರ್‌, ಶಿವಾಜಿ ಎಸ್‌. ಸುವರ್ಣ, ಅಬ್ದುಲ್‌ ಅಜೀಜ್‌, ಪ್ರಭಾವತಿ ಸಾಲ್ಯಾನ್‌, ದೀಪಕ್‌ ಕುಮಾರ್‌ ಎರ್ಮಾಳ್‌, ಗಣೇಶ್‌ ಕೋಟ್ಯಾನ್‌, ವಿನಯ ಬಲ್ಲಾಳ್‌, ಗುಲಾಂ ಮಹಮ್ಮದ್‌, ಮೆಲ್ವಿನ್‌ ಡಿ ಸೋಜಾ ಮೊದಲಾದವರು ಉಪಸ್ಥಿತರಿದ್ದರು.

ಪ್ರತಿಭಟನಾ ಸಭೆಗೆ ಪೂರ್ವಭಾವಿಯಾಗಿ ಕಾಪು ವಿದ್ಯಾನಿಕೇತನ ಶಾಲೆಯ ಬಳಿಯಿಂದ ಕಾಪು ಪೇಟೆಯವರೆಗೆ ನೂರಾರು ಮಂದಿ ಕಾರ್ಯರ್ತರು ಪ್ರತಿಭಟನಾ ಮೆರವಣಿಗೆ ನಡೆಸಿದ್ದು, ಕೇಂದ್ರ ಸರಕಾರದ ವಿರುದ್ಧ, ಮೋದಿ ಸರಕಾರದ ವಿರುದ್ಧ, ಕೇಂದ್ರದ ಹಲವು ಜನ ವಿರೋಧಿ ನೀತಿಗಳ ವಿರುದ್ಧ ಘೋಷಣೆ ಕೂಗಿದರು.ಕಾಪು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ನವೀನ್‌ಚಂದ್ರ ಶೆಟ್ಟಿ ಸ್ವಾಗತಿಸಿದರು. ಬ್ಲಾಕ್‌ ಕಾಂಗ್ರೆಸ್‌ ಕಾರ್ಯದರ್ಶಿ ಅಮೀರ್‌ ಕಾಪು ವಂದಿಸಿದರು.

ಕಾಪು ಕ್ಷೇತ್ರದಲ್ಲಿ ನಾವು ಪ್ರಾರಂಭಿಸಿದ ಅಭಿವೃದ್ಧಿ ಕಾಮಗಾರಿಗಳ ಸ್ಥಳಾಂತರ ಪ್ರಕ್ರಿಯೆಗೆ ಹಾಲಿ ಶಾಸಕರು ಮುತುವರ್ಜಿ ವಹಿಸುತ್ತಿದ್ದಾರೆ. ತಾಲೂಕು ಕಛೇರಿ ಆಡಳಿತವನ್ನು ಸ್ಥಳಾಂತರಿಸಿರುವ ಅವರು, ಕಾಪು ಪೇಟೆಯ ಒಳ ಚರಂಡಿ ಯೋಜನೆ, ಎಲ್ಲೂರಿಗೆ ತ್ಯಾಜ್ಯ ಸಂಸ್ಕರಣಾ ಘಟಕಗಳಿಗೂ ತಮ್ಮವರಿಂದಲೇ ವಿರೋಧ ವ್ಯಕ್ತಪಡಿಸಿಕೊಳ್ಳುವ ಮೂಲಕ ಹೊಸ ಪರಂಪರೆಗೆ ನಾಂದಿ ಹಾಡುತ್ತಿದ್ದಾರೆ. ಕಾಪು ಕ್ಷೇತ್ರದ ಅಭಿವೃದ್ಧಿಗೆ ತೊಡಕಾದರೆ, ಹಿಂದಿನ ಅಭಿವೃದ್ಧಿ ಕಾರ್ಯಗಳು ವಿಳಂಬವಾದರೆ ಅದಕ್ಕೆ ಹಾಲಿ ಶಾಸಕರೇ ನೇರ ಹೊಣೆಗಾರರಾಗುತ್ತಾರೆ.
– ವಿನಯಕುಮಾರ್‌ ಸೊರಕೆ
ಮಾಜಿ ಶಾಸಕರು

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.