ರೈಲಿನಲ್ಲಿ ಅಮಲು ಪದಾರ್ಥ ನೀಡಿ ದರೋಡೆ !


Team Udayavani, Oct 14, 2018, 10:01 AM IST

1310udsb4ramachandra-acharya.jpg

ಉಡುಪಿ: ದಿಲ್ಲಿ-ಎರ್ನಾಕುಲಂ ಎಕ್ಸ್‌ಪ್ರೆಸ್‌ ರೈಲಿನಲ್ಲಿ ನಾಸಿಕ್‌ನಿಂದ ಉಡುಪಿಗೆ ಬರುತ್ತಿದ್ದ ಕುಟುಂಬಕ್ಕೆ ಅಮಲು ಪದಾರ್ಥ ನೀಡಿ ಚಿನ್ನಾಭರಣ, ನಗದು ದೋಚಿದ ಘಟನೆ ಅ. 11ರಂದು ಸಂಭವಿಸಿದೆ. ರೈಲ್ವೆ ಯಾತ್ರೀ ಸಂಘದ ಕೋಶಾಧಿಕಾರಿ  ಉಡುಪಿ ಕಿನ್ನಿಮೂಲ್ಕಿಯ ರಾಮಚಂದ್ರ ಆಚಾರ್ಯ ಮತ್ತು ಅವರ ಸಹೋದರಿ ರಾಧಮ್ಮ ದರೋಡೆಗೊಳಗಾದವರು.

ನಡೆದುದೇನು?
ರಾಮಚಂದ್ರ ಆಚಾರ್ಯ (60) ಅವರು ನಾಸಿಕ್‌ನಲ್ಲಿ ಸಂಬಂಧಿಕರ ಮನೆಯ ಕಾರ್ಯಕ್ರಮವೊಂದನ್ನು ಮುಗಿಸಿ ಸಹೋದರಿಯರಾದ ರಾಧಮ್ಮ, ಸೀಮಾ ರಾವ್‌ ಮತ್ತು ತುಳಸಿ ಉಪಾಧ್ಯಾಯ ಅವರೊಂದಿಗೆ ಅ. 11ರಂದು ಬೆಳಗ್ಗೆ 6 ಗಂಟೆಗೆ ಉಡುಪಿಗೆ ಮರಳಲು ನಾಸಿಕ್‌ ರೋಡ್‌ ರೈಲು ನಿಲ್ದಾಣದಲ್ಲಿ ದಿಲ್ಲಿ-ಎರ್ನಾಕುಲಂ ಮಂಗಳಾ ಎಕ್ಸ್‌ಪ್ರೆಸ್‌ ಹತ್ತಿದ್ದರು. ರಾಮಚಂದ್ರ ಆಚಾರ್ಯ ಮತ್ತು ರಾಧಮ್ಮ ಒಂದು ಕಂಪಾರ್ಟ್‌ಮೆಂಟ್‌ನಲ್ಲಿ ಉಳಿದವರು ಇನ್ನೊಂದು ಕಂಪಾರ್ಟ್‌ಮೆಂಟ್‌ನಲ್ಲಿ ಪ್ರಯಾಣಿಸುತ್ತಿದ್ದರು. ಮೇಲ್ಗಡೆ ಸೀಟಿನಲ್ಲಿದ್ದ ಇಬ್ಬರು ವ್ಯಕ್ತಿಗಳು ಮಜ್ಜಿಗೆಕೊಟ್ಟಿದ್ದು ಅದನ್ನು ಸೇವಿಸಿದ ರಾಮಚಂದ್ರ ಆಚಾರ್ಯ ಮತ್ತು ರಾಧಮ್ಮ ಪ್ರಜ್ಞೆ ಕಳೆದುಕೊಂಡರು. ಮಧ್ಯ ರಾತ್ರಿ 1 ಗಂಟೆ ಸುಮಾರಿಗೆ ಕುಂದಾಪುರ ಸಮೀಪ ಬರುವಾಗ ಎಚ್ಚರಗೊಂಡ ಆಚಾರ್ಯರು ಪರ್ಸ್‌, ಬ್ಯಾಗ್‌ ಇಲ್ಲದಿರುವುದನ್ನು ಕಂಡು ಇನ್ನೊಂದು ಕಂಪಾರ್ಟ್‌ಮೆಂಟ್‌ಗೆ ಬಂದು ಇತರ ಸಹೋದರಿಯರ ಬಳಿ ವಿಷಯ ತಿಳಿಸಿದರು. ಅವರು ಬಂದು ಪರಿಶೀಲಿಸಿದಾಗ ರಾಧಮ್ಮ ಅವರ ಮೈಮೇಲಿದ್ದ ಚಿನ್ನಾಭರಣ, ನಗದು ಮೊದಲಾದ ಸೊತ್ತುಗಳನ್ನೂ ದರೋಡೆ ಮಾಡಿರುವುದು ತಿಳಿಯಿತು. ಬಳಿಕ ಉಡುಪಿ ನಿಲ್ದಾಣದಲ್ಲಿ ಇಳಿದು ಆಸ್ಪತ್ರೆಗೆ ದಾಖಲಾಗಿ ಇದೀಗ ಚೇತರಿಸಿಕೊಂಡಿದ್ದಾರೆ.

ಮಜ್ಜಿಗೆಯಲ್ಲಿ ನಾನು ಅರ್ಧ ಮಾತ್ರ ಕುಡಿದಿದೆ. ಅಕ್ಕ ಪೂರ್ತಿ ಕುಡಿದಿದ್ದರಿಂದ ಎಚ್ಚರವೇ ಆಗಲಿಲ್ಲ. ಉಡುಪಿ ರೈಲು ನಿಲ್ದಾಣದಲ್ಲಿ ಅವರನ್ನು ಎತ್ತಿಕೊಂಡು ರೈಲಿನಿಂದ ಕೆಳಗಿಳಿಸಬೇಕಾಯಿತು ಎಂದು ಆಚಾರ್ಯ ವಿವರಿಸಿದ್ದಾರೆ.
ಟಿಕೆಟ್‌ ಹಾಗೆಯೇ ಇದೆ “ನಾವು ನಾಸಿಕ್‌ಗೆ ಹೋಗುವಾಗ ಅಥವಾ ಬರುವಾಗ ನಮ್ಮ ಟಿಕೆಟ್‌ ಚೆಕಿಂಗ್‌ಗೆ ಕೂಡ ಟಿಸಿ
ಗಳು ಬಂದಿಲ್ಲ. ಬೇರೆ ರಕ್ಷಣೆಯನ್ನು ಹೇಗೆ ನಿರೀಕ್ಷಿಸುವುದು? ಟಿಕೆಟ್‌ ಮೂಲರೂಪದಲ್ಲಿಯೇ ಇದ್ದು, ನಾನು ಪ್ರಯಾಣಿಸಿಲ್ಲ ಎಂದು ರಿಫ‌ಂಡ್‌ ಪಡೆಯಲು ಕೂಡ ಅವಕಾಶವಿದೆ’ ಎಂದು ಇಲಾಖೆಯ ನಿರ್ಲಕ್ಷ್ಯವನ್ನು ಆಚಾರ್ಯ ಟೀಕಿಸಿದ್ದಾರೆ.

ಕಳೆದುಕೊಂಡಿದ್ದೇನು?
ರಾಮಚಂದ್ರ ಆಚಾರ್ಯರ 30,000 ರೂ. ನಗದು, ಮೊಬೈಲ್‌, ರಾಧಮ್ಮ ಅವರ ಎರಡೆಳೆಯ ಬಂಗಾರ, ಮುತ್ತಿನ ಗುಂಡುಸರ, 1 ಕಿವಿಯೋಲೆ, 2 ಉಂಗುರ, 15,000 ರೂ. ನಗದು. ರಾಧಮ್ಮ ಅವರು ಒಂದು ಮಗ್ಗುಲಿಗೆ ಮಲಗಿದ್ದರಿಂದ ಇನ್ನೊಂದು ಕಿವಿಯೋಲೆಯನ್ನು ತೆಗೆಯಲಾಗಲಿಲ್ಲ.

ರೈಲ್ವೇ ಪೊಲೀಸರು ಉಡುಪಿ ರೈಲು ನಿಲ್ದಾಣದಿಂದ ಮನೆಗೆ ತಲುಪಿಸಿದ್ದು, ಬಳಿಕ ರಾಮಚಂದ್ರ ಆಚಾರ್ಯ, ರಾಧಮ್ಮ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಚೇತರಿಸಿಕೊಂಡು ಶನಿವಾರ ಮನೆಗೆ ಮರಳಿದ್ದಾರೆ. ರಾಧಮ್ಮ ಪೂರ್ಣವಾಗಿ ಚೇತರಿಸಿಕೊಳ್ಳಬೇಕಿದೆ.  ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.