ಮಾದಕ ವ್ಯಸನ ವಿರೋಧಿ ಮಾಸಾಚರಣೆ ಜಿಲ್ಲೆಯಲ್ಲಿ ಶೇ. 60ರಷ್ಟು ಯಶಸ್ವಿ


Team Udayavani, Oct 11, 2018, 6:00 AM IST

0910udsg5.jpg

ಉಡುಪಿ: ಸಾಮಾಜಿಕ ಕಳಕಳಿಯೊಂದಿಗೆ, ವ್ಯಸನಮುಕ್ತ ಸಮಾಜದ ನಿರ್ಮಾಣಕ್ಕಾಗಿ ನಿರಂತರ ಎರಡು ತಿಂಗಳ ಕಾಲ ಹಮ್ಮಿಕೊಂಡ ವಿವಿಧ ಕಾರ್ಯಕ್ರಮಗಳು ಶೇ. 60ರಷ್ಟು ಜಿಲ್ಲೆಯಲ್ಲಿ ಪರಿಣಾಮ ಬೀರುವ ಮೂಲಕ ಯಶಸ್ವಿಯಾಗಿದೆ ಎಂದು ಎಸ್‌ಪಿ ಲಕ್ಷ್ಮಣ್‌ ಬ. ನಿಂಬರಗಿ ಹೇಳಿದರು. 

ಜಿಲ್ಲಾ ಪೊಲೀಸ್‌ ಇಲಾಖೆ, ಜಿಲ್ಲಾಕಾರ್ಯನಿರತ ಪತ್ರಕರ್ತರ ಸಂಘ, ಉಡುಪಿ ಪ್ರಸ್‌ ಕ್ಲಬ್‌ ಆಶ್ರಯದಲ್ಲಿ ಬಡಗುಬೆಟ್ಟು ಕೋ-ಆಪ್‌. ಸೊಸೈಟಿಯ ಜಗನ್ನಾಥ ಸಭಾಂಗಣದಲ್ಲಿ ಶನಿವಾರ ನಡೆದ ಮಾದಕ ವ್ಯವಸ ವಿರೋಧಿ ಮಾಸಾಚರಣೆಯ ಸಮಾರೋಪ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ನಿರಂತರವಾಗಿ 2 ತಿಂಗಳ ಕಾಲ ಜಿಲ್ಲೆಯ ನಾಗರಿಕರು, ವಿದ್ಯಾರ್ಥಿಗಳು, ವಿವಿಧ ಧರ್ಮಗುರುಗಳು, ಸಂಘ-ಸಂಸ್ಥೆಗಳು, ಇಲಾಖೆಗಳು, ಹೊಟೇಲ್‌ ಉದ್ಯಮಿಗಳು, ಸಮಾಜ ಸೇವಕರು ಕಾರ್ಯಕ್ರಮದಲ್ಲಿ 
ಕೈಜೋಡಿಸಿ ಯಶಸ್ಸಿಗೆ ಕಾರಣರಾಗಿದ್ದಾರೆ. ಒಟ್ಟು 12-15 ವಿವಿಧ ಕಾರ್ಯಕ್ರಮಗಳನ್ನು ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗಿದೆ ಎಂದರು.

ಮಾದಕ ವ್ಯಸನ ಕುರಿತ ಜಾಗೃತಿ ಮೊಬೈಲ್‌ ಕಿರುಚಿತ್ರ ಸ್ಪರ್ಧೆಯಲ್ಲಿ ಒಟ್ಟು 32 ಕಾಲೇಜುಗಳು ಭಾಗವಹಿಸಿದ್ದು, ಅದರಲ್ಲಿ ಪದವಿ ಕಾಲೇಜುಗಳ ವಿಭಾಗದಲ್ಲಿ ವಿ.ವಿ. ಕಾಲೇಜು ಮಂಗಳೂರು (ಪ್ರಥಮ), ಕೆ.ಆರ್‌. ಹೆಗ್ಡೆ ಕಾಲೇಜ್‌ ಆಫ್ ಪ್ಯಾರಾಮೆಡಿಕಲ್‌ ಸೈ®Õ… ಕೋಟ (ದ್ವಿತೀಯ), ಮಿಲಾಗ್ರಿಸ್‌ ಕಾಲೇಜು ಕಲ್ಯಾಣಪುರ (ತೃತೀಯ), ವಿಬಿಸಿಎಲ್‌, ಎನ್‌ಎಂಎ ಕಾಲೇಜು ನಿಟ್ಟೆ (ಸಮಾಧಾನಕರ) ಹಾಗೂ ಪಿಯು ವಿಭಾಗದಲ್ಲಿ ಬಾರಕೂರು ನ್ಯಾಶನಲ್‌ ಪಿಯು ಕಾಲೇಜು (ಪ್ರಥಮ), ಹೆಬ್ರಿ ಅಮೃತ ಭಾರತಿ ಪಿ.ಯು.  ಕಾಲೇಜು (ದ್ವಿತೀಯ), ಅದಮಾರು ಪೂರ್ಣಪ್ರಜ್ಞ  ಪಿ.ಯು. ಕಾಲೇಜು (ತೃತೀಯ), ಶಿರೂರು ಗ್ರೀನ್‌ ವ್ಯಾಲಿ ಪಿ.ಯು. ಕಾಲೇಜು, ಕಾರ್ಕಳ ಸ.ಪ.ಪೂ. ಕಾಲೇಜು (ಸಮಾಧಾನಕರ) ಬಹುಮಾನ ಗಳಿಸಿದ ತಂಡಗಳಿಗೆ ಬಹುಮಾನ ವಿತರಿಸಲಾಯಿತು. ಎಸ್‌ಪಿ ಲಕ್ಷ್ಮಣ್‌ ಬ. ನಿಂಬರಗಿ ಅವರನ್ನು ಸಮ್ಮಾನಿಸಲಾಯಿತು.

ಸಹಾಯಕ ಅರಣ್ಯಾಧಿಕಾರಿ ಪ್ರಭಾಕರನ್‌, ಬಡಗುಬೆಟ್ಟು ಸೊಸೈಟಿಯ ಪ್ರಧಾನ ವ್ಯವಸ್ಥಾಪಕ ಜಯಕರ ಶೆಟ್ಟಿ ಇಂದ್ರಾಳಿ, ಅಡಿಷನಲ್‌ ಎಸ್‌ಪಿ ಕುಮಾರ ಚಂದ್ರ, ಭಾಸ್ಕರ ಹಂದೆ, ಪತ್ರಕರ್ತರ ಸಂಘದ ಪ್ರ.ಕಾರ್ಯದರ್ಶಿ ಸಂತೋಷ್‌ ಸರಳೇಬೆಟ್ಟು, ಪ್ರಸ್‌ ಕ್ಲಬ್‌ ಸಂಚಾಲಕ ನಾಗರಾಜ್‌ ರಾವ್‌ ಉಪಸ್ಥಿತರಿದ್ದರು. ಅಶೋಕ್‌ ಪೂಜಾರಿ ಸ್ವಾಗತಿಸಿ, ಪ್ರಸ್‌ ಕ್ಲಬ್‌ ಕೋಶಾಧಿಕಾರಿ ದಿವಾಕರ್‌ ನಿರೂಪಿಸಿದರು.

ಟಾಪ್ ನ್ಯೂಸ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.