ಖಾಸಗಿ ಲಾಬಿಗೆ ಮಣಿಯಿತೇ ಕೆಎಸ್‌ಆರ್‌ಟಿಸಿ?


Team Udayavani, Oct 13, 2018, 10:52 AM IST

nurm.jpg

ಶಿರ್ವ: ಹಿರಿಯ ನಾಗರಿಕರು, ಮಹಿಳೆಯರು, ವಿದ್ಯಾರ್ಥಿಗಳಿಗೆ ಅಚ್ಚುಮೆಚ್ಚಾಗಿದ್ದ ನರ್ಮ್ ಬಸ್‌ ಸೇವೆಯನ್ನು ಕೆಎಸ್‌ಆರ್‌ಟಿಸಿ ಸುಳ್ಳಿನ ಕಥೆಕಟ್ಟಿ ನಿಲ್ಲಿಸಿದ್ದು, ಸರಕಾರದ ಸಾರಿಗೆ ಸಂಸ್ಥೆ ಖಾಸಗಿ ಲಾಬಿಗೆ ಮಣಿಯಿತೇ ಎಂಬ ಬಲವಾದ ಸಂಶಯ ಮೂಡಲು ಕಾರಣವಾಗಿದೆ.

ವಿಧಾನಸಭೆ ಚುನಾವಣೆ ಬಳಿಕ ನರ್ಮ್ ಬಸ್‌ ಓಡಾಟ ಸ್ಥಗಿತವಾಗಿದ್ದು, ಈ ವೇಳೆ ಜನಾಕ್ರೋಶ ಶಮನಕ್ಕೆ ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಸುಳ್ಳಿನ ಕಥೆ ಕಟ್ಟಿದ್ದು ಈಗ ಬಹಿರಂಗವಾಗಿದೆ. ಖಾಸಗಿಯವರು ಕಾನೂನು ಸಮರ ನಡೆಸಿದ್ದರಿಂದ ಲೋಕಾಯುಕ್ತದಲ್ಲಿ ತಡೆಯಾಜ್ಞೆ ಇದೆ ಎಂದು ಅಧಿಕಾರಿಗಳು ಹೇಳಿದ್ದರು. ಆದರೆ ಈ ಬಗ್ಗೆ ಆರ್‌ಟಿಐ ಅಡಿ ಅರ್ಜಿ ಸಲ್ಲಿಸಿದಾಗ ಯಾವುದೇ ತಡೆಯಾಜ್ಞೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಆದರೂ ಮತ್ತೂಂದು ಕಥೆ ಕಟ್ಟಿದ ಕೆಎಸ್‌ಆರ್‌ಟಿಸಿ ಅಧಿಕಾರಿಗಳು, ಹೈಕೋರ್ಟ್‌ನಲ್ಲಿ ತಡೆಯಾಜ್ಞೆ ಇದೆ ಎಂದು ಹೇಳಲು ಆರಂಭಿಸಿದರು. ಈ ಬಗ್ಗೆ ದಾಖಲೆಗಳನ್ನು ಸಂಗ್ರಹಿಸಿದಾಗಲೂ ಉಡುಪಿ ಆರ್‌ಟಿಒ ಕಚೇರಿಯಿಂದ ಉಡುಪಿ-ಮೂಡುಬೆಳ್ಳೆ – ಶಿರ್ವ ನರ್ಮ್ ಬಸ್‌ ಸಂಚಾರಕ್ಕೆ ಯಾವುದೇ ತಡೆಯಾಜ್ಞೆ ಇಲ್ಲ ಎಂದು ತಿಳಿದು ಬಂದಿದೆ.

ಮತ್ತೂಂದು ಸಬೂಬು!
ಸುಳ್ಳು ಬಹಿರಂಗವಾಗುತ್ತಿದ್ದಂತೆ ಕಲೆಕ್ಷನ್‌ ಕಡಿಮೆ ಇದ್ದುದರಿಂದ ಮತ್ತು ಖಾಸಗಿಯವರ ಒತ್ತಡದಿಂದ ಬಸ್‌ ಸೇವೆ ಸ್ಥಗಿತಗೊಳಿಸಿರುವುದಾಗಿ ಅದು ತಿಳಿಸಿದೆ. ಹಿಂದಿನ ಹೇಳಿಕೆಗಳಿಗೆ ದಾಖಲೆ ಒದಗಿಸಲು ಸಾಧ್ಯವಾಗದೆ ಮತ್ತೂಂದು ರಾಗ ಹಾಡತೊಡಗಿದೆ. 

ಪ್ರಯಾಣಿಕರ ಕೊರತೆ ಇರಲಿಲ್ಲ
ಮೂಡುಬೆಳ್ಳೆ ಹಾಗೂ ಶಿರ್ವಕ್ಕೆ ಬರುತ್ತಿದ್ದ ನರ್ಮ್ ಬಸ್‌ಗಳಲ್ಲಿ ಪ್ರಯಾಣಿಕರ ಕೊರತೆ ಇರಲಿಲ್ಲ. ಪಾಸ್‌ ಇದ್ದುದರಿಂದ ವಿದ್ಯಾರ್ಥಿಗಳಿಗೆ ಮತ್ತು ನಿತ್ಯ ಹೋಗುವವರಿಗೆ ಅನುಕೂಲವಾಗಿತ್ತು. ಆದರೂ ಕಲೆಕ್ಷನ್‌ ಇರಲಿಲ್ಲ ಎಂದು ಅಧಿಕಾರಿಗಳು ಹೇಳುತ್ತಿದ್ದುದೇಕೆ ಎನ್ನುವುದು ಪ್ರಶ್ನೆಯಾಗಿಯೇ ಉಳಿದಿದೆ.

ಗ್ರಾಮ ಸಭೆ, ಸಾಮಾನ್ಯ ಸಭೆಯಲ್ಲಿ ಅನುಮೋದನೆ
ನರ್ಮ್ ಬಸ್‌ ಹಠಾತ್ತಾಗಿ ಸ್ಥಗಿತಗೊಳಿಸಿದ್ದರ ವಿರುದ್ಧ ಬೆಳ್ಳೆ ಗ್ರಾ. ಪಂ.ನ ಗ್ರಾಮ ಸಭೆ ಮತ್ತು ಸಾಮಾನ್ಯ ಸಭೆಯಲ್ಲಿ ಪ್ರಸ್ತಾವಿಸಿ ಅನುಮೋದಿಸಲಾಗಿದೆ. ಈ ಬಗ್ಗೆ ಸಂಬಂಧಪಟ್ಟ ಉನ್ನತಾಧಿಕಾರಿಗಳಿಗೆ ಪತ್ರ ಬರೆಯಲು ತೀರ್ಮಾನಿಸಲಾಗಿದೆ.

ಎಸಿಬಿಯಲ್ಲಿ ದೂರು ದಾಖಲು
ಯಾವುದೇ ತಡೆಯಾಜ್ಞೆ ಇಲ್ಲದಿದ್ದರೂ ಸುಳ್ಳು ಮಾಹಿತಿ ನೀಡಿ ಬಸ್‌ ಸೇವೆ ಸ್ಥಗಿತಗೊಳಿಸಿದ ಬಗ್ಗೆ ಉಡುಪಿ ಡಿಪೊ ಮ್ಯಾನೇಜರ್‌ ವಿರುದ್ಧ ಉಡುಪಿ ಭ್ರಷ್ಟಾಚಾರ ನಿಗ್ರಹ ದಳದಲ್ಲಿ ಮಾಹಿತಿ ಹಕ್ಕು ಕಾರ್ಯಕರ್ತರೊಬ್ಬರು ದೂರು ದಾಖಲಿಸಿದ್ದಾರೆ. ಈ ದೂರಿನ ಬಗ್ಗೆ ತತ್‌ಕ್ಷಣ ಕಾರ್ಯಪ್ರವೃತ್ತರಾದ ಎಸಿಬಿ ಪೊಲೀಸ್‌ ನಿರೀಕ್ಷಕರು, ಖುದ್ದು ಹಾಜರಾಗಿ ದಾಖಲೆಗಳನ್ನು ಒದಗಿಸುವಂತೆ ಡಿಪೊ ಮ್ಯಾನೇಜರ್‌ ಅವರಿಗೆ ತಿಳಿಸಿದ್ದಾರೆ.

ನರ್ಮ್ ಬಸ್‌ನಿಂದ ತುಂಬಾ ಅನುಕೂಲವಾಗುತ್ತಿತ್ತು. ಬಸ್‌ನಲ್ಲಿ ಪ್ರಯಾಣಿಕರ ಕೊರತೆ ಇರಲಿಲ್ಲ. ಈಗ ಬಸ್‌ಗೆ ಕಲೆಕ್ಷನ್‌ ಇಲ್ಲ ಎಂದು ಹೇಳುತ್ತಿರುವುದು ಸಂಶಯಕ್ಕೆ ಕಾರಣವಾಗಿದೆ. 
ಓರ್ವ ಮಹಿಳಾ ಪ್ರಯಾಣಿಕರು

ಖಾಸಗಿಯವರ ಕಾನೂನು ಸಮರದಿಂದ ನರ್ಮ್ ಬಸ್‌ಸಂಚಾರ ಸೇವೆ ಸ್ಥಗಿತಗೊಂಡ ಬಗ್ಗೆ ಮಾಹಿತಿ ದೊರಕಿತ್ತು. ಈ ಬಗ್ಗೆ ಜಿ.ಪಂ. ಸಾಮಾನ್ಯ ಸಭೆಯಲ್ಲಿ ನ್ಯಾಯಾಲಯದ ತಡೆಯಾಜ್ಞೆಯ ನಕಲು ಪ್ರತಿ ಹಾಗೂ ವಕೀಲರನ್ನು ನೇಮಿಸಿದ ಬಗ್ಗೆ ಮಾಹಿತಿ ಕೇಳಿದ್ದೆ, ಈವರೆಗೆ ಸಿಕ್ಕಿಲ್ಲ.
ವಿಲ್ಸನ್‌ ರೊಡ್ರಿಗಸ್‌, ಜಿ.ಪಂ. ಸದಸ್ಯ, ಶಿರ್ವ

ನರ್ಮ್ ಬಸ್‌ ಸಂಚಾರಕ್ಕೆ ಸಂಬಂಧಿಸಿ ಯಾವುದೇ ನ್ಯಾಯಾಲಯದ ತಡೆಯಾಜ್ಞೆ ಇರಲಿಲ್ಲ. ಆದಾಯ ಕಡಿಮೆ ಇದ್ದುದರಿಂದ ಉಡುಪಿ-ಮೂಡುಬೆಳ್ಳೆ-ಶಿರ್ವ ಸಹಿತ ಹಲವು ರೂಟ್‌ಗಳ ಬಸ್‌ ಸಂಚಾರ ಸ್ಥಗಿತಗೊಳಿಸಲಾಗಿದೆ.
ಜಯಶಾಂತ್‌, ವಿಭಾಗೀಯ ಸಂಚಲನಾಧಿಕಾರಿ, ಕೆಎಸ್‌ಆರ್‌ಟಿಸಿ ಮಂಗಳೂರು

ನರ್ಮ ಬಸ್‌ಗಳಿಗೆ ಸಾರಿಗೆ ಅಧಿಕಾರಿಗಳು ಖಾಸಗಿ ಬಸ್‌ಗಳ ಹಿಂದಿನ ಟೈಮಿಂಗ್ಸ್‌ ಕೊಡುವುದರಿಂದ ಸಮಸ್ಯೆಯಾಗಿದೆ. ಹೊಸ ಅರ್ಜಿಗಳು ಬಂದಲ್ಲಿ ಪರಿಶೀಲನೆ ನಡೆಸಲಾಗುವುದು.
ಉದಯ್‌ಕುಮಾರ್‌ ಶೆಟ್ಟಿ, ಕೆಎಸ್‌ಆರ್‌ಟಿಸಿ ಉಡುಪಿಯ ಡಿಪೋ ಮ್ಯಾನೇಜರ್‌

ಸತೀಶ್‌ಚಂದ್ರ ಶೆಟ್ಟಿ, ಶಿರ್ವ

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.