ರಾ. ಹೆ. 66 ಕತ್ತಲ ಸಂಚಾರಕ್ಕೆ ಹೆಸರುವಾಸಿ!


Team Udayavani, Oct 15, 2018, 11:47 AM IST

kaup02.jpg

ಕಾಪು: ಮಂಗಳೂರು- ಕುಂದಾಪುರ ನಡುವಿನ ರಾ. ಹೆದ್ದಾರಿಯಲ್ಲಿ ಬರುವ ಪಟ್ಟಣಗಳ ಡಿವೈಡರ್‌ಗಳಲ್ಲಿ ಅಪಘಾತ-ಅಪರಾಧಗಳನ್ನು ತಡೆಯುವಲ್ಲಿ ಮಹತ್ವದ ಪಾತ್ರ ವಹಿಸುವ ದಾರಿದೀಪಗಳಲ್ಲಿ ಸುಮಾರು ಅರ್ಧ ಪ್ರಮಾಣದಷ್ಟು ಬೆಳಗುತ್ತಿಲ್ಲ.

ಇದು ಸಣ್ಣ ಸಂಗತಿ ಎನಿಸಿದರೂ ಪರಿಣಾಮ ದೊಡ್ಡದು. ರಾ.ಹೆ. 66ರಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚುತ್ತಿರುವುದಕ್ಕೆ ದಾರಿದೀಪಗಳು ಉರಿಯದಿರು ವುದೂ ಕಾರಣ. ಮಂಗಳೂರಿನ ನಂತೂರು ಜಂಕ್ಷನ್‌ನಿಂದ ಕುಂದಾಪುರ ಪಾರಿಜಾತ್‌ ಸರ್ಕಲ್‌ವರೆಗೆ ಡಿವೈಡರ್‌ಗಳಲ್ಲಿ 1, 860 ದೀಪಗಳಿವೆ. “ಉದಯವಾಣಿ’ ಪ್ರತಿನಿಧಿ ಮಂಗಳೂರಿನಿಂದ ಕುಂದಾ
ಪುರದವರೆಗೆ ಸಮೀಕ್ಷೆ ನಡೆಸಿದಾಗ, ಈ ಪೈಕಿ ಶೇ. 40ರಿಂದ 50ರಷ್ಟು ಉರಿಯುತ್ತಿರಲಿಲ್ಲ. ಕೆಲವೆಡೆ ರಾತ್ರಿ 9 ಗಂಟೆಯಾಗುತ್ತಲೇ ಆರುತ್ತವೆ.

ಜಂಕ್ಷನ್‌ಗಳಲ್ಲೇ ಕತ್ತಲು 
ನಂತೂರು-ಕುಂದಾಪುರ ಮಧ್ಯೆ ಗ್ರಾಮೀಣ ಒಳ ರಸ್ತೆಗಳು ಬಂದು ಸೇರುವ 30ಕ್ಕೂ ಅಧಿಕ ಜಂಕ್ಷನ್‌ಗಳಿವೆ. ಇಲ್ಲೂ ದೀಪಗಳಿಲ್ಲ. ಬೆಳಕು ಇಲ್ಲದೆ, ಡಿವೈಡರ್‌ ಕೂಡ ಸಮರ್ಪಕ ಇರದೆ ಸವಾರರು ಗೊಂದಲಗೊಂಡು ಅಪಘಾತಗಳು ಘಟಿಸುತ್ತಿವೆ.

ಕಾರಣವೇನು?
ನಿರ್ವಹಣೆಯ ಕೊರತೆಯೇ ಕತ್ತಲು ಬೆಳಕಿನ ಆಟಕ್ಕೆ ಕಾರಣ. ತಲಪಾಡಿಯಿಂದ ಸುರತ್ಕಲ್‌, ಕುಂದಾಪುರದವರೆಗಿನ ದಾರಿ ದೀಪ ನಿರ್ವಹಣೆ ಹೊಣೆ ನವಯುಗ ಕಂಪೆನಿಯದು ಎನ್ನುತ್ತಿವೆ ರಾ.ಹೆ. ಪ್ರಾಧಿ ಕಾರದ ಮೂಲಗಳು. ಗುತ್ತಿಗೆದಾರ ಕಂಪೆನಿ, ತಲಪಾಡಿಯಿಂದ ನಂತೂರು ಮತ್ತು ಸುರತ್ಕಲ್‌ನಿಂದ ಕುಂದಾಪುರದ ವರೆಗಿನ ಹೊಣೆ ತನ್ನದು. ನಂತೂರು- ಸುರತ್ಕಲ್‌ ನಡುವಿನ ಜವಾಬ್ದಾರಿ ಇಲಾಖೆಯದು ಎಂದಿದೆ. ಆದರೆ, ಸುರತ್ಕಲ್‌ನಿಂದ ಕುಂದಾಪುರದ ವರೆಗಿನ ಪ್ರದೇಶದಲ್ಲೂ ಎಲ್ಲ ದೀಪಗಳು ಉರಿಯುತ್ತಿಲ್ಲ!

ಎಂಟು ವರ್ಷ, 2500 ಸಾವು
ರಾ. ಹೆ. ಚತುಷ್ಪಥ ಕಾಮಗಾರಿ ಆರಂಭವಾದ 2010ರಿಂದ ಇಲ್ಲಿಯ ವರೆಗೆ ತಲಪಾಡಿ- ಕುಂದಾಪುರ ನಡುವೆ ಅಪಘಾತಗಳಲ್ಲಿ 2,500 ಮಂದಿ ಸಾವಿಗೀಡಾಗಿದ್ದಾರೆ. 4,000 ಮಂದಿ ಗಾಯ ಗೊಂಡಿದ್ದಾರೆ ಎನ್ನುತ್ತದೆ ಪೊಲೀಸ್‌ ಮಾಹಿತಿ. 

ಮಿನಿ ಪೇಟೆ: ದೀಪವಿಲ್ಲ, ಅಪರಾಧ, ಅಪಘಾತ ಹೆಚ್ಚು
ನಂತೂರು ಜಂಕ್ಷನ್‌ನಿಂದ ಸುರತ್ಕಲ್‌ ತನಕ 680 ದೀಪಗಳಿದ್ದು, ಶೇ. 60ಕ್ಕೂ ಹೆಚ್ಚು ಉರಿಯುತ್ತಿಲ್ಲ. ಸುರತ್ಕಲ್‌ನಿಂದ ಹೆಜಮಾಡಿ ಟೋಲ್‌ ತನಕ 370 ದೀಪಗಳಿವೆ, ಶೇ.30ರಷ್ಟು ಕೆಟ್ಟಿವೆ. ಹೆಜಮಾಡಿ ಟೋಲ್‌ನಿಂದ ಸಾಸ್ತಾನ ಟೋಲ್‌ ತನಕ ಇರುವ 520 ದೀಪಗಳಲ್ಲಿ ಹಾಗೂ ಸಾಸ್ತಾನದಿಂದ ಕುಂದಾಪುರ ತನಕ ಇರುವ 300 ದೀಪಗಳಲ್ಲಿ ಶೇ. 50 ಉರಿಯುತ್ತಿಲ್ಲ. ನಡುವೆ ಹಲವು ಮಿನಿ ಪೇಟೆಗಳಿದ್ದು,ಇಲ್ಲೆಲ್ಲ ರಾತ್ರಿ ಕತ್ತಲು. ಇದರಿಂದಾಗಿ ಅಪರಾಧವೂ ಅಪಘಾತವೂ ಹೆಚ್ಚಿದೆ. ಸರಗಳ್ಳರ ಹಾವಳಿ, ಕಿರುಕುಳ, ಗುಂಪು ಹಲ್ಲೆ, ಹಿಟ್‌ ಆ್ಯಂಡ್‌ ರನ್‌ ಇತ್ಯಾದಿ ನಿತ್ಯ ವರದಿಯಾಗುತ್ತಿವೆ.

ಹೆದ್ದಾರಿಯಲ್ಲಿ ದೀಪಗಳು ಉರಿಯದೆ ಚಾಲಕರು, ಪಾದಚಾರಿಗಳಿಗೆ ತೊಂದರೆ ಆಗುತ್ತಿದೆ. ದ್ವಿಚಕ್ರ ವಾಹನ ಸವಾರರಿಗೆ ಸಮಸ್ಯೆ ಹೆಚ್ಚು. 
ಮಲ್ಲಿಕಾರ್ಜುನ್‌ ರಿಕ್ಷಾ ಚಾಲಕ, ಕೊಲಾ°ಡು

ನಿರ್ವಹಣೆ ಕೊರತೆಯಿಂದ ಅಪಘಾತಗಳು ಸಂಭವಿಸುತ್ತಿವೆ. ಗುತ್ತಿಗೆದಾರರು ಮತ್ತು ಆಧಿಕಾರಿಗಳು ಸಭೆಯಲ್ಲಿ ಹೇಳುವುದು ಒಂದು, ಮಾಡುವುದು ಮತ್ತೂಂದು.
ಕಾಪು ದಿವಾಕರ ಶೆಟ್ಟಿ, ಹೋರಾಟ ಸಮಿತಿ  ಮುಖಂಡ

ಮುಕ್ಕದಿಂದ ಕುಂದಾಪುರ, ನಂತೂರಿನಿಂದ ತಲಪಾಡಿವರೆಗೆ ದಾರಿ ದೀಪಗಳ ಅಳವಡಿಕೆ ನಮ್ಮ ಜವಾಬ್ದಾರಿ, ನಿರ್ವಹಣೆಯನ್ನು ಟೋಲ್‌ಗೇಟ್‌ ನಿರ್ವಾಹಕರಿಗೆ ನೀಡಲಾಗಿದೆ.
ಶಂಕರ್‌, ಚೀಪ್‌ ಪ್ರಾಜೆಕ್ಟ್ ಮ್ಯಾನೇಜರ್‌, ನವಯುಗ ಕಂಪೆನಿ ಪ್ರೈ. ಲಿ.

*ರಾಕೇಶ್‌ ಕುಂಜೂರು

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Udyavara: ತಪಾಸಣೆ ನಿರತ ಕಾರಿಗೆ ಕಾರು ಢಿಕ್ಕಿ; ಮಹಿಳೆಗೆ ಗಾಯ

Udyavara: ತಪಾಸಣೆ ನಿರತ ಕಾರಿಗೆ ಕಾರು ಢಿಕ್ಕಿ; ಮಹಿಳೆಗೆ ಗಾಯ

Udupi; ಕಾರು ಢಿಕ್ಕಿ: ಸ್ಕೂಟರ್‌ ಸವಾರ ಆಸ್ಪತ್ರೆಗೆ

Udupi; ಕಾರು ಢಿಕ್ಕಿ: ಸ್ಕೂಟರ್‌ ಸವಾರ ಆಸ್ಪತ್ರೆಗೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.